
ಉಡುಪಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ನಲ್ಲಿ ಇಂದು ಮಧ್ಯಾಹ್ನ ಮಿಸ್ ಫೈರಿಂಗ್ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ.
ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಿಂದೆಯೂ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್ನಲ್ಲಿ ನಡೆದಿತ್ತು ಫೈರಿಂಗ್
ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ನ್ನು ವಶಕ್ಕೆ ಪಡೆದಿದ್ದಾರೆ. ಈ ಗನ್ ಯಾರದ್ದು? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವುದರ ಕುರಿತು ತನಿಖೆ ಶುರುವಾಗಿದೆ. ಇಂತಹ ಘಟನೆ ಈ ಹಿಂದೆ ಕೂಡ ಜಯಲಕ್ಷ್ಮೀ ಸಿಲ್ಕ್ಸ್ನಲ್ಲಿ ನಡೆದಿತ್ತು ಎನ್ನಲಾಗಿದೆ. ಭೂಗತ ಪಾತಕಿಗಳು ಫೈರಿಂಗ್ ಮಾಡಿದ್ದರಂತೆ. ಇದೀಗ ಅಪರಿಚಿತರ ಗನ್ ಸಿಕ್ಕಿದ್ದು, ಪರೀಕ್ಷಿಸಲು ಹೋದಾಗ ಮಿಸ್ ಫೈರಿಂಗ್ ಆಗಿದೆ.