Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಗಾಲಿಕುರ್ಚಿಯಲ್ಲಿ ರಾಜ್ಯಸಭೆಗೆ ಬಂದ 90ರ ಹರೆಯದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

editor tv by editor tv
August 8, 2023
in ರಾಷ್ಟ್ರೀಯ
0
ಗಾಲಿಕುರ್ಚಿಯಲ್ಲಿ ರಾಜ್ಯಸಭೆಗೆ ಬಂದ 90ರ ಹರೆಯದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
1.9k
VIEWS
Share on FacebookShare on TwitterShare on Whatsapp

ನಿನ್ನೆ ರಾಜ್ಯಸಭೆಯಲ್ಲಿ  ದೆಹಲಿ ಸುಗ್ರೀವಾಜ್ಞೆ ಮಸೂದೆ ರಾಜ್ಯಸಭೆಯಲ್ಲಿಯೂ ಪಾಸಾಗಿ ಕಾಯ್ದೆಯಾಗಿ ಬದಲಾಯ್ತು. ಈ ಮಸೂದೆಯ ವಿರುದ್ಧ ಮತ ಚಲಾಯಿಸುವ ಸಲುವಾಗಿ ದೇಶದ ಮಾಜಿ ಪ್ರಧಾನಿ 90 ವರ್ಷದ ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯ ಮೂಲಕ ರಾಜ್ಯಸಭಾ ಕಲಾಪಕ್ಕೆ ಆಗಮಿಸಿದ್ದರು

ನವದೆಹಲಿ: ನಿನ್ನೆ ರಾಜ್ಯಸಭೆಯಲ್ಲಿ  ದೆಹಲಿ ಸುಗ್ರೀವಾಜ್ಞೆ ಮಸೂದೆ ರಾಜ್ಯಸಭೆಯಲ್ಲಿಯೂ ಪಾಸಾಗಿ ಕಾಯ್ದೆಯಾಗಿ ಬದಲಾಯ್ತು. ಈ ಮಸೂದೆಯ ವಿರುದ್ಧ ಮತ ಚಲಾಯಿಸುವ ಸಲುವಾಗಿ ದೇಶದ ಮಾಜಿ ಪ್ರಧಾನಿ 90 ವರ್ಷದ ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯ ಮೂಲಕ ರಾಜ್ಯಸಭಾ ಕಲಾಪಕ್ಕೆ ಆಗಮಿಸಿದ್ದರು. ರಾಜ್ಯಸಭೆಯಲ್ಲಿ ಆಡಳಿತರೂಢ ಬಿಜೆಪಿಗೆ ಬಹುಮತದ ಕೊರತೆಯಾಗುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಈ ಬಿಲ್‌ಗೆ ತಡೆ ಬೀಳಲೇಬೇಕೆಂಬ ದೃಷ್ಟಿಯಿಂದ ಕಾಂಗ್ರೆಸ್ ತನ್ನ ವಯೋವೃದ್ಧ ಹಿರಿಯ ನಾಯಕನನ್ನು ಕೂಡ ಕಲಾಪಕ್ಕೆ ಬರುವಂತೆ ಮಾಡಿತ್ತು. ಆದರೆ ಅಲ್ಲಿ ಜಗನ್‌ ನೇತೃತ್ವದ ವೈಎಸ್‌ಆರ್ ಸೇರಿದಂತೆ ಕೆಲ ಪಕ್ಷಗಳು ಆಡಳಿತರೂಢ ಬಿಜೆಪಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ದೆಹಲಿ ಸುಗ್ರೀವಾಜ್ಞೆ ಸಲೀಸಾಗಿ ರಾಜ್ಯಸಭೆಯಲ್ಲೂ ಪಾಸಾಯ್ತು. ಈ ಮಧ್ಯೆ ವಯೋವೃದ್ಧರಾದ ಮನಮೋಹನ್ ಸಿಂಗ್ ಅವರನ್ನು ಕೇವಲ ವಿಧೇಯಕಕ್ಕೆ ವೋಟು ಹಾಕುವುದಕ್ಕಾಗಿ ಗಾಲಿ ಕುರ್ಚಿಯಲ್ಲಿ ಕರೆ ತಂದ ಕಾಂಗ್ರೆಸ್ ಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಆದರೆ ಇದಕ್ಕೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ.

ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ-2023 ರ ಮಂಡನೆ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ಆಗಮಿಸಿದ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ  ಆಮ್‌ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಧನ್ಯವಾದ ತಿಳಿಸಿದರು.  ಇಂದು, ರಾಜ್ಯಸಭೆಯಲ್ಲಿ, ಡಾ. ಮನಮೋಹನ್ ಸಿಂಗ್, (Dr.Manmohan Singh) ಅವರು ಸಮಗ್ರತೆಯ ದಾರಿದೀಪವಾಗಿ ನಿಂತರು  ಹಾಗೂ ವಿಶೇಷವಾಗಿ  ಕಪ್ಪು ಸುಗ್ರೀವಾಜ್ಞೆಯ ವಿರುದ್ಧ  ಮತ ಚಲಾಯಿಸಲು ಬಂದರು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಅವರ ಅಚಲವಾದ ಬದ್ಧತೆಯು ಇತರರಿಗೆ ಸ್ಫೂರ್ತಿಯಾಗಿದೆ. ಅವರ ಅಮೂಲ್ಯ ಬೆಂಬಲಕ್ಕಾಗಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಎಂದು ರಾಘವ್ ಚಡ್ಡಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದರು.

 ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.  ಡಾ. ಸಿಂಗ್ ಅವರ ಪ್ರಜಾಪ್ರಭುತ್ವದ ಬಗೆಗಿನ ಈ ಸಮರ್ಪಣೆ ಈ ದೇಶದ ಸಂವಿಧಾನದ ಮೇಲಿನ ಅವರ ನಂಬಿಕೆಗೆ ಸಾಕ್ಷಿಯಾಗಿದೆ. ಬಿಜೆಪಿ ತನ್ನ ಹಿರಿಯರನ್ನು ಮಾನಸಿಕ ಕೋಮಾಕ್ಕೆ ತಳ್ಳಿದೆ. ಆದರೆ ನಮ್ಮ ಹಿರಿಯರು ನಮಗೆ ಸ್ಫೂರ್ತಿ, ಅವರು ನಮ್ಮ ಧೈರ್ಯವಾಗಿದ್ದಾರೆ. ನಿಮ್ಮ ಪಕ್ಷದ ಯಜಮಾನನಿಗೆ ಏನನ್ನಾದರು ಕಲಿಯಲು ಹೇಳಿ ಎಂದು ಕಾಂಗ್ರೆಸ್ ನಾಯಕಿ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ನಿರ್ವಹಿಸುವ ಸುಪ್ರಿಯಾ ಶ್ರೀನಾಟೆ (Supriya Srinate) ತಿರುಗೇಟು ನೀಡಿದ್ದಾರೆ.

ಸಿಂಗ್ ಅವರ ಹೊರತಾಗಿ ವಿರೋಧ ಪಕ್ಷ ಕಾಂಗ್ರೆಸ್, ಜಾರ್ಖಂಡ್ ಮುಕ್ತಿ ಮೋರ್ಚಾದ (Jharkhand Mukti Morcha) ನಾಯಕ ಶಿಬು ಸೊರೇನ್ (Shibu Soren) ಅವರನ್ನು ಕೂಡ ರಾಜ್ಯಸಭೆಗೆ ಕರೆ ತಂದಿತ್ತು. ವಿಪಕ್ಷಗಳ ಈ ಸಂಘಟಿತ ಪ್ರಯತ್ನದ ನಂತರವೂ ಈ ಬಿಲ್ ರಾಜ್ಯಸಭೆಯಲ್ಲಿ ಸಲೀಸಾಗಿ ಪಾಸಾಯ್ತು.  ಮಸೂದೆ ಪರ 131 ಮತ ಬಂದರೆ, ಮಸೂದೆ ವಿರುದ್ಧ ತೊಡತಟ್ಟಿದ್ದ ವಿಪಕ್ಷ ಇಂಡಿಯಾ ಕೂಟಕ್ಕೆ ಕೇವಲ 102 ಮತ ಬಂದವು. ಇತ್ತೀಚೆಗೆ ಮಸೂದೆಗೆ ಲೋಕಸಭೆ ಕೂಡ ಅಂಗೀಕಾರ ನೀಡಿತ್ತು. ಹೀಗಾಗಿ ಸುಗ್ರೀವಾಜ್ಞೆಗೆ ಈಗ ಶಾಶ್ವತವಾಗಿ ಕಾನೂನು ಸ್ವರೂಪ ಸಿಕ್ಕಿದೆ.

Previous Post

ಮಂಗಳೂರು: ಚಾಕೊಲೇಟ್‌ನಲ್ಲಿ ಗಾಂಜಾ ಅಂಶ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Next Post

ಮೂರು ದಿನದ ಮಟ್ಟಿಗೆ ಅಧ್ಯಕ್ಷನಾಗಿ, ದೇಶದ ದಿಕ್ಕನ್ನೇ ಬದಲಿಸಿದ ಪುಟ್ಟ ಬಾಲಕ

Next Post
ಮೂರು ದಿನದ ಮಟ್ಟಿಗೆ ಅಧ್ಯಕ್ಷನಾಗಿ, ದೇಶದ ದಿಕ್ಕನ್ನೇ ಬದಲಿಸಿದ ಪುಟ್ಟ ಬಾಲಕ

ಮೂರು ದಿನದ ಮಟ್ಟಿಗೆ ಅಧ್ಯಕ್ಷನಾಗಿ, ದೇಶದ ದಿಕ್ಕನ್ನೇ ಬದಲಿಸಿದ ಪುಟ್ಟ ಬಾಲಕ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.