Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ನಕಲಿ ಜಿಎಸ್‌ಟಿ ಬಿಲ್‌ ಸೃಷ್ಟಿಸಿ ಸರ್ಕಾರಕ್ಕೆ 90 ಕೋಟಿ ವಂಚನೆ..!

editor tv by editor tv
August 31, 2023
in ರಾಷ್ಟ್ರೀಯ
0
ನಕಲಿ ಜಿಎಸ್‌ಟಿ ಬಿಲ್‌ ಸೃಷ್ಟಿಸಿ ಸರ್ಕಾರಕ್ಕೆ 90 ಕೋಟಿ ವಂಚನೆ..!
1.9k
VIEWS
Share on FacebookShare on TwitterShare on Whatsapp

30ಕ್ಕೂ ಹೆಚ್ಚು ನಕಲಿ ಕಂಪೆನಿಗಳ ಹೆಸರಿನಲ್ಲಿ ಬಿಲ್‌ಗಳನ್ನು ಸೃಷ್ಟಿಸಿ 525 ಕೋಟಿ ರು. ಅವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಇದರಿಂದ ಸರ್ಕಾರಕ್ಕೆ 90 ಕೋಟಿ ರು. ತೆರಿಗೆ ನಷ್ಟ ಉಂಟಾಗಿದೆ: ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ

ಬೆಂಗಳೂರು(ಆ.31): ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ನಕಲಿ ಜಿಎಸ್‌ಟಿ ಬಿಲ್‌ ಸೃಷ್ಟಿಜಾಲವನ್ನು ಬೇಧಿಸಿದ್ದು, 30ಕ್ಕೂ ಹೆಚ್ಚು ನಕಲಿ ಕಂಪೆನಿಗಳ ಹೆಸರಿನಲ್ಲಿ ಬಿಲ್‌ಗಳನ್ನು ಸೃಷ್ಟಿಸಿ ರಾಜ್ಯ ಸರ್ಕಾರಕ್ಕೆ 90 ಕೋಟಿ ರು. ತೆರಿಗೆ ನಷ್ಟ ಉಂಟು ಮಾಡಿರುವುದನ್ನು ಪತ್ತೆ ಹಚ್ಚಲಾಗಿದೆ. ಈ ಬಗ್ಗೆ ಬುಧವಾರ ಬೆಳಗ್ಗೆ ಇಬ್ಬರು ಆರೋಪಿಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಜಾರಿ ವಿಭಾಗದ ಅಧಿಕಾರಿಗಳು ಬಂಧಿಸಿದ್ದು, ಈ ರೀತಿಯ ಪ್ರಕರಣವನ್ನು ಬೇಧಿಸಿರುವುದು ಇದೇ ಮೊದಲು ಎಂದು ಇಲಾಖೆ ಹೇಳಿದೆ.

ಈ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, 30ಕ್ಕೂ ಹೆಚ್ಚು ನಕಲಿ ಕಂಪೆನಿಗಳ ಹೆಸರಿನಲ್ಲಿ ಬಿಲ್‌ಗಳನ್ನು ಸೃಷ್ಟಿಸಿ 525 ಕೋಟಿ ರು. ಅವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಇದರಿಂದ ಸರ್ಕಾರಕ್ಕೆ 90 ಕೋಟಿ ರು. ತೆರಿಗೆ ನಷ್ಟ ಉಂಟಾಗಿದೆ. ಈ ಜಾಲವು ಮಾನವಸಂಪನ್ಮೂಲ ಹಾಗೂ ಕಾರ್ಮಿಕರ ಪೂರೈಕೆಯಂತಹ ಸೇವಾ ವಲಯದ ಕಂಪೆನಿಗಳಿಗೆ ನಕಲಿ ತೆರಿಗೆ ಜಮೆ, ವರ್ಗಾವಣೆಗಳ ಬಿಲ್‌ಗಳನ್ನು ಸೃಷ್ಟಿಸಿ ನೀಡುತ್ತಿತ್ತು. ಸೇವಾ ವಲಯದಲ್ಲಿ ನಕಲಿ ಬಿಲ್‌ ತಯಾರಿಕೆ ಜಾಲವನ್ನು ಇದೇ ಮೊದಲ ಬಾರಿಗೆ ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಜಾಲವು ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಹಾಗೂ ಇತರ ವ್ಯಕ್ತಿಗಳ ಗುರುತು ದಾಖಲಾತಿಗಳನ್ನು ಉಪಯೋಗಿಸಿಕೊಂಡು ಸುಮಾರು 30ಕ್ಕೂ ಹೆಚ್ಚು ನಕಲಿ ಕಂಪೆನಿಗಳನ್ನು ಸೃಷ್ಟಿಸಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ. ಈ ನಿಟ್ಟಿನಲ್ಲಿ ಜಾರಿ ವಿಭಾಗದ ಅಧಿಕಾರಿಗಳು ಎಚ್‌.ಎಂ. ಗುರುಪ್ರಕಾಶ್‌ ಮತ್ತು ಎಚ್‌.ಎಂ. ಮಂಜುನಾಥಯ್ಯ ಎಂಬುವವರನ್ನು ಬುಧವಾರ ಮುಂಜಾನೆ ಬಂಧಿಸಿದ್ದು, ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.

ನಕಲಿ ಬಿಲ್ಲು ತಯಾರಿಕೆ ಹಾಗೂ ತೆರಿಗೆ ವಂಚನೆಯು ಜಿಎಸ್‌ಟಿ ಕಾನೂನಿನ ಅಡಿ ಶಿಕ್ಷಾರ್ಹ ಅಪರಾಧ. ಬಂಧನ, ದಂಡ, ಆಸ್ತಿ ಮುಟ್ಟುಗೋಲು, ಬ್ಯಾಂಕ್‌ ಖಾತೆಗಳ ಮುಟ್ಟುಗೋಲಿನಂತಹ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ. ಹೀಗಾಗಿ ಜಿಎಸ್‌ಟಿ ಕಾನೂನನ್ನು ಯಾರೂ ಉಲ್ಲಂಘಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

Previous Post

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಪ್ರಕರಣ; ಗಂಭೀರ ಸ್ಥಿತಿಯಲ್ಲಿದ್ದ ಚೀಫ್‌ ಎಂಜಿನಿಯರ್‌ ಶಿವಕುಮಾರ್‌ ನಿಧನ

Next Post

Sowjanya case: ಆಕ್ಷೇಪಾರ್ಹ ಬರವಣಿಗೆ, ಪ್ರಕರಣ ದಾಖಲು

Next Post
ನ್ಯಾಯ ಕೇಳಿ  ಬಂದ ಸೌಜನ್ಯ  ತಾಯಿ ಕುಸುಮಾವತಿಯನ್ನು ವೇದಿಕೆಗೆ ತೆರಳದಂತೆ ಪೊಲೀಸರಿಂದ ತಡೆ

Sowjanya case: ಆಕ್ಷೇಪಾರ್ಹ ಬರವಣಿಗೆ, ಪ್ರಕರಣ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.