
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನ ವಿರುದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರ ಸಮಿತಿಯಿಂದ ಸುರತ್ಕಲ್ ಪೋಲೀಸ್ ಠಾಣೆಗೆ ದೂರನ್ನು ನೀಡಲಾಯಿತು.

ಈ ಸಂಧರ್ಭದಲ್ಲಿ WIM ಜಿಲ್ಲಾ ಕಾರ್ಯದರ್ಶಿ ಅಝ್ವೀನ, WIM ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷೆ ಅಫ್ಸ, ಕಾರ್ಯದರ್ಶಿ ನಸೀಮಾ ಹಾಗೂ ಸದಸ್ಯೆ ಸೆಲಿಕತ್ ಉಪಸ್ಥಿತರಿದ್ದರು.
