
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು( ಜುಲೈ 07) ಬಜೆಟ್ (Karnataka Budget 2023) ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿದ್ದಾನೆ. ಅಲ್ಲದೇ ಬಜೆಟ್ ಮಂಡನೆ ವೇಳೆ ಸಮಾರು 15 ನಿಮಿಷಗಳ ಜಾಲ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದಾನೆ. ಇದನ್ನು ಗಮನಿಸಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಕೂಡಲೇ ಅವರು ಎದ್ದು ಹೋಗಿ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ, ಅಷ್ಟರೊಳಗೆ ಆ ಅನಾಮಿಕ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆ ವ್ಯಕ್ತಿ ಯಾರು? ಏಕೆ ಬಂದಿದ್ದ? ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದ ಅಂತೆಲ್ಲ ಪ್ರಶ್ನೆಗಳು ಉದ್ಭವಿಸಿವೆ. ಹಾಗೇ ಆತಂಕಕ್ಕೂ ಕಾರಣವಾಗಿದೆ.

ವಿಧಾನಸೌಧದಲ್ಲಿ ಭಾರಿ ಬಿಗಿ ಭಧ್ರತೆ ಇರುತ್ತದೆ. ಯಾವುದೇ ಖಾಸಗಿ ವ್ಯಕ್ತಿಯೂ ಅಲ್ಲಿಗೆ ಹೋಗಲು ಅನುಮತಿ ಇರುವುದಿಲ್ಲ. ಆದರೆ, ಇಲ್ಲೊಬ್ಬ ಖಾಸಗಿ ವ್ಯಕ್ತಿ ತಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡು ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಶಾಸಕರಂತೆ ಕುಳಿತು 15 ನಿಮಿಷಗಳ ಕಾಲ ಕಲಾಪವನ್ನು ವೀಕ್ಷಣೆ ಮಾಡಿ ಬಂದಿದೆ. ಇನ್ನು ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ಕುಳಿತು ಕಲಾಪ ವೀಕ್ಷಣೆ ಮಾಡಿದ್ದಾನೆ. ನಂತರ, ಮಹಿಳಾ ಶಾಸಕಿಯ ಆನಸದಲ್ಲಿ ಕುಳಿತುಕೊಂಡಿದ್ದನು.

ಸ್ಪೀಕರ್ ಗಮನಕ್ಕೆ ತಂದ ಶಾಸಕ ಕಂದಕೂರು: ವಿಧಾನಸಭಾ ಬಜೆಟ್ ಅಧಿವೇಶನದ ವೇಳೆ ಅಪರಿಚಿತ ವ್ಯಕ್ತಿ ಬಂದು ಕುಳಿತಿದ್ದಾನೆ. ಈ ಬಗ್ಗೆ ಶಾಸಕ ಶರಣಗೌಡ ಕಂದಕೂರು ಅವರು ಸ್ಪೀಕರ್ ಯು.ಟಿ. ಖಾದರ್ ಗಮನಕ್ಕೆ ತಂದಿದ್ದಾರೆ. ಜನರಿಂದ ಆಯ್ಕೆ ಆಗದ ಯಾವುದೇ ವ್ಯಕ್ತಿ ಬಂದು ಅಧಿವೇಶನ ನಡೆಯುವ ವೇಳೆ ಶಾಸಕರ ಕುರ್ಚಿಯಲ್ಲಿ ಕುಳಿತುಕೊಳ್ಳುವಂತಿಲ್ಲ. ತಾನು ಶಾಸಕ ಅಲ್ಲದಿದ್ದರೂ ಅನಾಮಿಕ ವ್ಯಕ್ತಿ ಕಲಾಪಕ್ಕೆ ಬಂದು ಕುಳಿತು ಕಲಾಪವನ್ನು ವೀಕ್ಷಣೆ ಮಾಡಿ ಹೋಗಿದ್ದಾನೆ. ಒಟ್ಟು 15 ನಿಮಿಷಗಳ ಕಾಲ ಕಲಾಪದಲ್ಲಿ ಕುಳಿತು ಹೋಗಿದ್ದಾನೆ
ಶಾಸಕಿ ಕರೆಮ್ಮ ಆಸನದಲ್ಲಿ ಕುಳಿತ ವ್ಯಕ್ತಿ: ಇನ್ನು ವಿಧಾನಸೌಧದಲ್ಲಿ ಸದನದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ಕುಳಿತಿದ್ದನು. ಬಜೆಟ್ ಮಂಡನೆಯ ಆರಂಭದಲ್ಲಿಯೇ ಈ ಘಟನೆ ನಡೆದಿದೆ. ಆದರೆ, ಈ ಬಗ್ಗೆ ಸ್ಪೀಕರ್ ಯಾವುದೇ ಗೊಂದಲ ಸೃಷ್ಟಿ ಆಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ವಿಚಾರವನ್ನು ದೊಡ್ಡದಾಗಿ ಮಾಡಿಲ್ಲ ಎಮದು ತಿಳಿದುಬಂದಿದೆ. ಇನ್ನು ಅನಾಮಿಕ ವ್ಯಕ್ತಿಯು ತಾನು ಮೊಳಕಾಲ್ಮೂರು ಶಾಸಕ ಎಂದೇಳಿ ಕುಳಿತು ಕಲಾಪ ವೀಕ್ಷಣೆ ಮಾಡಿದ್ದಾನೆ. ಇದಾದ ನಂತರ ಪ್ರಶ್ನೆ ಮಾಡಿದಾಗ ಅಲ್ಲಿಂದ ಕಾಲ್ಕಿತ್ತಿದ್ದಾನೆ.