Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

editor tv by editor tv
March 11, 2024
in ರಾಷ್ಟ್ರೀಯ
0
ಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ
1.9k
VIEWS
Share on FacebookShare on TwitterShare on Whatsapp

ಕೃಪೆ :ನಾನು ಗೌರಿ

ಚುನಾವಣಾ ಹೊಸ್ತಿಲ್ಲಲ್ಲೇ ಚುನಾವಣಾ ಆಯುಕ್ತ ಗೋಯೆಲ್ ರಾಜೀನಾಮೆ ದೇಶದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಭಾರತ ಸರಕಾರದ ವಿದ್ಯುತ್ ಮತ್ತು ಹಣಕಾಸು ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಭಾರತದ ಚುನಾವಣಾ ಆಯೋಗದ (ಇಸಿಐ) ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರವನ್ನು ಬರೆದಿದ್ದು, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಎತ್ತಿಹಿಡಿಯಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದಾರೆ.

ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುತ್ತಿದೆ ಮತ್ತು ತನ್ನ ಪರವಾಗಿ ಚುನವಣಾ ಆಯೋಗವನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ ಶರ್ಮಾ, ಚುನಾವಣಾ ಆಯುಕ್ತ ಸ್ಥಾನದಿಂದ ಅರುಣ್ ಗೋಯೆಲ್ ಹಠಾತ್ ನಿರ್ಗಮನದ ಬಗ್ಗೆ ಪ್ರಶ್ನಿಸಿದ್ದಾರೆ. ಶರ್ಮಾ ಅವರು ರಾಷ್ಟ್ರಪತಿಗಳಿಗೆ ಈ ಕುರಿತು ಬಹಿರಂಗ ಪತ್ರವನ್ನು ಬರೆದಿದ್ದು, ನನ್ನ ದೃಷ್ಟಿಯಲ್ಲಿ,  ಗೋಯೆಲ್ ಅವರ ಹಠಾತ್ ಮತ್ತು ವಿವರಣೆ ನೀಡದ ನಿರ್ಗಮನವು ಈ ಕೆಳಗಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ..

1.ಚುನಾವಣಾ ಪ್ರಕ್ರಿಯೆಯಲ್ಲಿ ರಾಜಕಾರಣಿಗಳು ಮಧ್ಯಪ್ರವೇಶಿಸುವ ಮೂಲಕ ಪಾವಿತ್ರ್ಯತೆಯನ್ನು ಹಾಳುಮಾಡುವ  ವಿಚಾರದಲ್ಲಿ ಗೋಯೆಲ್ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

2.ಇವಿಎಂಗಳ ಬಳಕೆಯ ಪರಿಣಾಮಕಾರಿತ್ವದ ಬಗ್ಗೆ ಗೋಯೆಲ್ ಅನುಮಾನ ವ್ಯಕ್ತಪಡಿಸಿದ್ದಾರೆಯೇ?

3. ಚುನಾವಣಾ ಬಾಂಡ್‌ ಕುರಿತ ವಿವರಗಳನ್ನು ಬಹಿರಂಗಪಡಿಸದಂತೆ ಎಸ್‌ಬಿಐಗೆ ರಾಜಕಾರಣಿಗಳು ಒತ್ತಡ ಹೇರಿರುವ ಬಗ್ಗೆ ಅವರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆಯೇ?

5. ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು BEL, ECIL ಮತ್ತು SBI ಮಂಡಳಿಗಳಿಂದ ಬಿಜೆಪಿಯ ನಾಮನಿರ್ದೇಶಿತರನ್ನು ಹಿಂತೆಗೆದುಕೊಳ್ಳಬೇಕೆಂದು ಗೋಯೆಲ್ ಪ್ರಸ್ತಾಪಿಸಿದ್ದಾರೆಯೇ?

6.ಗೋಯೆಲ್ ಅವರು ರಾಜಕೀಯ ಕಾರ್ಯಕಾರಿಣಿಗಳನ್ನು ಅಸಮಾಧಾನಗೊಳಿಸುವಂತಹ ಯಾವುದೇ ವಿಷಯದ ಬಗ್ಗೆ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

7.ಆಡಳಿತ ಪಕ್ಷದ ಕುತಂತ್ರಗಳಿಗೆ ದಾರಿ ಮಾಡಿಕೊಡಲು ಅಧಿಕಾರದಲ್ಲಿರುವವರು ಗೋಯೆಲ್ ಅವರಿಗೆ ರಾಜೀನಾಮೆಯನ್ನು ನೀಡುವಂತೆ ಒತ್ತಾಯಿಸಿದ್ದಾರೆಯೇ? ಎಂದು ಶರ್ಮಾ ಅವರು ಪ್ರಶ್ನೆಯನ್ನು ಎತ್ತಿದ್ದಾರೆ.

ಲೋಕಸಭೆ ಚುನಾವಣೆಯ ಘೋಷಣೆಗೆ ಕೆಲವೇ ದಿನಗಳ ಮೊದಲು ಅರುಣ್ ಗೋಯೆಲ್ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಇದು ಜನರಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು. ಗೋಯಲ್‌ ರಾಜೀನಾಮೆ ಹಿನ್ನೆಲೆ ಚುನಾವಣಾ ಆಯೋಗದಲ್ಲಿ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕರು ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದರು.

ಈ ಮೊದಲು ಶರ್ಮಾ ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮತ್ತು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಬೋರ್ಡ್‌ಗಳಲ್ಲಿ ಬಿಜೆಪಿಯ ಪ್ರತಿನಿಧಿಗಳ ಆಯ್ಕೆಯನ್ನು ಪ್ರಶ್ನಿಸಿದ್ದರು. BEL ಮತ್ತು ECIL ಇವಿಎಂ ತಯಾರಿಯನ್ನು ಮಾಡುತ್ತದೆ. ಇಂತಹ ಸಂಸ್ಥೆಗಳಿಗೆ ಬಿಜೆಪಿ ತನ್ನ ನಾಯಕರನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸುವುದು ಅದರ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದ್ದರು.

ಇವಿಎಂಗಳ ದೋಷಗಳ ಬಗ್ಗೆ ಅನೇಕರು ವ್ಯಕ್ತಪಡಿಸಿದ ಕಳವಳಗಳನ್ನು ಇಸಿಐ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದೆ ಎಂದು ಹೇಳಿದ ಶರ್ಮಾ ಚುನಾವಣಾ ಬಾಂಡ್‌ ವಿಚಾರದಲ್ಲಿ ಕೂಡ ರಾಷ್ಟ್ರಪತಿಗಳ ಗಮನವನ್ನು ಸೆಳೆದಿದ್ದಾರೆ. ಎಸ್‌ಬಿಐ ಮಂಡಳಿಯಲ್ಲಿ ಬಿಜೆಪಿ ಪ್ರತಿನಿಧಿಗಳು ಇದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು ಒಂದು ಮಹತ್ವದ ತೀರ್ಪಿನಲ್ಲಿ, ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ ಮತ್ತು ದಾನಿಗಳು ಮತ್ತು ಪಕ್ಷದ ನಿಧಿಯ ಮೂಲಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಎಸ್‌ಬಿಐಗೆ ನಿರ್ದೇಶನ ನೀಡಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ವಿವರಗಳನ್ನು ಒದಗಿಸಲು ಜುಲೈ 30ರವರೆಗೆ ವಿಸ್ತರಣೆಯನ್ನು ಕೋರಿದೆ. ಮೂಲಭೂತವಾಗಿ, ಲೋಕಸಭೆ ಚುನಾವಣೆಯ ನಂತರವೇ ಆದೇಶಗಳನ್ನು ಅನುಸರಿಸಲು ಎಸ್‌ಬಿಐ ಒಪ್ಪಿಕೊಂಡಿದೆ. ಅಧಿಕಾರ ಶಾಹಿಗಳು ಎಸ್‌ಬಿಐಗೆ ಜೂನ್ ಅಂತ್ಯದವರೆಗೆ ಚುನಾವಣಾ ಬಾಂಡ್‌ ಬಿಡುಗಡೆಯಲ್ಲಿ ವಿಳಂಬ ಮಾಡುವಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಇಸಿಐ ಮೇಲೆ ಬಿಜೆಪಿ ಸಂಪೂರ್ಣ ಹಿಡಿತ ಸಾಧಿಸಲು ಮತ್ತು ಚುನಾವಣೆಗಳನ್ನು ದುರ್ಬಲಗೊಳಿಸುವ ಕುರಿತು ಕಳವಳಗಳನ್ನು ಶರ್ಮಾ ಎತ್ತಿ ತೋರಿಸಿದ್ದಾರೆ. ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಅಭ್ಯರ್ಥಿಗಳ ಆಯ್ಕೆಯಲ್ಲಿನ ಅಪಾರದರ್ಶಕತೆಯೂ ಇದರಲ್ಲಿ ಸೇರಿದೆ. ಚುನಾವಣಾ ಆಯುಕ್ತರ ನೇಮಕಾತಿಗೆ ಅಸ್ತಿತ್ವದಲ್ಲಿರುವ ಕಾರ್ಯವಿಧಾನವು ಪಾರದರ್ಶಕ ಮತ್ತು ವಸ್ತುನಿಷ್ಠವಾಗಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟವಾಗಿ ಹೇಳಿದೆ ಎಂದು ಮಾಜಿ ಐಎಎಸ್ ಅಧಿಕಾರಿ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Previous Post

ಹೆಗಡೆಯ ಸಂವಿಧಾನ ಬದಲಾಯಿಸುವ ಅಭಿಪ್ರಾಯ ಮೋದಿ ಒಪ್ಪದಿದ್ರೆ ಪಕ್ಷದಿಂದ ಕಿತ್ತುಹಾಕಬೇಕು- ಸಿದ್ದರಾಮಯ್ಯ ಸವಾಲ್

Next Post

ಶರಣ್ ಪಂಪ್ವೆಲ್ ಎಂಬ ಗೂಂಡಾ, ಕೊಲೆಗಡುಕನನ್ನು ನಿಷ್ಠಾವಂತ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಿದರೆ ಕೆಫೆ ಬಾಂಬರ್ ಮೂಲ ಪತ್ತೆ ಸಾಧ್ಯ: ಎಸ್‌ಡಿಪಿಐ

Next Post
SDPI: ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಣಕ್ಕಿಳಿಯಲಿದೆ ಎಸ್‌ಡಿಪಿಐ

ಶರಣ್ ಪಂಪ್ವೆಲ್ ಎಂಬ ಗೂಂಡಾ, ಕೊಲೆಗಡುಕನನ್ನು ನಿಷ್ಠಾವಂತ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಿದರೆ ಕೆಫೆ ಬಾಂಬರ್ ಮೂಲ ಪತ್ತೆ ಸಾಧ್ಯ: ಎಸ್‌ಡಿಪಿಐ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.