Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Karnataka Budget 2023: ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ, ಸಿದ್ದರಾಮಯ್ಯ ಘೋಷಣೆ

editor tv by editor tv
July 7, 2023
in ರಾಜ್ಯ
0
Karnataka Budget 2023: ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ, ಸಿದ್ದರಾಮಯ್ಯ ಘೋಷಣೆ
1.9k
VIEWS
Share on FacebookShare on TwitterShare on Whatsapp

| Edited By: Ashraf Kammaje

Updated on:Jul 07, 2023 | 3:29 PM

ಕರ್ನಾಟಕದ 2023-24ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಆರೋಗ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ. ಪ್ರಮುಖವಾಗಿ ಡಯಾಲಿಸಿಸ್‌ ಕೇಂದ್ರಗಳ ಹೆಚ್ಚಳ, ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆಯಂತಹ ಮಹತ್ವ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ಇನ್ನು ಹಲವು ಕೊಡುಗೆಗಳನ್ನು ಬಜೆಟ್​​ನಲ್ಲಿ ನೀಡಿದ್ದು, ಈ ಕುರಿತ ವರದಿ ಇಲ್ಲಿದೆ

ಬೆಂಗಳೂರು: ಕರ್ನಾಟಕದ 2023-24ನೇ ಸಾಲಿನ ಆಯವ್ಯಯ ವನ್ನು (Karnataka Budget 2023) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ್ದು, ಆರೋಗ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ. ಪ್ರಮುಖವಾಗಿ ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ, ಡಯಾಲಿಸಿಸ್‌ (Dialysis) ಕೇಂದ್ರಗಳ ಹೆಚ್ಚಳ ಮತ್ತು ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವಂತಹ ಮಹತ್ವ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ಇನ್ನು ಅನೇಕ ಕೊಡುಗೆಗಳನ್ನು ಬಜೆಟ್​​ನಲ್ಲಿ ನೀಡಿದ್ದು, ಈ ಕುರಿತ ವರದಿ ಇಲ್ಲಿದೆ

  1. ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  2. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ಸಮುದಾಯ ಆರೋಗ್ಯ ಕೇಂದ್ರಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  3. ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 25 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  4. ರಾಜ್ಯವು ಕಳೆದ ವರ್ಷ ನಿಮ್ಹಾನ್ಸ್‌ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ʻಬ್ರೈನ್‌ ಹೆಲ್ತ್‌ ಇನಿಶಿಯೇಟಿವ್‌ʼ (Brain Health Initiative) ಎಂಬ ವಿಶಿಷ್ಟ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
  1. ಆಶಾಕಿರಣʼ ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
  2. ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು.
  3. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು.
  4. ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು.
  5. ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್‌ ಮತ್ತು ಆರು ಎಂ.ಆರ್‌.ಐ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು.
  1. ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.
  2. ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್‌ ಹೆಲ್ತ್‌ ಸೊಸೈಟಿಯನ್ನು (Karnataka Digital Health Society) ಸ್ಥಾಪನೆ ಮಾಡಲಾಗುವುದು.

Previous Post

Karnataka Budget 2023: ಪುನೀತ್ ಸ್ಮರಣಾರ್ಥ ಹೃದಯ ಸಂಬಂಧಿ ಸಾವಿಗೆ ಕ್ರಮ

Next Post

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

Next Post
ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.