Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Wayanad Landslide: ಸಾವಿನ ಸಂಖ್ಯೆ 115ಕ್ಕೆ ಏರಿಕೆ, ಶವಗಳಿಂದ ಆಸ್ಪತ್ರೆಗಳೇ ಭರ್ತಿ!

editor tv by editor tv
July 30, 2024
in ರಾಷ್ಟ್ರೀಯ
0
Wayanad Landslide: ಸಾವಿನ ಸಂಖ್ಯೆ 115ಕ್ಕೆ ಏರಿಕೆ, ಶವಗಳಿಂದ ಆಸ್ಪತ್ರೆಗಳೇ ಭರ್ತಿ!
1.9k
VIEWS
Share on FacebookShare on TwitterShare on Whatsapp

Chooralmala Attamala Noolpuzha Death ವಯನಾಡ್‌ ಜಿಲ್ಲೆಯ ನಾಲ್ಕು ಗ್ರಾಮಗಳ ಮೇಲೆ ಎರಗಿದ ಭೀಕರ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಸಂಜೆ 6 ಗಂಟೆಯ ವೇಳೆಗೆ 115ಕ್ಕೆ ಏರಿದೆ. ಸ್ಥಳೀಯ ಆಸ್ಪತ್ರೆಗಳು ಶವಗಳಿಂದಲೇ ತುಂಬಿಹೋಗಿರುವ ಬಗ್ಗೆ ವರದಿಯಾಗಿದೆ.

ವಯನಾಡ್‌ (ಜು.30): ಭಾರೀ ಮಳೆಯ ನಡುವೆ ಮಂಗಳವಾರ ಬೆಳಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ ನಂತರ 115ಕ್ಕೂ ಅಧಿಕ ಮಂದಿ ಸಾವು ಕಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ. ಸಂಜೆ 6 ಗಂಟೆಯ ಸುದ್ದಿ ಅಪ್‌ಡೇಟ್‌ ವೇಳೆ 115ಕ್ಕೂ ಅಧಿಕ ಶವ ಸಿಕ್ಕಿದೆ ಎನ್ನುವ ಮಾಹಿತಿ ಲಭಿಸಿದೆ. 128 ಮಂದಿ ಗಾಯಗೊಂಡಿದ್ದು, ಗುಡ್ಡ ಪ್ರದೇಶಗಳಲ್ಲಿ ಇನ್ನೂ ನೂರಾರು ಮಂದಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.  ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ಭೂಕುಸಿತಗಳು ವಯನಾಡ್‌ಗೆ ಅಪ್ಪಳಿಸಿದ ಕಾರಣ ಎನ್‌ಡಿಆರ್‌ಎಫ್ ಮತ್ತು ಸೇನೆ ಸೇರಿದಂತೆ ಹಲವು ಏಜೆನ್ಸಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಸಂಜೆ 5 ಗಂಟೆಯ ವೇಳೆ ವಯನಾಡ್‌ ಜಿಲ್ಲಾಡಳಿತ 107 ಮಂದಿ ಸಾವು ಕಂಡಿದ್ದಾಗಿ ದೃಢಪಡಿಸಿತ್ತು. ಈಗ ಆ ಸಂಖ್ಯೆ 6 ಗಂಟೆಯ ವೇಳೆಗೆ ಇನ್ನಷ್ಟು ಏರಿಕೆಯಾಗಿದೆ.

ಮೆಪ್ಪಾಡಿ ಆರೋಗ್ಯ ಕೇಂದ್ರದಲ್ಲಿ 42 ಸಾವು ದೃಢವಾಗಿದ್ದರೆ.  ವಿಮ್ಸ್ ಆಸ್ಪತ್ರೆ 3, ಬತ್ತೇರಿ ತಾಲೂಕು ಆಸ್ಪತ್ರೆ 1, ನಿಲಂಬೂರ್ ಜಿಲ್ಲಾಸ್ಪತ್ರೆಯಲ್ಲಿ 41 ಮೃತದೇಹಗಳಿದ್ದು 16 ದೇಹದ ಭಾಗಗಳಿವೆ. 120ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ  83 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೆಪ್ಪಾಡಿಯಲ್ಲಿ 27, ಕಲ್ಪೆಟ್ಟಾ ಜನರಲ್ ಆಸ್ಪತ್ರೆಯಲ್ಲಿ 13 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ 98 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, 20 ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿದಿದೆ ಎನ್ನುವ ಮಾಹಿತಿ ಬಂದಿದೆ. ಉಳಿದಂತೆ ಸ್ಥಳೀಯ ಆಸ್ಪತ್ರೆಗಳು ಶವದಿಂದ ಸಂಪೂರ್ಣವಾಗಿ ಭರ್ತಿಯಾಗಿದ್ದು, ಶವಗಳನ್ನು ಇಡಲು ಆಸ್ಪತ್ರೆಯ ಎದುರುಗಡೆಯೇ ಶಾಮಿಯಾನ ಹಾಕಲಾಗಿದೆ.

ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಸೇರಿವೆ. ಚಾಲಿಯಾರ್ ನದಿಯಲ್ಲಿ ಹಲವರು ಕೊಚ್ಚಿಹೋಗಿರುವ ಬಗ್ಗೆ ಈಗಾಗಲೇ ಆತಂಕವಿದೆ.  ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇದೊಂದು ಹೃದಯ ವಿದ್ರಾವಕ ದುರಂತ ಎಂದು ಬಣ್ಣಿಸಿದ್ದು, ಇಡೀ ಪ್ರದೇಶವೇ ನಾಶವಾಗಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನೂ ಘೋಷಿಸಿದೆ.

ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತವು ಹೃದಯ ವಿದ್ರಾವಕ ದುರಂತವಾಗಿದೆ. ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಇಡೀ ಪ್ರದೇಶವು ನಾಶವಾಗಿದೆ. ನಿನ್ನೆ ರಾತ್ರಿ ಮಲಗಿದ್ದ ಅನೇಕರು ಕೊಚ್ಚಿ ಹೋಗಿದ್ದಾರೆ” ಎಂದು ವಿಜಯನ್ ಹೇಳಿದರು. ವೈದ್ಯಕೀಯ ತಂಡಗಳು ಸೇರಿದಂತೆ 225 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಎರಡು ವಾಯುಪಡೆಯ ಹೆಲಿಕಾಪ್ಟರ್‌ಗಳು, ಎಂಐ-17 ಮತ್ತು ಎಎಲ್‌ಹೆಚ್ (ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್) ಸಹ ಸೇವೆಗೆ ಒಳಪಟ್ಟಿವೆ.

Previous Post

ಅಪಾಯದ ಮಟ್ಟ ಮೀರಿದ ನೇತ್ರಾವತಿ; ಬಂಟ್ವಾಳದ ಹಲವೆಡೆ ಮನೆಗಳಿಗೆ ನೀರು

Next Post

ಭಾರೀ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ, ಪೂರ್ವ ಸಿದ್ಧತೆ ಮಾಡಿಕೊಳ್ಳಿ – ಸಿಎಂ ಖಡಕ್ ಸೂಚನೆ

Next Post
ಭಾರೀ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ, ಪೂರ್ವ ಸಿದ್ಧತೆ ಮಾಡಿಕೊಳ್ಳಿ – ಸಿಎಂ ಖಡಕ್ ಸೂಚನೆ

ಭಾರೀ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ, ಪೂರ್ವ ಸಿದ್ಧತೆ ಮಾಡಿಕೊಳ್ಳಿ – ಸಿಎಂ ಖಡಕ್ ಸೂಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.