
ಮಂಗಳೂರಿನಿಂದ ನಾಪತ್ತೆಯಾಗಿದ್ದ ಪಿಎಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಕತಾರ್ ದೇಶಕ್ಕೆ ತೆರಳಿರುವುದು ತಿಳಿದುಬಂದಿದೆ. ಕತಾರ್ ದೇಶದಿಂದ ಉಳ್ಳಾಲ ಪೊಲೀಸರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿದ ಚೈತ್ರಾ, ನನಗೆ ಪ್ರೀತಿಸುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದ್ದಾರೆ . ಪುತ್ತೂರಿನ ಶಾರೂಖ್ನನ್ನು ಹಿಮಾಚಲ ಪ್ರದೇಶದಲ್ಲಿ ವಶಕ್ಕೆ ಪಡೆದ ಪೊಲೀಸರಿಗೆ ವಿಚಾರಣೆ ವೇಳೆ ಚೈತ್ರಾ ಶಾರೂಖ್ ನಡುವಿನ ಪ್ರೀತಿ ವಿಚಾರ ತಿಳಿದುಬಂದಿದೆ.

ಮಂಗಳೂರು, ಮಾ.2: ನಾಪತ್ತೆಯಾಗಿದ್ದ ಪಿಎಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ರ್ ನಾಪತ್ತೆ (Missing) ಪ್ರಕರಣ ಸಂಬಂಧ ಪುತ್ತೂರಿನ ಶಾರೂಖ್ನನ್ನು ಉಳ್ಳಾಲ (Ullal) ಪೊಲೀಸರು ಹಿಮಾಚಲ ಪ್ರದೇಶದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಇಬ್ಬರ ನಡುವೆ ಇದ್ದ ಪ್ರೀತಿ ವಿಚಾರ ತಿಳಿದುಬಂದಿದೆ. ಇದರ ಬೆನ್ನಲ್ಲೇ, ಚೈತ್ರಾ ಹೆಬ್ಬಾರ್ ಕತಾರ್ ದೇಶಕ್ಕೆ ತೆರಳಿರುವುದು ತಿಳಿದುಬಂದಿದೆ. ಕತಾರ್ (Qatar) ದೇಶದಿಂದ ಉಳ್ಳಾಲ ಪೊಲೀಸರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿದ ಚೈತ್ರಾ, ನನಗೆ ಪ್ರೀತಿಸುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದ್ದಾಳೆ.

ವಿಸಿಟಿಂಗ್ ವೀಸಾದ ಮೂಲಕ ಚೈತ್ರಾ ಹೆಬ್ಬಾರ್ ಕತಾರ್ ದೇಶಕ್ಕೆ ತೆರಳಿರುವ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಕತಾರ್ನಿಂದಲೇ ಉಳ್ಳಾಲ ಪೊಲೀಸರಿಗೆ ಇಮೇಲ್ ಸಂದೇಶ ರವಾನಿಸಿದ ಚೈತ್ರಾ, ನಾನು ಪ್ರಬುದ್ದಳಾಗಿದ್ದೇನೆ, ನನಗೆ ಪ್ರೀತಿಸೋ ಹಕ್ಕಿಲ್ಕವೇ ಎಂದು ಪ್ರಶ್ನಿಸಿದ್ದಾಳೆ. ಅಲ್ಲದೆ, ‘ನನ್ನ ಇಚ್ಛೆಯಂತೆ ನಾನು ಬಂದಿದ್ದೇನೆ, ನನಗೆ ಬದುಕೋ ಹಕ್ಕಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
ಪುತ್ತೂರಿನ ಶಾರೂಖ್ನನ್ನು ಹಿಮಾಚಲ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಚೈತ್ರಾ ಜೊತೆ ಪ್ರೇಮ ಇರುವುದಾಗಿ ತಿಳಿಸಿದ್ದಾರೆ . 2017ರಿಂದಲೇ ಶಾರೂಖ್ ಜೊತೆ ಚೈತ್ರಾಗೆ ನಂಟು ಇತ್ತು ಎನ್ನಲಾಗಿದೆ.

ಕತಾರ್ ದೇಶಕ್ಕೆ ತೆರಳಲು ಶಾರೂಖ್ ವ್ಯವಸ್ಥೆ
ಬೆಂಗಳೂರಿನಿಂದ ಗೋವಾ-ಮುಂಬೈ ಮಾರ್ಗವಾಗಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಚೈತ್ರಾ, ಅಲ್ಲಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕತಾರ್ ದೇಶಕ್ಕೆ ಪ್ರಯಾಣ ಮಾಡಿದ್ದಾಳೆ. ಆ ದೇಶಕ್ಕೆ ಹೋಗಲು ಶಾರೂಖ್ ಎಲ್ಲಾ ವ್ಯವಸ್ಥೆ ಮಾಡಿದ್ದನು ಎಂದು ತಿಳಿದುಬಂದಿದೆ. ಈ ಹಿಂದೆ ಕತಾರ್ನಲ್ಲೇ ಕೆಲಸ ಮಾಡಿಕೊಂಡಿದ್ದ ಶಾರೂಖ್,
ಅಲ್ಲದೆ, ಪಾಸ್ಪೋರ್ಟ್ನಲ್ಲಿ ಎಕ್ಸಿಟ್ ಇರುವ ಕಾರಣ ಶಾರೂಖ್ಗೆ ಯುಎಇ ಪ್ರಯಾಣ ನಿರ್ಬಂಧ ಮಾಡಲಾಗಿದೆ. ಹೀಗಾಗಿ ವಿಸಿಟಿಂಗ್ ವೀಸಾ ಮೂಲಕ ಚೈತ್ರಾಳನ್ನ ಕಳುಹಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಸದ್ಯ ಚೈತ್ರಾ ಕತಾರ್ನ ಭಾರತೀಯ ರಾಯಭಾರಿ ಕಚೇರಿ ಮೂಲಕ ಇಮೇಲ್ ಸಂದೇಶ ರವಾನಿಸಿದ್ದು, ಮೂರು ತಿಂಗಳು ಕಳೆದು ಊರಿಗೆ ಬರೋದಾಗಿ ಹೇಳಿದ್ದಾಳೆ. ಹೀಗಾಗಿ ಶಾರೂಖ್ನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಇಬ್ಬರೂ ಪ್ರಬುದ್ದರಾಗಿರುವ ಕಾರಣ ಪೊಲೀಸರು ಅಸಹಾಯಕರಾಗಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಹಿಂದೆ ಹುನ್ನಾರ ಇದೆ ಎಂದು ಬಜರಂಗದಳ ಆರೋಪಿಸಿತ್ತು. ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸನ್ನು ಸರ್ಕಾರ ಮತ್ತು ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಸುಸಂಸ್ಕೃತ ಮನೆಯ ಹುಡುಗಿಯನ್ನು ಬ್ಲ್ಯಾಕ್ಮೇಲ್ ಮಾಡಿ ಹಾಗೂ ವಂಚಿಸಿ ಅಪಹರಣ ಮಾಡಲಾಗಿದೆ ಎಂದು ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಆರೋಪಿಸಿದ್ದನು.