Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Tulu In Google Translator: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

editor tv by editor tv
June 28, 2024
in ರಾಜ್ಯ
0
Tulu In Google Translator: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ
1.9k
VIEWS
Share on FacebookShare on TwitterShare on Whatsapp

ಕ್ಷಣಾರ್ಧದಲ್ಲಿ ಯಾವುದೇ ಭಾಷೆಯ ಪದಗಳನ್ನು ಭಾಷಾಂತರಿಸಬಲ್ಲ ಗೂಗಲ್‌ ಟ್ರಾನ್ಸ್‌ಲೇಟರ್‌ಗೆ ಇದೀಗ ತುಳು ಭಾಷೆ ಕೂಡ ಸೇಪರ್ಡೆಯಾಗಿದ್ದು, ಈಗ ಗೂಗಲ್‌ ಅನುವಾದದಲ್ಲಿ ಕನ್ನಡ, ಇಂಗ್ಲೀಷ್‌ ಸೇರಿದಂತೆ ಯಾವುದೇ ಭಾಷೆಯ ಪದಗಳನ್ನು ತುಳುವಿಗೆ ಭಾಷಾಂತರಿಸಿಕೊಳ್ಳಬಹುದಾದ ಆಯ್ಕೆ ದೊರಕಿದೆ. ಈ ಒಂದು ಖುಷಿಯ ವಿಚಾರ ತುಳುವರಿಗೆ ಸಂತಸ ತಂದಿದೆ

ಟೆಕ್‌ ದೈತ್ಯ ಗೂಗಲ್‌ ತನ್ನ ಬಳಕೆದಾರರಿಗೆ ಮ್ಯಾಪ್‌, ಜಿಮೇಲ್‌, ಕ್ರೋಮ್‌, ಗೂಗಲ್‌ ಡ್ರೈವ್‌ನಂತಹ ಹಲವಾರು ಉಪಯುಕ್ತ ಅಪ್ಲಿಕೇಶನ್‌ಗಳನ್ನು ನೀಡುತ್ತಾ ಬಂದಿದೆ. ಅವುಗಳಲ್ಲಿ ಗೂಗಗ್‌ ಟ್ರಾನ್ಸ್‌ಲೇಟರ್‌ ಪ್ರಪಂಚದಾದ್ಯಂತ ಬಹಳಷ್ಟು ಜನಪ್ರಿಯವಾಗಿದೆ. ಇದಕ್ಕೆ ಕಾರಣವೆಂದರೆ ಇದು ಹೊಂದಿರುವ ಅತ್ಯುತ್ತಮ ಭಾಷಾ ಅನುವಾದ ವೈಶಿಷ್ಟ್ಯಗಳು. ಗೂಗಲ್‌ ಟ್ರಾನ್ಸ್‌ಲೇಟರ್‌ನಲ್ಲಿ ಇಲ್ಲಿಯವರೆಗೆ ಕನ್ನಡ, ಹಿಂದಿ, ತೆಲುಗು ಸೇರಿದಂತೆ ಭಾರತದ ಪ್ರಮುಖ ಭಾಷೆಗಳ ಭಾಷಾಂತರ ಸೌಲಭ್ಯ ಮಾತ್ರ ಲಭ್ಯವಿತ್ತು. ಇದೀಗ ಗೂಗಲ್‌ ಅನುವಾದ ಪಟ್ಟಿಗೆ ತುಳು ಭಾಷೆಯೂ ಕೂಡಾ ಸೇರ್ಪಡೆಯಾಗಿದ್ದು, ಈ ಮೂಲಕ ಟೆಕ್‌ ದೈತ್ಯ ಗೂಗಲ್‌ನಲ್ಲಿ ತುಳುವಿಗೂ ಗೌರವ ಸಿಕ್ಕಂತಾಗಿದೆ. ಈ ವಿಚಾರ ತುಳುವರಿಗೆ ಸಂತಸವನ್ನು ತಂದಿದೆ.

ಗೂಗಲ್‌ ಅನುವಾದ ಪಟ್ಟಿಯಲ್ಲಿ ತುಳು ಭಾಷೆಗೂ ಮಾನ್ಯತೆ ಸಿಕ್ಕಿದ್ದು, ಇದು ತುಳು ಭಾಷಾ ಪ್ರೇಮಿಗಳಲ್ಲಿ ಸಂತಸವನ್ನು ತಂದಿದೆ. ಇನ್ನು ಮುಂದೆ ತುಳು ಭಾಷಿಗರು ಇಂಗ್ಲೀಷ್‌ ಅಥವಾ ಇನ್ನಾವುದೇ ಪದಗಳನ್ನು ಗೂಗಲ್‌ ಟ್ರಾನ್ಸ್‌ಲೇಟರ್‌ನಲ್ಲಿ ನೇರವಾಗಿ ತುಳುವಿನಲ್ಲಿಯೇ ಅರ್ಥೈಸಿಕೊಳ್ಳಬಹುದು. ಅಲ್ಲದೆ ಇದು ಅನ್ಯ ಭಾಷಿಗರಿಗೆ ತುಳು ಪದಗಳನ್ನು ಅರ್ಥೈಸಿಕೊಳ್ಳುವುದಕ್ಕೂ ಅನುಕೂಲಕರವಾಗಿದೆ.

ಈ ಕುರಿತ ಪೋಸ್ಟ್‌ ಒಂದನ್ನು @trollbogra ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಗೂಗಲ್‌ ಟ್ರಾನ್ಸ್‌ಲೇಟರ್‌ಗೂ ಬಂದ ತುಳು ಭಾಷೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗಿರುವ ಈ ಪೋಸ್ಟ್‌ ಅಲ್ಲಿ ಗೂಗಲ್‌ ಟ್ರಾನ್ಸ್‌ಲೇಟರ್‌ನಲ್ಲಿ ಹೌ ಆರ್‌ ಯು (ಹೇಗಿದ್ದೀರಾ) ಎಂಬ ಪದವನ್ನು ಯೀರ್‌ ಎಂಚ ಉಲ್ಲರ್‌ ಎಂದು ತುಳು ಭಾಷೆಗೆ ಟ್ರಾನ್ಸ್‌ಲೇಟ್‌ ಮಾಡಿರುವ ದೃಶ್ಯವನ್ನು ಕಾಣಬಹುದು.

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ

Previous Post

ಕೆವಾ ಬಾಕ್ಸ್ ವಜ್ರದ ಮಳಿಗೆಯಲ್ಲಿ ಲೈಟ್ ವೈಟ್ ಚಿನ್ನಾಭರಣ ಪ್ರದರ್ಶನಕ್ಕೆ ಚಾಲನೆ

Next Post

ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

Next Post
ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.