Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

editor tv by editor tv
February 24, 2024
in ರಾಷ್ಟ್ರೀಯ
0
ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!
1.9k
VIEWS
Share on FacebookShare on TwitterShare on Whatsapp

ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರ, ಕುಟುಂಬಸ್ಥರ ಕೊಲೆ ಪ್ರಕರಣದ ಅಪರಾಧಿ ರಮೇಶ್ ಚಂದನಾಗೆ ಗುಜರಾತ್ ಹೈಕೋರ್ಟ್ 10 ದಿನಗಳ ಕಾಲ ಪೆರೋಲ್ ನೀಡಿದ್ದು, ಮಾ.5ರಂದು ಆತನಿಗೆ ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಿದೆ. ಜನವರಿ 21ರಂದು ಎಲ್ಲಾ ಅಪರಾಧಿಗಳು ಶರಣಾದ ತಿಂಗಳೊಳಗೆ ಈತ ಜಾಮೀನಲ್ಲಿ ಬಿಡುಗಡೆಯಾದ ಎರಡನೇ ಅಪರಾಧಿಯಾಗಿದ್ದಾನೆ. ಹೇಯ ಕೃತ್ಯದ ಅಪರಾಧಿಗಳು ಒಬ್ಬರ ಹಿಂದೆ ಒಬ್ಬರಂತೆ ಪೆರೋಲ್‌ನಿಂದ ಹೊರ ಬರುತ್ತಿದ್ದು, ಜನರ ಟೀಕೆಗೆ ಕಾರಣವಾಗಿದೆ.

ಕಳೆದ ವಾರ ಪೆರೋಲ್‌ಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಮೇಶ್‌ ಚಂದನಾ, ಸುಪ್ರೀಂಕೋರ್ಟ್ ಆದೇಶದ ನಂತರ ಜನವರಿ 21ರಂದು ಗೋದ್ರಾ ಪಟ್ಟಣದ ಜೈಲಿನಲ್ಲಿ ಎಲ್ಲಾ 11 ಅಪರಾಧಿಗಳ ಜೊತೆ ಶರಣಾಗಿದ್ದ.  ಅಪರಾಧಿ ಸಹೋದರಿಯ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದ, ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ನೇತೃತ್ವದ ಗುಜರಾತ್‌ ಹೈಕೋರ್ಟ್‌ ಪೀಠ 10 ದಿನಗಳ ಕಾಲ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂಕೋರ್ಟ್‌ಗೆ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಚಂದನಾ  2008ರಲ್ಲಿ ಸೆರೆವಾಸ ಘೋಷಿಸಿದ ಬಳಿಕ ಬರೊಬ್ಬರಿ 1,198 ದಿನಗಳವರೆಗೆ ಪೆರೋಲ್ ಅನುಭವಿಸಿದ್ದಾನೆ. ಇದಕ್ಕೂ ಮುನ್ನ, ಪ್ರಕರಣದ ಮತ್ತೊಬ್ಬ ಅಪರಾಧಿ ಪ್ರದೀಪ್ ಮೋಧಿಯಾ ಪೆರೋಲ್ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದ್ದು, ಫೆಬ್ರವರಿ 7ರಿಂದ 11ರವರೆಗೆ ಗೋಧ್ರಾ ಜೈಲಿನಿಂದ ಪೆರೋಲ್ ಮೇಲೆ ಆತನಿಗೆ ಬಿಡುಗಡೆ ಮಾಡಲಾಗಿತ್ತು.

2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಾಗಿದ್ದಾರೆ. ಈ ಕಿರಾತಕರಿಗೆ ಆಗಸ್ಟ್ 2022ರಲ್ಲಿ ರಾಜ್ಯ ಸರ್ಕಾರವು 1992ರ ನೀತಿಗೆ ಅನುಗುಣವಾಗಿ ಕ್ಷಮಾದಾನವನ್ನು ನೀಡಿ ಜೈಲಿನಿಂದ ಬಿಡುಗಡೆ ಮಾಡಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದ್ದವು.

11 ಅಪರಾಧಿಗಳ ಬಿಡುಗಡೆಯ ನಂತರ ಬಿಲ್ಕಿಸ್ ಬಾನು ಅವರು ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಪೀಠ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ರದ್ದುಗೊಳಿಸಿ, ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಹೇಳಿತ್ತು. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್‌ನನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು.

ಜನವರಿ 8ರಂದು ತನ್ನ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಸುಪ್ರೀಂಕೋರ್ಟ್ ಪೀಠವು, ಗುಜರಾತ್ ರಾಜ್ಯವು ಈ ನ್ಯಾಯಾಲಯವು ನೀಡಿದ ನಿರ್ದೇಶನದ ಆಧಾರದ ಮೇಲೆ ಕಾರ್ಯನಿರ್ವಹಿಸಿದೆ, ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ ಅಪರಾಧಿಗಳು ಮೋಸ ಮತ್ತು ನಿಜಾಂಶಗಳನ್ನು ಮುಚ್ಚಿಡುವ ವಿಧಾನವನ್ನು ಅನುಸರಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿದ್ದರು ಎಂದು ಹೇಳಿತ್ತು.

2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ನಡೆದ ಹಿಂಸಾಚಾರದ ವೇಳೆ ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಮೃತಪಟ್ಟ ಆಕೆಯ ಏಳು ಕುಟುಂಬ ಸದಸ್ಯರಲ್ಲಿ ಅವಳ ಮೂರು ವರ್ಷದ ಮಗು ಕೂಡ ಸೇರಿತ್ತು.

Previous Post

ದೆಹಲಿ ಚಲೋ’ ಹಿಂಸಾಚಾರಕ್ಕೆ ತಿರುಗುವ ಭೀತಿ; ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ..!

Next Post

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

Next Post
ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.