Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

6 ಬಾರಿ ExitPoll ಲೆಕ್ಕಾಚಾರ ತಲೆಕೆಳಗಾಗಿತ್ತು.. ಲೋಕಸಭಾ ಚುನಾವಣೆಯ ಭವಿಷ್ಯ ನಿಜವಾಗುತ್ತಾ?

editor tv by editor tv
June 1, 2024
in ಚುನಾವಣೆ
0
6 ಬಾರಿ ExitPoll ಲೆಕ್ಕಾಚಾರ ತಲೆಕೆಳಗಾಗಿತ್ತು.. ಲೋಕಸಭಾ ಚುನಾವಣೆಯ ಭವಿಷ್ಯ ನಿಜವಾಗುತ್ತಾ?
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಕಳೆದ 2 ತಿಂಗಳಿಂದ ಇಡೀ ದೇಶಾದ್ಯಂತ ನಡೆಯುತ್ತಿದ್ದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ಬಂದಿದೆ. ಇಂದು ಅತಿ ದೊಡ್ಡ ಚುನಾವಣಾ ಹಬ್ಬದ 7ನೇ ಹಂತದ ಮತದಾನ ಮುಕ್ತಾಯವಾಗುತ್ತಿದೆ. ಜೂನ್ 04ರಂದು 18ನೇ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ.

ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ಮತದಾನೋತ್ತರ ಸಮೀಕ್ಷೆಗಳ ಲೆಕ್ಕಾಚಾರಗಳು ನಡೆಯುತ್ತಿದ್ದು, ಇಂದು ರಾತ್ರಿ ಬಹು ನಿರೀಕ್ಷಿತ ಎಕ್ಸಿಟ್ ಪೋಲ್ ಭವಿಷ್ಯ ಹೊರಬೀಳುತ್ತಿದೆ. ಇಂದು ಸಂಜೆ 6 ಗಂಟೆಗೆ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಲಿದೆ. ಇದಾದ ಬಳಿಕ ಅಂದ್ರೆ 6.30ರಿಂದ ಚುನಾವಣಾ ಪೂರ್ವ ಫಲಿತಾಂಶ ಹೊರ ಬೀಳುತ್ತಿದೆ

ಸದ್ಯ ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯ ರಿಸಲ್ಟ್ ಇಡೀ ದೇಶದ ಗಮನ ಸೆಳೆದಿದೆ. ಎಲ್ಲರೂ ಕುತೂಹಲದಿಂದ ಕಾಯುತ್ತಿರುವಾಗ ಎಕ್ಸಿಟ್ ಪೋಲ್ ಎಷ್ಟು ಸರಿ ಅನ್ನೋದರ ಬಗ್ಗೆಯೂ ಚರ್ಚೆಯಾಗುತ್ತಿದೆ. ಇಂದಿನ ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿ ನಾಯಕರು ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಎಕ್ಸಿಟ್ ಪೋಲ್‌ ಪಕ್ಕಾ ರಿಸಲ್ಟ್ ಅಲ್ಲ. ಹೀಗಾಗಿ ಎಕ್ಸಿಟ್ ಪೋಲ್ ಚರ್ಚೆಯಿಂದ ದೂರ ಉಳಿಯಲು ನಿರ್ಧಾರ ಮಾಡಿದೆ.

ExitPoll ಲೆಕ್ಕಾಚಾರ Exact ಅಲ್ಲ!!??
ಎಕ್ಸಿಟ್ ಪೋಲ್‌.. ಎಕ್ಸಿಟ್ ಪೋಲ್‌ ಅನ್ನೋ ನಿರೀಕ್ಷೆಯ ಮಧ್ಯೆ ಚುನಾವಣೆಯ ಭವಿಷ್ಯ ನಿಜವಾಗುತ್ತಾ ಎನ್ನುವ ಪ್ರಶ್ನೆಯು ಕೇಳಿ ಬಂದಿದೆ. ಎಕ್ಸಿಟ್ ಪೋಲ್‌ನ ಇತಿಹಾಸವನ್ನು ನೋಡಿದ್ರೆ 6 ಬಾರಿ ಎಕ್ಸಿಟ್ ಪೋಲ್‌ನ ಫಲಿತಾಂಶಗಳು ಉಲ್ಟಾ ಆಗಿವೆ. ಎಕ್ಸಿಟ್‌ ಪೋಲ್‌ ಭವಿಷ್ಯ ತಲೆಕೆಳಗಾದ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಅಟಲ್ ಸರ್ಕಾರದ ಭವಿಷ್ಯ! 
2004ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ NDA ನಾಯಕರು ಲೋಕಸಭಾ ಚುನಾವಣೆಯನ್ನು ಎದುರಿಸಿದ್ದರು. ಆಗ ಇಂಡಿಯಾ ಶೈನಿಂಗ್ ಅನ್ನೋ ಸ್ಲೋಗನ್‌ನಲ್ಲಿ ಚುನಾವಣೆ ಎದುರಿಸಿದ NDAಗೆ ಎಕ್ಸಿಟ್‌ ಪೋಲ್‌ನಲ್ಲಿ 240-275 ಕ್ಷೇತ್ರವನ್ನು ಗೆಲ್ಲಬಹುದು ಎಂದು ಹೇಳಲಾಗಿತ್ತು. ಆದರೆ ಚುನಾವಣಾ ಫಲಿತಾಂಶದಲ್ಲಿ NDA ಕೇವಲ 187 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಕಾಂಗ್ರೆಸ್ ನೇತೃತ್ವದ UPA ಮಿತ್ರಕೂಟ ಅಧಿಕಾರಕ್ಕೆ ಬಂದು ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ಆದರು.

2014ರ ಚುನಾವಣಾ ಲೆಕ್ಕಾಚಾರ 
2014ರಲ್ಲೂ ಹಲವು ಮತದಾನೋತ್ತರ ಚುನಾವಣಾ ಭವಿಷ್ಯದ ಲೆಕ್ಕಾಚಾರ ತಪ್ಪಾಗಿತ್ತು. ಲೋಕಸಭಾ ಚುನಾವಣೆ ಮುಗಿದ ಮೇಲೆ ಬಿಜೆಪಿ ನೇತೃತ್ವದ NDA ಅಧಿಕಾರಕ್ಕೆ ಬರುತ್ತೆ. ಆದರೆ ಹಲವು ಎಕ್ಸಿಟ್ ಪೋಲ್‌ಗಳಲ್ಲಿ NDA 261ರಿಂದ 289 ಸ್ಥಾನಗಳನ್ನು ಗೆಲ್ಲಲಿದೆ ಎಂದಿತ್ತು. ಆದರೆ ಮತದಾರರ ತೀರ್ಪು ಹೊರ ಬಂದಾಗ NDA 336 ಕ್ಷೇತ್ರಗಳಲ್ಲಿ ಗೆದ್ದು, ಬಿಜೆಪಿ ಪಕ್ಷವೇ ಬಹುಮತದ ದಾಖಲೆ ಬರೆದಿತ್ತು. ಪ್ರತಿಪಕ್ಷ ಕಾಂಗ್ರೆಸ್ ಕೇವಲ 44 ಕ್ಷೇತ್ರಗಳಿಗೆ ಕುಸಿದಿತ್ತು.

ಉತ್ತರ ಪ್ರದೇಶ ಚುನಾವಣೆ
2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್ ಭವಿಷ್ಯ ಅತಂತ್ರ ರಿಸಲ್ಟ್ ಬರಲಿದೆ ಎನ್ನಲಾಗಿತ್ತು. ಆದರೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 325 ಕ್ಷೇತ್ರಗಳಲ್ಲಿ ಗೆದ್ದು ದಿಗ್ವಿಜಯ ದಾಖಲಿಸಿತ್ತು.

ಬಿಹಾರ ಚುನಾವಣೆ
2015ರಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಆಗಿದೆ. ಮತದಾನೋತ್ತರ ಸಮೀಕ್ಷೆಯಲ್ಲಿ ಈ ಬಾರಿ ಬಿಹಾರದಲ್ಲಿ ಯಾರಿಗೂ ಬಹುಮತ ಬರೋದಿಲ್ಲ ಎನ್ನಲಾಗಿತ್ತು. ಆದರೆ ಫಲಿತಾಂಶದಲ್ಲಿ RJD-JDU-ಕಾಂಗ್ರೆಸ್ ಮಿತ್ರಕೂಟ ಸುಲಭವಾಗಿ ಬಹುಮತ ಸಾಧಿಸಿತ್ತು. RJD ಅತಿಹೆಚ್ಚು ಕ್ಷೇತ್ರಗಳನ್ನು ಗೆದ್ದ ಮೊದಲ ಪಕ್ಷವಾಗಿ ಹೊರ ಹೊಮ್ಮಿತ್ತು.

ದೆಹಲಿಯ ಫಲಿತಾಂಶ
2015ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್‌ ಲೆಕ್ಕಾಚಾರದಲ್ಲಿ ಎಎಪಿ ಪಕ್ಷಕ್ಕೆ ಬಹುಮತ ಸಿಗಲಿದೆ ಎನ್ನಲಾಗಿತ್ತು. 70 ವಿಧಾನಸಭಾ ಕ್ಷೇತ್ರದಲ್ಲಿ 50ಕ್ಕೂ ಹೆಚ್ಚಿನ ಆಮ್ ಆದ್ಮಿ ಪಕ್ಷ 50ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಬಹುದು ಎಂದಿತ್ತು. ಆದರೆ ಚುನಾವಣಾ ಫಲಿತಾಂಶದಲ್ಲಿ 70 ರಲ್ಲಿ AAP 67 ಕ್ಷೇತ್ರಗಳಲ್ಲಿ ಗೆದ್ದು ಎಲ್ಲರಿಗೂ ಶಾಕ್ ಕೊಟ್ಟಿತ್ತು. ಆಪ್ ಪಕ್ಷದ ಈ ವಿಕ್ಟರಿಯನ್ನ ಯಾವ ಮತದಾನೋತ್ತರ ಸಮೀಕ್ಷೆಯೂ ನಿರೀಕ್ಷೆ ಮಾಡಿರಲಿಲ್ಲ.

ಛತ್ತೀಸ್‌ಗಢ ಚುನಾವಣೆ
2023ರ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲೂ ಎಕ್ಸಿಟ್ ಪೋಲ್‌ ಭವಿಷ್ಯ ನಿರಾಸೆ ತಂದಿತ್ತು. ಮತದಾನೋತ್ತರ ಸಮೀಕ್ಷೆಯಲ್ಲಿ ಛತ್ತೀಸ್‌ಗಢವನ್ನು ಕಾಂಗ್ರೆಸ್ ಗೆಲ್ಲಬಹುದು ಎನ್ನಲಾಗಿತ್ತು. ಆದರೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಗೆದ್ದು ಬೀಗಿತು

Previous Post

ಸುಮಲತಾಗೆ ಪರಿಷತ್‌ ಭಾಗ್ಯ? ರವಿಕುಮಾರ್‌ಗೆ ಮತ್ತೆ ಅವಕಾಶ, ಸಿ.ಟಿ.ರವಿಗೆ ಶಾಕ್‌?

Next Post

ಗಡಿನಾಡು ವಿಜಯಪುರ ಜಿಲ್ಲೆಯಲ್ಲಿ ಮಾದಕ ನಶೆ; ಅಕ್ರಮದಲ್ಲಿ ವಿದ್ಯಾರ್ಥಿ ಸೇರಿ ಸಹಾಯಕ ಪ್ರಾಧ್ಯಾಪಕರೂ ಭಾಗಿ

Next Post
ಗಡಿನಾಡು ವಿಜಯಪುರ ಜಿಲ್ಲೆಯಲ್ಲಿ ಮಾದಕ ನಶೆ; ಅಕ್ರಮದಲ್ಲಿ ವಿದ್ಯಾರ್ಥಿ ಸೇರಿ ಸಹಾಯಕ ಪ್ರಾಧ್ಯಾಪಕರೂ ಭಾಗಿ

ಗಡಿನಾಡು ವಿಜಯಪುರ ಜಿಲ್ಲೆಯಲ್ಲಿ ಮಾದಕ ನಶೆ; ಅಕ್ರಮದಲ್ಲಿ ವಿದ್ಯಾರ್ಥಿ ಸೇರಿ ಸಹಾಯಕ ಪ್ರಾಧ್ಯಾಪಕರೂ ಭಾಗಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.