Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

editor tv by editor tv
February 11, 2025
in ರಾಜ್ಯ
0
ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್
1.9k
VIEWS
Share on FacebookShare on TwitterShare on Whatsapp

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೀಗೆಬಾಗಿ ಬಾಬಾಳ್ಳಿ ಬಳಿ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಟ್ರ್ಯಾಕ್ಟರ್‌ನಲ್ಲಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭದ್ರಾವತಿ ವಿಭಾಗದ ಭೂ ವಿಜ್ಞಾನಿ ಕೆ.ಕೆ ಜ್ಯೋತಿ ಹಾಗೂ ಶಿವಮೊಗ್ಗ ವಿಭಾಗದ ಭೂ ವಿಜ್ಞಾನಿ ಪ್ರೀತಿ ದೊಡ್ಡಗೌಡರ್ ಮೂವರು ಸಿಬ್ಬಂದಿಯೊಂದಿಗೆ ರಾತ್ರಿ ಸ್ಥಳಕ್ಕೆ ತೆರಳಿದ್ದರು.

ಈ ವೇಳೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ಜ್ಯೋತಿ ಅವರ ಬಳಿ ಬಂದು ಮೊಬೈಲ್ ಕೊಟ್ಟು “ಅಣ್ಣ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ. ಫೋನ್ ಸ್ವೀಕರಿಸಲು ನಿರಾಕರಿಸಿದ ಅಧಿಕಾರಿ, “ಅವರಿಗೆ ನನ್ನ ಫೋನ್‌ಗೆ ಕರೆ ಮಾಡಲು ಹೇಳಿ” ಎನ್ನುತ್ತಾರೆ.

“ಅಧಿಕಾರಿಯ ಫೋನ್‌ಗೆ ಕರೆ ಮಾಡಬೇಕಂತೆ ಅಣ್ಣ” ಎಂದು ಮರಳು ತೆಗೆಯುತ್ತಿದ್ದ ವ್ಯಕ್ತಿ ಹೇಳಿದ್ದಾರೆ. “ಹೌದಾ? ಎನ್ನುವ ಆಚೆ ಕಡೆಯ ವ್ಯಕ್ತಿ, “ಲೌಡ್‌ ಸ್ಪೀಕರ್ ಆನ್ ಮಾಡು” ಎಂದು ಹೇಳಿ ಅತ್ಯಂತ ಅವಾಚ್ಯ ಪದ ಬಳಸಿ ಅಧಿಕಾರಿಯನ್ನು ನಿಂದಿಸುತ್ತಾನೆ. “ನೆಟ್ಟಗೆ ಮಾತನಾಡಿ, ಯಾರಿಗೆ ಮಾತನಾಡುತ್ತೀರಿ. ಒಬ್ಬ ಅಧಿಕಾರಿಗೆ ಮಾತನಾಡುತ್ತಿದ್ದೀರಿ. ಬೆಲೆ ಕೊಟ್ಟು ಮಾತನಾಡಿ” ಎಂದು ಮಹಿಳಾ ಅಧಿಕಾರಿ ಹೇಳಿದರೂ, ಹೀನಾಯವಾಗಿ ನಿಂದಿಸುವುದು ಮುಂದುವರಿಸುತ್ತಾನೆ.

ವೈರಲ್ ವಿಡಿಯೋದಲ್ಲಿ ಈ ಎಲ್ಲಾ ದೃಶ್ಯಗಳು ಇವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು, ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭದ್ರಾವತಿ ರಿಪಬ್ಲಿಕ್ ಆಗಿದೆ : ಶಾಸಕ ಚೆನ್ನ ಬಸಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚೆನ್ನ ಬಸಪ್ಪ ಅವರು ವಿಡಿಯೋ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಕಿಡಿಕಾರಿದ್ದಾರೆ. ಭದ್ರಾವತಿ ರಿಪಬ್ಲಿಕ್ ಆಗಿ ಎಷ್ಟೋ ವರ್ಷಗೇ ಕಳೆದಿದೆ ಎಂದಿದ್ದಾರೆ.

ಈ ಪ್ರಕರಣ ಇಡೀ ಭದ್ರಾವತಿಗೆ ಅವಮಾನವಾಗಿದೆ. ಭದ್ರಾವತಿ ರಿಪಬ್ಲಿಕ್ ಆಗಿ ಬಹಳ ವರ್ಷಗಳೇ ಆಗಿವೆ. ಈ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್‌ನವರಿಗೆ ತಾಕತ್ತಿಲ್ಲ. ಶಾಸಕರ ಮಕ್ಕಳು ಈ ರೀತಿ ಗೂಂಡಾ ವರ್ತನೆ ತೋರಿದರೆ ಏನು ಮಾಡೋಣ?. ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಷ್ಟೆ ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿಗೆ ಧೈರ್ಯ ತುಂಬಿರುವ ಅವರು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ʼ @INCKarnataka ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ !

ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್‌ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹಾಗೂ ಅವರ ಮಗ ಬಿ.ಎಸ್.‌ ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ.

ಅಕ್ರಮ… pic.twitter.com/XDbJT0nIYD

— Janata Dal Secular (@JanataDal_S) February 10, 2025

ಪ್ರಕರಣ ದಾಖಲಿಸದಿದ್ದರೆ ಲೋಕಾಯುಕ್ತಕ್ಕೆ ದೂರು : ರವಿ ಕೃಷ್ಣಾರೆಡ್ಡಿ

“ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಕೊಳಕ ಭದ್ರಾವತಿಯ ಶಾಸಕ ಸಂಗಮೇಶರ ಮಗ ಬಸವೇಶ್ ಎನ್ನುವ ಮಾಹಿತಿ ಇದೆ. ಬಸವೇಶ್ ಆಗಲಿ ಅಥವಾ ಜ್ಯೋತಿ ಎನ್ನುವ ಆ ಶೋಷಿತ ಅಧಿಕಾರಿಯಾಗಲಿ ಇದನ್ನು ನಿರಾಕರಿಸಬೇಕು ಅಥವಾ ಖಚಿತಪಡಿಸಬೇಕು. ಈಗಾಗಲೇ ವೈರಲ್ ಆಗಿರುವ ಈ ವಿಡಿಯೋದ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಈ ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ DC, SP ಮತ್ತು ಬೈಗುಳ ತಿಂದ ಅಧಿಕಾರಿಯ ವಿರುದ್ಧ KRS ಪಕ್ಷದವರು ಲೋಕಾಯುಕ್ತದಲ್ಲಿ ಕರ್ತವ್ಯಲೋಪದ ಅಡಿಯಲ್ಲಿ ದೂರು ದಾಖಲಿಸಲು ನಾನು ಈ ಮೂಲಕ ಶಿವಮೊಗ್ಗ ಜಿಲ್ಲೆಯ KRS ಪಕ್ಷದ ಮುಖಂಡರಿಗೆ ಸೂಚಿಸುತ್ತಿದ್ದೇನೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ

Previous Post

ನಡುರಸ್ತೆಯಲ್ಲೇ ಹೊತ್ತಿ ಉರಿದ ಅಂಬುಲೆನ್ಸ್‌ – ನಾಲ್ವರು ಗ್ರೇಟ್‌ ಎಸ್ಕೇಪ್‌

Next Post

ಇವಿಎಂ ಡೇಟಾ ಅಳಿಸಬೇಡಿ – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Next Post
ಇವಿಎಂ ಡೇಟಾ ಅಳಿಸಬೇಡಿ – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಇವಿಎಂ ಡೇಟಾ ಅಳಿಸಬೇಡಿ – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.