Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

editor tv by editor tv
July 9, 2023
in ರಾಜ್ಯ
0
ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
1.9k
VIEWS
Share on FacebookShare on TwitterShare on Whatsapp

ಚಿಕ್ಕೋಡಿ: ಹೀರೇಕುಡಿ (Hirekudi) ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ (Jain Muni) ಹತ್ಯೆ ಪ್ರಕರಣ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದ್ದಕ್ಕಾಗಿ ಹಂತಕರು ಜೈನಮುನಿಯ ಹತ್ಯೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಜೈನಮುನಿಯ ಹತ್ಯೆಯನ್ನು ಎಷ್ಟೊಂದು ಭೀಕರವಾಗಿ ನಡೆಸಿದ್ದಾರೆ ಎಂಬ ಸತ್ಯವನ್ನು ಎಳೆಎಳೆಯಾಗಿ ಬಾಯಿಬಿಟ್ಟಿದ್ದಾರೆ.

ನಾಪತ್ತೆಯಾಗಿದ್ದ ಚಿಕ್ಕೋಡಿಯ ಹಿರೇಕೋಡಿ ಆಶ್ರಮದ ಜೈನಮುನಿ ಕಾಮಕುಮಾರ ನಂದಿಮಹಾರಾಜರ ದೇಹ ಪೀಸ್ ಪೀಸ್ ಆಗಿ ಪತ್ತೆಯಾಗಿದೆ. ಸ್ವಾಮೀಜಿಗೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್ ನೀಡಿ ಬಳಿಕ ತುಂಡು ತುಂಡಾಗಿ ಕತ್ತರಿಸಲಾಗಿದೆ ಎಂದು ತಿಳಿದು ಬಂದಿದೆ. ಜುಲೈ 5ರಂದು ನಾಪತ್ತೆಯಾಗಿದ್ದ ಸ್ವಾಮೀಜಿ ಬಗ್ಗೆ ಜುಲೈ 7ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು.

ತೀವ್ರ ವಿಚಾರಣೆ ಬಳಿಕ ರಾಯಬಾಗ ತಾಲೂಕಿನ ಖಟಕಭಾವಿ ಗ್ರಾಮದ ಕೊಳವೆ ಬಾವಿಯಲ್ಲಿ ಶವ ಎಸೆದಿದ್ದಾಗಿ ಆರೋಪಿಗಳಾದ ನಾರಾಯಣ ಮಾಳಿ(35) ಹುಸೇನ್(34) ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದ ಸಾಯಂಕಾಲದವರೆಗೆ 10 ಗಂಟೆಗಳ ಕಾಲ ಕೊಳವೆ ಬಾವಿಯಲ್ಲಿ ಶವ ಶೋಧ ಕಾರ್ಯಾಚರಣೆ ಮಾಡಿ ಶವ ಹೊರತೆರೆಯಲಾಗಿದೆ. ಎ1 ಆರೋಪಿಯಾದ ನಾರಾಯಣನ ಜೊತೆ ಸ್ವಾಮೀಜಿಗೆ ಉತ್ತಮ ಸಂಬಂಧ ಇತ್ತು. ಸ್ವಾಮೀಜಿ 6 ಲಕ್ಷ ರೂ. ಹಣಕಾಸಿನ ಸಹಾಯ ಮಾಡಿದ್ದರು. ಈ ಹಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ ಕಾರಣಕ್ಕೆ ಕೊಲೆ ಮಾಡಲಾಗಿದೆ.

ಕೊಳವೆ ಬಾವಿಯ 30 ಅಡಿ ಆಳದಲ್ಲಿ ಸ್ವಾಮೀಜಿ ಪಾರ್ಥಿವ ಶರೀರ ದೊರೆತಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಮರಣೋತ್ತರ ಪರೀಕ್ಷೆ ಬಳಿಕ ಪ್ರಕರಣದ ತನಿಖೆ ಮುಂದುವರಿಯಲಿದೆ ಎಂದು ಬೆಳಗಾವಿ ಎಸ್‌ಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಜೈನಮುನಿಗಳ ಸಾವಿನಿಂದಾಗಿ ನಂದಿ ಪರ್ವತ ಆಶ್ರಮದಲ್ಲಿ ಭಕ್ತರು ಕಣ್ಣೀರಿನ ಕೋಡಿ ಹರಿಸಿದ್ದಾರೆ. ಆರೋಪಿಗಳಿಗೆ ಕಠಿಣಾತಿಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಸ್ವಾಮೀಜಿ ಹತ್ಯೆ ಬಳಿಕ ಪೊಲೀಸರ ಮುಂದೆ ಹಂತಕರು ಹೈಡ್ರಾಮಾ ನಡೆಸಿದ್ದರು. ಜುಲೈ 5ರ ರಾತ್ರಿ ನಂದಿ ಪರ್ವತ ಆಶ್ರಮದ ಕೋಣೆಯಲ್ಲಿ ಹತ್ಯೆ ನಡೆಸಿದ್ದರು. ಜುಲೈ 6 ರಂದು ಸ್ವಾಮೀಜಿಗಾಗಿ ಭಕ್ತರು, ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಸ್ವಾಮೀಜಿಯನ್ನು ಅಪಹರಣ ಮಾಡಲಾಗಿದೆ ಎಂದು ತಿಳಿಸಿದ್ದರು. ಹೀಗಾಗಿ ಪೊಲೀಸರು ಅಪಹರಣ ಮಾಡಿದವರು ಚಹರೆ ಹೇಗಿತ್ತು ಚಿತ್ರ ಬಿಡಿಸಿ ಎಂದು ಸೂಚಿಸಿದ್ದಾರೆ. ಈ ವೇಳೆ ಇಬ್ಬರ ಹೇಳಿಕೆಗಳಿಗೆ ಸಾಮ್ಯತೆ ಇರಲಿಲ್ಲ. ಈ ಕಾರಣಕ್ಕೆ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ಅವರಿಬ್ಬರು ದಿಕ್ಕು ತಪ್ಪಿಸಲು ಯತ್ನಿಸಿದ್ದರು. ಒಮ್ಮೆ ನದಿಯಲ್ಲಿ ಶವ ಎಸೆದಿರುವುದಾಗಿ ಮತ್ತೊಮ್ಮೆ ಕೊಳವೆ ಭಾವಿಯಲ್ಲಿ ಶವ ಎಸೆದಿರುವುದಾಗಿ ಹೇಳಿಕೆ ನೀಡಿದ್ದರು. ತೀವ್ರ ವಿಚಾರಣೆ ಬಳಿಕ ಕೊಲೆ ಮಾಡಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದು ಎಳೆ ಎಳೆಯಾಗಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಕೊಲೆ ಮಾಡಿದ್ದು ಹೇಗೆ?
ಜುಲೈ 5 ರಂದು ಸ್ವಾಮೀಜಿಯನ್ನು ಕೊಲೆ ಮಾಡಲಾಗಿದೆ. ಅಡುಗೆ ಸಹಾಯಕಿ ಕೆಲಸ ಮುಗಿಸಿ ಹೋಗ್ತಿದ್ದಂತೆ ಆರೋಪಿಗಳು ಕೊಲೆಗೆ ಸ್ಕೆಚ್ ಹಾಕಿದ್ದಾರೆ. ವಿದ್ಯುತ್ ಶಾಕ್ ನೀಡಿ ಕತ್ತು ಹಿಸುಕಿ ಆರೋಪಿ ನಾರಾಯಣ ಕೊಂದಿದ್ದಾನೆ. ಬಳಿಕ ಸ್ನೇಹಿತ ಹುಸೇನ್‌ಗೆ ಕರೆಮಾಡಿ ಕರೆಸಿಕೊಂಡಿದ್ದಾನೆ. ಬಳಿಕ ಸ್ವಾಮೀಜಿ ಶವವನ್ನು ಇಬ್ಬರು ಜೊತೆಗೂಡಿ ಬೈಕ್‌ನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಹಂತಕರು ಹಿರೇಕೋಡಿಯಿಂದ ಖಟಕಬಾವಿಯವರೆಗೂ 39 ಕಿ.ಮೀ ಬೈಕ್ ಮೇಲೆಯೇ ಶವವನ್ನು ಸಾಗಾಟ ಮಾಡಿದ್ದಾರೆ.

ಎ1 ಆರೋಪಿ ನಾರಾಯಣ ಮಾಳಿಯ ಸ್ವಗ್ರಾಮ ಖಟಕಬಾವಿ. ಮೊದಲು ಶವವನ್ನು ತನ್ನ ಜಮೀನಿನಲ್ಲೇ ಹೂಳಲು ನಾರಾಯಣ ಪ್ಲ್ಯಾನ್ ಮಾಡಿದ್ದ. ಆದರೆ ಶವ ಹೂತರೆ ಪೊಲೀಸರ ಕೈಗೆ ಸಿಕ್ಕಿಬೀಳುವ ಸಾಧ್ಯತೆ ಹೆಚ್ಚೆಂದು ಭಾವಿಸಿ ಕೊಳವೆ ಬಾವಿಯಲ್ಲಿ ಶವ ಎಸೆಯಲು ಆರೋಪಿಗಳು ಪ್ಲ್ಯಾನ್ ಮಾಡಿದ್ದರು. ಕೊಳವೆ ಬಾವಿಯಲ್ಲಿ ಶವ ಹೋಗದ ಕಾರಣ ಸ್ವಾಮೀಜಿಯ ದೇಹವನ್ನು ಪೀಸ್ ಪೀಸ್ ಮಾಡಿ, ಕೈ, ಕಾಲು, ತಲೆ ಬೇರ್ಪಡಿಸಿ ಬಳಿಕ ಶವ ತಂದಿದ್ದ ಸೀರೆಯಲ್ಲಿಯೇ ಸುತ್ತಿ ಕೊಳವೆ ಬಾವಿಗೆ ಹಾಕಿದ್ದರು.

Previous Post

ಪತ್ರಕರ್ತರಿಗೂ ‘ಆರೋಗ್ಯ ಭಾಗ್ಯ’ ನೀಡಲು ಸಿಎಂ ಜತೆ ಚರ್ಚೆ: ಸ್ಪೀಕರ್‌ ಯು.ಟಿ.ಖಾದರ್‌

Next Post

ತುಳು ದೈವಾರಾಧನೆ ನಿಂದನೆ ಮಾಡಿದ ಆರೋಪಿ ಶಿವರಾಜ್ ಸೆರೆ

Next Post
ತುಳು ದೈವಾರಾಧನೆ ನಿಂದನೆ ಮಾಡಿದ ಆರೋಪಿ ಶಿವರಾಜ್ ಸೆರೆ

ತುಳು ದೈವಾರಾಧನೆ ನಿಂದನೆ ಮಾಡಿದ ಆರೋಪಿ ಶಿವರಾಜ್ ಸೆರೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.