
ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು SSLC ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತುಂಗಾ ನದಿಯ ರಾಮ ಮಂಟಪದ ಬಳಿ ನಡೆದಿದೆ. ಮೃತ ಬಾಲಕರ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.

ಶಿವಮೊಗ್ಗ, ಏ.1: ರಂಜಾನ್ ಉಪವಾಸ (Ramadan fasting) ಮುಗಿಸಿ ಈಜಲು ಹೋಗಿದ್ದ ಮೂವರು SSLC ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Thirthahalli) ತುಂಗಾ ನದಿಯ (Tunga River) ರಾಮ ಮಂಟಪದ ಬಳಿ ನಡೆದಿದೆ. ರಫನ್, ಇಯಾನ್ ಮತ್ತು ಅರ್ಫದ್ ಮೃತ ಬಾಲಕರಾಗಿದ್ದಾರೆ.

ರಂಜಾನ್ ಉಪವಾಸ ಮುಗಿಸಿದ ನಂತರ ತುಂಗಾ ನದಿಯಲ್ಲಿ ಈಡಾಜಲೆಂದು ರಫನ್, ಇಯಾನ್ ಮತ್ತು ಅರ್ಫದ್ ಮಂಟಪದ ಬಳಿ ಹೋಗಿದ್ದಾರೆ. ಅದರಂತೆ ಈಜಲು ನೀರಿಗೆ ಇಳಿದಾಗ ಮೂವರು ಕೂಡ ನೀರುಪಾಲಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು, ಮೂವರು ಬಾಲಕರ ಮೃತದೇಹವನ್ನು ಹೊರತೆಗೆದಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ತೀರದಲ್ಲಿ ಜನರು ಜಮಾವಣೆಗೊಂಡಿದ್ದಾರೆ. ಸದ್ಯ, ವಂಶದ ಕುಡಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರೋಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೂಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

