Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡಲು ಸೆಪ್ಟಂಬರ್ 14ರವರೆಗೆ ಗಡುವು ವಿಸ್ತರಣೆ; ಅಪ್​ಡೇಟ್ ಮಾಡುವ ಕ್ರಮ, ಬೇಕಾದ ದಾಖಲೆ ಮತ್ತಿತರ ವಿವರ ಇಲ್ಲಿದೆ

editor tv by editor tv
June 13, 2024
in ರಾಷ್ಟ್ರೀಯ
0
ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡಲು ಸೆಪ್ಟಂಬರ್ 14ರವರೆಗೆ ಗಡುವು ವಿಸ್ತರಣೆ; ಅಪ್​ಡೇಟ್ ಮಾಡುವ ಕ್ರಮ, ಬೇಕಾದ ದಾಖಲೆ ಮತ್ತಿತರ ವಿವರ ಇಲ್ಲಿದೆ
1.9k
VIEWS
Share on FacebookShare on TwitterShare on Whatsapp

Aadhaar Card Free Update: ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್ ಮಾಹಿತಿಯನ್ನು ಅಪ್​ಡೇಟ್ ಮಾಡಲು ಜೂನ್ 14ರವರೆಗೆ ಇದ್ದ ಗಡುವನ್ನು ಯುಐಡಿಎಐ ಸೆಪ್ಟಂಬರ್ 14ರವರೆಗೂ ವಿಸ್ತರಿಸಿದೆ. ಆ ಬಳಿಕವೂ ಆಧಾರ್ ಅಪ್​ಡೇಟ್ ಮಾಡಬಹುದಾದರೂ 50 ರೂ ಶುಲ್ಕ ಪಾವತಿಸಬೇಕಾಗುತ್ತದೆ. ಹೆಸರು, ವಿಳಾಸ ಇತ್ಯಾದಿಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ ಹೊಸದಾಗಿ ಅಡ್ರೆಸ್ ಪ್ರೂಫ್ ಮತ್ತು ಐಡಿ ಪ್ರೂಫ್ ದಾಖಲೆಗಳನ್ನು ಅಪ್​ಲೋಡ್ ಮಾಡಬಹುದು

ನವದೆಹಲಿ, ಜೂನ್ 13: ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್ ಕಾರ್ಡ್ ಅಪ್​ಡೇಟ್ (Aadhaar card free update) ಮಾಡುವ ಅವಕಾಶವನ್ನು ಇನ್ನಷ್ಟು ಕಾಲ ವಿಸ್ತರಿಸಲಾಗಿದೆ. ಜೂನ್ 14ರವರೆಗೂ ಇದ್ದ ಕಾಲಾವಕಾಶ ಈಗ ಸೆಪ್ಟಂಬರ್ 14ರವರೆಗೂ ಮುಂದುವರಿದಿದೆ. ಯುಐಡಿಎಐ ಇಂದು ಗುರುವಾರ ಈ ವಿಚಾರವನ್ನು ಪ್ರಕಟಿಸಿದೆ. ಆಧಾರ್ ಕಾರ್ಡ್ ಹೊಂದಿರುವವರು ಶುಲ್ಕ ಇಲ್ಲದೇ ಸೆಪ್ಟಂಬರ್ 14ರವರೆಗೂ ಆನ್​ಲೈನ್​ನಲ್ಲಿ ಮಾಹಿತಿ ಅಪ್​ಡೇಟ್ ಮಾಡಬಹುದಾಗಿದೆ. ಆಧಾರ್ ಕೇಂದ್ರಕ್ಕೆ ಹೋಗಿ ಮಾಡಿಸುವುದಾದರೆ 50 ರೂ ಶುಲ್ಕ ಪಾವತಿಸಬೇಕಾಗುತ್ತದೆ. ಸೆಪ್ಟಂಬರ್ 14ರ ಬಳಿಕವೂ ಆನ್​ಲೈನ್​ನಲ್ಲಿ ಆಧಾರ್ ಅಪ್​ಡೇಟ್ ಮಾಡಬಹುದಾದರೂ 50 ರೂ ಶುಲ್ಕ ನೀಡಬೇಕಾಗುತ್ತದೆ.

ಆನ್​ಲೈನ್​ನಲ್ಲಿ ಏನೆಲ್ಲಾ ಆಧಾರ್ ಅಪ್​ಡೇಟ್ ಮಾಡಬಹುದು?

ಯುಐಡಿಎಐನ ಆಧಾರ್ ಪೋರ್ಟಲ್​ನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತದೆ. ಬಯೋಮೆಟ್ರಿಲ್ ಲಾಕ್ ಮಾಡುವುದು, ಅನ್​ಲಾಕ್ ಮಾಡುವುದು ಇತ್ಯಾದಿಯೂ ಅದರಲ್ಲಿ ಇದೆ. ಹಾಗೆಯೇ, ಆಧಾರ್ ಕಾರ್ಡ್​ನಲ್ಲಿರುವ ಕೆಲ ಮಾಹಿತಿಯನ್ನು ಅಗತ್ಯಬಿದ್ದಲ್ಲಿ ಬದಲಿಸಬಹುದು.

ಹೆಸರು, ವಿಳಾಸ ಇವುಗಳನ್ನು ಆನ್​ಲೈನ್​ನಲ್ಲಿ ಉಚಿತವಾಗಿ ಮಾಡಬಹುದು. ಜನ್ಮದಿನಾಂಕ ಮೊದಲಾದವುಗಳನ್ನು ಅಪ್​ಡೇಟ್ ಮಾಡಲು ಆಧಾರ್ ಸೆಂಟರ್​ಗೆ ಹೋಗಬೇಕಾಗುತ್ತದೆ.

ಹತ್ತು ವರ್ಷಗಳಿಂದ ಒಮ್ಮೆಯೂ ಅಪ್​ಡೇಟ್ ಆಗದ ಆಧಾರ್ ಕಾರ್ಡ್ ಅನ್ನು ಪರಿಷ್ಕರಿಸಬೇಕೆಂದು ಯುಐಡಿಎಐ ಕೆಲವಾರು ವರ್ಷಗಳಿಂದ ಹೇಳುತ್ತಾ ಬಂದಿದೆ. ಇಂಥವರು ತಪ್ಪದೇ ತಮ್ಮ ಆಧಾರ್ ಅನ್ನು ಅಪ್​ಡೇಟ್ ಮಾಡತಕ್ಕದ್ದು. ಆಧಾರ್​ನಲ್ಲಿರುವ ತಮ್ಮ ವಿವರದಲ್ಲಿ ಯಾವ ಬದಲಾವಣೆ ಇಲ್ಲದಿದ್ದರೂ ತಮ್ಮ ಗುರುತು ದಾಖಲೆ ಮತ್ತು ವಿಳಾಸ ದಾಖಲೆಗಳನ್ನು ಅಪ್​ಲೋಡ್ ಮಾಡಬೇಕಾಗುತ್ತದೆ.

ಆಧಾರ್ ಕಾರ್ಡ್ ಅನ್ನು ಆನ್​ಲೈನ್​ನಲ್ಲಿ ಅಪ್​ಡೇಟ್ ಮಾಡುವ ಕ್ರಮ

  • ಯುಐಡಿಎಐನ ಮೈ ಆಧಾರ್ ಪೋರ್ಟಲ್​ಗೆ ಹೋಗಿ; ಅದರ ವಿಳಾಸ: myaadhaar.uidai.gov.in/
  • ಇಲ್ಲಿ ನಿಮ್ಮ ಆಧಾರ್ ನಂಬರ್ ಬಳಸಿ ಲಾಗಿನ್ ಆಗಿ
  • ಮುಖ್ಯಪುಟದಲ್ಲಿ ನಿಮಗೆ ವಿವಿಧ ಟ್ಯಾಬ್​ಗಳು ಕಾಣಬಹುದು. ಅದರಲ್ಲಿ ಡಾಕ್ಯುಮೆಂಟ್ ಅಪ್​ಡೇಟ್ ಅನ್ನು ಕ್ಲಿಕ್ ಮಾಡಿ.
  • ಇಲ್ಲಿ ಐಡಿ ಪ್ರೂಫ್ ಮತ್ತು ಅಡ್ರೆಸ್ ಪ್ರೂಫ್ ದಾಖಲೆಗಳನ್ನು ಅಪ್​ಲೋಡ್ ಮಾಡಬೇಕು.

ಸಬ್ಮಿಟ್ ಒತ್ತಿದ ಬಳಿಕ ನಿಮಗೆ 14 ಅಂಕಿ ಯುಆರ್​ಎನ್ ಸಂಖ್ಯೆ ಬರುತ್ತದೆ. ಅಲ್ಲಿಗೆ ನಿಮ್ಮ ಆಧಾರ್ ಕಾರ್ಡ್ ಅಪ್​ಡೇಟ್ ಮಾಡಿದಂತಾಗುತ್ತದೆ.

ಐಡಿ ಪ್ರೂಫ್ ಆಗಿ ಸಲ್ಲಿಸಬಹುದಾದ ದಾಖಲೆಗಳು

  • ಪಾಸ್​ಪೋರ್ಟ್
  • ಪ್ಯಾನ್ ಕಾರ್ಡ್
  • ರೇಷನ್ ಕಾರ್ಡ್
  • ವೋಟರ್ ಐಡಿ
  • ಡ್ರೈವಿಂಗ್ ಲೈಸೆನ್ಸ್
  • ನರೇಗಾ ಕಾರ್ಡ್
  • ಪಿಂಚಣಿ ಕಾರ್ಡ್
  • ವಿವಾಹ ನೊಂದಣಿ ದಾಖಲೆ
  • ಮಾನ್ಯ ಶಿಕ್ಷಣ ಸಂಸ್ಥೆಯ ಐಡಿ ಕಾರ್ಡ್
  • ಹೆಸರು ಮತ್ತು ಫೋಟೋ ಇರುವ ಬ್ಯಾಂಕ್ ಪಾಸ್​ಬುಕ್

ಅಡ್ರೆಸ್ ಪ್ರೂಫ್​ಗೆ ಬೇಕಿರುವ ದಾಖಲೆಗಳು

  • ಪಾಸ್​ಪೋರ್ಟ್
  • ಬ್ಯಾಂಕ್ ಸ್ಟೇಟ್ಮೆಂಟ್
  • ರೇಷನ್ ಕಾರ್ಡ್
  • ವೋಟರ್ ಐಡಿ
  • ಡ್ರೈವಿಂಗ್ ಲೈಸೆನ್ಸ್
  • ನಿಮ್ಮ ಹೆಸರಿನಲ್ಲಿರುವ ನೀರಿನ ಬಿಲ್
  • ಪ್ರಾಪರ್ಟಿ ಟ್ಯಾಕ್ಸ್ ಬಿಲ್

Previous Post

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಜಾರಿ; ಪೋಕ್ಸೋ ಕೇಸ್‌ನಲ್ಲಿ ಬಂಧನ ಸಾಧ್ಯತೆ

Next Post

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ SDPI ನಾಯಕರು

Next Post
ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ SDPI ನಾಯಕರು

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ SDPI ನಾಯಕರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.