Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಲೋಕಸಭೆಗೆ ಮುನ್ನವೇ ಸೆಮಿಫೈನಲ್​​.. ಈ 5 ರಾಜ್ಯಗಳಲ್ಲಿ ಚುನಾವಣೆ ಯಾವಾಗ..?

editor tv by editor tv
October 10, 2023
in ಚುನಾವಣೆ
0
ಲೋಕಸಭೆಗೆ ಮುನ್ನವೇ ಸೆಮಿಫೈನಲ್​​.. ಈ 5 ರಾಜ್ಯಗಳಲ್ಲಿ ಚುನಾವಣೆ ಯಾವಾಗ..?
1.9k
VIEWS
Share on FacebookShare on TwitterShare on Whatsapp

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ ನಿಗದಿಯಾಗಿದೆ. ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತಿಸ್‌ಗಡ ಮತ್ತು ಮಿಜೋರಾಮ್ ರಾಜ್ಯಗಳಲ್ಲಿ ಎಲೆಕ್ಷನ್​​​ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಇದು ಸೆಮಿಫೈನಲ್​​ ಎಂದೇ ಬಿಂಬಿತವಾಗಿದೆ.

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್​ ಆಗಿದೆ. ಲೋಕಸಭೆಗೆ ಸೆಮಿಫೈನಲ್​​​ ಆಗಿರುವ ಐದು ರಾಜ್ಯಗಳ ದಿನಾಂಕವನ್ನ ಚುನಾವಣಾ ಆಯೋಗ ಪ್ರಕಟಿಸಿದೆ. ಮೂರು ಹಿಂದಿ ಹಾರ್ಟ್​​ಲ್ಯಾಂಡ್​​​ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಛತ್ತೀಸಘಡವಾದ್ರೆ, ಇನ್ನೊಂದು ದಖ್ಖನ್​​​ ಭೂಮಿಯ ತೆಲಂಗಾಣ, ಮತ್ತೊಂದು ಸಪ್ತ ಸುಂದರಿಯರ ನಾಡು ಮೀಜೋರಾಂನಲ್ಲಿ ಮತ ಕದನ ನಡೆಯಲಿದೆ.

ಮೋದಿ ಅಲೆ, ರಾಹುಲ್​​ ಗಾಂಧಿಯ ಮೊಹಬ್ಬತ್​ ಕೀ ದುಖಾನ್​​, ಗುಲಾಬಿ ಕಾರಿನ ಗುಂಗಿನಲ್ಲಿರುವ ಕೆಸಿಆರ್​​ಗೆ ಇದು ಅಗ್ನಿ ಪರೀಕ್ಷೆ. ಕರ್ನಾಟಕ, ಹಿಮಾಚಲ ಗೆದ್ದ ಬಳಿಕ ಜೋಶ್​​ಲ್ಲಿರುವ ಹಸ್ತಪಡೆಗೆ ಚೆಕ್​ಮೆಟ್​ ಇಡಲು ಕಮಲ ಸೇನೆ ಸರ್ವಸನ್ನದ್ಧವಾಗಿದೆ. ಈ ಬೆನ್ನಲ್ಲೇ ಪಂಚರಾಜ್ಯಗಳಲ್ಲಿ ಪ್ರತಿಷ್ಠೆಯ ಪಣಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಚುನಾವಣೆಗೆ ಪೌರೋಹಿತ್ಯ ವಹಿಸಿರುವ ಆಯೋಗ, ನವೆಂಬರ್‌ 7ರಿಂದ ಮತದಾರನ ಮಹಾ ತೀರ್ಪಿಗೆ ಕಾಲ ನಿಗದಿ ಪಡಿಸಿದೆ. ನವೆಂಬರ್‌ 7ರಿಂದ ಮತದಾನ ಆರಂಭವಾಗಲಿದ್ದು, ಡಿಸೆಂಬರ್‌ 3ರಂದು ಐದೂ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಅಷ್ಟಕ್ಕೂ ಯಾವ ರಾಜ್ಯಗಳಲ್ಲಿ ಯಾವ ದಿನ ಚುನಾವಣೆ ನಡೆಯಲಿದೆ.

ಮಿಸೋರಾಂನಲ್ಲಿ ಒಂದೇ ಹಂತದಲ್ಲಿ ನವೆಂಬರ್ 7ರಂದು ಮತದಾನ ನಡೆದರೆ, ಛತ್ತೀಸ್‌ಗಢ್​​ದಲ್ಲಿ ಎರಡು ಹಂತಗಳ ಎಲೆಕ್ಷನ್​​​ ನಿಗದಿಯಾಗಿದೆ. ನವೆಂಬರ್‌ 7 ಮತ್ತು ನವೆಂಬರ್‌ 17ರಂದು ನಕ್ಸಲ್ ​​​ಪೀಡಿತ ಛತ್ತೀಸ್​​​ಗಢ್​ನಲ್ಲಿ ಚುನಾವಣೆ ನಡೆಯಲಿದೆ. ಉಳಿದಂತೆ, ಮಧ್ಯ ಪ್ರದೇಶದಲ್ಲಿ ನವೆಂಬರ್ 17, ರಾಜಸ್ಥಾನದಲ್ಲಿ ನವೆಂಬರ್‌ 23, ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾರ ತನ್ನ ಆಯ್ಕೆಯ ಸರ್ಕಾರ ಚುನಾಯಿಸಲಿದ್ದಾನೆ. ಐದು ರಾಜ್ಯಗಳ ಮತದಾರರು ಬರೆದ ತೀರ್ಪು ಡಿಸೆಂಬರ್​​ 3ರಂದು ಏಕಕಾಲಕ್ಕೆ ಪ್ರಕಟವಾಗಲಿದೆ. ಚುನಾವಣೆ ಘೋಷಣೆಯಾಗಿರುವ ರಾಜ್ಯಗಳು ಒಟ್ಟು 940 ಅಂತರರಾಜ್ಯ ಗಡಿ ಚೆಕ್‌ ಪೋಸ್ಟ್‌ ಹಾಕಲಾಗಿದೆ. ಐದು ರಾಜ್ಯಗಳಲ್ಲಿ ಸುಮಾರು 60 ಲಕ್ಷ ಜನರು 18-19 ವರ್ಷದೊಳಗಿನವರಿದ್ದು, ಮೊದಲ ಬಾರಿ ಮತದಾನ ಮಾಡಲಿದ್ದಾರೆ.

ಮಧ್ಯಪ್ರದೇಶ 230 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, 2018ರಲ್ಲಿ ಕಾಂಗ್ರೆಸ್ 114 ಹಾಗೂ ಬಿಜೆಪಿ 109 ಸ್ಥಾನ ಗೆದ್ದಿತ್ತು. 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಯಿತು. ಇತ್ತ, ರಾಜಸ್ಥಾನ 200 ಕ್ಷೇತ್ರಗಳನ್ನ ಹೊಂದಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 99 ಹಾಗೂ ಬಿಜೆಪಿ 73 ಸ್ಥಾನ ಗೆದ್ದಿತ್ತು. ತೆಲಂಗಾಣದಲ್ಲಿ 119 ಕ್ಷೇತ್ರಗಳಿದ್ದು, BRS ಭರ್ಜರಿ 88 ಸ್ಥಾನ ಗೆದ್ದು 2ನೇ ಬಾರಿ ಅಧಿಕಾರ ಹಿಡಿದಿತ್ತು. ಛತ್ತಿಸ್‌ಗಢದಲ್ಲಿ ಒಟ್ಟು 90 ಕ್ಷೇತ್ರಗಳಿದ್ದು, ಈ ಪೈಕಿ ಕಾಂಗ್ರೆಸ್ 68 ಸ್ಥಾನ ಗೆದ್ದು ಬಿಜೆಪಿಗೆ ಶಾಕ್​​​ ನೀಡಿತ್ತು. ಮಿಜೋರಾಮ್ 40 ಕ್ಷೇತ್ರಗಳಲ್ಲಿ ಮಿಜೊ ನ್ಯಾಷನಲ್ ಫ್ರಂಟ್ 26 ಕ್ಷೇತ್ರ ಗೆದ್ದು ಮತ್ತೊಮ್ಮೆ ಅಧಿಕಾರ ಸ್ಥಾಪಿಸಿತ್ತು. ಒಟ್ಟಾರೆ, 5 ರಾಜ್ಯಗಳ 679 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸರಿ ಸುಮಾರು 16 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೂ ಮುನ್ನ ಜನರ ನಾಡಿಮಿಡಿತ ಗೊತ್ತಾಗಲಿದೆ.

Previous Post

ಕದ್ದ ಭೂಮಿಯಲ್ಲಿ ಇಸ್ರೇಲ್ ನಿರ್ಮಾಣ, ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು- ನಟ ಚೇತನ್ ಆಗ್ರಹ

Next Post

ಪಂಚರಾಜ್ಯ ಚುನಾವಣೆ: ಮಧ್ಯ ಪ್ರದೇಶ, ಛತ್ತೀಸ್‌ಗಢ ಕೈ ಪಾಲು, ರಾಜಸ್ಥಾನ ಬಿಜೆಪಿಗೆ: ಸಮೀಕ್ಷೆ

Next Post
ಪಂಚರಾಜ್ಯ ಚುನಾವಣೆ: ಮಧ್ಯ ಪ್ರದೇಶ, ಛತ್ತೀಸ್‌ಗಢ ಕೈ ಪಾಲು, ರಾಜಸ್ಥಾನ ಬಿಜೆಪಿಗೆ: ಸಮೀಕ್ಷೆ

ಪಂಚರಾಜ್ಯ ಚುನಾವಣೆ: ಮಧ್ಯ ಪ್ರದೇಶ, ಛತ್ತೀಸ್‌ಗಢ ಕೈ ಪಾಲು, ರಾಜಸ್ಥಾನ ಬಿಜೆಪಿಗೆ: ಸಮೀಕ್ಷೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.