Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಡಾಲರ್ ಎದುರು 95 ರೂ ಆದರೂ ಅಚ್ಚರಿ ಇಲ್ಲ; ಯಾಕಿಷ್ಟು ಕುಸಿಯುತ್ತಿದೆ ರುಪಾಯಿ ಮೌಲ್ಯ

editor tv by editor tv
January 13, 2025
in ರಾಷ್ಟ್ರೀಯ
0
ಡಾಲರ್ ಎದುರು 95 ರೂ ಆದರೂ ಅಚ್ಚರಿ ಇಲ್ಲ; ಯಾಕಿಷ್ಟು ಕುಸಿಯುತ್ತಿದೆ ರುಪಾಯಿ ಮೌಲ್ಯ
1.9k
VIEWS
Share on FacebookShare on TwitterShare on Whatsapp

Rupee vs Dollar: ಡಾಲರ್ ಎದುರು ರುಪಾಯಿ ಕರೆನ್ಸಿ ಮೌಲ್ಯ 86.30 ಮಟ್ಟ ಮುಟ್ಟಿದೆ. ರುಪಾಯಿ ಈ 86ರ ಗಡಿ ದಾಟಿದ್ದು ಇದೇ ಮೊದಲು. ಆರ್​ಬಿಐನ ಬದಲಾದ ನೀತಿಯು ಇದಕ್ಕೆ ಪ್ರಮುಖ ಕಾರಣ ಇರಬಹುದು ಎನ್ನಲಾಗಿದೆ. ಉದ್ಯೋಗ ಮಾರುಕಟ್ಟೆ ಉತ್ತಮಗೊಂಡಿರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಅಮೆರಿಕ ಕರೆನ್ಸಿ ಬಲಗೊಂಡಿದೆ. ಇದು ರುಪಾಯಿ ಮೇಲೆ ಒತ್ತಡ ಬೀರಿರಬಹುದು

ನವದೆಹಲಿ, ಜನವರಿ 13: ಭಾರತದ ರುಪಾಯಿ ಕರೆನ್ಸಿ ಮೌಲ್ಯ ಕುಸಿಯುವುದು ಮುಂದುವರಿಯುತ್ತಲೇ ಇದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ರುಪಾಯಿ ಮೌಲ್ಯ 86ರ ಗಡಿ ದಾಟಿದೆ. ಶುಕ್ರವಾರ ಸಂಜೆ 85.9650 ಯೊಂದಿಗೆ ಮುಕ್ತಾಯಗೊಂಡಿದ್ದ ರುಪಾಯಿ, ಇಂದು ಸೋಮವಾರ 86.2050 ಮಟ್ಟದೊಂದಿಗೆ ಆರಂಭಗೊಂಡಿದೆ. ಡಾಲರ್ ಎದುರು ರುಪಾಯಿ ಮೊದಲ ಬಾರಿಗೆ 86ರ ಗಡಿ ದಾಟಿದೆ. ನಾನಾ ಕಾರಣಗಳಿಂದ ಡಾಲರ್ ಎದುರು ರುಪಾಯಿ ಉಸಿರುಗಟ್ಟುತ್ತಿದೆ.

ಹಿಂದಿನ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಡಾಲರ್ ಎದುರು ರುಪಾಯಿ ಕರೆನ್ಸಿ ಮೌಲ್ಯ ಕುಸಿಯದ ರೀತಿಯಲ್ಲಿ ಎಚ್ಚರಿಕೆಯ ನೀತಿ ಅನುಸರಿಸುತ್ತಿದ್ದರು. ಈಗಿನ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಡಾಲರ್​ಗೆ ನಿಗದಿ ಮಾಡಿದ ನಿಶ್ಚಿತ ದರದ ನೀತಿಗೆ ತಿಲಾಂಜಲಿ ಹಾಡಿದ್ದಾರೆ. ಕರೆನ್ಸಿ ಮೌಲ್ಯವನ್ನು ಮಾರುಕಟ್ಟೆ ನಿರ್ಧರಿಸುವ ನೀತಿಯನ್ನು ಸರ್ಕಾರ ಅನುಸರಿಸುತ್ತಿರಬಹುದು. ಈ ಕಾರಣಕ್ಕೆ ರುಪಾಯಿ ಮೌಲ್ಯ ಮಾರುಕಟ್ಟೆಯ ಓಟಕ್ಕೆ ಸಿಲುಕಿ ಕುಸಿಯುತ್ತಲೇ ಇದೆ.

ತಜ್ಞರ ಪ್ರಕಾರ ಈ ವರ್ಷವೇ ಡಾಲರ್ ಎದುರು ರುಪಾಯಿ ಮೌಲ್ಯ 90 ದಾಟಿದರೂ ಅಚ್ಚರಿ ಇಲ್ಲ. ಅಷ್ಟೇ ಅಲ್ಲ, ರುಪಾಯಿ ಮೌಲ್ಯ 95ಕ್ಕೆ ಕುಸಿದರೂ ಆಶ್ಚರ್ಯ ಪಡಬೇಕಿಲ್ಲ ಎನ್ನುತ್ತಾರೆ ತಜ್ಞರಾದ ಉದಿತ್ ಸಿಕಂಡ್ ಮತ್ತು ಟಾಮ್ ಮಿಲ್ಲರ್.

ಡಿಎಸ್​ಪಿ ಫೈನಾನ್ಸ್ ಸಂಸ್ಥೆಯ ಸಿಇಒ ಜಯೇಶ್ ಮೆಹ್ತಾ ಅವರು ಕೆಲ ದಿನಗಳ ಹಿಂದೆ ಮಾಡಿದ್ದ ಅಂದಾಜಿನಂತೆ ರುಪಾಯಿ ಮೌಲ್ಯ 86 ಗಡಿ ಮುಟ್ಟಿದೆ. ಆದರೆ, ಅವರ ಪ್ರಕಾರ ರುಪಾಯಿ 87ರ ಮಟ್ಟಕ್ಕೆ ಕುಸಿಯಲು ಆರ್​ಬಿಐ ಬಿಡುವ ಸಾಧ್ಯತೆ ಕಡಿಮೆ.

ಇದೇ ವೇಳೆ ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು ಬಂಡವಾಳ ವಾಪಸ್ ಪಡೆಯುತ್ತಿರುವ ಟ್ರೆಂಡ್ ಮುಂದುವರಿದಿದೆ. ಎಫ್​ಪಿಐಗಳು ಹೊರಹೋಗುತ್ತಿರುವುದು ರುಪಾಯಿ ಮೇಲೆ ಹೆಚ್ಚಿನ ಒತ್ತಡ ನಿರ್ಮಿಸಿದೆ. ಷೇರು ಮಾರುಕಟ್ಟೆ ಕುಸಿತದ ಜೊತೆಗೆ ರುಪಾಯಿ ಮೌಲ್ಯ ಕುಸಿತಕ್ಕೂ ಇದು ಕಾರಣವಾಗಿದೆ

ಅಮೆರಿಕದಲ್ಲಿ ಉದ್ಯೋಗ ಸಂಖ್ಯೆ ನಿರೀಕ್ಷೆಗಿಂತ ಉತ್ತಮಗೊಂಡಿರುವುದರಿಂದ ಅಲ್ಲಿನ ಡಾಲರ್ ಕರೆನ್ಸಿ ಮತ್ತಷ್ಟು ಬಲಗೊಂಡಿದೆ. ಅಲ್ಲಿಯ ಸರ್ಕಾರದ ಟ್ರೆಷರಿ ಯೀಲ್ಡ್​ನ ಬೆಂಚ್​ಮಾರ್ಕ್ ಹೆಚ್ಚಿದೆ. ಫೆಡರಲ್ ರಿಸರ್ವ್​ನಿಂದ ಬಡ್ಡಿದರ ಕಡಿತ ಅಷ್ಟು ಸುಲಭಕ್ಕೆ ನಡೆಯುವುದಿಲ್ಲ ಎನ್ನುವ ಸೂಚನೆಗಳಿವೆ. ಇವೆಲ್ಲವೂ ಕೂಡ ಡಾಲರ್ ಕರೆನ್ಸಿಗೆ ಬೇಡಿಕೆ ಹೆಚ್ಚಿಸಿದೆ. ಇದು ರುಪಾಯಿ ಕರೆನ್ಸಿಗೆ ಹಿನ್ನಡೆ ತರಲು ಕಾರಣವಾಗಿದೆ.

Previous Post

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಮಂಡನೆ – ಸಿಎಂ ಸಿದ್ದರಾಮಯ್ಯ

Next Post

4 ಮಕ್ಕಳ ಜೊತೆ ಕಾಲುವೆಗೆ ಹಾರಿದ ತಾಯಿ.. ವಿಜಯಪುರದಲ್ಲಿ ಘೋರ ದುರಂತ; ಕಾರಣ ಬಹಿರಂಗ

Next Post
4 ಮಕ್ಕಳ ಜೊತೆ ಕಾಲುವೆಗೆ ಹಾರಿದ ತಾಯಿ.. ವಿಜಯಪುರದಲ್ಲಿ ಘೋರ ದುರಂತ; ಕಾರಣ ಬಹಿರಂಗ

4 ಮಕ್ಕಳ ಜೊತೆ ಕಾಲುವೆಗೆ ಹಾರಿದ ತಾಯಿ.. ವಿಜಯಪುರದಲ್ಲಿ ಘೋರ ದುರಂತ; ಕಾರಣ ಬಹಿರಂಗ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.