Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

editor tv by editor tv
August 13, 2024
in ರಾಜ್ಯ
0
ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?
1.9k
VIEWS
Share on FacebookShare on TwitterShare on Whatsapp

ಶಿವಮೊಗ್ಗ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿತ್ತು ತಿನ್ನುವ ಬಡತನ, ತಮ್ಮನಿಗೆ ಅನಾರೋಗ್ಯ, ಬೆಳೆದು ನಿಂತ ಮಗ ನೆಟ್ಟಗೆ ದುಡಿಯಲಿಲ್ಲ. ಹೀಗಾಗಿ ಮಹಿಳೆಯೇ ದುಡಿದು ಸಂಸಾರ ನಡೆಸುತ್ತಿದ್ದಳು. ಮನೆಯಲ್ಲಿ ಒಬ್ಬಳೇ ದುಡಿದು ಸಾಕಾಗಿ ಹೋಗಿದ್ದ ಮಹಿಳೆಯು ಇಬ್ಬರಿಗೂ ವಿಷಕೊಟ್ಟು ತಾನು ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ. ಈ ಕುರಿತು ಒಂದು ವರದಿ ಇಲ್ಲಿದೆ.

ಶಿವಮೊಗ್ಗ, ಆ.13: ಶಿವಮೊಗ್ಗ(Shivamogga) ನಗರದ ಓಟಿ ರಸ್ತೆಯಲ್ಲಿರುವ ಆಜಾದ್ ನಗರದ ಮುಖ್ಯ ರಸ್ತೆಯಲ್ಲಿ ಎಲ್ಲರೂ ಬೆಚ್ಚಿ ಬೀಳುವ ಘಟನೆ ನಡೆದಿತ್ತು. ಕಳೆದ ಎರಡು ದಿನಗಳ ಹಿಂದೆ ಮನೆಯ ಯಜಮಾನಿ ಭುವನೇಶ್ವರಿ (40) ಮತ್ತು ಈಕೆಯ ತಮ್ಮ ಮಾರುತಿ (38) ಹಾಗೂ ಮಗ ದರ್ಶನ (22) ಮೂವರು ಮೂವರು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದ. ಭುವನೇಶ್ವರಿ ಹೊಟೇಲ್ ಕೆಲಸ ಮಾಡಿಕೊಂಡಿದ್ದಳು. ಇಡೀ ಕುಟುಂಬದ ಜವಾಬ್ದಾರಿಯು ಮಹಿಳೆಯ ಮೇಲೆ ಇತ್ತು. ಮನೆಯಲ್ಲಿ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮತ್ತು ವಯಸ್ಸಿಗೆ ಬಂದ ಮಗನು ನೆಟ್ಟಗೆ ದುಡಿಯುತ್ತಿರಲಿಲ್ಲ. ಈ ಇಬ್ಬರು ದುಡಿಯದೇ ಇರುವುದು ದೊಡ್ಡ ಸಮಸ್ಯೆಯಾಗಿತ್ತು.

ಎಷ್ಟೇ ಹೇಳಿದರೂ ಇಬ್ಬರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ. ಇದರಿಂದ ರೋಸಿ ಹೋಗಿದ್ದ ತಾಯಿ ಮೊನ್ನೆ(ಆ.11) ರಾತ್ರಿ ಇಬ್ಬರಿಗೂ ಊಟದಲ್ಲಿ ವಿಷ ಕೊಟ್ಟು ಕೊಂದಿದ್ದಾಳೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆ ಒಳಗೆಯಿಂದ ಲಾಕ್ ಆಗಿತ್ತು. ಅಕ್ಕ-ಪಕ್ಕದವರಿಗೆ ಶವದ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಬಳಿಕ ಕಿಟಕಿ ಗಾಜು ಒಡೆದು ನೋಡಿದಾಗ ಮೂವರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಮೂವರು ಸಾವು ಕಂಡು ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದ್ದು, ಸಂಬಂಧಿಗಳ ಅಕ್ರಂದನ ಮುಗಿಲು ಮುಟ್ಟಿದೆ.

ಇನ್ನು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸಂಗತಿಯು ತಿಳಿಯುತ್ತಿದ್ದಂತೆ ಬಡಾವಣೆ ಮತ್ತು ಅಕ್ಕ-ಪಕ್ಕದ ಜನರು ಜಮಾಹಿಸಿದ್ದು, ಜೊತೆಗೆ ದೊಡ್ಡಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಎಂಟ್ರಿಕೊಟ್ಟಿದ್ದರು. ಹೆಚ್ಚುವರಿ ಎಸ್ಪಿ ಸೇರಿದಂತೆ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸ್ಥಳಕ್ಕೆ ಭೇಟಿ ನೀಡಿ ಮೂವರ ಸಾವಿನ ಕುರಿತು ಮಾಹಿತಿ ಕಲೆಹಾಕಿದರು. ಬಡತನದಿಂದ ಬೆಂದು ಹೋಗಿದ್ದ ಮಹಿಳೆಗೆ ಕುಟುಂಬ ನಿರ್ವಹಣೆಯು ದೊಡ್ಡ ಸವಾಲು ಅಗಿತ್ತು. ದಿನೇ ದಿನೇ ಖರ್ಚು ವೆಚ್ಚ ಜಾಸ್ತಿ ಆಗುತ್ತಿತ್ತು. ಒಬ್ಬಳೇ ದುಡಿದು ಇಡೀ ಕುಟುಂಬದ ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಮಗ ಮತ್ತು ತಮ್ಮನ ನಡತೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಇದರಿಂದ ಬೇಸತ್ತು ಮಹಿಳೆಯು ಕೊನೆಗೆ ಇಬ್ಬರನ್ನು ಕೊಂದು ತಾನು ಸಾಯುವ ನಿರ್ಧಾರಕ್ಕೆ ಬಂದಿದ್ದಳು.

ಊಟದಲ್ಲಿ ವಿಷಬೆರೆಸಿ ಮೊದಲು ಇಬ್ಬರಿಗೆ ಕೊಟ್ಟಿದ್ದಾಳೆ. ಇಬ್ಬರು ಮೃತಪಟ್ಟ ಬಳಿಕ ಇವಳು ಅದೇ ವಿಷದೂಟ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಲ ವಿಲ ಒದ್ದಾಡಿ ಮೂವರು ನೆಲದ ಮೇಲೆ ಪ್ರಾಣ ಬಿಟ್ಟಿರುವ ದೃಶ್ಯ ನೋಡಿದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿತ್ತು. ಎಲ್ಲರೂ ಒಂದೇ ಕುಟುಂಬದ ಮೂವರು ಸಾವು ನೋಡಿ ರೋಧಿಸುತ್ತಿದ್ದರು. ಭುವನೇಶ್ವರಿ ಈ ನಿರ್ಧಾರ ತೆಗೆದುಕೊಂಡಿರುವುದು ಎಲ್ಲರಿಗೂ ಅಚ್ಚರಿಯಾಗಿದೆ. ಸದ್ಯ ಮೂವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಮತ್ತು ಸಂಗತಿಗಳು ಬಯಲು ಆಗಲಿವೆ.

ಬಡತನ ಎಷ್ಟೊಂದು ನೆಮ್ಮದಿ ಹಾಳು ಮಾಡುತ್ತದೆ ಎನ್ನುವುದಕ್ಕೆ ಭುವನೇಶ್ವರಿ ಕಠಿಣ ನಿರ್ಧಾರವೇ ಸಾಕ್ಷಿಯಾಗಿದೆ. ದುಡಿಯದ ತಮ್ಮ ಮತ್ತು ಮಗನು. ಇಡೀ ಕುಟುಂಬವನ್ನು ಸಾಕಿ ಸಲುಹಿ ರೋಸಿಹೋಗಿದ್ದ ಮಹಿಳೆಯು ಒಡಹುಟ್ಟಿದ ಮಗ ಮತ್ತು ತಮ್ಮನಿಗೆ ವಿಷದೂಟ ಕೊಟ್ಟು ಬಳಿಕ ತಾನು ವಿಷದೂಟ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಾತ್ರ ವಿಪರ್ಯಾಸ.

Previous Post

ಎಸ್.ಡಿ.ಪಿ.ಐ ಬೋಳಿಯಾರ್ ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಹನೀಫ್ ರಂತಡ್ಕ ಆಯ್ಕೆ

Next Post

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಯ್ಕೆ!

Next Post
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಯ್ಕೆ!

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಯ್ಕೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.