Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಯಲಾಯ್ತು ಬೆಂಗಳೂರು ಮಹಾಲಕ್ಷ್ಮೀ ಕೊಲೆ ರಹಸ್ಯ: ಪ್ರಿಯಕರ ಮುಕ್ತಿರಂಜನ್ ​​ಆಕೆಯ ದೇಹವನ್ನು 57 ಪೀಸ್​ ಮಾಡಿದ್ದೇಕೆ?

editor tv by editor tv
October 5, 2024
in ರಾಜ್ಯ
0
ಬಯಲಾಯ್ತು ಬೆಂಗಳೂರು ಮಹಾಲಕ್ಷ್ಮೀ ಕೊಲೆ ರಹಸ್ಯ: ಪ್ರಿಯಕರ ಮುಕ್ತಿರಂಜನ್ ​​ಆಕೆಯ ದೇಹವನ್ನು 57 ಪೀಸ್​ ಮಾಡಿದ್ದೇಕೆ?
1.9k
VIEWS
Share on FacebookShare on TwitterShare on Whatsapp

Mahalaxmi Murder Case: ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಾಲಕ್ಷ್ಮೀಯನ್ನು ಬರ್ಬರವಾಗಿ ಕೊಲೆ ಮಾಡಿ, 57 ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಮಹಾಲಕ್ಷ್ಮೀಯನ್ನು ಆರೋಪಿ ಮುಕ್ತಿರಂಜನ್​ ರಾಯ್​ ಕೊಲೆ ಮಾಡಲು ಕಾರಣವೇನು? ಇಲ್ಲಿದೆ ವಿವರ

ಬೆಂಗಳೂರು, ಅಕ್ಟೋರಬರ್​ 05: ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ತನಿಖೆ ನಡೆಸಿದ ಬೆಂಗಳೂರು ಪೊಲೀಸರು ಕೊಲೆ ಹಿಂದಿನ ಕಾರಣವನ್ನು ಪತ್ತೆ ಹಚ್ಚಿದ್ದಾರೆ. ಹಾಗಿದ್ದರೆ, ಆರೋಪಿ ಮುಕ್ತಿರಂಜನ್​ ರಾಯ್​ ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ್ದು ಏಕೆ? ಆಕೆಯ ದೇಹವನ್ನು ತುಂಡರಿಸಿದ್ದು ಏಕೆ? ಎಂಬ ಪ್ರಶ್ನೆಗಳಿಗೆ ತನಿಖೆಯಲ್ಲಿ ಉತ್ತರ ಸಿಕ್ಕಿದೆ.

ಮಹಾಲಕ್ಷ್ಮೀ ಎಂಟು ತಿಂಗಳ ಹಿಂದೆ ಪತಿಯ ಜೊತೆ ಜಗಳವಾಡಿ, ನೆಲಮಂಗಲ ಬಿಟ್ಟು ಬೆಂಗಳೂರಿಗೆ ಬಂದು ನೆಲೆಸಿ, ಕೆಲಸಕ್ಕೆ ಸೇರಿದ್ದಳು. ಮಹಾಲಕ್ಷ್ಮೀ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಮುಕ್ತಿರಂಜನ್ ರಾಯ್ ಫ್ಲೋರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದನು. ದಿನಗಳು ಕಳೆದಂತೆ ಇಬ್ಬರು ಸ್ನೇಹಿತರಾಗಿದ್ದಾರೆ. ಸ್ನೇಹದಲ್ಲಿ ಮುಕ್ತಿರಂಜನ್​ ರಾಯ್​ ಒಮ್ಮೊಮ್ಮೆ ಮಹಾಲಕ್ಷ್ಮಿಯನ್ನು ಮನೆವರೆಗು ಬಿಟ್ಟು ಹೋಗುತ್ತಿದ್ದನು. ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿದೆ. ಆದರೆ, ಮಹಾಲಕ್ಷ್ಮೀ ಮಾತ್ರ ತನಗೆ ಈಗಾಗಲೆ ಒಂದು ಮದುವೆಯಾಗಿರುವ ಮತ್ತು ಮಗು ಇರುವ ಬಗ್ಗೆ ಮುಕ್ತಿರಂಜನ್​ ರಾಯ್​ಗೆ ಹೇಳಿರಲಿಲ್ಲ. ಮುಕ್ತಿರಂಜನ್​ ರಾಯ್​ ಮದುವೆ ಪ್ರಸ್ತಾಪವನ್ನು ಮಹಾಲಕ್ಷ್ಮೀ ಮುಂದೆ ಇಟ್ಟಿದ್ದಾನೆ. ಮಹಾಲಕ್ಷ್ಮಿಯೂ ಈ ಮದುವೆಗೆ ಒಪ್ಪಿಕೊಂಡಿದ್ದಾಳೆ.

ಇನ್ನು, ಮುಕ್ತಿರಂಜನ್ ರಾಯ್​ಗೆ ಇಬ್ಬರು ಸಹೋದರರು ಇದ್ದಾರೆ. ಓರ್ವ ಬೆಂಗಳೂರಿನ ಹೆಬ್ಬಗೋಡಿಯಲ್ಲಿ ಮುಕ್ತಿರಂಜನ್​ ರಾಯ್​ ಜೊತೆಗೆ ವಾಸವಾಗಿದ್ದನು. ಮತ್ತೋರ್ವ ಒಡಿಶಾದ ಗಂಜಂನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾನೆ. ತನ್ನ ಇಬ್ಬರು ತಮ್ಮಂದಿರ ಬಳಿ ತಾನು ಮದುವೆ ಆಗುತ್ತಿರುವ ಬಗ್ಗೆ ಹೇಳಿದ್ದಾನೆ.

ಮಹಾಲಕ್ಷ್ಮೀಯ ಮೊದಲನೇ ಮದುವೆ ವಿಚಾರ ತಿಳಿದ ಮುಕ್ತಿರಂಜನ್​

ಮುಂದಿನ ದಿನಗಳಲ್ಲಿ ಮುಕ್ತಿರಂಜನ್​ಗೆ ಮಹಾಲಕ್ಷ್ಮೀ ನಡವಳಿಕೆ ಮೇಲೆ ಅನುಮಾನ ಹುಟ್ಟಿದೆ. ಮಹಾಲಕ್ಷ್ಮೀ ಬೇರೆ ಯುವಕನ ಜೊತೆಗೆ ಸಂಪರ್ಕ ಹೊಂದಿದ್ದಾಳೆ ಎಂದು ಅನುಮಾನಗೊಂಡು, ಒಂದು ದಿನ ಆಕೆಯ ಮೊಬೈಲ್ ಪರಿಶೀಲನೆ ಮಾಡಿದಾಗ, ಆಕೆಗೆ ಮದುವೆಯಾಗಿ ಮಗು ಇರುವ ವಿಚಾರ ಗೊತ್ತಾಗಿದೆ.

ಎಲ್ಲ ವಿಚಾರ ಗೊತ್ತಾದ ಬಳಿಕ ಮುಕ್ತಿರಂಜನ್ ರಾಯ್​ ಮಹಾಲಕ್ಷ್ಮಿಯಿಂದ ಅಂತರ ಕಾಯ್ದುಕೊಂಡಿದ್ದಾನೆ. ನಂತರ, ತಾನು ಕೆಲಸ ಮಾಡುವ ಕಂಪನಿಯಲ್ಲೇ ಬೇರೆ ಯುವತಿಯ ಜೊತೆ ಮುಕ್ತಿರಂಜನ್ ರಾಯ್​ ಸ್ನೇಹ ಬೆಳಸಿದ್ದಾನೆ. ಇದನ್ನು ಕಂಡ ಮಹಾಲಕ್ಷ್ಮೀ ಆ ಯುವತಿ ಜೊತೆ ಜಗಳವಾಡಿ ಇನ್ಮೇಲೆ ಮುಕ್ತಿರಂಜನ್ ಜೊತೆ ಮಾತನಾಡದಂತೆ ಎಚ್ಚರಿಕೆ ನೀಡಿದ್ದಾಳೆ. ಈ ವಿಚಾರ ಗೊತ್ತಾಗಿ ಮುಕ್ತಿರಂಜನ್ ಮಹಾಲಕ್ಷ್ಮಿ ಜೊತೆಗೆ ಜಗಳವಾಡಿದ್ದನು.

ಮುಕ್ತಿರಂಜನ್​ಗೆ ಬೆದರಿಕೆ ಹಾಕಿದ್ದ ​ಮಹಾಲಕ್ಷ್ಮೀ

ನೀನು ಮದುವೆ ಆಗಿರುವ ವಿಚಾರ ನನ್ನಿಂದ ಮುಚ್ಚಿಟ್ಟಿದ್ದೆ, ಹೀಗಾಗಿ ನಾನು ನಿನ್ನ ಮದುವೆ ಆಗಲ್ಲ ಎಂದು ಮುಕ್ತಿರಂಜನ್​ ರಾಯ್​ ಮಹಾಲಕ್ಷ್ಮೀಗೆ ಹೇಳಿದ್ದಾನೆ. ಆಗ ಮಹಾಲಕ್ಷ್ಮೀ ನನ್ನ ಪತಿಗೆ ವಿಚ್ಛೇದನ ನೀಡುತ್ತೇನೆ ಎಂದು ಹೇಳಿದ್ದಾಳೆ. ಒಂದು ವೇಳೆ ನೀನು ನನ್ನ ಮದುವೆ ಆಗಿಲ್ಲ ಅಂದ್ರೆ ಪೊಲೀಸರಿಗೆ ದೂರು ನೀಡುತ್ತೇನೆ ಅಂತ ಮಹಾಲಕ್ಷ್ಮೀ ಮುಕ್ತಿರಂಜನ್​ ರಾಯ್​ಗೆ ಬೆದರಿಕೆ ಹಾಕಿದ್ದಾಳೆ. ಇದರಿಂದ ಮುಕ್ತಿರಂಜನ್ ರಾಯ್​ ಸುಮ್ಮನಾಗಿದ್ದಾನೆ.

ಒಂದಾದ ಪ್ರೇಮಿಗಳು ​

ಮಹಾಲಕ್ಷ್ಮೀ ಕೊಲೆಯಾದ ಹಿಂದಿನ ದಿನ‌ ಮುಕ್ತಿರಂಜನ್​ಗೆ ವಾರದ ರಜೆ ಇತ್ತು. ಹೀಗಾಗಿ, ಮಹಾಲಕ್ಷ್ಮೀ ಹೆಬ್ಬಗೋಡಿಯಲ್ಲಿನ ಮುಕ್ತಿರಂಜನ್​ ಮನೆಗೆ ಹೋಗಿದ್ದಳು. ಮಹಾಲಕ್ಷ್ಮೀ ಎಷ್ಟೇ ಬಾಗಿಲು ಬಡಿದರೂ ಮುಕ್ತಿರಂಜನ್​ ರಾಯ್ ತೆಗೆಯಲಿಲ್ಲ. ಕೊನೆಗೆ ಮಹಾಲಕ್ಷ್ಮಿ ಮಾತಿಗೆ ಮಣಿದು ಮುಕ್ತಿರಂಜನ್​ ಬಾಗಿಲು ತೆರೆದಿದ್ದಾನೆ. ಇಲ್ಲಿ, ಇಬ್ಬರೂ ಕೂತು ಮಾತನಾಡಿ ಕಾಂಪ್ರಮೈಸ್ ಆಗಿದ್ದಾರೆ. ಆಗಿದ್ದು ಆಗೋಯ್ತು ಇನ್ಮುಂದೆ ಚೆನ್ನಾಗಿ ಇರೋಣ ಅಂತ ನಿರ್ಧಾರಕ್ಕೆ ಬಂದಿದ್ದಾರೆ.

ಇಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಅಂದು ರಾತ್ರಿ ಮಹಾಲಕ್ಷ್ಮಿ ಮುಕ್ತಿರಂಜನ್ ಜೊತೆಗೆ ಉಳಿದುಕೊಂಡಿದ್ದಾಳೆ. ಮರುದಿನ ಇಬ್ಬರೂ ವಾಪಾಸ್ ವೈಯಾಲಿಕಾವಲ್ ಮಹಾಲಕ್ಷ್ಮಿ ರೂಮ್​ಗೆ ಬಂದಿದ್ದಾರೆ. ಅಂದು ರಾತ್ರಿ ಮತ್ತೆ ಇಬ್ಬರ ಮಧ್ಯೆ ಜಗಳವಾಗಿದೆ. ಜಗಳದ ನಡುವೆ ಮಹಾಲಕ್ಷ್ಮಿ ಆರೋಪಿ ಮುಕ್ತಿರಂಜನ್​ ರಾಯ್​ಗೆ ಹೊಡೆದಿದ್ದಾಳೆ.

ಇದರಿಂದ ಸಿಟ್ಟಾದ ಮುಕ್ತಿರಂಜನ್ ಆಕೆಯ ಮುಖಕ್ಕೆ ಹೊಡೆದಿದ್ದಾನೆ. ಇದರಿಂದ ಮಹಾಲಕ್ಷ್ಮೀ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬಳಿಕ ಮುಕ್ತಿರಂಜನ್​ ರಾಯ್ ಮಹಾಲಕ್ಷ್ಮಿ ಮುಖದ ಮೇಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಹೇಗೆ ಪಾರಾಗುವುದು ಎಂದು ಯೋಚಿಸಿದ್ದಾನೆ. ಮೃತದೇಹ ಹೀಗೆ ಬಿಟ್ಟರೆ ವಾಸನೆ ಬರುತ್ತೆ ಅಂತ ಯೋಚಿಸಿದ್ದಾನೆ.

ಮೃತದೇಹವನ್ನು ಹೇಗೆ ಡಿಸ್ಪೋಸ್ ಮಾಡುವುದು ಅಂತ ಇಂಟರ್ನೆಟ್​ನಲ್ಲಿ ವಿಡಿಯೋ ನೋಡಿದ್ದಾನೆ. ಕೊನೆಗೆ ಫ್ರಿಡ್ಜ್ ಒಳಗೆ ಇಟ್ಟರೆ ವಾಸನೆ ಬರಲ್ಲ ಅಂತ ಗೊತ್ತಾಗಿದೆ. ತಕ್ಷಣವೇ ಮುಕ್ತಿರಂಜನ್​ ರಾಯ್​ ಹೊರಗಡೆ ಹೋಗಿ ಒಂದು ಮಚ್ಚು ಖರೀದಿಸಿ ತಂದಿದ್ದಾನೆ. ಮೃತದೇಹವನ್ನು ವಾಶ್ ರೂಮ್​ಗೆ ತೆಗೆದುಕೊಂಡು ಹೋಗಿ, 57 ತುಂಡು ಮಾಡಿ ಫ್ರಿಡ್ಜ್​ನಲ್ಲಿ ಇಟ್ಟಿದ್ದಾನೆ. ಬಳಿಕ ವಾಶ್ ರೂಮ್‌ನಲ್ಲಿ ಆಸಿಡ್ ಹಾಕಿ ರಕ್ತದ ಕಲೆಗಳನ್ನು ಸ್ವಚ್ಛ ಮಾಡಿದ್ದಾನೆ. ಮಧ್ಯರಾತ್ರಿ ಅಷ್ಟೊತ್ತಿಗೆ ಇಷ್ಟೆಲ್ಲ ಮಾಡಿ ಮುಗಿಸಿದ್ದನು.

ಬಾಂಗ್ಲಾದೇಶದಲ್ಲಿ ತಲೆಮರೆಸಿಕೊಳ್ಳುವ ಪ್ಲಾನ್​

ಬೆಳಗಾಗುತ್ತಿದ್ದಂತೆ ಹೆಬ್ಬಗೋಡಿಯ ತನ್ನ ರೂಮ್​ಗೆ ವಾಪಾಸ್ ಹೋಗಿದ್ದ ಮುಕ್ತಿರಂಜನ್​ ರಾಯ್​ ತನ್ನ ತಮ್ಮನಿಗೆ ತಕ್ಷಣವೇ ರೂಮ್ ಖಾಲಿ ಮಾಡಿಕೊಂಡು ಬೇರೆ ಕಡೆ ಹೋಗು, ತಾನು ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಬಂದಿದ್ದೀನಿ ಅಂತ ಹೇಳಿದ್ದಾನೆ. ತಮ್ಮನ ಬಳಿ ಇದ್ದ ಹಣ ಸಹ ತೆದುಕೊಂಡು ಬೈಕ್​ನಲ್ಲಿ ಊರಿನತ್ತ ಪ್ರಯಾಣ ಬೆಳಸಿದ್ದಾನೆ. ಊರು ತಲುಪಿದ ಬಳಿಕ ಬಾಂಗ್ಲಾದೇಶ ಹೋಗಿ ತಲೆಮರೆಸಿಕೊಳ್ಳುವ ಪ್ಲಾನ್ ಮಾಡಿದ್ದನು.

ಪ್ಲಾಟಿನಂ ಬೈಕ್ ಚಲಾಯಿಸಿಕೊಂಡು 1660 ಕಿಮೀ ದೂರದಲ್ಲಿರುವ ಭದ್ರಕ್ ತಲುಪಿದ್ದಾನೆ. ಊರಿಗೆ ಹೋದ ಬಳಿಕ ತಾಯಿಯ ಬಳಿ ತಾನು‌ ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾನೆ. ಆಗ ತಾಯಿ ಗಂಜಂನಲ್ಲಿ ಇರುವ ತಮ್ಮನ ಜೊತೆಗೆ ಹೋಗಿ ಇರುವಂತೆ ಸಲಹೆ ನೀಡಿದ್ದಾಳೆ. ತಾಯಿಯ ಸಲಹೆಯಂತೆ ವಿದ್ಯಾಭ್ಯಾಸ ಮಾಡುತ್ತಿದ್ದ ತಮ್ಮನ ರೂಮ್ ಸೇರಿಕೊಂಡಿದ್ದಾನೆ.

ತಮ್ಮನ ಮೊಬೈಲ್​ನಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಚಾನಲ್ ಲೈವ್ ನೋಡುತ್ತಿದ್ದನು. ಕೊನೆಗೊಂದು ದಿನ ಮಹಾಲಕ್ಷ್ಮಿ ಕೊಲೆ ವಿಚಾರ ಚಾನಲ್‌ಗಳಲ್ಲಿ ಬಂದಿದೆ. ತನಿಖಾ ತಂಡಗಳು ಆಂಧ್ರ, ಪಶ್ಚಿಮ ಬಂಗಾಳ ಮೊದಲಾದ ಕಡೆ ಹುಡುಕಾಟ ನಡೆಸ್ತಿರುವ ವಿಚಾರ ಗೊತ್ತಾಗಿದೆ. ಇನ್ನು, ಪೊಲೀಸರ ಕೈಗೆ ತಾನು ಸಿಕ್ಕಿಹಾಕಿಕೊಳ್ಳುತ್ತೇನೆ, ತಪ್ಪಿಸಿಕೊಳ್ಳಲು ಆಗಲ್ಲ ಅಂತ ಅರಿವಾಗಿ, ಗಂಜಂನಿಂದ ದ್ವಿಚಕ್ರ ವಾಹನದಲ್ಲಿ ವಾಪಾಸ್ ಭದ್ರಕ್​ಗೆ ಬಂದಿದ್ದಾನೆ. ಬಳಿಕ, ಊರ ಹೊರಭಾಗದಲ್ಲಿ ಡೆತ್ ನೋಟ್ ಬರೆದಿಟ್ಟು ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Previous Post

ಲೆಬನಾನ್​ ಮೇಲೆ ಬಿಳಿ ವಿಷ ಚೆಲ್ಲುತ್ತಿರುವ ಇಸ್ರೇಲ್​! ಏನಿದು White Phosphorus ? ಬ್ಯಾನ್ ಆಗಿರೋದ್ಯಾಕೆ?

Next Post

ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..ಇರಾನ್‌ನ ಪರಮೋಚ್ಚ ನಾಯಕ ಸಂದೇಶ

Next Post
ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..ಇರಾನ್‌ನ ಪರಮೋಚ್ಚ ನಾಯಕ ಸಂದೇಶ

ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..ಇರಾನ್‌ನ ಪರಮೋಚ್ಚ ನಾಯಕ ಸಂದೇಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.