Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕಡಿಮೆಯಾಯ್ತು ಭಾರತಕ್ಕೆ ಬರುವ ರಷ್ಯಾ ತೈಲ; ಹೆಚ್ಚಾಯ್ತು ಸೌದಿ ತೈಲ; ಏನು ಕಾರಣ?

editor tv by editor tv
November 1, 2023
in ರಾಷ್ಟ್ರೀಯ
0
ಕಡಿಮೆಯಾಯ್ತು ಭಾರತಕ್ಕೆ ಬರುವ ರಷ್ಯಾ ತೈಲ; ಹೆಚ್ಚಾಯ್ತು ಸೌದಿ ತೈಲ; ಏನು ಕಾರಣ?
1.9k
VIEWS
Share on FacebookShare on TwitterShare on Whatsapp

Indian Oil Imports: ಒಂದೆಡೆ ರಷ್ಯಾದಿಂದ ಭಾರತ ತೈಲ ಆಮದನ್ನು ಕಡಿಮೆ ಮಾಡಿದರೆ, ಸೌದಿ ಅರೇಬಿಯಾದಿಂದ ಪೂರೈಕೆ ಹೆಚ್ಚಿಸಿದೆ. ಭಾರತಕ್ಕೆ ಅತಿಹೆಚ್ಚು ತೈಲ ಪೂರೈಸುವ ದೇಶಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಯುಎಇಯನ್ನು ಸೌದಿ ಅರೇಬಿಯ ಹಿಂದಿಕ್ಕಿದೆ. ಸೌದಿ ಅರೇಬಿಯಾ ಮತ್ತು ಇರಾಕ್ ಎರಡೂ ದೇಶಗಳಿಂದ ಭಾರತಕ್ಕೆ ಪೂರೈಕೆಯಾಗುವ ಒಟ್ಟು ತೈಲ ಆಮದು ರಷ್ಯಾದ್ದನ್ನು ಮೀರಿಸುತ್ತದೆ.

ನವದೆಹಲಿ, ನವೆಂಬರ್ 1: ರಷ್ಯಾದಿಂದ ತೈಲ ಆಮದನ್ನು ಭಾರತ ಕಡಿಮೆ ಮಾಡಿದೆ. ರಷ್ಯಾದಿಂದ ಶೇ. 43ರಷ್ಟು ಇದ್ದ ಕಚ್ಚಾ ತೈಲ ಆಮದು (crude oil imports) ಈಗ ಶೇ. 35ಕ್ಕೆ ಬಂದಿದೆ. ಇನ್ನೊಂದೆಡೆ ಸೌದಿ ಅರೇಬಿಯಾ ಮತ್ತು ಇರಾಕ್ ದೇಶಗಳಿಂದ ತೈಲ ಪೂರೈಕೆಯನ್ನು ಭಾರತ ಹೆಚ್ಚಿಸಿದೆ. ರಷ್ಯಾದಿಂದ ತೈಲ ಪಡೆಯುವುದನ್ನು ಭಾರತ ಕಡಿಮೆ ಮಾಡಲು ಪ್ರಮುಖ ಕಾರಣವೆಂದರೆ, ಬೆಲೆ ಹೆಚ್ಚಳ. ರಷ್ಯಾ ಈಗ ಮೊದಲಿನಂತೆ ದೊಡ್ಡ ಮಟ್ಟದ ಡಿಸ್ಕೌಂಟ್ ಕೊಡುತ್ತಿಲ್ಲ. ರಿಯಾಯಿತಿ ಬಹಳಷ್ಟು ಕಡಿಮೆ ಮಾಡಿದೆ. ಇದರಿಂದ ಭಾರತದ ತೈಲ ಕಂಪನಿಗಳಿಗೆ ಹೆಚ್ಚಿನ ಅನುಕೂಲ ತರುತ್ತಿಲ್ಲ. ಈ ಕಾರಣಕ್ಕೆ ಪೆಟ್ರೋಲಿಯಂ ಕಂಪನಿಗಳು ರಷ್ಯಾದ ಉರಲ್ (ತೈಲ) ಆಮದು ಕಡಿಮೆ ಮಾಡಿವೆ.

ರಷ್ಯಾದ ತೈಲ ಆಮದನ್ನು ಭಾರತೀಯ ಕಂಪನಿಗಳು ಕಡಿಮೆ ಮಾಡಲು ಇನ್ನೊಂದು ಅಸ್ಪಷ್ಟ ಕಾರಣ ಇದೆ. ರಷ್ಯಾದ ತೈಲ ಆಮದಿಗೆ ಅಮೆರಿಕ ಒಂದು ಬ್ಯಾರಲ್​ಗೆ 60 ಡಾಲರ್ ದರದ ಮಿತಿ ಹಾಕಿದೆ. ಈ ನಿಯಮ ಮೀರಿ ರಷ್ಯಾ ತೈಲ ಸಾಗಿಸುತ್ತಿದ್ದ ಎರಡು ಟ್ಯಾಂಕರುಗಳನ್ನು ಅಮೆರಿಕ ತನಿಖೆಗೊಳಪಡಿಸಿದೆ. ಈ ಮೂಲಕ ಅಮೆರಿಕ ಬಹಿಷ್ಕಾರ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವ ಸೂಚನೆ ಇದೆ. ಹೀಗಾಗಿ, ಭಾರತೀಯ ಕಂಪನಿಗಳು ರಷ್ಯಾದಿಂದ ತೈಲ ಪೂರೈಕೆಯನ್ನು ಕಡಿಮೆ ಮಾಡುತ್ತಿರಬಹುದು ಎನ್ನಲಾಗಿದೆ.

ಯುಎಇ ಮೀರಿಸಿದ ಸೌದಿ

ಒಂದೆಡೆ ರಷ್ಯಾದಿಂದ ಭಾರತ ತೈಲ ಆಮದನ್ನು ಕಡಿಮೆ ಮಾಡಿದರೆ, ಸೌದಿ ಅರೇಬಿಯಾದಿಂದ ಪೂರೈಕೆ ಹೆಚ್ಚಿಸಿದೆ. ಭಾರತಕ್ಕೆ ಅತಿಹೆಚ್ಚು ತೈಲ ಪೂರೈಸುವ ದೇಶಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಯುಎಇಯನ್ನು ಸೌದಿ ಅರೇಬಿಯ ಹಿಂದಿಕ್ಕಿದೆ. ಸೌದಿ ಅರೇಬಿಯಾ ಮತ್ತು ಇರಾಕ್ ಎರಡೂ ದೇಶಗಳಿಂದ ಭಾರತಕ್ಕೆ ಪೂರೈಕೆಯಾಗುವ ಒಟ್ಟು ತೈಲ ಆಮದು ರಷ್ಯಾದ್ದನ್ನು ಮೀರಿಸುತ್ತದೆ.

ಅಕ್ಟೋಬರ್ ತಿಂಗಳಲ್ಲಿ ರಷ್ಯಾದಿಂದ ಭಾರತ ದಿನಕ್ಕೆ 15 ಲಕ್ಷ ಬ್ಯಾರಲ್ ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿದೆ. ಅದೇ ವೇಳೆ, ಸೌದಿ ಅರೇಬಿಯಾದಿಂದ ದಿನಕ್ಕೆ ಮಾಡಿಕೊಳ್ಳುವ ತೈಲ ಆಮದು 8.71 ಲಕ್ಷದಷ್ಟಿದೆ. ಹಿಂದಿನ ತಿಂಗಳು, ಅಂದರೆ ಸೆಪ್ಟೆಂಬರ್​ನಲ್ಲಿ ಇದೇ ಸೌದಿ ಅರೇಬಿಯಾದಿಂದ ಭಾರತೀಯ ಕಂಪನಿಗಳು ಸರಾಸರಿಯಾಗಿ ದಿನವೊಂದಕ್ಕೆ 4.84 ಲಕ್ಷ ಬ್ಯಾರಲ್ ತೈಲಗಳನ್ನು ಆಮದು ಮಾಡಿಕೊಳ್ಳುತ್ತಿದ್ದವು. ಅಕ್ಟೋಬರ್​ನಲ್ಲಿ ಈ ಪ್ರಮಾಣ ಬಹುತೇಕ ಡಬಲ್ ಆಗಿದೆ. ಇನ್ನೊಂದೆಡೆ, ಸೆಪ್ಟೆಂಬರ್​ಗೆ ಹೋಲಿಸಿದರೆ ಅಕ್ಟೋಬರ್​ನಲ್ಲಿ ರಷ್ಯಾದಿಂದ ಆದ ತೈಲ ಅಮದು ಶೇ. 15ರಷ್ಟು ಕಡಿಮೆ ಆಗಿದೆ.

ರಷ್ಯಾ ದೇಶ ಜನವರಿಯಲ್ಲಿ ತನ್ನ ಕಚ್ಛಾ ತೈಲವನ್ನು ಬ್ಯಾರಲ್​ಗೆ ಸರಾಸರಿಯಾಗಿ 60 ಡಾಲರ್​ನಂತೆ ಮಾರುತ್ತಿತ್ತು. ಮಾರುಕಟ್ಟೆ ದರಕ್ಕಿಂತ 22 ಡಾಲರ್​ನಷ್ಟು ಕಡಿಮೆ ಬೆಲೆಗೆ ಅದು ನೀಡುತ್ತಿತ್ತು. ಈಗ ಅದು ಬ್ಯಾರಲ್​ಎ 86 ಡಾಲರ್​ನಂತೆ ಮಾರುತ್ತಿದೆ. ಡಿಸ್ಕೌಂಟ್ ಪ್ರಮಾಣ 22 ಡಾಲರ್ ಇದ್ದದ್ದು 7 ಡಾಲರ್​ಗೆ ಇಳಿದಿದೆ.

Previous Post

ಕೇಂದ್ರದಿಂದ ಸಂಸದರ ಐಫೋನ್‌ ಕದ್ದಾಲಿಕೆ – ಆಪಲ್‌ ಕಂಪನಿಯಿಂದ ಹೇಳಿಕೆ ಬಿಡುಗಡೆ

Next Post

ಗಾಝಾದಲ್ಲಿ‌ ನಿರಾಶ್ರಿತರ ಶಿಬಿರದಲ್ಲಿ ಮತ್ತೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿ ಕುಟುಂಬದ 19 ಸೇರಿ 50 ಮಂದಿ ಮೃತ

Next Post
ಗಾಝಾದಲ್ಲಿ‌ ನಿರಾಶ್ರಿತರ ಶಿಬಿರದಲ್ಲಿ ಮತ್ತೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿ ಕುಟುಂಬದ 19 ಸೇರಿ 50 ಮಂದಿ ಮೃತ

ಗಾಝಾದಲ್ಲಿ‌ ನಿರಾಶ್ರಿತರ ಶಿಬಿರದಲ್ಲಿ ಮತ್ತೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿ ಕುಟುಂಬದ 19 ಸೇರಿ 50 ಮಂದಿ ಮೃತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.