Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ: ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿತ

editor tv by editor tv
February 24, 2025
in ರಾಜ್ಯ
0
ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ: ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿತ
1.9k
VIEWS
Share on FacebookShare on TwitterShare on Whatsapp

ಬೆಳಗಾವಿಯಲ್ಲಿ ಶಿವಸೇನೆ ಪುಂಡರ ವರ್ತನೆ ಹದ್ದು ಮೀರಿದೆ. ಕನ್ನಡ ಮಾತನಾಡಿ ಎಂದಿದ್ದಕ್ಕೆ ಕರ್ನಾಟಕದ ಬಸ್​ ಕಂಡಕ್ಟರ್​ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿದ್ದಾರೆ. ಇದಾದ ಬಳಿಕ ಕರ್ನಾಟಕದ ಬಸ್​ಗಳನ್ನ ತಡೆದು ಹೇಗೆ ದುಂಡಾವರ್ತನೆ ತೋರುತ್ತಿದ್ದಾರೆ. ಬಸ್​ ಮುಂಭಾಗ ಜೈ ಮಹಾರಾಷ್ಟ್ರ ಅಂತ ಬರೆದಿದ್ದಲ್ಲದೇ ಡ್ರೈವರ್​ಕೆಳಗಿಳಿಸಿ ಹೇಗೆ ರೌಡಿಗಳಂತೆ ಅಟ್ಟಹಾಸ ಮೆರೆದಿಯುತ್ತಿದ್ದಾರೆ. ಇದರ ಬೆನ್ನಲ್ಲೇ ಕನ್ನಡ ಮಾತಾಡಿದ್ದಕ್ಕೆ ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ, (ಫೆಬ್ರವರಿ 24): ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬೆಳಗಾವಿಯಲ್ಲಿ ಮರಾಠಿ ಪುಂಡರು ಕರ್ನಾಟಕ ಬಸ್​ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯಲ್ಲಿ ಬೂದಿ ಮುಚ್ಚಿದ ಕೆಂಡಂತಿದೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದ್ದು, ಕನ್ನಡ ಮಾತಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ತಾಲೂಕು ಉಪಾಧ್ಯಕ್ಷನಿಗೆ ಥಳಿಸಿರುವ ಘಟನೆ ನಡೆದಿದೆ. ಖಾನಾಪುರ ತಾಲೂಕು ಕರವೇ ನಾರಾಯಣ ಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ಹಲ್ಲೆ ಮಾಡಲಾಗಿದೆ.

ಕನ್ನಡ ಮಾತಾಡಿದ್ದಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಕ್ರಾಸ್ ಬಳಿಯ ಹೊಟೇಲ್ ನಲ್ಲಿ ಗಲಾಟೆ ನಡೆದಿದ್ದು, ಈ ವೇಳೆ ಖಾನಾಪುರ ತಾಲೂಕು ಕರವೇ ನಾರಾಯಣ ಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಅವರ ಮೇಲೆ ಮಾರಾಠಿ ಯುವರು ರಕ್ತ ಬರುವಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಗೊಂಡ ಕರವೇ ಮುಖಂಡನನ್ನ‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಂಡಕ್ಟರ್​ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ ಜೋರಾಗಿದೆ. ಕರ್ನಾಟಕದ ಬಸ್​ಗಳನ್ನೇ ಟಾರ್ಗೆಟ್​ ಮಾಡುತ್ತಿರುವ ಶಿವಸೇನೆ ಗೂಂಡಾಗಳು,, ಚಾಲಕರ ಮೇಲೆ ದರ್ಪ ಮೆರೆಯುತ್ತಿದ್ದಾರೆ.. ಇಂದು ಒಂದೇ ದಿನ ಎರಡು ಬಾರಿ ಉದ್ಧಟನ ತೋರಿದ್ದಾರೆ.. ಬೆಳಗ್ಗೆ ಬಸ್​ಗಳಿಗೆ ಕಪ್ಪು ಮಸಿ ಬಳಿದು, ಬೋರ್ಡ್ ಒಡೆದು ಹಾಕಿದ್ದ ಪ್ರಕರಣ ಇನ್ನು ಹಸಿ ಹಸಿ ಆಗಿದೆ.. ಹೀಗಿರುವಾಗ ಮಧ್ಯಾಹ್ನದ ಹೊತ್ತಿಗೆ ಸೊಲ್ಲಾಪುರ ಪಟ್ಟಣದಲ್ಲಿ ಶಿವಸೇನೆ ಪುಂಡರು ರಾಜ್ಯದ ಸಾರಿಗೆ ಬಸ್​​ ಮೇಲೆ ಕೇಸರಿ ಕಲರ್​ನಲ್ಲಿ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ.

ಜೈ ಮಹಾರಾಷ್ಟ್ರ ಅಂತ ಚಾಲಕನ ಬಾಯಿಯಿಂದ ಕೂಗಿಸಿದಲ್ಲದೇ ಆ ಚಾಲಕ ಹಿರಿಯರು ಅಂತ ನೋಡದೇ ಅವರ ತಲೆಗೆ ಕೇಸರಿ ಹಚ್ಚಿ ವಿಕೃತಿ ಮೆರೆದಿದ್ದಾರೆ.. ಚಾಲಕ ಬೇಡ ಅಂತ ಹೇಳಿದ್ರೂ ಅವರನ್ನೇ ಎಳೆದುಕೊಂಡು ಕೇಸರಿ ಎರಚಿದ್ದಾರೆ.

ಕಂಡಕ್ಟರ್​ ಹಾಗೂ ಬಸ್​​ಗಳ ಮೇಲಿನ ದಾಳಿ ಖಂಡಿಸಿ, ಶಿವಸೇನೆ ಪುಂಡರ ವಿರುದ್ಧ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಲಾಯ್ತು.. ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರಿನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರೆ, ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀಗದಿಗಿಳಿದಿದ್ರು.. ಇಷ್ಟೇ ಅಲ್ಲ ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ, ನಾಳೆ ಬೆಳಗಾವಿ ಚಲೋಗೆ ಕರವೇ ಕರೆ ಕೊಟ್ಟಿದೆ.

Previous Post

ದ್ವೇಷ ಭಾಷಣ ಪ್ರಕರಣ | ಕೇರಳ ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ನಾಯಕ ಪಿ.ಸಿ.ಜಾರ್ಜ್

Next Post

ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರ ಅನುಮೋದನೆ

Next Post
ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರ ಅನುಮೋದನೆ

ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರ ಅನುಮೋದನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.