Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

India’s Richest MLA: ಡಿಕೆ ಶಿವಕುಮಾರ್ ಭಾರತದ ಅತಿಶ್ರೀಮಂತ ಶಾಸಕ; ಅತಿಹೆಚ್ಚು ಬಿಲಿಯನೇರ್ ಶಾಸಕರು ಕರ್ನಾಟಕದವರೇ

editor tv by editor tv
July 20, 2023
in ರಾಜ್ಯ
0
India’s Richest MLA: ಡಿಕೆ ಶಿವಕುಮಾರ್ ಭಾರತದ ಅತಿಶ್ರೀಮಂತ ಶಾಸಕ; ಅತಿಹೆಚ್ಚು ಬಿಲಿಯನೇರ್ ಶಾಸಕರು ಕರ್ನಾಟಕದವರೇ
1.9k
VIEWS
Share on FacebookShare on TwitterShare on Whatsapp

M. Ashraf Kammaje

Updated on:Jul 20, 2023 | 12:31 PM

DK Shivakumar: ದೇಶದಲ್ಲಿರುವ ಶಾಸಕರಲ್ಲಿ 88 ಮಂದಿ ಬಿಲಿಯನೇರ್​ಗಳಿದ್ದಾರೆ. ಈ ಪೈಕಿ ಕರ್ನಾಟಕದವರೇ 32 ಮಂದಿ ಇದ್ದಾರೆ. ಭಾರತದ ಅಗ್ರ 20 ಶ್ರೀಮಂತ ಶಾಸಕರಲ್ಲಿ ಕರ್ನಾಟಕದವರು 12 ಮಂದಿ ಇದ್ದಾರೆ. ಮೊದಲ ಮೂರು ಸ್ಥಾನದಲ್ಲೂ ಕರ್ನಾಟಕದವರಿದ್ದಾರೆ.

ಬೆಂಗಳೂರು, ಜುಲೈ 20: ಎಡಿಆರ್ ಮತ್ತು ಎನ್​ಇಡಬ್ಲ್ಯೂ ಬಿಡುಗಡೆ ಮಾಡಿದ ಜನಪ್ರತಿನಿಧಿಗಳ ಮಾಹಿತಿ ವರದಿಯೊಂದರಲ್ಲಿ (ADR Report) ದೇಶದ ಶಾಸಕರ ಆಸ್ತಿಪಾಸ್ತಿ, ಸಾಲ ಇತ್ಯಾದಿ ವಿವರ ಬಹಿರಂಗವಾಗಿದೆ. ಈ ವರದಿ ಪ್ರಕಾರ ಸಚಿವ ಡಿಕೆ ಶಿವಕುಮಾರ್ (DK Shivakumar) ಅವರು ಭಾರತದ ಅತಿಶ್ರೀಮಂತ ಶಾಸಕ ಎನಿಸಿದ್ದಾರೆ. ಕುತೂಹಲವೆಂದರೆ ಶ್ರೀಮಂತ ಶಾಸಕರು ಕರ್ನಾಟಕದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 100 ಕೋಟಿ ರೂಗೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿರುವ ಬಿಲಿಯನೇರ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರು 32 ಮಂದಿ ಇದ್ದಾರೆ. ದೇಶದ ಯಾವ ರಾಜ್ಯದಲ್ಲೂ ಇಷ್ಟೊಂದು ಬಿಲಿಯನೇರ್ ಶಾಸಕರು ಇಲ್ಲ. ದೇಶದ ಮೊದಲ ಮೂರು ಶ್ರೀಮಂತ ಶಾಸಕರೆಲ್ಲರೂ ಕರ್ನಾಟಕದವರೇ. ಹಾಗೆಯೇ, ಅಗ್ರ 20 ಸಿರಿವಂತ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರೇ 12 ಮಂದಿ ಇದ್ದಾರೆ. ಇದೊಂದು ಅಪೂರ್ವ ಮತ್ತು ಮುಜುಗರದ ದಾಖಲೆ ಎನಿಸಿದೆ. ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್​ನಲ್ಲಿ ಘೋಷಿಸಲಾಗಿರುವ ಅಂಶಗಳನ್ನು ಆಧರಿಸಿ ಎಡಿಆರ್ ಮತ್ತು ಎನ್​ಇಡಬ್ಲ್ಯೂ ಈ ಪಟ್ಟಿ ಪ್ರಕಟಿಸಿದೆ.

ಸಾವಿರ ಕೋಟಿ ರೂಗೂ ಹೆಚ್ಚು ಆಸ್ತಿ ಇರುವ ಮೂವರು ಕನ್ನಡಿಗ ಶಾಸಕರು

ದೇಶದ ಅತಿಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನ ಕರ್ನಾಟಕದವರದ್ದೇ. ಡಿಕೆ ಶಿವಕುಮಾರ್, ಕೆಎಚ್ ಪುಟ್ಟಸ್ವಾಮಿ ಗೌಡ ಮತ್ತು ಪ್ರಿಯಾಕೃಷ್ಣ ಅವರು ಮೊದಲ ಮೂರು ಸ್ಥಾನದಲ್ಲಿದ್ದಾರೆ. ಈ ಬಾರಿ ಅಚ್ಚರಿ ಮೂಡಿಸಿದ್ದು ಪುಟ್ಟಸ್ವಾಮಿಗೌಡರದ್ದು. ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಪುಟ್ಟಸ್ವಾಮಿಗೌಡ ಅವರು ತಮ್ಮ ಬಳಿ 1,267 ಕೋಟಿ ರೂ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ 1,413 ಕೋಟಿ ರೂ ಘೋಷಿತ ಆದಾಯದೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ಅವರ ಘೋಷಿತ ಆಸ್ತಿ 1,156 ಕೋಟಿ ರೂ ಇದೆ.

ದೇಶದ ಟಾಪ್20 ಶ್ರೀಮಂತ ಶಾಸಕರಲ್ಲಿ ಕರ್ನಾಟಕದವರು ಮತ್ತವರ ಘೋಷಿತ ಆಸ್ತಿಮೌಲ್ಯ

  • ಡಿಕೆ ಶಿವಕುಮಾರ್, ಕಾಂಗ್ರೆಸ್: 1,413ಕೋಟಿ ರೂ
  • ಕೆಎಚ್ ಪುಟ್ಟಸ್ವಾಮಿಗೌಡ, ಪಕ್ಷೇತರ: 1,267 ಕೋಟಿ ರೂ
  • ಪ್ರಿಯಾಕೃಷ್ಣ, ಕಾಂಗ್ರೆಸ್: 1,156 ಕೋಟಿ ರೂ
  • ಬಿಎಸ್ ಸುರೇಶ, ಕಾಂಗ್ರೆಸ್: 648 ಕೋಟಿ ರೂ
  • ಎನ್.ಎ. ಹ್ಯಾರಿಸ್, ಕಾಂಗ್ರೆಸ್: 439 ಕೋಟಿ ರೂ
  • ಎಚ್.ಕೆ. ಸುರೇಶ್, ಬಿಜೆಪಿ: 435 ಕೋಟಿ ರೂ
  • ಆರ್.ವಿ. ದೇಶಪಾಂಡೆ, ಕಾಂಗ್ರೆಸ್: 363 ಕೋಟಿ ರೂ
  • ಎಂಆರ್ ಮಂಜುನಾಥ್, ಜೆಡಿಎಸ್: 316 ಕೋಟಿ ರೂ
  • ಎಸ್.ಎನ್. ಸುಬ್ಬಾರೆಡ್ಡಿ, ಕಾಂಗ್ರೆಸ್: 313 ಕೋಟಿ ರೂ
  • ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್: 312 ಕೋಟಿ ರೂ
  • ಎಂ ಕೃಷ್ಣಪ್ಪ, ಕಾಂಗ್ರೆಸ್: 296 ಕೋಟಿ ರೂ
  • ಮುನಿರತ್ನ, ಬಿಜೆಪಿ: 293 ಕೋಟಿ ರೂ

ಅತಿಹೆಚ್ಚು ಬಿಲಿಯನೇರ್ ಶಾಸಕರಿರುವ ರಾಜ್ಯಗಳು

ಎಡಿಆರ್ ಒಟ್ಟು 4001 ಶಾಸಕರ ಘೋಷಿತ ಆಸ್ತಿವಿವರಗಳನ್ನು ಅವಲೋಕಿಸಿದ್ದು ನೂರ ಕೋಟಿ ರೂಗೂ ಹೆಚ್ಚು ಮೊತ್ತದ ಆಸ್ತಿಗಳನ್ನು 88 ಶಾಸಕರು ಹೊಂದಿರುವ ಸಂಗತಿಯನ್ನ ಬೆಳಕಿಗೆ ತಂದಿದೆ. ಇದರಲ್ಲಿ ಹೆಚ್ಚಿನವರು ಕರ್ನಾಟಕದವರೇ. ವಿವಿಧ ರಾಜ್ಯಗಳಲ್ಲಿ ಎಷ್ಟೆಷ್ಟು ಬಿಲಿಯನೇರ್​ಗಳಿದ್ದಾರೆ, ಇಲ್ಲಿದೆ ಪಟ್ಟಿ:

  1. ಕರ್ನಾಟಕ: 32
  2. ಮಹಾರಾಷ್ಟ್ರ: 12
  3. ಆಂಧ್ರಪ್ರದೇಶ: 10
  4. ಮಧ್ಯಪ್ರದೇಶ: 6
  5. ಗುಜರಾತ್: 5
  6. ತಮಿಳುನಾಡು: 4
  7. ಅರುಣಾಚಲಪ್ರದೇಶ: 4
  8. ರಾಜಸ್ಥಾನ: 3
  9. ಪಂಜಾಬ್: 2
  10. ಹಿಮಾಚಲಪ್ರದೇಶ: 2
  11. ಉತ್ತರಪ್ರದೇಶ: 1
  12. ಮೇಘಾಲಯ: 1
  13. ನಾಗಾಲ್ಯಾಂಡ್: 1
  14. ದೆಹಲಿ: 1
  15. ಹರ್ಯಾಣ: 1
  16. ಛತ್ತೀಸ್​ಗಡ: 1
  17. ತೆಲಂಗಾಣ: 1
  18. ಅಸ್ಸಾಂ: 1

Previous Post

ಮಂಗಳೂರು: ಮಾದಕ ವಸ್ತು ಮಿಶ್ರಿತ 100 ಕೆ.ಜಿ ಚಾಕೊಲೆಟ್‌ ವಶ

Next Post

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು

Next Post
ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.