Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

editor tv by editor tv
August 23, 2023
in ರಾಷ್ಟ್ರೀಯ
0
146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಭಾರತದ ಚಂದ್ರಯಾನ-3 (Chandrayaan-3) ಯಶಸ್ಸಿಗೆ ಕ್ಷಣಗಣನೆ ಆರಂಭವಾಗಿದೆ. ವಿಜ್ಞಾನಿಗಳು ಲೆಕ್ಕಚಾರದ ಪ್ರಕಾರ ಎಲ್ಲವೂ ನಡೆದರೆ ಸಂಜೆ 6:04 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿ (Moon) ಲ್ಯಾಂಡ್ ಆಗಲಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸುವ ಮೂಲಕ ಭಾರತ ಬಾಹ್ಯಾಕಾಶ ವಲಯದಲ್ಲಿ ಹೊಸ ಸಾಧನೆ ಮಾಡಲಿದೆ.

ಚಂದ್ರನ ಅಧ್ಯಯನಕ್ಕೆ ಈವರೆಗೂ 146 ಪ್ರಯತ್ನಗಳು ನಡೆದಿವೆ. ಈ ಪೈಕಿ 69 ಚಂದ್ರಯಾನಗಳು ಮಾತ್ರ ಸಫಲವಾಗಿವೆ. ಮುಂದುವರಿದ ದೇಶಗಳಿಂದ ಮಾತ್ರ ಯಶಸ್ವಿ ಚಂದ್ರಯಾನ ಮಾಡಿದ್ದು, ಹಲವು ಯತ್ನಗಳ ಬಳಿಕ ಅಮೆರಿಕ, ರಷ್ಯಾ, ಚೀನಾ, ಜಪಾನ್ ಯಶಸ್ಸು ಕಂಡಿವೆ.

1950ರ ದಶಕದಲ್ಲಿ 13, 1960 – 63, 1970 – 23, 1980 – 00, 1990 – 07, 2000 – 09, 2010 – 12, 2020 – 19 ಚಂದ್ರಯಾನ ಯೋಜನೆಗಳು ನಡೆದಿವೆ. ಅಮೆರಿಕಾ 59 ಪ್ರಯತ್ನಗಳನ್ನು ಮಾಡು 39 ಬಾರಿ ಯಶಸ್ಸು ಕಂಡಿದೆ. ರಷ್ಯಾದ 58 ಪ್ರಯತ್ನಗಳ ಪೈಕಿ 18 ರಲ್ಲಿ ಮಾತ್ರ ಸಫಲವಾಗಿದೆ. ಜಪಾನ್ 6ರ ಪೈಕಿ 3, ಚೀನಾ 8 ರ ಪೈಕಿ 4 ಯೋಜನೆಗಳು ಯಶಸ್ವಿಯಾಗಿವೆ. ಯುರೋಪಿಯನ್ ಒಕ್ಕೂಟ, ಲಕ್ಸೆಂಬರ್ಗ್, ಇಸ್ರೇಲ್, ದಕ್ಷಿಣ ಕೊರಿಯಾ, ಇಟಲಿ, ಯುಎಇ, ಭಾರತ ತಲಾ ಒಂದು ಬಾರಿ ಯಶಸ್ವಿ ಚಂದ್ರಯಾನ ಮಾಡಿವೆ.

ಹತ್ತಾರು ದೇಶಗಳು ಚಂದ್ರನ ಕಕ್ಷೆಯಲ್ಲಿದ್ದು ಅಧ್ಯಯನ ನಡೆಸಿದರೆ ಅಮೆರಿಕ, ರಷ್ಯಾ ಮತ್ತು ಚೀನಾ ಚಂದ್ರನಲ್ಲಿ ತನ್ನ ನೌಕೆ ಇಳಿಸಿವೆ. ಅಮೆರಿಕ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಚಂದ್ರನ ಅಂಗಳದಲ್ಲಿ ಮಾನವನ‌ ಕಳುಹಿಸಿ ಯಶಸ್ವಿಯಾಗಿತ್ತು. ಹೀಗೆ ಜಾಗತಿಕ ದೇಶಗಳು ಚಂದ್ರನ ಮೇಲೆ ಸಂಶೋಧನೆ ನಡೆಸಲು ಹಲವು ಕಾರಣಗಳಿವೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಪರ್ವತ ಶ್ರೇಣಿಗಳ ಶಾಶ್ವತ ನೆರಳಿನಲ್ಲಿ ಮಂಜುಗಡ್ಡೆಯಲ್ಲಿ ನೀರು ಇದೆ ಎಂದು ವಿಜ್ಞಾನಿಗಳು ನಂಬುತ್ತಾರೆ. ಭವಿಷ್ಯದಲ್ಲಿ ನೀರು ಮಾನವ ಜೀವನಕ್ಕೆ ನಿರ್ಣಾಯಕವಾಗಿರುವ ಕಾರಣ ಚಂದ್ರನ ಅಧ್ಯಯನ ನಡೆಯುತ್ತಿದೆ. ಹೈಡ್ರೋಜನ್ ಮತ್ತು ಆಮ್ಲಜನಕದ ಮೂಲವೂ ಚಂದ್ರನಲ್ಲಿರಬಹುದು. ಇದು ರಾಕೆಟ್ ಇಂಧನಕ್ಕಾಗಿ ಬಳಸಬಹುದು. ಚಂದ್ರನ ಅಧ್ಯಯನಕ್ಕೆ ಇದು ಕೂಡ ಕಾರಣ ಆಗಿದೆ.

ಮುಖ್ಯವಾಗಿ ಖನಿಜಗಳ ಸಂಪನ್ಮೂಲ ಪತ್ತೆ ಹಚ್ಚುವ ಉದ್ದೇಶಗಳಿವೆ. ಹೀಲಿಯಂ-3 ಭೂಮಿಯ ಮೇಲೆ ಅಪರೂಪದ ಖನಿಜ. ಆದರೆ ಚಂದ್ರನ ಮೇಲೆ ಒಂದು ಮಿಲಿಯನ್ ಟನ್‌ಗಳಷ್ಟು ಹೀಲಿಯಂ ಇದೆ ಎಂದು ನಾಸಾ ಹೇಳುತ್ತದೆ. ಇದು ಪರಮಾಣು ಶಕ್ತಿಯನ್ನು ಒದಗಿಸುತ್ತದೆ. ವಿಕಿರಣಶೀಲವಲ್ಲದ ಕಾರಣ ಅಪಾಯಕಾರಿ ತ್ಯಾಜ್ಯವನ್ನು ಉತ್ಪಾದಿಸುವುದಿಲ್ಲ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಬೋಯಿಂಗ್‌ನ ಸಂಶೋಧನೆಯ ಪ್ರಕಾರ ಸ್ಮಾರ್ಟ್‌ಫೋನ್‌ಗಳು, ಕಂಪ್ಯೂಟರ್‌ಗಳು ಮತ್ತು ಸುಧಾರಿತ ತಂತ್ರಜ್ಞಾನಗಳಲ್ಲಿ ಬಳಸಲಾಗುವ ಅಪರೂಪದ ಲೋಹಗಳಾದ ಸ್ಕ್ಯಾಂಡಿಯಮ್, ಯಟ್ರಿಯಮ್ ಮತ್ತು 15 ಲ್ಯಾಂಥನೈಡ್‌ಗಳನ್ನು ಚಂದ್ರ ಮೇಲ್ಮೈನಲ್ಲಿ ಒಳಗೊಂಡಿದೆ. ಇದನ್ನು ಖಚಿತಪಡಿಸಿಕೊಳ್ಳಲು ಈ ಸಂಶೋಧನೆಗಳ ಅಗತ್ಯವಿದೆ.

ಚಂದ್ರನಲ್ಲಿ ಗಣಿಗಾರಿಕೆ ನಡೆಸಬೇಕೆಂದರೆ ಒಂದಷ್ಟು ಮೂಲಸೌಕರ್ಯಗಳ ನಿರ್ಮಾಣ ಅಗತ್ಯವಾಗಿದೆ. ಬೇರೆ ಗ್ರಹಗಳಲ್ಲಿ ಗಣಿಗಾರಿಕೆ ಬಗ್ಗೆ ಸ್ಪಷ್ಟತೆ ಇಲ್ಲ. ಆದಾಗ್ಯೂ ಒಂದು ವೇಳೆ ಮಾಡಿದರೆ ಅದರಲ್ಲಿ ರೋಬೊಗಳ ಪಾತ್ರವೇ ದೊಡ್ಡದಿರಲಿದೆ. ಅದಕ್ಕೆ ಅಗತ್ಯವಿರುವ ನೀರು ದೊರೆತಲ್ಲಿ ಮನುಷ್ಯ ಹೆಚ್ಚು ಕಾಲ ಚಂದ್ರನಲ್ಲಿ ಇರಬಲ್ಲ. ಎಲ್ಲದಕ್ಕೂ ನೀರು ಮುಖ್ಯವಾಗಿರುವ ಹಿನ್ನೆಲೆ ನೀರಿನ ಹುಡುಕಾಟದಲ್ಲಿ ಎಲ್ಲ ದೇಶಗಳಿವೆ ಎನ್ನಲಾಗಿದೆ. 

Previous Post

ಕಲಬುರಗಿ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಮತ್ತೆ ಅರೆಸ್ಟ್​, ಯಾವ ಪ್ರಕರಣ?

Next Post

Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌

Next Post
Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌

Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.