Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗಳೂರಿನ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂವರ ಸಜೀವ ದಹನ, ಐವರ ಸ್ಥಿತಿ ಗಂಭೀರ; ಅಸಲಿಗೆ ನಡೆದಿದ್ದೇನು?

editor tv by editor tv
February 18, 2024
in ರಾಜ್ಯ
0
ಬೆಂಗಳೂರಿನ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂವರ ಸಜೀವ ದಹನ, ಐವರ ಸ್ಥಿತಿ ಗಂಭೀರ; ಅಸಲಿಗೆ ನಡೆದಿದ್ದೇನು?
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ರಾಮಸಂದ್ರದ ಮನೆಯೊಂದರ ಸಮೀಪ ಸಂಭವಿಸಿರೋ ಭಯಾನಕ ಸ್ಫೋಟ ಮೂವರನ್ನ ಬಲಿ ಪಡೆದಿದೆ. ಹೊತ್ತಿ ಉರಿದ ಬೆಂಕಿಗೆ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಾ ಇದ್ದ ಮೂವರು ಸಜೀವವಾಗಿ ದಹನವಾಗಿದ್ದಾರೆ. ಬೆಂಕಿ ಬಿದ್ದ ತಕ್ಷಣ ಅಗ್ನಿಯ ಜ್ವಾಲೆ ಇಡೀ ಅಂಗಡಿಯನ್ನು ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಒಳಗಿದ್ದ ಸಿಬ್ಬಂದಿಗಳು ಹೊರಗೆ ಬರಲು ಆಗದೇ ಮೃತಪಟ್ಟಿದ್ದಾರೆ.

ಬೆಂಕಿಗೆ ಆಹುತಿಯಾಗಿರುವ ಪರ್ಫ್ಯೂಮ್ ಫ್ಯಾಕ್ಟರಿಗೆ ಕುಂಬಳಗೋಡು ಪೊಲೀಸರು ಭೇಟಿ ನೀಡಿದ್ದು, ಮೃತರ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಮನೆಯೊಂದರಲ್ಲಿ ಪರ್ಫ್ಯೂಮ್‌ ಕೆಮಿಕಲ್ ಫಿಲ್ಲಿಂಗ್ ಮಾಡ್ತಾ ಇದ್ದರು. ಒಟ್ಟು 8 ಜನ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. ಪರ್ಫ್ಯೂಮ್‌ ಫಿಲ್ಲಿಂಗ್ ವೇಳೆ ಬೆಂಕಿ ಸ್ಫೋಟಗೊಂಡಿದ್ದು ಇಡೀ ಮನೆಯನ್ನು ಆವರಿಸಿದೆ. ಈ ದುರ್ಘಟನೆಯಲ್ಲಿ ಮೂವರು ಸಜೀವ ದಹನವಾಗಿದ್ದರೆ, ಉಳಿದ ಐವರು ಹೊರಗಡೆ ಓಡಿ ‌ಬಂದಿದ್ದಾರೆ.

ಬೆಂಕಿಯಲ್ಲಿ ಸಾವನ್ನಪ್ಪಿದ ಮೂವರ ಮೃತದೇಹಗಳನ್ನು ಆರ್.ಆರ್.ನಗರ ಆಸ್ಪತ್ರೆಗೆ ಹಾಗೂ ಗಾಯಗೊಂಡ ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುಗಳನ್ನ ಅಲ್ಲಾಬಕ್ಷು, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್ ಎಂದು ಗುರುತಿಸಲಾಗಿದೆ. ಗಾಯಗೊಂಡವರ ಸ್ಥಿತಿ ಕೂಡ ಗಂಭೀರವಾಗಿದೆ ಎನ್ನಲಾಗಿದೆ.

ಗಾಯಗೊಂಡವರಲ್ಲಿ 7 ನೇ ತರಗತಿ ಓದುತ್ತಿದ್ದ ಬಾಲಕನೂ ಇದ್ದು ಗಾಯಾಳು ಅರ್ಬಾಜ್ ತಂದೆ ಅಬ್ದಲ್ ಕಣ್ಣೀರಿಟ್ಟಿದ್ದಾರೆ. ನನಗೆ ಈಗ ಮಾಹಿತಿ ಗೊತ್ತಾಯ್ತು. ನನ್ನ ಮಗ ಸ್ಕೂಲ್‌ಗೆ ಹೋಗ್ತಿದ್ದ. ನಾವು ಕೆಲಸಕ್ಕೆ ಕಳುಹಿಸೋದಿಲ್ಲ. ಯಾರು ಕರೆದುಕೊಂಡು ಬಂದಿದ್ದಾರೆ ಅಂತ ಗೊತ್ತಿಲ್ಲ ಎಂದಿದ್ದಾರೆ.

ಪರ್ಫ್ಯೂಮ್‌ ಫ್ಯಾಕ್ಟರಿಯಲ್ಲಿ ಆಗಿದ್ದೇನು?
ರಾಮಸಂದ್ರದಲ್ಲಿದ್ದ ಈ ಕಟ್ಟಡ ಗುಜರಿ ಅಂಗಡಿಯ ಮಾದರಿಯಲ್ಲಿದೆ. ಇಲ್ಲಿ ಪರ್ಫ್ಯೂಮ್‌ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ವೇಳೆ ಪರ್ಫ್ಯೂಮ್ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣವಾಗಿ ಬೆಂಕಿ ನಂದಿಸಿ ತೆರಳಿದ್ದಾರೆ.

ಫರ್ಪೂಮ್ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭ ಸ್ಫೋಟಗೊಂಡು ಅವಘಡ (Fire Accident) ಸಂಭವಿಸಿದೆ. ಘಟನೆ ನಡೆಯುವ ವೇಳೆ ಒಟ್ಟು 8 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಫಿಲ್ಲಿಂಗ್ ವೇಳೆ ಸ್ಫೋಟಗೊಂಡಿದ್ದು, ಇಡೀ ಮನೆಯನ್ನು ಆವರಿಸಿದೆ

ಮನೆ ಪರಿಶೀಲಿಸಿದ ಬಳಿಕ ಮಾಹಿತಿ ನೀಡಿದ ಎಸ್‌ಪಿ ಕಾರ್ತಿಕ್ ರೆಡ್ಡಿ, ಇವತ್ತು ಸಂಜೆ ಐದು ಗಂಟೆಗೆ ರಾಮಸಂದ್ರದಲ್ಲಿ ಬೆಂಕಿ ಅವಘಡವಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೂವರಲ್ಲಿ ಸಲೀಂ ಅನ್ನೋರ ಗುರುತು ಪತ್ತೆಯಾಗಿದೆ. ಉಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ. ಐದು ಮಂದಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿದ್ದಾರೆ. ಗಾಯಾಳುಗಳಲ್ಲಿ ಒಬ್ಬ 15 ವರ್ಷದ ಅಪ್ರಾಪ್ತ ಹುಡುಗನಿದ್ದಾನೆ. ಮೇಲ್ನೋಟಕ್ಕೆ ಇಲ್ಲಿ ಪರ್ಫ್ಯೂಮ್ ಫಿಲ್ಲಿಂಗ್ ಮಾಡ್ತಿರೋದು ಕಂಡುಬಂದಿದೆ. FSLನವರು ವರದಿ ಕೊಟ್ಟ ಬಳಿಕ ಘಟನೆಗೆ ಕಾರಣ ಏನು ಅಂತ ಗೊತ್ತಾಗಬೇಕಿದೆ. ವಿಠಲ್ ಅನ್ನೋರ ಜಾಗ ಇದಾಗಿದ್ದು, ಸಲೀಂ ಅನ್ನೋ ವ್ಯಕ್ತಿ ಕಳೆದ ಒಂದು ತಿಂಗಳ ಹಿಂದಷ್ಟೆ ಇಲ್ಲಿ ಗೋಡೌನ್ ಆರಂಭಿಸಿದ್ದರು.ಗೋಡೌನ್‌ನ ಚಿಕ್ಕ ಕೋಣೆಯಲ್ಲಿ ಮೂವರ ಶವ ಪತ್ತೆಯಾಗಿದ್ದು, ತನಿಖೆ ನಡೆಸಲಾಗ್ತಿದೆ ಎಂದಿದ್ದಾರೆ.

Previous Post

ಸಿಎಂ ಆಗಿದ್ದೀರಿ, ಪಿಎಂ ಕೂಡ ಆಗಿದ್ದೀರಿ.. ಈಗ ಆರಾಮಾಗಿರಿ ಅಂತ ಹಿರಿಯ ನಾಯಕರು ಹೇಳಿದ್ದರು: ಮೋದಿ

Next Post

ಉಳ್ಳಾಲ: ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

Next Post
ಉಳ್ಳಾಲ: ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

ಉಳ್ಳಾಲ: ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.