
ಬೀದರ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಅದರಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ಕಾನ್ಸ್ಟೇಬಲ್ ವಿಜಯಕುಮಾರ್ ಮನೆ ಮೇಲೂ ದಾಳಿ ಮಾಡಲಾಗಿದೆ. ಚಿಟಗುಪ್ಪ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಕುಮಾರ್, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಮನೆ ಮೇಲೂ ದಾಳಿ ನಡೆಸಿ, ಪರಿಶೀಲಿಸುತ್ತಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಲೋಕಾಯುಕ್ತ ದಾಳಿ ಮಾಡಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು, ಬೆಂಗಳೂರಿನ BBMP ಕಚೇರಿ ಮೇಲೂ ದಾಳಿ ನಡೆಯುವ ಸಾಧ್ಯತೆಯಿದೆ. ಇನ್ನು ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತರ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.


ಕೊಡಗು ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ
ಮಡಿಕೇರಿಯಲ್ಲಿ ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಮಡಿಕೇರಿಯ ಫೀಲ್ಡ್ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯ ನಂಜುಂಡೇಗೌಡ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ
ಬೀದರ್ ಜಿಲ್ಲೆಯಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ ವಿಜಯಕುಮಾರ್ ಮನೆ ಮೇಲೆ ದಾಳಿ ನಡೆದಿದೆ. ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿ ಹುಚಕನಳ್ಳಿ ಗ್ರಾಮದ ಮನೆ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಮಹತ್ವದ ದಾಖಲೆ ಪರಿಶೀಲಿಸುತ್ತಿದ್ದಾರೆ.