Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುನ್ನೆಲೆಗೆ ಬಂದ ಅಸಂವಿಧಾನಿಕ ‘ಸಿಎಎ’: ತಮಿಳುನಾಡಿನ ಜನರಿಗೆ ಅಭಯ ನೀಡಿದ ಸ್ಟಾಲಿನ್

editor tv by editor tv
February 1, 2024
in ರಾಜ್ಯ
0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುನ್ನೆಲೆಗೆ ಬಂದ ಅಸಂವಿಧಾನಿಕ ‘ಸಿಎಎ’: ತಮಿಳುನಾಡಿನ ಜನರಿಗೆ ಅಭಯ ನೀಡಿದ ಸ್ಟಾಲಿನ್
1.9k
VIEWS
Share on FacebookShare on TwitterShare on Whatsapp

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಅಸಂವಿಧಾನಿಕ ಸಿಎಎ ಕಾಯ್ದೆ ಮತ್ತೆ ಮುನ್ನೆಲೆಗೆ ಬಂದಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡಿನಲ್ಲಿ ಎಂದಿಗೂ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬುಧವಾರ ಹೇಳಿದ್ದಾರೆ. ಈ ಕಾಯ್ದೆ ಮುಸ್ಲಿಮರು ಮತ್ತು ಶ್ರೀಲಂಕಾ ತಮಿಳರ ವಿರುದ್ಧವಾಗಿದೆ ಎಂದು  ಹೇಳಿದ್ದಾರೆ.

ಒಂದು ವಾರದಲ್ಲಿ ದೇಶದಾದ್ಯಂತ ಸಿಎಎ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂಬ ಕೇಂದ್ರ ಸಚಿವ ಸಂತಾನು ಠಾಕೂರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಸ್ಟಾಲಿನ್ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡಿಗೆ ಕಾಲಿಡಲು ನಾವು ಬಿಡುವುದಿಲ್ಲ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಎಂ ಕೆ ಸ್ಟಾಲಿನ್ ಅವರು ಬಿಜೆಪಿಯ ಮಿತ್ರಪಕ್ಷವಾಗಿದ್ದ ಎಐಎಡಿಎಂಕೆಯನ್ನು ರಾಜ್ಯಸಭೆಯಲ್ಲಿ ಸಿಎಎ ಮಸೂದೆಯನ್ನು ಬೆಂಬಲಿಸಿದ್ದಕ್ಕಾಗಿ ಟೀಕಿಸಿದ್ದು, ತಮಿಳುನಾಡಿನಲ್ಲಿ ಡಿಎಂಕೆ ವಿರೋಧ ಪಕ್ಷದಲ್ಲಿದ್ದಾಗ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿತ್ತು. ಡಿಎಂಕೆ ಸಿಎಎ ಅನುಷ್ಠಾನದ ವಿರುದ್ಧ 20 ಮಿಲಿಯನ್ ಸಹಿಗಳನ್ನು ಸಂಗ್ರಹಿಸಿತ್ತು ಮತ್ತು ಅದನ್ನು ಅಂದಿನ ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿತ್ತು. ನಾವು 2021ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ, ಸಿಎಎ ಹಿಂಪಡೆಯಲು ಒತ್ತಾಯಿಸಿ ನಾವು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಡಿಎಂಕೆ ಸರ್ಕಾರವು ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಧಾರ್ಮಿಕ ಸಾಮರಸ್ಯಕ್ಕೆ ವಿರುದ್ಧವಾಗಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದು, ಅದನ್ನು ಎಐಎಡಿಎಂಕೆಯ ಬೆಂಬಲಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಯನ್ನು ಎಐಎಡಿಎಂಕೆ ಬೆಂಬಲಿಸಿರದಿದ್ದರೆ ಅದು ಕಾನೂನಾಗುತ್ತಿರಲಿಲ್ಲ. ಶಾಸನವು ಶ್ರೀಲಂಕಾ ನಿರಾಶ್ರಿತರು ಮತ್ತು ಮುಸ್ಲಿಮರ ವಿರುದ್ಧ ತಾರತಮ್ಯವನ್ನುಂಟು ಮಾಡುತ್ತದೆ ಎಂದು ಸ್ಟ್ಯಾಲಿನ್‌ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಎಐಎಡಿಎಂಕೆ ಬಿಜೆಪಿ ಮೈತ್ರಿಕೂಟವನ್ನು ತೊರೆದಿತ್ತು. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಸ್ಟಾಲಿನ್‌ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಬಿಜೆಪಿಯನ್ನು ಡಿಎಂಕೆ ಕೇವಲ ಬಾಯಿ ಮಾತಿನಲ್ಲಿ ಮಾತ್ರ ವಿರೋಧಿಸುತ್ತಿದೆ. ಸಿಎಎ ಅಲ್ಪಸಂಖ್ಯಾತರ ಮೇಲೆ ಪ್ರಭಾವ ಬೀರಲು ಎಐಎಡಿಎಂಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಏನಿದು ಸಿಎಎ:

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶ ಇಲ್ಲ, ಆದ್ದರಿಂದ ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

Previous Post

ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

Next Post

ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ಗೆ ನಿರ್ಬಂಧ

Next Post
ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ಗೆ ನಿರ್ಬಂಧ

ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ಗೆ ನಿರ್ಬಂಧ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.