Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸದನದಲ್ಲಿ ‘ಐಎಎಸ್’ ಕೋಲಾಹಲ – ಡೆಪ್ಯೂಟಿ ಸ್ಪೀಕರ್ ಮೇಲೆ ಹರಿದ ಹಾಳೆ ಎಸೆದ ಬಿಜೆಪಿ, ಜೆಡಿಎಸ್ ಸದಸ್ಯರು

editor tv by editor tv
July 19, 2023
in ರಾಜ್ಯ
0
ಸದನದಲ್ಲಿ ‘ಐಎಎಸ್’ ಕೋಲಾಹಲ – ಡೆಪ್ಯೂಟಿ ಸ್ಪೀಕರ್ ಮೇಲೆ ಹರಿದ ಹಾಳೆ ಎಸೆದ ಬಿಜೆಪಿ, ಜೆಡಿಎಸ್ ಸದಸ್ಯರು
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಮಹಾಘಟಬಂಧನ್ ಸಭೆಗಾಗಿ ಹೊರ ರಾಜ್ಯಗಳಿಂದ ಬಂದ ನಾಯಕರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಿದ್ದ ವಿಚಾರ ಸದನದಲ್ಲಿ ಕೋಲಾಹಲ ಸೃಷ್ಟಿಸಿತು. ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಅಲ್ಲದೇ ವಿಧೇಯಕದ ಪ್ರತಿಗಳನ್ನು ಹರಿದು ಡೆಪ್ಯೂಟಿ ಸ್ಪೀಕರ್ ಮುಂದೆ ಎಸೆದರು. ಈ ಒಂದು ಹೈಡ್ರಾಮಾಕ್ಕೆ ಬುಧವಾರದ ಕಲಾಪ ಸಾಕ್ಷಿಯಾಯಿತು.

ಮಹಾಘಟಬಂಧನ್ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳ ಬಳಕೆ ವಿಚಾರವನ್ನು ಕಲಾಪದಲ್ಲಿ ಪ್ರಸ್ತಾಪಿಸಿದ ಆರ್. ಅಶೋಕ್, ನಿನ್ನೆ, ಮೊನ್ನೆ ಸಭೆಗಳಲ್ಲಿ ಗಣ್ಯರ ಸ್ವಾಗತಕ್ಕೆ ಹೊಟೇಲ್‌ಗೆ ಕರೆತರಲು ಹಿರಿಯ ಅಧಿಕಾರಿಗಳ ಬಳಕೆ ಮಾಡಲಾಗಿದೆ. ಇದು ಯಾವ ಕಾನೂನಿನಲ್ಲಿ ಬಳಸಿದ್ದೀರಿ? ಇದು ಅಪರಾಧ, ಶಿಷ್ಟಾಚಾರ ಉಲ್ಲಂಘನೆ. ಸರ್ಕಾರ ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು.

ಅಶೋಕ್ ವಿರೋಧಕ್ಕೆ ಸಚಿವ ಎಚ್.ಕೆ. ಪಾಟೀಲ್ ಸಮಜಾಯಿಷಿ ನೀಡಿ, ರಾಜ್ಯಕ್ಕೆ ಗಣ್ಯರು ಬಂದಾಗ ಪ್ರೋಟೋಕಾಲ್ ಪ್ರಕಾರ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ನಮ್ಮಿಂದ ಪ್ರೋಟೋಕಾಲ್ ಉಲ್ಲಂಘನೆ ಆಗಿಲ್ಲ. ಪ್ರೋಟೋಕಾಲ್ ಇಲ್ಲದವರಿಗೆ ನಮ್ಮ ನಾಯಕರು ಸ್ವಾಗತಿಸಿದ್ದಾರೆ. 26 ಪಕ್ಷಗಳು ಒಟ್ಟಾಗಿ ಸೇರಿದ್ದು ಬಿಜೆಪಿಯವರಿಗೆ ಸಹಿಸೋದಕ್ಕೆ ಆಗ್ತಿಲ್ಲ ಎಂದು ಹೇಳಿದರು. ಪಾಟೀಲ್‌ರ ಹೇಳಿಕೆಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು.

ಲಾಲೂ ಪ್ರಸಾದ್ ಯಾದವ್ ಸಿಎಂ ಆಗಿದ್ದಾರಾ? ಅವರಿಗೆ ರವಿಶಂಕರ್ ಅನ್ನೋ ಐಎಎಸ್ ಅಧಿಕಾರಿ ನಿಯೋಜಿಸಿದ್ದೀರಲ್ಲ? ಸಿಎಸ್ ಅವರು ಅಧಿಕಾರಿಗಳ ನಿಯೋಜಿಸಿ ತಪ್ಪು ಮಾಡಿದ್ದಾರೆ ಎಂದು ಅಶೋಕ್ ಗುಡುಗಿದರು. ಈ ವೇಳೆ ಬಿಜೆಪಿ ಸದಸ್ಯರ ಮೇಲೆ ಸ್ಪೀಕರ್ ಯು.ಟಿ. ಖಾದರ್ ಗರಂ ಆದರು. ಈ ವಿಚಾರದಲ್ಲಿ ಚರ್ಚೆಗೆ ನೋಟಿಸ್ ಕೊಡಿ, ಚರ್ಚೆ ಮಾಡಿ. ನೋಟಿಸ್ ಕೊಡ್ರೀ.. ಇಷ್ಟ ಬಂದಾಗ ಮಾತಾಡೋ ನಿಯಮವಿಲ್ಲ ಎಂದು ಗರಂ ಆದರು.

ಶಿಷ್ಟಾಚಾರ ಉಲ್ಲಂಘನೆ ಆರೋಪ ಮಾಡಿದ ಬಿಜೆಪಿ ನಾಯಕರು ಸದನದ ಬಾವಿಗೆ ಇಳಿದು ಧರಣಿ ನಡೆಸಿದರು. ಸಿಎಂ ಅವರು ಅಧಿಕಾರಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಬಿಜೆಪಿಯಿಂದ ಧರಣಿ ಹಿನ್ನೆಲೆ ಸದನವನ್ನು ಸ್ಪೀಕರ್ ಸ್ವಲ್ಪ ಕಾಲ ಮುಂದೂಡಿದರು. ನಂತರ ಸ್ಪೀಕರ್ ಕೊಠಡಿಯಲ್ಲಿ ಬಿಜೆಪಿ ಸದಸ್ಯರ ಜತೆ ಸಂಧಾನ ಸಭೆ ನಡೆಯಿತು. ಧರಣಿ ಕೈಬಿಡುವಂತೆ ಕಾಂಗ್ರೆಸ್‌ನವರು ಮನವಿ ಮಾಡಿದರು. ವಿಧಾನಸಭೆ ಕಲಾಪ ಪುನಾರಂಭವಾದಾಗ ಸ್ಪೀಕರ್ ಸಂಧಾನ ವಿಫಲವಾಯಿತು. ಮತ್ತೆ ಸದನದ ಬಾವಿಯಲ್ಲಿ ಬಿಜೆಪಿ ಧರಣಿ ಮುಂದುವರಿಯಿತು. ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಇಡೀ ಎರಡು ದಿನ ರಾಜಕಾರಣಿಗಳ ಕಾವಲು ಕಾದಿದ್ದಾರೆ ಅಧಿಕಾರಿಗಳು. ನಿಮ್ಮ ರಾಜಕೀಯ ತೆವಲಿಗಾಗಿ ರಾಜ್ಯದ ಮಾನ ಮರ್ಯಾದೆ ಹರಾಜು ಮಾಡಿದ್ದೀರಾ. ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರೋರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಎಂಎಲ್‌ಎ, ಎಂಪಿ ಅಲ್ಲದವರನ್ನೂ ಐಎಎಸ್ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಪುಡಿ ಪಕ್ಷಗಳ ಮುಖಂಡರನ್ನೆಲ್ಲ ಐಎಎಸ್ ಅಧಿಕಾರಿಗಳು ಸ್ವಾಗತ ಮಾಡಿರೋದು ಸರಿಯಲ್ಲ ಎಂದು ಕೆಂಡ ಕಾರಿದರು. ಬಿಜೆಪಿ ಧರಣಿಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ನಿಮ್ಮ ಬೆದರಿಕೆಗಳಿಗೆ ಹೆದರಲ್ಲ. ಬಿಜೆಪಿ ಧರಣಿ ಮಾಡುತ್ತಿರುವುದು ಸರಿಯಲ್ಲ. ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಐಎಎಸ್ ಅಧಿಕಾರಿಗಳನ್ನು ಲೀಗಲ್ ಆಫೀಸರ್ ಮಾಡಿದ್ದರು. ಅಲ್ಲದೇ ತಮ್ಮ ಪ್ರಮಾಣವಚನ ಸಂದರ್ಭದಲ್ಲಿ ಇದೇ ನಿರ್ಧಾರ ತೆಗೆದುಕೊಂಡಿದ್ದರು. ಕುಮಾರಕೃಪಾಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನ ನಿಯೋಜಿಸಿದ್ರು. ಇವರ ಧರಣಿಗೆ ಸರ್ಕಾರ ಸೊಪ್ಪು ಹಾಕಲ್ಲ. ಇವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಸಿದ್ದು ಗರಂ ಆದರು.

ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸಿತು. ಧರಣಿ ಕೈಬಿಡುವಂತೆ ಸ್ಪೀಕರ್ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಈ ವೇಳೆ ಕೆಲವು ವಿಧೇಯಕಗಳ ಅಂಗೀಕಾರಕ್ಕೆ ಸರ್ಕಾರ ಮುಂದಾಯಿತು. ಧರಣಿಯ ನಡುವೆಯೇ ಸಿವಿಲ್ ಪ್ರಕ್ರಿಯೆಗಳ ಕರ್ನಾಟಕ ಸಂಹಿತೆಗಳ ತಿದ್ದುಪಡಿ ವಿಧೇಯಕ ಅಂಗೀಕರಿಸಿತು. ಚರ್ಚೆ ಇಲ್ಲದೇ ಸರ್ಕಾರಿ ವ್ಯಾಜ್ಯಗಳ ನಿರ್ವಹಣೆ ವಿಧೇಯಕಕ್ಕೂ ಅಂಗೀಕಾರ ದೊರೆಯಿತು. ಸ್ವಯಂ ಘೋಷಣೆ ಮೂಲಕ ಕೃಷಿಯೇತರ ಉದ್ದೇಶಕ್ಕೆ ಕೃಷಿ ಭೂಮಿ ಪರಿವರ್ತನೆ ಮಾಡಲು ಅವಕಾಶ ಕೊಡುವ ವಿಧೇಯಕವನ್ನೂ ಅಂಗೀಕರಿಸಲಾಯಿತು. ಈ ವೇಳೆ ದೋಖಾ ದೋಖಾ ಎಂದು ಬಿಜೆಪಿ ನಾಯಕರು ಕೂಗಿದರು. ಪ್ರತಿಪಕ್ಷಗಳ ಧರಣಿ ತೀವ್ರವಾಗಿ ವಿಧೇಯಕಗಳ ಪ್ರತಿಗಳನ್ನು ಹರಿದು ಬಿಸಾಡಿದರು.

ಈ ವೇಳೆ ಭೋಜನ ವಿರಾಮಕ್ಕೆ ಸದನ ಮುಂದೂಡದೇ ಮುಂದುವರೆಸಿದರು. ಊಟಕ್ಕೆ ಹೋಗೋರು ಹೋಗಿ ಮಾಡಿಕೊಂಡು ಬರಬಹುದು. ಸದನ ಮುಂದುವರೆಯಲಿದೆ ಎಂದು ಸ್ಪೀಕರ್ ಹೇಳಿದರು. ಈ ವೇಳೆ ಅವರ ಸ್ಥಾನವನ್ನು ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅಲಂಕರಿಸಿದರು. ಊಟಕ್ಕೆ ಬಿಡದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಧರಣಿ ನಿರತ ಬಿಜೆಪಿ ಸದಸ್ಯರು, ಸ್ಪೀಕರ್ ಪೀಠದ ಬಳಿ ಜಮಾಯಿಸಿ ಹರಿದ ಹಾಳೆ ಎಸೆದ ಆಕ್ರೋಶ ಹೊರಹಾಕಿದರು. ಸ್ಪೀಕರ್ ಪೀಠದಲ್ಲಿ ಕೂತಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮುಖದ ಮೇಲೆಯೇ ಹರಿದ ಹಾಳೆ ಎಸೆದರು. ಈ ವೇಳೆ ಸ್ಪೀಕರ್ ರಕ್ಷಣೆಗೆ ನಿಂತ ಮಾರ್ಷಲ್‌ಗಳು ಬಂದು ನಿಂತರು. ಕೊನೆಗೂ ಸದನವನ್ನು ಮಧ್ಯಾಹ್ನ 3 ಕ್ಕೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮುಂದೂಡಿದರು.

Previous Post

ಜೀತೇಗ ಭಾರತ್’ INDIA ಒಕ್ಕೂಟಕ್ಕೆ ಹೊಸ ಟ್ಯಾಗ್‌ಲೈನ್

Next Post

ಮಂಗಳೂರು :ಚಪ್ಪಲಿ ಕಳುವಾಗಿದ್ದಕ್ಕೆ 112ಕ್ಕೆ ಕರೆ ಮಾಡಿ ದೂರು ನೀಡಿದ ಯುವಕ, ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ರು

Next Post
ಮಂಗಳೂರು :ಚಪ್ಪಲಿ ಕಳುವಾಗಿದ್ದಕ್ಕೆ 112ಕ್ಕೆ ಕರೆ ಮಾಡಿ ದೂರು ನೀಡಿದ ಯುವಕ, ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ರು

ಮಂಗಳೂರು :ಚಪ್ಪಲಿ ಕಳುವಾಗಿದ್ದಕ್ಕೆ 112ಕ್ಕೆ ಕರೆ ಮಾಡಿ ದೂರು ನೀಡಿದ ಯುವಕ, ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.