Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಭಾರತದ ಮಹಾ ತೀರ್ಪಿಗೆ ಕ್ಷಣಗಣನೆ- ಮಹಾಫಲಿತಾಂಶಕ್ಕೆ ಕಾಯುತ್ತಿದೆ ಜಗತ್ತು 

editor tv by editor tv
June 4, 2024
in ರಾಷ್ಟ್ರೀಯ
0
ಭಾರತದ ಮಹಾ ತೀರ್ಪಿಗೆ ಕ್ಷಣಗಣನೆ- ಮಹಾಫಲಿತಾಂಶಕ್ಕೆ ಕಾಯುತ್ತಿದೆ ಜಗತ್ತು 
1.9k
VIEWS
Share on FacebookShare on TwitterShare on Whatsapp

ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ (Loksabha Election Result 2024) ಇದೀಗ ಕ್ಷಣಗಣನೆ ಆರಂಭವಾಗಿದೆ. 7 ಹಂತಗಳಲ್ಲಿ ನಡೆದ ಚುನಾವಣಾ ಹಬ್ಬದ ಮಹಾ ಫಲಿತಾಂಶಕ್ಕಾಗಿ ಇಡೀ ಜಗತ್ತೇ ತುದಿಗಾಲಲ್ಲಿ ನಿಂತಿದೆ.

ಮತ ಎಣಿಕೆಗೆ ಅಂತಿಮ ಹಂತದ ಸಿದ್ದತೆಗಳು ಎಲ್ಲಾ ಕಡೆ ಮುಗಿದಿವೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮೊದಲಿಗೆ ಅಂಚೆ ಮತಗಳು ಮತ್ತು ಹಿರಿಯ ಮತದಾರರ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಅರ್ಧ ಗಂಟೆ ನಂತರ ಇವಿಎಂ ಮತಗಳ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನದ ಹೊತ್ತಿಗೆ ನಿಖರ ಟ್ರೆಂಡ್ ಗೊತ್ತಾಗುವ ನಿರೀಕ್ಷೆ ಇದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಮತ ಎಣಿಕೆ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ, ಬೆಂಗಳೂರು ಉತ್ತರ ಕ್ಷೇತ್ರದ ಮತ ಎಣಿಕೆ ಸೆಂಟ್ ಜೋಸೆಫ್ ಕಾಲೇಜಿಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಮತ ಎಣಿಕೆ ಜಯನಗರದ ಎಸ್‍ಎಸ್‍ಎಂಆರ್‍ವಿ ಕಾಲೇಜಿನಲ್ಲಿ ನಡೆಯಲಿದೆ.

ಬೆಂಗಳೂರು ಗ್ರಾಮಾಂತರದ ಮತ ಎಣಿಕೆ ರಾಮನಗರದಲ್ಲಿ, ಬೆಳಗಾವಿ ಮತ ಎಣಿಕೆ ಬೆಳಗಾವಿಯಲ್ಲಿ, ಚಿಕ್ಕೋಡಿ ಮತ ಎಣಿಕೆ ಚಿಕ್ಕೋಡಿಯಲ್ಲಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮತ ಎಣಿಕೆ ಉಡುಪಿಯಲ್ಲಿ, ಮೈಸೂರು-ಮಡಿಕೇರಿ ಕ್ಷೇತ್ರದ ಮತ ಎಣಿಕೆ ಮೈಸೂರಿನಲ್ಲಿ ಇನ್ನುಳಿದಂತೆ ಆಯಾ ಕ್ಷೇತ್ರಗಳ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟ ಆಗಲಿದೆ.

ಮತ ಹಬ್ಬದ ವಿಶೇಷ: 96.88 ಕೋಟಿ ಮತದಾರರ ಪೈಕಿ 64.2 ಕೋಟಿ ಮಂದಿ ಮತದಾನ ಮಾಡಿದ್ದಾರೆ. 31.2 ಕೋಟಿ ಮಹಿಳಾ ಮತದಾರರು ಮತದಾನ ಮಾಡಿದ್ದಾರೆ. 10.5 ಲಕ್ಷ ಮತಗಟ್ಟೆಗಳಲ್ಲಿ 1.5 ಕೋಟಿ ಮತಗಟ್ಟೆ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. 135 ಪ್ರತ್ಯೇಕ ರೈಲು ಸೇರಿ 4 ಲಕ್ಷ ವಾಹನಗಳ ಬಳಕೆ ಮಾಡಲಾಗಿದೆ. 27 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಮರುಮತದಾನ ನಡೆದಿಲ್ಲ. ಈ ಬಾರಿ ಕೇವಲ 39 ಕಡೆ ಮಾತ್ರ ಮರುಮತದಾನ ನಡೆದಿದೆ.

2019ರಲ್ಲಿ 540 ಮತಗಟ್ಟೆಗಳಲ್ಲಿ ಮರುಮತದಾನ ನಡೆದಿತ್ತು. ಕಳೆದ ನಾಲ್ಕು ದಶಕಕ್ಕೆ ಹೋಲಿಸಿದ್ರೆ ಜಮ್ಮು ಕಾಶ್ಮೀರದಲ್ಲಿ ಅತ್ಯಧಿಕ ಮತದಾನವಾಗಿದೆ. (ಜಮ್ಮು ಕಾಶ್ಮೀರದಲ್ಲಿ 58.58ರಷ್ಟು ಮತದಾನ.. ಕಣಿವೆಯಲ್ಲಿ 51.05ರಷ್ಟು ಮತದಾನ). ಹಿಂಸಾಚಾರಪೀಡಿತ ಮಣಿಪುರದಲ್ಲಿಯೂ 61.84%ರಷ್ಟು ಮತದಾನ ನಡೆದಿದೆ. ನಗದು ಪ್ರವಾಹಕ್ಕೆ ಆಯೋಗ ತಡೆ ನೀಡಿದ್ದು, 10 ಸಾವಿರ ಕೋಟಿ ಮೌಲ್ಯದ (4391 ಕೋಟಿ ಮೌಲ್ಯದ ಡ್ರಗ್ಸ್, 1054 ಕೊಟಿ ನಗದು.. 898 ಕೋಟಿ ಮೌಲ್ಯದ ಮದ್ಯ, 1459 ಕೋಟಿ ಮೌಲ್ಯದ ಚಿನ್ನಾಭರಣ..2198 ಕೋಟಿ ಮೌಲ್ಯದ ಗಿಫ್ಟ್) ವಸ್ತುಗಳು ಸೀಜ್ ಆಗಿದೆ.

2019ರಲ್ಲಿ 3500 ಕೋಟಿ ಮೌಲ್ಯದ ವಸ್ತುಗಳು ಸೀಜ್ ಮಾಡಲಾಗಿತ್ತು. ಸಿ-ವಿಜಿಲ್ ಆಪ್ ಮೂಲಕ 4.56 ಲಕ್ಷ ದೂರು ಸ್ವೀಕಾರ.. 99.9% ದೂರುಗಳಿಗೆ ಪರಿಹಾರ ನೀಡಲಾಗಿದೆ. ಮತದಾನ ದಿನಗಳಲ್ಲಿ ಚುನಾವಣೆ ಬಗ್ಗೆ 62 ಕೋಟಿ ಜನ ಗೂಗಲ್ ಸರ್ಚ್ ಮಾಡಿದ್ದಾರೆ.

Previous Post

ರೇವಣ್ಣ ಅರ್ಜಿ ವಿಚಾರಣೆ ಜೂನ್ 7ಕ್ಕೆ ಮುಂದೂಡಿಕೆ: ಭವಾನಿ ಹುಡುಕಾಟಕ್ಕೆ 4 ವಿಶೇಷ ತಂಡ ರಚನೆ

Next Post

ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತಿಗೆ ಆರಂಭಿಕ ಶುಭ, ಉತ್ತರಪ್ರದೇಶದಲ್ಲಿ ಇಂಡಿಯಾ-ಎನ್‌ಡಿಎ ಪ್ರಬಲ ಫೈಟ್‌

Next Post
ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತಿಗೆ ಆರಂಭಿಕ ಶುಭ, ಉತ್ತರಪ್ರದೇಶದಲ್ಲಿ ಇಂಡಿಯಾ-ಎನ್‌ಡಿಎ ಪ್ರಬಲ ಫೈಟ್‌

ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತಿಗೆ ಆರಂಭಿಕ ಶುಭ, ಉತ್ತರಪ್ರದೇಶದಲ್ಲಿ ಇಂಡಿಯಾ-ಎನ್‌ಡಿಎ ಪ್ರಬಲ ಫೈಟ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.