Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಶರಣ್ ಪಂಪ್’ವೆಲ್ ಬೆದರಿಕೆಗೆ ಸವಾಲು: SDPI ನಾಯಕ ರಿಯಾಝ್ ಕಡಂಬುಗೆ ಪೊಲೀಸರ ನೋಟಿಸ್

editor tv by editor tv
May 30, 2024
in ಕರಾವಳಿ
0
ಶರಣ್ ಪಂಪ್’ವೆಲ್ ಬೆದರಿಕೆಗೆ ಸವಾಲು: SDPI ನಾಯಕ ರಿಯಾಝ್ ಕಡಂಬುಗೆ ಪೊಲೀಸರ ನೋಟಿಸ್
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯ ನಮಾಝ್ ವಿಚಾರಕ್ಕೆ ಸಂಬಂಧಿಸಿ ವಿಎಚ್ ಪಿ ಮುಖಂಡ ಶರಣ್ ಪಂಪ್’ವೆಲ್ ಹೇಳಿಕೆಗೆ ಸಂಬಂಧಿಸಿ ಪ್ರತಿ ಹೇಳಿಕೆ ನೀಡಿದ್ದ SDPI ರಾಜ್ಯ ಮುಖಂಡ ರಿಯಾಝ್ ಕಡಂಬುಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಿಂದ ಕಲಂ 107 ಅಡಿ ನೋಟಿಸ್ ಜಾರಿಯಾಗಿದೆ. ಕಾನೂನು ಸುವ್ಯವಸ್ಥೆ ಡಿಸಿಪಿ ಬಿ.ಪಿ ದಿನೇಶ್ ಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದು ಮೇ 30ರಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದರು.

ಕಲಂ 107 ನೋಟಿಸ್’ನಲ್ಲೇನಿದೆ?
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ನಗರದ ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್ ಮಾಡಿದ ವಿಚಾರವಾಗಿ “ಬಜರಂಗದಳದವರು ತಡೆಯಲು ಬಂದರೆ ನಾವೇನು ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ” ಎಂದು ಪತ್ರಿಕಾಗೋಷ್ಟಿಯಲ್ಲಿ ಹೇಳಿಕೆಯನ್ನು ನೀಡಿರುತ್ತೀರಿ. ನೀವು ನೀಡಿರುವ ಈ ಹೇಳಿಕೆಯಿಂದಾಗಿ ಸಮಾಜದಲ್ಲಿ ಅಶಾಂತಿ ಹಾಗೂ ಕೋಮು ಗಲಭೆ ಸೃಷ್ಟಿಯಾಗಿ ಸಾರ್ವಜನಿಕ ಶಾಂತಿಭಂಗ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುವ ಸಾದ್ಯತೆ ಇರುವುದಾಗಿ ಗುಪ್ತ ಮಾಹಿತಿ ಇರುತ್ತದೆ.

ನಿಮ್ಮ ಈ ವರ್ತನೆಯು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವಂತೆ ಕಂಡು ಬರುತ್ತಿದ್ದು, ಆದ್ದರಿಂದ ನೀವು ಮುಂಬರುವ ದಿನಗಳಲ್ಲಿ ಸಾರ್ವಜನಿಕ ನೆಮ್ಮದಿಗೆ ತೊಂದರೆಯನ್ನುಂಟು ಮಾಡುವುದರಲ್ಲಿ ಪರಿಣಮಿಸಬಹುದಾದ ಯಾವುದೇ ಸಂಜ್ಞೆಯ ಅಪರಾಧಗಳಲ್ಲಿ ಭಾಗಿಯಾಗದೆ ಇರುವ ಬಗ್ಗೆ ನಿಮ್ಮ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತ ಹಾಗೂ ಪರಿಸರದಲ್ಲಿ ಶಾಂತಿಪಾಲನೆ ಮಾಡಿಕೊಂಡು ಇರಲು ಷರತ್ತುಬದ್ಧ ಮುಚ್ಚಳಿಕೆ ಪಡೆದುಕೊಳ್ಳುವಂತೆ ದಂಡಸಂಹಿತೆ ಪ್ರಕ್ರಿಯೆಯ ಕಾಲಂ 117 ಅಡಿ ಆದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿರುತ್ತಾರೆ.
ಆದುದರಿಂದ ಈ ಅರ್ಜಿಯನ್ನು ಪುರಸ್ಕರಿಸಿ ನೀವು ಮುಂದಿನ ದಿನಗಳಲ್ಲಿ ಠಾಣಾ ವ್ಯಾಪ್ತಿಯಲ್ಲಿ ಹಾಗೂ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಕೃತ್ಯದಲ್ಲಿ ಭಾಗಿಯಗದೇ, ಸಾರ್ವಜನಿಕ ಶಾಂತಿ ಸೌಹಾರ್ಧತೆಗೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಿಲ್ಲವೆಂದು ಒಪ್ಪಿಕೊಂಡು ಒಂದು ವರ್ಷದ ಅವಧಿಯವರೆಗೆ ರೂ. 50,000/- ಮೊತ್ತದ ವೈಯಕ್ತಿಕ ಮುಚ್ಚಳಿಕೆ ಹಾಗೂ ಅಷ್ಟೇ ಅವಧಿ ಹಾಗೂ ಅಷ್ಟೇ ಮೊತ್ತಕ್ಕೆ ಒಬ್ಬರಿಂದ ಜಾಮೀನು ಮುಚ್ಚಳಿಕೆ ನೀಡಲು ದಂಡ ಪ್ರಕ್ರಿಯಾ ಸಂಹಿತೆಯ ಕಲಂ: 117 ರಡಿ ಆದೇಶಿಸಲು ನಿರ್ಧರಿಸಿರುತ್ತೇನೆ.
ಅರ್ಜಿದಾರರು ನಿಮ್ಮ ಮೇಲೆ ಮಾಡಿರುವ ಆಪಾದನೆಗಳ ಆಧಾರದ ಮೇಲೆ ನಿಮ್ಮ ವಿರುದ್ಧ ವಿಚಾರಣೆ ಕೈಗೊಂಡು ನಿಮ್ಮಿಂದ ಒಂದು ವರ್ಷದ ಅವಧಿಯವರೆಗೆ ರೂ.50,000/- (ರೂಪಾಯಿ ಐವತ್ತು ಸಾವಿರ) ಮೊತ್ತದ ವೈಯಕ್ತಿಕ ಮುಚ್ಚಳಿಕೆ ಹಾಗೂ ಅಷ್ಟೇ ಅವಧಿ ಹಾಗೂ ಅಷ್ಟೇ ಮೊತ್ತಕ್ಕೆ ಒಬ್ಬರು ಗಣ್ಯ ವ್ಯಕ್ತಿಯಿಂದ ಜಾಮೀನು ಮುಚ್ಚಳಿಕೆಯನ್ನು ಯಾಕೆ ಪಡೆದುಕೊಳ್ಳಬಾರದು ? ಎಂದು ಕಾರಣ ಕೇಳಿ ಸೂಚನಾ ಪತ್ರವನ್ನು ಹೊರಡಿಸಿರುತ್ತೇನೆ.

ನಿಮ್ಮ ಮೇಲೆ ಅರ್ಜಿದಾರರು ಆಪಾದಿಸಿರುವ ಮೇಲ್ಕಂಡ ಆರೋಪಗಳಿಗೆ ಸಂಬಂಧಿಸಿ ಹೊರಡಿಸಿರುವ ಈ ಕಾರಣ ಕೇಳುವ ಸೂಚನಾ ಪತ್ರಕ್ಕೆ ನೀವು ಈ ನ್ಯಾಯಾಲಯಕ್ಕೆ ಹಾಜರಾಗಿ ಖುದ್ದಾಗಿ ಅಥವಾ ವಕೀಲರ ಮೂಲಕ ಮೌಖಿಕ ಅಥವಾ ಲಿಖಿತ ವಿವರಣೆಯನ್ನು ಸಲ್ಲಿಸುವುದು.
ದಂಡ ಪ್ರಕ್ರಿಯಾ ಸಂಹಿತೆ ಕಲಂ: 107 ರ ಪ್ರಕರಣದಲ್ಲಿ ದಂಡ ಪ್ರಕ್ರಿಯಾ ಸಂಹಿತೆ ಕಲಂ: 111 ಯಂತೆ ಹೊರಡಿಸಲಾದ ಕಾರಣ ಕೇಳುವ ಸೂಚನಾ ಪತ್ರಕ್ಕೆ ಉತ್ತರಿಸಲು ನೀವು ಖುದ್ದಾಗಿ ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿ ಮತ್ತು ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ), ಮಂಗಳೂರು ನಗರ ರವರ ಮುಂದೆ ದಿನಾಂಕ: 30-05-2024 ರಂದು ಪೂರ್ವಾಹ್ನ 11-00 ಗಂಟೆಗೆ ತಪ್ಪದೇ ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ..

Previous Post

ಮಂಗಳೂರು :ಎಂ.ಐ. ಒ ಆಸ್ಪತ್ರೆಯಲ್ಲಿ ಕೊಲೊಸ್ಟಮಿ ಹಾಗೂ ಇಲಿಯೋಸ್ಟಮಿ ಕೇರ್ ಕ್ಲಿನಿಕ್ ಪ್ರಾರಂಭ

Next Post

ಪ್ರಜ್ವಲ್​ ರೇವಣ್ಣರನ್ನ SIT ಕಚೇರಿಗೆ ಕರೆತಂದ ಜೀಪ್​ನಲ್ಲಿದ್ದವರೆಲ್ಲ ಮಹಿಳಾ ಸಿಬ್ಬಂದಿ

Next Post
ಪ್ರಜ್ವಲ್​ ರೇವಣ್ಣರನ್ನ SIT ಕಚೇರಿಗೆ ಕರೆತಂದ ಜೀಪ್​ನಲ್ಲಿದ್ದವರೆಲ್ಲ ಮಹಿಳಾ ಸಿಬ್ಬಂದಿ

ಪ್ರಜ್ವಲ್​ ರೇವಣ್ಣರನ್ನ SIT ಕಚೇರಿಗೆ ಕರೆತಂದ ಜೀಪ್​ನಲ್ಲಿದ್ದವರೆಲ್ಲ ಮಹಿಳಾ ಸಿಬ್ಬಂದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.