Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ವಿಶ್ವಕಪ್‌ನಲ್ಲಿ ಎಂದೂ ಕಂಡರಿಯದ ಆಟವಾಡಿದ RCB ಪ್ಲೇಯರ್‌, ಸೋಲಿನಂಚಿನಲ್ಲಿದ್ದ ಆಸೀಸ್‌ ಗೆಲ್ಲಿಸಿದ ಮ್ಯಾಕ್ಸ್‌ವೆಲ್‌!

editor tv by editor tv
November 7, 2023
in ಕ್ರೀಡೆ
0
ವಿಶ್ವಕಪ್‌ನಲ್ಲಿ ಎಂದೂ ಕಂಡರಿಯದ ಆಟವಾಡಿದ RCB ಪ್ಲೇಯರ್‌, ಸೋಲಿನಂಚಿನಲ್ಲಿದ್ದ ಆಸೀಸ್‌ ಗೆಲ್ಲಿಸಿದ ಮ್ಯಾಕ್ಸ್‌ವೆಲ್‌!
1.9k
VIEWS
Share on FacebookShare on TwitterShare on Whatsapp

ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಆಸೀಸ್‌ ಸ್ಮರಣೀಯ ಗೆಲುವುಗಳಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯ ಖಂಡಿತವಾಗಿ ಸೇರಿಕೊಳ್ಳುತ್ತದೆ. ಇನ್ನೇನು ಸೋಲು ಹಾದಿಯಲ್ಲಿದ್ದ ತಂಡ ಗೆಲುವು ಕಸಿದುಕೊಂಡ ರೀತಿ ಅಮೋಘವಾಗಿತ್ತು. ಅದಕ್ಕೆ ಕಾರಣರಾಗಿದ್ದು ಗ್ಲೆನ್‌ ಮ್ಯಾಕ್ಸ್‌ವೆಲ್‌.

ಮುಂಬೈ (ನ.7): ಅದು ಅಂತಿಂತ ಗೆಲುವಲ್ಲ.. ಆಸ್ಟ್ರೇಲಿಯಾ ಕ್ರಿಕೆಟ್‌ನ ಸ್ಮರಣೀಯ ಗೆಲುವುಗಳಲ್ಲಿ ಒಂದು. ಇನ್ನೇನು ತಂಡ ಅಫ್ಘಾನಿಸ್ತಾನದ ವಿರುದ್ಧ ದೊಡ್ಡ ಅಂತರದ ಸೋಲು ಕಂಡೇಬಿಟ್ಟಿತು ಎನ್ನುವ ಹಂತದಲ್ಲಿ ಬಿರುಗಾಳಿಯಂತೆ ಅಪ್ಪಳಿಸಿದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಏಕಾಂಗಿಯಾಗಿ ಹೋರಾಟ ನಡೆಸಿ ಆಸ್ಟ್ರೇಲಿಯಾ ತಂಡದ 3 ವಿಕೆಟ್‌ ಗೆಲುವಿಗೆ ಕಾರಣರಾದರು. ಕೊನೆಯ ಕ್ಷಣಗಳಲ್ಲಿ ನೋವಿನಿಂದ ನರಳುತ್ತಿದ್ದರೂ, ಒಂಚೂರು ಫುಟ್‌ವರ್ಕ್‌ ಬಳಸದೇ ಸಿಕ್ಸರ್‌, ಬೌಂಡರಿಗಳ ಮಳೆಗೆರೆದ ಮ್ಯಾಕ್ಸ್‌ವೆಲ್‌ ತಂಡ 6ನೇ ಗೆಲುವಿಗೆ ಕಾರಣರಾದರು. ಅದರೊಂದಿಗೆ ಆಸೀಸ್‌ ತಂಡ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ 5 ವಿಕೆಟ್‌ಗೆ 291 ರನ್‌ ಪೇರಿಸಿತು.ಪ್ರತಿಯಾಗಿ ಆಸ್ಟ್ರೇಲಿಯಾ ತಂಡ  ಒಂದು ಹಂತದಲ್ಲಿ 91 ರನ್‌ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಭೀತಿಯಲ್ಲಿದ್ದ ಆಸೀಸ್‌ 46.5 ಓವರ್‌ಗಳಲ್ಲಿ 7 ವಿಕೆಟ್‌ಗೆ 193 ರನ್ ಬಾರಿಸಿ ಗೆಲುವು ಕಂಡಿತು.
ವೇಳೆ ಗ್ಲೆನ್‌ ಮ್ಯಾಕ್ಸ್‌ವೆಲ್‌ ಆಡಿದ ಸಾಹಸಿಕ ಇನ್ನಿಂಗ್ಸ್‌ ಆಸೀಸ್‌ನ ಮಹಾನ್‌ ಗೆಲುವಿಗೆ ಕಾರಣವಾಯಿತು. 128 ಎಸೆತ ಎದುರಿಸಿದ ಗ್ಲೆನ್‌ ಮ್ಯಾಕ್ಸ್‌ವೆಲ್‌ 10 ಸಿಕ್ಸರ್‌, 21 ಬೌಂಡರಿಗಳೊಂದಿಗೆ 201 ರನ್‌ ಬಾರಿಸಿ ಅಜೇಯರಾಗುಳಿದರು.

ಬಹುಶಃ ಗ್ಲೆನ್‌ ಮ್ಯಾಕ್ಸ್‌ವೆಲ್‌ ಆಡಿದ ಈ ಇನ್ನಿಂಗ್ಸ್‌ ಸದ್ಯದ ದಿನಗಳಲ್ಲಿ ಸಲೀಸಾಗಿ ಮರೆತುಹೋಗುವಂತ ಆಟ ಖಂಡಿತಾ ಅಲ್ಲ. ಅವರು ದ್ವಿಶತಕ ಬಾರಿಸಿದ್ದಕ್ಕಿಂತ ಹೆಚ್ಚಾಗಿ, ತಂಡದ ಅತ್ಯಂತ ಸಂಕಷ್ಟದ ಸಮಯದಲ್ಲಿ ಅವರು ಏಕಾಂಗಿಯಾಗಿ ಆಡಿದ ರೀತಿ ವರ್ಷಗಳ ಕಾಲ ಆಸೀಸ್‌ ನೆನಪಿಸಿಕೊಳ್ಳುತ್ತದೆ. ಈ ಇನ್ನಿಂಗ್ಸ್‌ನೊಂದಿಗೆ ಆಸ್ಟ್ರೇಲಿಯಾದಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌ ಖ್ಯಾತಿ ಇನ್ನಷ್ಟು ಉತ್ತುಂಗಕ್ಕೇರುವುದು ನಿಶ್ಚಿತ. ಇಂಥ ಅಸಾಧಾರಣ ಗೆಲುವಿನೊಂದಿಗೆ ಆಸೀಸ್‌ ಕೂಡ ವಿಶ್ವಕಪ್‌ನ ಸೆಮಿಫೈನಲ್‌ ಟಿಕೆಟ್‌ ಗಿಟ್ಟಿಸಿಕೊಂಡಿದೆ.

ಇದು ಏಕದಿನ ಕ್ರಿಕೆಟ್‌ ಹಾಗೂ ವಿಶ್ವಕಪ್‌ನ ಸರ್ವಶ್ರೇಷ್ಠ ಇನ್ನಿಂಗ್ಸ್‌ ಆಗುವ ಎಲ್ಲಾ ಮೌಲ್ಯಗಳನ್ನು ಹೊಂದಿದೆ. ಇನ್ನೇನು ಶತಕ ದಾಟಿದ ಬೆನ್ನಲ್ಲಿಯೇ ಎಡಗಾಲಿನ ಸಮಸ್ಯೆಗೆ ತುತ್ತಾದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಸ್ವಲ್ಪ ಹೊತ್ತಿನಲ್ಲಿಯೇ ಬೆನ್ನುನೋವಿನ ಸಮಸ್ಯೆ ಕೂಡ ಬಾಧಿಸಿತು. ಆದರೂ, ಕೊನೆಯ ಕ್ಷಣಗಳಲ್ಲಿ ಅವರು ಕುಂಟುತ್ತಲೇ ಬ್ಯಾಟಿಂಗ್‌ ನಡೆಸಿದರು. ಮ್ಯಾಕ್ಸ್‌ವೆಲ್‌ಗೆ ಮೂರು ಬಾರಿ ಜೀವದಾನ ನೀಡಿದ ಅಫ್ಘಾನಿಸ್ತಾನ ತಂಡಕ್ಕೆ ಈ ಒಂದು ಸೋಲು ಅರಗಿಸಿಕೊಳ್ಳುವುದಕ್ಕೆ ಸಾಕಷ್ಟು ಸಮಯ ಹಿಡಿಯುತ್ತದೆ. 91 ರನ್‌ ಬಾರಿಸುವ ವೇಳೆಗೆ ಆಸೀಸ್‌ನ ಏಳು ಮಂದಿ ಆಟಗಾರರನ್ನು ಪೆವಿಲಿಯನ್‌ಗಟ್ಟಿದ್ದ ಅಫ್ಘಾನಿಸ್ತಾನ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿತ್ತು. ಡೇವಿಡ್‌ ವಾರ್ನರ್‌ (18), ಟ್ರಾವಿಸ್‌ ಹೆಡ್‌ (0), ಮಿಚೆಲ್‌ ಮಾರ್ಷ್‌ (24), ಮಾರ್ನಸ್‌ ಲಬುಶೇನ್‌ (14), ಜೋಸ್‌ ಇಂಗ್ಲಿಸ್‌ (0), ಮಾರ್ಕಸ್‌ ಸ್ಟೋಯಿನಿಸ್‌ (6) ಹಾಗೂ ಮಿಚೆಲ್‌ ಸ್ಟಾರ್ಕ್‌ (3) ವಿಕೆಟ್‌ಗಳನ್ನು ಆಸೀಸ್‌ ಕಳೆದುಕೊಂಡಿತ್ತು.

8ನೇ ವಿಕೆಟ್‌ಗೆ ಮ್ಯಾಕ್ಸ್‌ವೆಲ್‌ ಹಾಗೂ ನಾಯಕ ಪ್ಯಾಟ್‌ ಕಮ್ಮಿನ್ಸ್‌ 194 ರನ್‌ಗಳ ಅದ್ಭುತ ಜೊತೆಯಾಟವಾಡಿದರು. ಇದರಲ್ಲಿ ಕಮ್ಮಿನ್ಸ್‌ ಪಾಲು ಬರೀ 12 ರನ್‌ ಆಗಿದ್ದವು. ಇದಕ್ಕಾಗಿ 68 ಎಸೆತ ಎದುರಿಸಿದ ಕಮ್ಮಿನ್ಸ್‌, ಅತ್ಯಂತ ಎಚ್ಚರಿಕೆಯಿಂದ ಸ್ಟ್ರೈಕ್‌ಅನ್ನು ಮ್ಯಾಕ್ಸ್‌ವೆಲ್‌ಗೆ ಬಿಟ್ಟುಕೊಡುತ್ತಾ ತಂಡದ ಗೆಲುವಿಗೆ ಶ್ರಮಿಸಿದರು. ಗ್ಲೆನ್‌ ಮ್ಯಾಕ್ಸ್‌ವೆಲ್‌ ಬಾರಿಸಿರುವ 201 ರನ್‌, ಏಕದಿನ ಕ್ರಿಕೆಟ್‌ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ ಒಬ್ಬರ ಗರಿಷ್ಠ ಸ್ಕೋರ್‌ ಎನಿಸಿದೆ.

ಗ್ಲೆನ್‌ ಮ್ಯಾಕ್ಸ್‌ವೆಲ್‌ ಬಾರಿಸಿದ ಅಜೇಯ 201 ರನ್‌, ವಿಶ್ವಕಪ್‌ ಟೂರ್ನಿಯಲ್ಲಿ ಬ್ಯಾಟ್ಸ್‌ಮನ್‌ನ ಮೂರನೇ ಗರಿಷ್ಠ ಮೊತ್ತ ಎನಿಸಿದೆ. 2015ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನ್ಯೂಜಿಲೆಂಡ್‌ನ ಮಾರ್ಟಿನ್‌ ಗುಪ್ಟಿಲ್‌ ಬಾರಿಸಿದ ಅಜೇಯ 237 ರನ್‌ ಮೊದಲ ಸ್ಥಾನದಲ್ಲಿದ್ದರೆ, 2015ರಲ್ಲಿ ಜಿಂಬಾಬ್ವೆ ವಿರುದ್ಧ ವೆಸ್ಟ್‌ ಇಂಡೀಸ್‌ನ ಕ್ರಿಸ್‌ ಗೇಲ್‌ ಬಾರಿಸಿದ 215 ರನ್‌ ನಂತರದ ಸ್ಥಾನದಲ್ಲಿದೆ.
 

Previous Post

ಅನೈತಿಕ ಸಂಬಂಧ; ಪ್ರೀತಿಸಿ ಮದುವೆಯಾದ ಹೆಂಡತಿಗೆ ಕಟ್ಟಿದ ಚಟ್ಟ, ಏನಿದು ಕಥೆ ಅಂತೀರಾ?ಈ ಸ್ಟೋರಿ ಓದಿ

Next Post

War; ಗಾಜಾಪಟ್ಟಿ ಮಕ್ಕಳ ಸ್ಮಶಾನವಾಗುತ್ತಿದೆ…ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆ

Next Post
War; ಗಾಜಾಪಟ್ಟಿ ಮಕ್ಕಳ ಸ್ಮಶಾನವಾಗುತ್ತಿದೆ…ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆ

War; ಗಾಜಾಪಟ್ಟಿ ಮಕ್ಕಳ ಸ್ಮಶಾನವಾಗುತ್ತಿದೆ…ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.