
2020 ರ ಏಪ್ರಿಲ್.19 ರಂದು ಪಾದರಾಯನಪುರದಲ್ಲಿ ಕೋವಿಡ್ 19 ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ್ದ ಹಿನ್ನಲೆ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ (High Court) ರದ್ದುಪಡಿಸಿ ಆದೇಶಿ ಹೊರಡಿಸಿದೆ.

ಬೆಂಗಳೂರು, ಮಾ.19: ಪಾದರಾಯನಪುರ(Padarayanapura)ದಲ್ಲಿ ಕೊರೊನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಬಿಬಿಎಂಪಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ (High Court) ರದ್ದುಪಡಿಸಿ ಆದೇಶಿ ಹೊರಡಿಸಿದೆ.

2020 ರ ಏಪ್ರಿಲ್.19 ರಂದು ಕೋವಿಡ್ 19 ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ ಆರೋಪವಿತ್ತು. ನವಾಜ್ ಪಾಷಾ ಸೇರಿ 375 ಆರೋಪಿಗಳ ವಿರುದ್ಧ ಡಿಸಾಸ್ಟರ್ ಮ್ಯಾನೇಜ್ ಮೆಂಡ್ ಕಾಯ್ದೆ, ಐಪಿಸಿ ಸೆಕ್ಷನ್ 188 ಅಡಿ ಪ್ರಕರಣ ದಾಖಲಾಗಿತ್ತು. ಸಕ್ಷಮ ಪ್ರಾಧಿಕಾರಿ ಖಾಸಗಿ ದೂರು ದಾಖಲಿಸದ ಹಿನ್ನೆಲೆ ನ್ಯಾಯಮೂರ್ತಿ.ಕೆ.ನಟರಾಜನ್ ತಾಂತ್ರಿಕ ಕಾರಣಗಳಿಂದ ಕೇಸ್ ರದ್ದುಪಡಿಸಿ ಆದೇಶಿಸಿದ್ದಾರೆ.
