Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

AFG vs AUS: ಆಸ್ಟ್ರೇಲಿಯಾ ತಂಡವನ್ನು ಮಕಾಡೆ ಮಲಗಿಸಿದ ಅಫ್ಘಾನಿಸ್ತಾನ್

editor tv by editor tv
June 23, 2024
in ಕ್ರೀಡೆ
0
AFG vs AUS: ಆಸ್ಟ್ರೇಲಿಯಾ ತಂಡವನ್ನು ಮಕಾಡೆ ಮಲಗಿಸಿದ ಅಫ್ಘಾನಿಸ್ತಾನ್
1.9k
VIEWS
Share on FacebookShare on TwitterShare on Whatsapp

T20 World Cup 2024: ಮೊದಲ ವಿಕೆಟ್​ಗೆ 118 ರನ್ ಪೇರಿಸಿದ ಈ ಜೋಡಿ ಅಫ್ಘಾನ್ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದರು. ಇದರ ನಡುವೆ 49 ಎಸೆತಗಳಲ್ಲಿ 60 ರನ್ ಬಾರಿಸಿ ರಹಮಾನುಲ್ಲಾ ಗುರ್ಬಾಝ್ ಔಟಾದರೆ, ಇದರ ಬೆನ್ನಲ್ಲೇ 51 ರನ್ ಬಾರಿಸಿದ್ದ ಇಬ್ರಾಹಿಂ ಝದ್ರಾನ್ ವಿಕೆಟ್ ಒಪ್ಪಿಸಿದರು

T20 World Cup 2024: t20 ವಿಶ್ವಕಪ್ ​ನ 48ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ 21 ರನ್​ಗಳ ಗೆಲುವು ದಾಖಲಿಸುವಲ್ಲಿ ಅಫ್ಘಾನ್ ಪಡೆ ಯಶಸ್ವಿಯಾಗಿದೆ. ಕಿಂಗ್‌ಸ್ಟೌನ್​ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಭರ್ಜರಿ ಆರಂಭ ಒದಗಿಸಿದ್ದರು

ಮೊದಲ ವಿಕೆಟ್​ಗೆ 118 ರನ್ ಪೇರಿಸಿದ ಈ ಜೋಡಿ ಅಫ್ಘಾನ್ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದರು. ಇದರ ನಡುವೆ 49 ಎಸೆತಗಳಲ್ಲಿ 60 ರನ್ ಬಾರಿಸಿ ರಹಮಾನುಲ್ಲಾ ಗುರ್ಬಾಝ್ ಔಟಾದರೆ, ಇದರ ಬೆನ್ನಲ್ಲೇ 51 ರನ್ ಬಾರಿಸಿದ್ದ ಇಬ್ರಾಹಿಂ ಝದ್ರಾನ್ ಕೂಡ  ವಿಕೆಟ್ ಒಪ್ಪಿಸಿದರು.

ಆರಂಭಿಕರಿಬ್ಬರ ಪತನದೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಆಸ್ಟ್ರೇಲಿಯಾ ಬೌಲರ್​ಗಳು ಅಫ್ಘಾನಿಸ್ತಾನ್ ತಂಡದ ರನ್ ಗತಿಯನ್ನು ನಿಯಂತ್ರಿಸಿದರು. ಇದರ ನಡುವೆ ಒತ್ತಡಕ್ಕೆ ಒಳಗಾದ ಅಫ್ಘಾನಿಸ್ತಾನ್ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಅಫ್ಘಾನಿಸ್ತಾನ್ 148 ರನ್ ಕಲೆಹಾಕಿತು.

ಅಫ್ಘಾನಿಸ್ತಾನ್ ಭರ್ಜರಿ ಬೌಲಿಂಗ್:

149 ರನ್​ಗಳ ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ನವೀನ್ ಉಲ್ ಹಕ್ ಮೊದಲ ಓವರ್​ನಲ್ಲೇ ಆಘಾತ ನೀಡಿದ್ದರು. ಟ್ರಾವಿಸ್ ಹೆಡ್ (0) ರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ನವೀನ್ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಮಿಚೆಲ್ ಮಾರ್ಷ್ (12) ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಡೇಂಜರಸ್ ಡೇವಿಡ್ ವಾರ್ನರ್ (3) ವಿಕೆಟ್ ಪಡೆಯುವಲ್ಲಿ ಮೊಹಮ್ಮದ್ ನಬಿ ಯಶಸ್ವಿಯಾದರು.

ಈ ಹಂತದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅಫ್ಘಾನ್ ಬೌಲರ್​ಗಳನ್ನು ಮನಸ್ಸೋ ಇಚ್ಛೆ ದಂಡಿಸಿದ ಮ್ಯಾಕ್ಸ್​ವೆಲ್ 41 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 59 ರನ್ ಬಾರಿಸಿದರು. ಈ ಹಂತದಲ್ಲಿ ನೂರ್ ಅಹ್ಮದ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಮ್ಯಾಕ್ಸ್​ವೆಲ್ ಹೊರ ನಡೆಯಬೇಕಾಯಿತು.

ಇನ್ನು ಮಾರ್ಕಸ್ ಸ್ಟೋಯಿನಿಸ್ (11), ಟಿಮ್ ಡೇವಿಡ್ (2) ಮತ್ತು ಮ್ಯಾಥ್ಯೂ ವೇಡ್ (5) ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದರು. ಈ ಮೂಲಕ ಅಫ್ಘಾನಿಸ್ತಾನ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅತ್ತ ಒತ್ತಡಕ್ಕೆ ಸಿಲುಕಿದ ಪ್ಯಾಟ್ ಕಮಿನ್ಸ್ (3) ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು.

ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ 33 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಆ್ಯಡಂ ಝಂಪಾ ಫೋರ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಅದರಂತೆ ಕೊನೆಯ ಓವರ್​ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ 24 ರನ್ ಬೇಕಿದ್ದರೆ, ಅಫ್ಘಾನಿಸ್ತಾನ್ ತಂಡಕ್ಕೆ 1 ವಿಕೆಟ್​ನ ಅವಶ್ಯಕತೆಯಿತ್ತು.

ಅಂತಿಮ ಓವರ್​ನ 2ನೇ ಎಸೆತದಲ್ಲಿ ಆ್ಯಡಂ ಝಂಪಾ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡುವ ಮೂಲಕ ಆಸ್ಟ್ರೇಲಿಯಾ ತಂಡ 19.2 ಓವರ್​ಗಳಲ್ಲಿ 127 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 21 ರನ್​ಗಳ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

ಅಫ್ಘಾನಿಸ್ತಾನ್ ಪರ 4 ಓವರ್​ಗಳಲ್ಲಿ 20 ರನ್ ನೀಡಿ ಗುಲ್ಬದ್ದಿನ್ ನೈಬ್ 4 ವಿಕೆಟ್ ಪಡೆದು ಮಿಂಚಿದರೆ, ನವೀನ್ ಉಲ್ ಹಕ್ 4 ಓವರ್​ಗಳಲ್ಲಿ 20 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಚೊಚ್ಚಲ ಗೆಲುವು ದಾಖಲಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

Previous Post

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್​​ಸಿ ಸೂರಜ್ ರೇವಣ್ಣ ಬಂಧನ

Next Post

ಪ್ರಜ್ವಲ್, ಸೂರಜ್‌, ಯಡಿಯೂರಪ್ಪ ಇವರಿಗೆಲ್ಲ ಏನು ಅನಿಸೊಲ್ವ? ಮುಜುಗರ ಆಗೊಲ್ವ? ಪ್ರಿಯಾಂಕ್ ಖರ್ಗೆ

Next Post
ಪ್ರಜ್ವಲ್, ಸೂರಜ್‌, ಯಡಿಯೂರಪ್ಪ ಇವರಿಗೆಲ್ಲ ಏನು ಅನಿಸೊಲ್ವ? ಮುಜುಗರ ಆಗೊಲ್ವ? ಪ್ರಿಯಾಂಕ್ ಖರ್ಗೆ

ಪ್ರಜ್ವಲ್, ಸೂರಜ್‌, ಯಡಿಯೂರಪ್ಪ ಇವರಿಗೆಲ್ಲ ಏನು ಅನಿಸೊಲ್ವ? ಮುಜುಗರ ಆಗೊಲ್ವ? ಪ್ರಿಯಾಂಕ್ ಖರ್ಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.