Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?

editor tv by editor tv
March 9, 2024
in ರಾಜ್ಯ
0
ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?
1.9k
VIEWS
Share on FacebookShare on TwitterShare on Whatsapp

ಬೆಂಗಳೂರು/ಮೈಸೂರು: ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಿಜೆಪಿ ಹೈಕಮಾಂಡ್‌ (BJP High Command) ಮೈಸೂರಿನಲ್ಲಿ (Mysuru) ಈ ಬಾರಿ ಯದುವೀರ್‌ ಒಡೆಯರ್‌ (Yaduveer Wadiyar) ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ.

ಹೌದು. ಹಾಲಿ ಸಂಸದರಾಗಿರುವ ಪ್ರತಾಪ್‌ ಸಿಂಹ (Pratap Simha) ಅವರಿಗೆ ಈ ಬಾರಿ ಟಿಕೆಟ್‌ ಸಿಗುವುದು ಅನುಮಾನ ಎನ್ನಲಾಗುತ್ತಿದ್ದು ಅವರ ಜಾಗದಲ್ಲಿ ಮೈಸೂರಿನ ರಾಜವಂಶಸ್ಥರ ಕುಡಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ.

ಕಳೆದ ಕೆಲ ದಿನಗಳಿಂದ ಯದುವೀರ್‌ ಒಡೆಯರ್‌ ಹೆಸರು ಕೇಳಿ ಬರುತ್ತಿದ್ದರೂ ಅದು ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ಆಗಿರಲಿಲ್ಲ. ಆದರೆ ಈಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್‌ ಒಡೆಯರ್‌ ಹೆಸರು ಪ್ರಸ್ತಾಪವಾಗಿದೆ. 

ಈಗಾಗಲೇ ಯದುವೀರ್‌ ಒಡೆಯರ್‌ ಅವರನ್ನು ಬಿಜೆಪಿ ಸಂಪರ್ಕಿಸಿದ್ದು ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಪ್ರಮೋದಾ ದೇವಿ (Pramoda Devi) ಗ್ರೀನ್ ಸಿಗ್ನಲ್‌ಗೆ ನಾಯಕರು ಕಾಯುತ್ತಿದ್ದಾರೆ. ಒಂದು ವೇಳೆ ಪ್ರಮೋದಾ ದೇವಿ ಒಪ್ಪಿಗೆ ನೀಡಿದರೆ ಯದುವೀರ್‌ ಒಡೆಯರ್‌ ರಾಜಕಿಯ  ಪ್ರವೇಶಿಸಲಿದ್ದಾರೆ.

ಯಡಿಯೂರಪ್ಪ (Yediyurappa) ಮತ್ತು ಆರ್‌ಎಸ್‌ಎಸ್‌ ನಾಯಕರೊಬ್ಬರ ಮೂಲಕ ಯದುವೀರ್‌ ಅವರನ್ನು ಮನವೊಲಿಕೆ ಮಾಡಲಾಗಿದೆ. ಮನವೊಲಿಕೆಯ ಬೆನ್ನಲ್ಲೇ ಪ್ರತಾಪ್‌ ಸಿಂಹ ಜೊತೆ ಯದುವೀರ್‌ ಒಡೆಯರ್‌ ಹೆಸರನ್ನು ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲೇ ಶಿಫಾರಸ್ಸು ಮಾಡಲಾಗಿತ್ತು.

ಯದುವೀರ್‌ ಯಾಕೆ?
ಮೈಸೂರಿನ ಕೊನೆಯ ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್‌ ಅವರ ಏಕೈಕ ಪುತ್ರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ನಾಲ್ಕು ಬಾರಿ ಮೈಸೂರಿನ ಸಂಸದರಾಗಿದ್ದರಾಗಿ ಆಯ್ಕೆ ಅಗಿದ್ದರು. ಕಾಂಗ್ರೆಸ್ಸಿನಿಂದ ನಾಲ್ಕು ಬಾರಿ ಗೆದ್ದು ಎರಡು ಬಾರಿ ಅವರು ಸೋತಿದ್ದರು. 1984 ,1989, 1996, 1999ರಲ್ಲಿ ಗೆದ್ದಿದ್ದರೆ 1991 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು.

ಹಳೆ ಮೈಸೂರು ಭಾಗದಲ್ಲಿ ಮೈಸೂರು ರಾಜವಂಶಸ್ಥರ ಬಗ್ಗೆ ಈಗಲೂ ಜನರಲ್ಲಿ ಗೌರವವಿದೆ. ಮೈಸೂರಿನಲ್ಲಿ ಶಿಕ್ಷಣ,ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ರಾಜರು ಭಾರೀ ಕೊಡುಗೆ ನೀಡಿದ್ದಾರೆ. ಈ ಸಮಾಜಮುಖಿ ಕೆಲಸದಿಂದ ಈಗಲೂ ರಾಜರ ಫೋಟೋವನ್ನು ಇಟ್ಟು ಪೂಜೆ ಮಾಡುವವರಿದ್ದಾರೆ. ಈ ಕಾರಣಕ್ಕೆ ಯದುವೀರ್‌ ಒಡೆಯರ್‌ ಅವರಿಗೆ ಟಿಕೆಟ್‌ ನೀಡಿದರೆ ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದಲ್ಲೂ ಪ್ರಭಾವ ಬೀರಬಹುದು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

ಪ್ರತಾಪ್‌ ಸಿಂಹ ಭವಿಷ್ಯ ಏನು?
ಸತತ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿರುವ ಪ್ರತಾಪ್‌ ಸಿಂಹ ಮೂರನೇ ಬಾರಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ರಾಜ್ಯದ ಹಲವು ಬಿಜೆಪಿ ಸಂಸದರು ತಮ್ಮ ಸಾಧನೆ ಕೈಪಿಡಿ ಹೊರತರದೇ ಇದ್ದರೂ ಪ್ರತಾಪ್‌ ಸಿಂಹ ಬಿಜೆಪಿಯ ಅಗ್ರ ನಾಯಕರಿಗೆ ತಮ್ಮ ಕೆಲಸದ ಸಾಧನೆಯ ಕೈಪಿಡಿಯನ್ನು ನೀಡಿದ್ದಾರೆ.

ಒಂದು ವೇಳೆ ಲೋಕಸಭೆ ಟಿಕೆಟ್‌ ಸಿಗದೇ ಇದ್ದರೆ ಪ್ರತಾಪ್‌ ಸಿಂಹ ಅವರ ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಪ್ರಶ್ನೆ ಬರುತ್ತದೆ. ಇನ್ನೂ ಮೈಸೂರು ಟಿಕೆಟ್‌ ಯಾರಿಗೆ ಸಿಗಲಿದೆ ಎನ್ನುವುದು ಅಂತಿಮವಾಗಿಲ್ಲ. ಯದುವೀರ್‌ ಒಡೆಯರ್‌ ಸ್ಪರ್ಧಿಸಿದರೆ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗುವುದು ಅನುಮಾನ. ಹೀಗಾಗಿ ಬೇರೆ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಕ್ಕರೂ ಸಿಗಬಹುದು ಎಂಬ ಮಾತು ಕೇಳಿ ಬಂದಿದೆ.

ಮೊದಲ ಬಾರಿ ಸ್ಪರ್ಧೆ ಮಾಡಿದ್ದ 2014ರ ಚುನಾವಣೆಯಲ್ಲಿ ಪ್ರತಾಪ್‌ ಸಿಂಹ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ 31,608 ಮತಗಳಿಂದ ಗೆದ್ದರೆ, 2019ರ ಚುನಾವಣೆಯಲ್ಲಿ 1,38,647 ಮತಗಳ ಅಂತರದಿಂದ ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಸದ್ಯ ಪ್ರತಾಪ್‌ ಸಿಂಹ ರಾಜಕೀಯ ಭವಿಷ್ಯ ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರ ಕೈಯಲ್ಲಿದೆ.

Previous Post

ಮಂಗಳೂರು: ‘ಕೆವಾ ಬಾಕ್ಸ್’ ವಜ್ರಾಭರಣ ಮಳಿಗೆಯಲ್ಲಿ ಮಹಿಳಾ ದಿನಾಚರಣೆ

Next Post

Mysore: ಮಾರಕಾಸ್ತ್ರಗಳಿಂದ ಕೊಚ್ಚಿ ನಗರ ಪಾಲಿಕೆ ಮಾಜಿ ಸದಸ್ಯನ ಸಹೋದರ ಮೌಲಾನಾ ಹಾಫಿಲ್‌ ಅಕ್ಮಲ್‌ ಹತ್ಯೆ

Next Post
Mysore: ಮಾರಕಾಸ್ತ್ರಗಳಿಂದ ಕೊಚ್ಚಿ ನಗರ ಪಾಲಿಕೆ ಮಾಜಿ ಸದಸ್ಯನ ಸಹೋದರ  ಮೌಲಾನಾ ಹಾಫಿಲ್‌ ಅಕ್ಮಲ್‌ ಹತ್ಯೆ

Mysore: ಮಾರಕಾಸ್ತ್ರಗಳಿಂದ ಕೊಚ್ಚಿ ನಗರ ಪಾಲಿಕೆ ಮಾಜಿ ಸದಸ್ಯನ ಸಹೋದರ ಮೌಲಾನಾ ಹಾಫಿಲ್‌ ಅಕ್ಮಲ್‌ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.