Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕೊರೊನಾದಿಂದ ಕೆಲಸ ಕಳಕೊಂಡ ಇಂಜಿನಿಯರ್ ಮೈಸೂರಿನಲ್ಲಿ ಅದ್ಭುತ ನಕಲಿ ನೋಟು ತಯಾರಿಸುತ್ತಿದ್ದ; ಹರಿಹರ ಪೊಲೀಸರಿಗೆ ಸಿಕ್ಕಿಬಿದ್ದ!

editor tv by editor tv
January 27, 2024
in ರಾಜ್ಯ
0
ಕೊರೊನಾದಿಂದ ಕೆಲಸ ಕಳಕೊಂಡ ಇಂಜಿನಿಯರ್ ಮೈಸೂರಿನಲ್ಲಿ ಅದ್ಭುತ ನಕಲಿ ನೋಟು ತಯಾರಿಸುತ್ತಿದ್ದ; ಹರಿಹರ ಪೊಲೀಸರಿಗೆ ಸಿಕ್ಕಿಬಿದ್ದ!
1.9k
VIEWS
Share on FacebookShare on TwitterShare on Whatsapp

ಕೊರೊನಾದಿಂದ ಉದ್ಯೋಗ ಕಳೆದುಕೊಂಡ ಇಂಜಿನಿಯರ್ ಮೈಸೂರಿನಲ್ಲಿ ರಿಸರ್ವ್​​ ಬ್ಯಾಂಕಿನ ನೋಟು ಮುದ್ರಣ ಘಟಕಕ್ಕೆ ಹತ್ತಿರದ ಕೂರಗಳ್ಳಿಮೇಗಲದಲ್ಲಿ ರೂಮ್ ಮಾಡಿಕೊಂಡಿದ್ದ. ರೂಮಿನಲ್ಲಿ ಈತ ನೈಜ ನೋಟು ಮುದ್ರಣ ಘಟಕಕ್ಕಿಂತಲೂ ಅದ್ಭುತವಾಗಿ ನೋಟು ತಯಾರಿಸುತ್ತಿದ್ದ!

ಅಲ್ಲೊಬ್ಬನ ಕೈಯಲ್ಲಿ ಗರಿ ಗರಿ ನೋಟು ಕಾಣುತ್ತಿದ್ದವು. ಬೀಡಿ ಸಿಗರೇಟ್ ಗೂ ಪರದಾಡುತ್ತಿದ್ದ ವ್ಯಕ್ತಿ ಕೈಯಲ್ಲಿ ನೋಟ್ ನೋಡಿ ಜನಕ್ಕೆ ಸಂಶಯ ಬಂದಿತ್ತು. ಮೇಲಾಗಿ ಸಂಜೆ ಆಗುತ್ತಿದ್ದಂತೆ ಇಸ್ಪೀಟ್ ಆಟಕ್ಕೆ ಕುಳಿತುಕೊಳ್ಳಲು ಶುರು ಮಾಡಿದ್ದ. ಸೋತರು ಗೆದ್ದರು ಮುಖದ ಹಾವ ಭಾವ ಮಾತ್ರ ಬದಲಾಗುತ್ತಿರಲಿಲ್ಲ. ಇದೇ ಸಂಶಯ ಬಂದು ಆತನ ನೋಟ-ನೋಟು ಗಮನಿಸಿ ಓರ್ವ ಪೊಲೀಸರಿಗೆ ಮಾಹಿತಿ ನೀಡಿದ್ದ. ಎಂಬಿಎ ಮುಗಿಸಿದ್ದ ಇಂಜಿನಿಯರ್ ನೋಟುಗಳ ಸೃಷ್ಟಿಕರ್ತನಾಗಿದ್ದಾನೆ. ಇಲ್ಲಿದೆ ನೋಡಿ ಕೋಟಾ ನೋಟು ಕಿಲಾಡಿಗಳು ಸ್ಟೋರಿ.

ಫೋಟೋದಲ್ಲಿರುವ ಈತನನ್ನೊಮ್ಮೆ ನೋಡಿ. ಹೆಸರು ತಳವಾರ ಕುಬೇರಪ್ಪ ಅಂತಾ. ದಾವಣಗೆರೆ ತಾಲೂಕಿನ ಕುಕ್ಕವಾಡ ಗ್ರಾಮದ ನಿವಾಸಿ. ಈತನನನ್ನ ಬಂಧಿಸಿದಾಗ ಈ ಕೋಟಾ ನೋಟು ರಾಮಾಯಣ ಬಯಲಾಗಿದೆ ನೋಡಿ. ಎಲ್ಲಿ ನೋಡಿದರಲ್ಲಿ ಐದು ನೂರು ಹಾಗೂ ಎರಡು ನೂರು ಮುಖ ಬೆಲೆಯ ನೋಟುಗಳು. ಪೊಲೀಸರು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ತಂದಿದ್ದರು.

ಇದು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಡಿಸಿಆರ್ ಬಿ‌ ಪೊಲೀಸರ ಕಾರ್ಯಾಚಣೆ ನಡೆಸಿದಾಗ ಸಿಕ್ಕ ಖೋಟಾ ನೋಟುಗಳು. ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ ಆರು ಜನರ ಗ್ಯಾಂಗ್ ವೊಂದನ್ನ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೋಬರಿ 7.70 ಲಕ್ಷ ರೂಪಾಯಿ ಮೌಲ್ಯದ ಐದು ನೂರು ಹಾಗೂ ಎರಡು ನೂರು ಮುಖಬೆಲೆಯ ಖೋಟಾ ನೋಟು ವಶಪಡಿಸಿಕೊಂಡಿದ್ದಾರೆ.

ಖೋಟಾ ನೋಟು ತಯಾರು‌ ಮಾಡಲು ಬಳಸುತ್ತಿದ್ದ ‌ಲ್ಯಾಪ್ ಟಾಪ್ ಸೇರಿ‌ ಮೂರು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳ ವಶ ಪಡಿಸಿಕೊಂಡಿದ್ದಾರೆ. ದಾವಣಗೆರೆ ಮೂಲದ ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗದ ಭದ್ರಾವತಿ ಮೂಲದ ಇಂಜಿನಿಯರ್ ಜೆ. ರುದ್ರೇಶ್, ಮೈಸೂರಿನ ಮನೋಜ್ ಗೌಡ, ಮಂಡ್ಯದ ಸಂದೀಪ್ ಹಾಗೂ ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕ ಬಂಧಿತ ಆರೋಪಿಗಳು.

ಆರೋಪಿ ಇಂಜಿನಿಯರ್ ಜೆ ರುದ್ರೇಶ ಎಂಬಾತನೇ ಮೈಸೂರಿನ ಕೂರಗಳ್ಳಿಮೇಗಲ ಕೊಪ್ಪಲುನಲ್ಲಿ ರೂಮ್ ಮಾಡಿಕೊಂಡು ಖೋಟಾನೋಟು ತಯಾರಿಕೆ ಮಾಡುತ್ತಿದ್ದ. ಈತ ಕೊರೊನಾ ಸಂಕಷ್ಟದ ಕಾಲದಲ್ಲಿ ಉದ್ಯೋಗವಿಲ್ಲದೇ ಖೋಟಾ ನೋಟು ತಯಾರಿಕೆಯಲ್ಲಿ ತೊಡಗಿದ್ದಾಗಿ ಕಿಲಾಡಿ ಇಂಜಿನಿಯರ್ ಒಪ್ಪಿಕೊಂಡಿದ್ದಾನೆ.

ಕೊರೊನಾ ದಲ್ಲಿ ಕೆಲ್ಸಾ ಕಳೆದುಕೊಂಡು ಕೆಲ ತಿಂಗಳು ಕೋಳಿ ಫಾರ್ಮ್​​ ಇಟ್ಟುಕೊಂಡಿದ್ದ ಇಂಜಿನಿಯರ್ ರುದ್ರೇಶ್. ವಿಶೇಷವಾಗಿ ಮೈಸೂರಿನಲ್ಲಿ ರಿಸರ್ವ್​​ ಬ್ಯಾಂಕಿನ ನೋಟು ಮುದ್ರಣ ಘಟಕಕ್ಕೆ ಹತ್ತಿರದ ಕೂರಗಳ್ಳಿಮೇಗಲದಲ್ಲಿ ರೂಮ್ ಮಾಡಿಕೊಂಡಿದ್ದ. ರೂಮ್ ನಲ್ಲಿ ಈತ ನೈಜ ನೋಟು ಮುದ್ರಣ ಘಟಕಕ್ಕಿಂತಲೂ ಅದ್ಭುತವಾಗಿ ನೋಟು ತಯಾರಿಸುತ್ತಿದ್ದ. ಇವುಗಳನ್ನ ಪೆಟ್ರೋಲ್ ಬಂಕ್​ ಅಥವಾ ಚಿಲ್ಲರೆ ವ್ಯಾಪಾರಿಗಳಿಗೆ ನೀಡಿ ವಂಚಿಸುತ್ತಿದ್ದರು.

ಇಂತಹ ಕೆಲಸ ಮಾಡುವುದರಲ್ಲಿ ದಾವಣಗೆರೆ ತಾಲೂಕಿನ ಕುಕ್ಕವಾಡ ಗ್ರಾಮದ ತಳವಾರ ಕುಬೇರಪ್ಪ ಚಾಲಾಕಿ. ಈತನಿಗೆ ಲಿಂಕ್ ಆಗಿ ಐಗೂರ ಲಿಂಗಾಪುರದ ನಿವಾಸಿ ಹರೀಶ್ ಗೌಡ ಕೆಲ್ಸಾ ಮಾಡುತ್ತಿದ್ದ. ಪರಸ್ಪರ ಇವರು ಸಿಕ್ಕಿದ್ದು ಮಾತ್ರ ವಿಚಿತ್ರ. ಇಸ್ಪೀಟ್ ಆಟಕ್ಕೂ ಖೋಟಾ ನೋಟು ಬಳಸಿದ್ದಾರೆ. ಇಸ್ಪೀಟ್ ಆಟದಲ್ಲಿ ಅದು ನಕಲಿ ನೋಟು ಎಂದು ಗೊತ್ತಾಗಿದೆ. ಮಾಹಿತಿ ಬಂದ ಬಳಿಕ ಇವರನ್ನ ವಶಕ್ಕೆ ಪಡೆದು ನೋಡಿದಾಗ ಖೋಟಾ ನೋಟು ಸಿಕ್ಕಿವೆ. ಆಗ ದಾವಣಗೆರೆ ಪೊಲೀಸರು ಮೈಸೂರಿಗೆ ಪ್ರಯಾಣ ಬೆಳಸಿದ್ದಾರೆ. ಅಲ್ಲಿ ನೋಡಿದರೆ ಕೋಟಾ ನೋಟು ತಯಾರಿ ಲೋಕ ಅನಾವರಣಗೊಂಡಿದೆ.

ಕೊರೊನಾದಲ್ಲಿ ಉದ್ಯೋಗ ಕಳೆದುಕೊಂಡ ಇಂಜಿನಿಯರ್ ರುದ್ರೇಶ ಭದ್ರಾವತಿ ಬಿಟ್ಟು ಮೈಸೂರು ಸೇರಿ ಇಂತಹ ಅಪರಾಧ ಕೃತ್ಯ ಮಾಡುತ್ತಿದ್ದ. ಈತ ಇತ್ತೀಚಿಗೆ ಅಂದ್ರೆ ಕೊರೊನಾ ನಂತರ ನೋಟು ಸಿದ್ದಪಡಿಸುತ್ತಿದ್ದ. ಆದ್ರೆ ಇಲ್ಲಿನ ಆರೋಪಿಗಳ ಪಟ್ಟಿಯಲ್ಲಿ ನಂಬರ್ ಓನ್ ಆಗಿರುವ ತಳವಾರ ಕುಬೇರಪ್ಪ ವಿರುದ್ಧ ಹೊಸಪೇಟೆಲ್ಲಿ ಖೋಟಾ ನೋಟು ವಿಚಾರದಲ್ಲಿಯೇ ಕೇಸ್ ಬುಕ್ ಆಗಿದೆ. ಇದರ ಹಿಂದಿನ ರಹಸ್ಯವನ್ನ ಪೊಲೀಸರು ಪತ್ತೆ ಹಚ್ಚಬೇಕಾಗಿದೆ.

Previous Post

ಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಕೆಎಸ್‌ಪಿಸಿಬಿ ಆದೇಶ

Next Post

ಕೇರಳ: ಕೊಲ್ಲಂನಲ್ಲಿ ಎಸ್ಎಫ್ಐ ವಿರುದ್ಧ ರಸ್ತೆಯಲ್ಲಿ ಕುಳಿತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ

Next Post
ಕೇರಳ: ಕೊಲ್ಲಂನಲ್ಲಿ ಎಸ್ಎಫ್ಐ ವಿರುದ್ಧ ರಸ್ತೆಯಲ್ಲಿ ಕುಳಿತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ

ಕೇರಳ: ಕೊಲ್ಲಂನಲ್ಲಿ ಎಸ್ಎಫ್ಐ ವಿರುದ್ಧ ರಸ್ತೆಯಲ್ಲಿ ಕುಳಿತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.