Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

69 ರನ್‌ಗಳ ಭರ್ಜರಿ ಜಯ – ಇಂಗ್ಲೆಂಡ್ ಶಾಕ್, ಅಫ್ಘಾನ್ ರಾಕ್

editor tv by editor tv
October 15, 2023
in ಕ್ರೀಡೆ
0
69 ರನ್‌ಗಳ ಭರ್ಜರಿ ಜಯ – ಇಂಗ್ಲೆಂಡ್ ಶಾಕ್, ಅಫ್ಘಾನ್ ರಾಕ್
1.9k
VIEWS
Share on FacebookShare on TwitterShare on Whatsapp

ನವದೆಹಲಿ: ರಹ್ಮನುಲ್ಲಾ ಗುರ್ಬಾಝ್‌ ಬೆಂಕಿ ಬ್ಯಾಟಿಂಗ್‌ ಹಾಗೂ ಮುಜೀಬ್ ಉರ್ ರೆಹಮಾನ್ ಮಾರಕ ಬೌಲಿಂಗ್‌ ದಾಳಿಯಿಂದಾಗಿ ಇಂಗ್ಲೆಂಡ್‌ ವಿರುದ್ಧ ಆಫ್ಘಾನಿಸ್ತಾನ 69 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ.

ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 13ನೇ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಇಂಗ್ಲೆಂಡ್‌ ಫೀಲ್ಡಿಂಗ್‌ ಆಯ್ದುಕೊಂಡಿತ್ತು. ಉತ್ತಮ ಬ್ಯಾಟಿಂಗ್‌ ಪ್ರದರ್ಶನದೊಂದಿಗೆ ಆಂಗ್ಲ ಬೌಲರ್‌ಗಳನ್ನು ಚೆಂಡಾಡಿದ ಆಫ್ಘಾನಿಸ್ತಾನ ತಂಡ ಆಲೌಟ್‌ ಆಗಿ ಇಂಗ್ಲೆಂಡ್‌ಗೆ 285 ರನ್‌ಗಳ ಗುರಿ ನೀಡಿತ್ತು. ಗುರಿ ಬೆನ್ನತ್ತಿದ ಇಂಗ್ಲೆಂಡ್‌ 40.3 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 215 ರನ್‌ಗಳನ್ನಷ್ಟೇ ಗಳಿಸಿ ಸೋಲನುಭವಿಸಿತು.

ಆರಂಭಿಕರಾಗಿ ಕಣಕ್ಕಿಳಿದಿದ್ದ ಜಾನಿ ಬೈರ್‌ಸ್ಟೋವ್‌ ಕೇವಲ 2 ರನ್‌ ಗಳಿಸಿ ಎಲ್‌ಬಿಡಬ್ಲ್ಯೂ ಆಗಿ ಇಂಗ್ಲೆಂಡ್‌ಗೆ ಆರಂಭಿಕ ಆಘಾತ ನೀಡಿದರು. ನಂತರ ಜೊತೆಯಾದ ಡೇವಿಡ್ ಮಲನ್ ಮತ್ತು ಜೋ ರೂಟ್‌ ಜೊತೆಯಾಗಿ ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದರು. ಡೇವಿಡ್ ಮಲನ್ 32 ರನ್‌ ಗಳಿಸಿ (39 ಬಾಲ್‌, 4 ಫೋರ್‌) ಕ್ಲೀನ್‌ ಬೌಲ್ಡ್‌ ಆದರು. ಜೋ ರೂಟ್‌ ಕೇವಲ 11 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಈ ವೇಳೆ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದ ಹ್ಯಾರಿ ಬ್ರೂಕ್‌ ಮೈದಾನದಲ್ಲಿ 61 ಬಾಲ್‌ಗಳಿಗೆ 66 ರನ್‌ ಗಳಿಸಿ (7 ಫೋರ್‌, 1 ಸಿಕ್ಸ್‌) ಉತ್ತಮ ಪ್ರದರ್ಶನ ನೀಡಿದರು. ಆದರೆ ಅವರಿಗೆ ಜೊತೆಯಾಗಿ ಸಾಥ್‌ ಕೊಡುವಲ್ಲಿ ಇತರೆ ಆಟಗಾರರು ವಿಫಲರಾದರು. ಆಫ್ಘನ್ನರ ಸ್ಪಿನ್‌ ದಾಳಿಗೆ ಆಂಗ್ಲ ಬ್ಯಾಟರ್‌ಗಳು ತರಗೆಲೆಯಂತೆ ಉದುರಿ ಹೋದರು.

ಪರಿಣಾಮವಾಗಿ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ಕೇವಲ 9 ರನ್‌ ಗಳಿಸಿ ಔಟಾದರು. ಲಿಯಾಮ್ ಲಿವಿಂಗ್ಸ್ಟೋನ್ 10 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಸ್ಯಾಮ್ ಕರ್ರನ್ ಕೂಡ ಕೇವಲ 10 ರನ್‌ ಗಳಿಸಲಷ್ಟೇ ಶಕ್ತರಾದರು. ಕ್ರಿಸ್ ವೋಕ್ಸ್ 9 ರನ್‌ಗಳಿಸಿ ಔಟಾದರು. ಆದಿಲ್ ರಶೀದ್ 20 ರನ್‌, ಮಾರ್ಕ್ ವುಡ್ 18 ರನ್‌ ಗಳಿಸಿ ಪೆವಿಲಿಯನ್‌ನತ್ತ ನಡೆದರು.

ಇಂಗ್ಲೆಂಡ್‌ ವಿರುದ್ಧ ಆಫ್ಘನ್‌ ಬೌಲರ್‌ಗಳು ಅಮೋಘ ಪ್ರದರ್ಶನ ತೋರಿದರು. ಮುಜೀಬ್ ಉರ್ ರೆಹಮಾನ್ ಹಾಗೂ ರಶೀದ್ ಖಾನ್ 3 ವಿಕೆಟ್‌ ಕಿತ್ತು ಗಮನ ಸೆಳೆದರು. ಮೊಹಮ್ಮದ್ ನಬಿ 2, ಫಜಲ್ಹಕ್ ಫಾರೂಕಿ ಹಾಗೂ ನವೀನ್-ಉಲ್-ಹಕ್ ತಲಾ 1 ಕಿತ್ತು ತಂಡದ ಗೆಲುವಿಗೆ ಸಹಕಾರಿಯಾದರು.

ಗುರ್ಬಾಝ್‌ ಬೆಂಕಿ ಬ್ಯಾಟಿಂಗ್‌
ಟಾಸ್ ಗೆದ್ದ ಇಂಗ್ಲೆಂಡ್‌ ತಂಡ ಅಫ್ಘಾನಿಸ್ತಾನಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತು. ಬ್ಯಾಟಿಂಗ್‌ಗೆ ಇಳಿದ ಅಫ್ಘಾನ್ ಭರ್ಜರಿ ಆರಂಭ ಪಡೆಯಿತು. ರಹ್ಮನುಲ್ಲಾ ಗುರ್ಬಾಝ್ ಮತ್ತು ಇಬ್ರಾಹಿಂ ಝರ್ದಾನ್ ತಂಡಕ್ಕೆ 114 ರನ್‌ಗಳ ಉತ್ತಮ ಜೊತೆಯಾಟ ನೀಡಿದರು. 16.4 ಓವರ್‌ನಲ್ಲಿ ಸ್ಪಿನ್ನರ್ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಇಬ್ರಾಹಿಂ ಝರ್ದಾನ್ (28) ಔಟ್ ಆಗುವುದರೊಂದಿಗೆ ಅಫ್ಘಾನ್ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ರಹ್ಮನುಲ್ಲಾ ಗುರ್ಬಾಝ್ 57 ಎಸೆತಗಳಲ್ಲಿ 80 ರನ್ ಸಿಡಿಸಿ (8 ಬೌಂಡರಿ, 4 ಸಿಕ್ಸರ್) ಸಿಡಿಸಿ ಆಂಗ್ಲರನ್ನು ಚೆಂಡಾಡಿದರು. ನಂತರ ಗುರ್ಬಾಝ್‌ ರನ್‌ಔಟ್‌ ಆದರು.

ಬಳಿಕ ಬಂದ ಯಾವೊಬ್ಬ ಬ್ಯಾಟರ್ ಕೂಡ ಇಂಗ್ಲೆಂಡ್‌ ಬಲಿಷ್ಟ ಬೌಲಿಂಗ್ ಎದುರು ಹೆಚ್ಚು ಸಮಯ ಕ್ರೀಸಿನಲ್ಲಿ ನಿಲ್ಲಲು ಸಾಧ್ಯವಾಗದೇ ದಿಢೀರ್ ಕುಸಿತ ಕಂಡಿತು. ರಹಮತ್ ಶಾ 3 ರನ್ ಗಳಿಸಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಸ್ಟಂಪ್ ಔಟ್ ಆದರೆ, ನಾಯಕ ಹಶ್ಮತುಲ್ಲಾ ಶಾಹಿದಿ 14 ರನ್ ಗಳಿಸಿ ಜೊ ರೂಟ್ ಬೌಲಿಂಗ್‌ನಲ್ಲಿ ಬೌಲ್ಡ್ ಆಗಿ ನಿರಾಸೆ ಮೂಡಿಸಿದರು. ಅಝ್ಮತುಲ್ಲಾ ಓಮರ್ಝೈ, ಮೊಹಮ್ಮದ್ ನಬಿ ಕ್ರಮವಾಗಿ 19, 9 ಗಳಿಸಿ ಪೆವಿಲಿಯನ್ ಪರೇಡ್‌ ನಡೆಸಿದರು. ಬಳಿಕ ಕೊಂಚ ಚೇತರಿಸಿಕೊಂಡ ಅಫ್ಘಾನ್ ಇಕ್ರಂ ಅಲಿಖಿಲ್ ಮತ್ತು ರಶೀದ್ ಖಾನ್ ಜೋಡಿ 43 ರನ್‌ಗಳ ಜೊತೆಯಾಟ ನೀಡಿ ಮೊತ್ತ ಹೆಚ್ಚಿಸುವ ಯೋಜನೆಯಲ್ಲಿ ಇದ್ದರು. ಆದರೆ ರಶೀದ್ ಖಾನ್ 23 ರನ್ ಗಳಸಿ ಕ್ಯಾಚ್ ನೀಡಿ ಔಟಾದರು. ಇಕ್ರಂ ಅಲಿಖಿಲ್ 58 ಗಳಿಸಿ ಅರ್ಧಶತಕ ಬಾರಿಸಿ (3 ಬೌಂಡರಿ, 2 ಸಿಕ್ಸರ್) ಮಿಂಚಿದರು. ಮುಜೀಬ್ ಉರ್ ರಹ್ಮಾನ್ 28 ರನ್ ಗಳ ಉಪಯುಕ್ತ ಕೊಡುಗೆ ನೀಡಿದರು. ಅಂತಿಮ ಜೋಡಿಯಾದ ನವೀನ್ 5 ರನ್‌ಗೆ ರನೌಟ್ ಆದರು. ಫಝಲ್ ಹಕ್ ಫಾರೂಕಿ 2 ರನ್ ಗಳಿಸಿದರು.

ಇಂಗ್ಲೆಂಡ್‌ ಪರ ಆದಿಲ್ ರಶೀದ್ 3 ವಿಕೆಟ್ ಪಡೆದರೆ, ಮಾರ್ಕ್ ವುಡ್ 2, ಲಿಯಾಮ್ ಲಿವಿಂಗ್‌ಸ್ಟೋನ್‌, ಜೋ ರೂಟ್, ರೀಸ್ ಟೋಪ್ಲಿ ತಲಾ ಒಂದೊಂದು ವಿಕೆಟ್ ಕಬಳಿಸಿದರು.

Previous Post

ಅಲ್‌ ಜಝೀರಾ ಕಚೇರಿಯನ್ನು ಬಂದ್ ಮಾಡಲು ಮುಂದಾದ ಇಸ್ರೇಲ್‌

Next Post

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ

Next Post
ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.