
ಬಾಗಲಕೋಟೆ(Bagalkote) ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ : ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ, ಏ.14: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಧಾರುಣ ಘಟನೆ ಬಾಗಲಕೋಟೆ(Bagalkote) ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ನಡೆದಿದೆ. ಬಾದದಿನ್ನಿ ಗ್ರಾಮದ ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ ಹಾಗೂ ಗಂಡ ಅಶೋಕ ಬಮ್ಮಣ್ಣವರ ಮೃತರು. ಇವರು ಹೊಲದ ಕೆಲಸ ಮುಗಿಸಿ ರಸ್ತೆಪಕ್ಕ ನಿಂತಿದ್ದರು. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ವಾಹನ ಒಂದೇ ಕುಟುಂಬದ ಐವರ ಮೇಲೆ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

