Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ: ಈ ಜಿಲ್ಲೆಯಲ್ಲಿ ಹುಟ್ಟುವ ಮಕ್ಕಳೆಲ್ಲಾ ಅಂಗವಿಕಲರು

editor tv by editor tv
March 20, 2025
in ರಾಜ್ಯ
0
ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ: ಈ ಜಿಲ್ಲೆಯಲ್ಲಿ ಹುಟ್ಟುವ ಮಕ್ಕಳೆಲ್ಲಾ ಅಂಗವಿಕಲರು
1.9k
VIEWS
Share on FacebookShare on TwitterShare on Whatsapp

ಉತ್ತರ ಕನ್ನಡದಲ್ಲಿ 40 ವರ್ಷಗಳ ಹಿಂದೆ ಎಂಡೋಸಲ್ಫಾನ್ ಸಿಂಪಡಣೆಯಿಂದಾಗಿ ಹುಟ್ಟಿದ ಅಂಗವಿಕಲ ಮಕ್ಕಳ ಸಮಸ್ಯೆ ಇನ್ನೂ ಮುಂದುವರಿದಿದೆ. ಇತ್ತೀಚಿನ ಸರ್ವೆಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿವೆ. ಎರಡನೇ ಪೀಳಿಗೆಯಲ್ಲಿಯೂ ಈ ಸಮಸ್ಯೆ ಮುಂದುವರೆಯುವ ಆತಂಕವಿದೆ. ಬಲಿಪಶುಗಳಿಗೆ ಸೂಕ್ತ ಪರಿಹಾರ ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಾಗಿದೆ.

ಕಾರವಾರ, ಮಾರ್ಚ್​ 19: ಕಳೆದ ನಾಲವತ್ತು ವರ್ಷಗಳ ಹಿಂದೆ ಗೇರುಬಿಜ ಇಳುವರಿಗಾಗಿ, ಎಂಡೋಸಲ್ಪಾನ (Endosulfan) ರಾಸಾಯನಿಕ ಸಿಂಪಡಣೆ ಮಾಡಲಾಗಿತ್ತು. ಆದರೆ ಅದರ ಇಫೆಕ್ಟ್ ಇವತ್ತಿಗೂ ಮುಗಿದಿಲ್ಲ. ಗೇರು ತೋಟದ ಸುತ್ತಲಿನ ಪ್ರದೇಶಗಳಲ್ಲಿ ಜನ್ಮ ತಾಳುವ ಮಕ್ಕಳು ಇವತ್ತಿಗೂ ಅಂಗವಿಕಲರಾಗಿ ಹುಟ್ಟುತ್ತಿವೆ. ಹಿರೋಶಿಮಾ ನಾಗಸಕಿಯಲ್ಲಿ ಬಾಂಬ್ ಸ್ಫೋಟ್ ಆಗಿದ್ದರ ಪರಿಣಾಮ ಇವತ್ತಿಗೂ ಆ ಭೂಮಿಯಲ್ಲಿ ಹುಟ್ಟುವ ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತವೆ ಎಂಬ ಮಾತಿದೆ. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 40 ವರ್ಷಗಳ ಹಿಂದೆ ಸಿಂಪಡಿಸಿದ ರಾಸಾಯನಿಕದ ಇಫೆಕ್ಟ್ ಇವತ್ತಿಗೂ ಕಾಡುತ್ತಿದ್ದು, ಕಳೆದ 40 ವರ್ಷಗಳಿಂದ ಆ ಪ್ರದೇಶದಲ್ಲಿ ಜನ್ಮ ತಾಳುವ ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲವತ್ತು ವರ್ಷಗಳ ಹಿಂದೆ ಗೇರುಬೀಜದ ಇಳುವರಿ ಹಾಗೂ ರೋಗ ಭಾದೆ ತಡೆಯಲು ಎಂಡೋಸಲ್ಫಾನ್ ರಾಸಾಯನಿಕ ಸಿಂಪಡಣೆ ಮಾಡಲಾಗಿತ್ತು. ಅದರ ಪರಿಣಾಮ ಆ ಪ್ರದೇಶದಲ್ಲಿ ಜನ್ಮ ತಾಳುವ ಕಂದಮ್ಮಗಳ ಮೇಲೆ ಪರಿಣಾಮ ಬೀರುತ್ತಿದ್ದು, ಒಂದೊಂದು ಕುಟುಂಬದ ಪರಿಸ್ಥಿತಿ ನೋಡಿದರೆ ಕಣ್ಣಿರು ಬರುತ್ತೆ. ಆದರೂ ಸಹಿತ ಇವತ್ತಿಗೂ ಇದರ ಎಫೆಕ್ಟ್ ತಡೆಯಲು ಸಾಧ್ಯ ಆಗದೆ ಇರುವುದು ದೊಡ್ಡ ಆತಂಕ ಸೃಷ್ಟಿಸಿದೆ.

ಇನ್ನೂ ಎಂಡೋಸಲ್ಫಾನ ರಾಸಾಯನಿಕ ಸಿಂಪಡಣೆ ಪರಿಣಾಮವಾಗಿ ದಕ್ಷಿಣ ಕನ್ನಡದಲ್ಲಿ 3,607 ಜನರು, ಉಡುಪಿಯಲ್ಲಿ 1,514 ಜನರು, ಉತ್ತರಕನ್ನಡ ಜಿಲ್ಲೆಯಲ್ಲಿ 1,793 ಜನರು ಸೇರಿ ಒಟ್ಟು 6,914 ಜನರು ಬಹುವಿಧದ ಅಂಗವೈಕಲ್ಯಕ್ಕೆ ತುತ್ತಾಗಿದ್ದಾರೆ ಎಂದು ದಾಖಲೆಗಳು ಹೇಳುತ್ತವೆ. ಆದರೆ ಗೇರು ನೆಡುತೋಪಿನ 5 ಕಿ.ಮೀ. ಸುತ್ತಳತೆಯಲ್ಲಿ ನಡೆಸಲಾದ ಸಮೀಕ್ಷೆಯೇ ಸರಿಯಾಗಿ ಆಗದ ಕಾರಣ ಇನ್ನೂ ಸಾವಿರಾರು ಜನ ಎಂಡೋ ಬಾಧಿತರ ಪಟ್ಟಿಯಲ್ಲಿ ಸೇರಿಲ್ಲ ಎನ್ನುವ ಆರೋಪವಿತ್ತು. ಇದೀಗ ಎರಡನೇ ಹಂತದ ಸರ್ವೆಯಲ್ಲಿ 631 ಪ್ರಕರಣ ಪತ್ತೆಯಾಗಿರುವ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಉತ್ತರ ಕನ್ನಡ ಡಿಎಚ್ಒ ಡಾ.ನೀರಜ್ ಹೇಳಿದ್ದಿಷ್ಟು

ಈ ವಿಚಾರವಾಗಿ ಮಾತನಾಡಿದ ಉತ್ತರ ಕನ್ನಡ ಡಿಎಚ್ಒ ಡಾ.ನೀರಜ್, 2015-16ರಲ್ಲಿ ಸರ್ವೆ ಮಾಡಲಾಗಿತ್ತು. ಅದಾದ ನಂತರ 2024ರಲ್ಲಿ ಬಿಟ್ಟು ಹೋದ ಪ್ರಕರಣ ಸರ್ವೆ ಮಾಡಲಾಗಿತ್ತು. ಭಟ್ಕಳ, ಶಿರಸಿ-ಸಿದ್ದಾಪುರ, ಶಿರಾಲಿ, ಕುಮಟಾ, ಹೊನ್ನಾವರ, ಅಂಕೋಲಾದಲ್ಲಿ ಸರ್ವೆ ಮಾಡಲಾಗಿದ್ದು 1 ವರ್ಷದಲ್ಲಿ ಮಾಡಿದ ಸರ್ವೆಯಲ್ಲಿ 631 ಹೊಸ ಪ್ರಕರಣ ಪತ್ತೆಯಾಗಿದೆ. ತಜ್ಞ ವೈದ್ಯರಿಂದ ಸಹ ಪರೀಕ್ಷೆ ಮಾಡಿಸಲಾಗಿದೆ ಎಂದಿರುವ ಡಿಹೆಚ್​​ಓ ಈಗಾಗಲೇ ಹೊಸದಾಗಿ ಪತ್ತೆಯಾಗಿರುವ ಪ್ರಕರಣದವರ ಮಾಹಿತಿ ಪಡೆದು ಇಲಾಖೆ ವತಿಯಿಂದ ಅಂಗವಿಕಲ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದರು.

1985ರಿಂದ 2010-11ರವರೆಗೆ ಎಂಡೋಸಲ್ಫಾನ್ ಸ್ಪ್ರೇಯಿಂದ ಆದ ಪರಿಣಾಮ ಮೊದಲ ಸರ್ವೆಯಲ್ಲಿ ಯಾರ ಯಾರ ಮೇಲೆ ಆಗಿದೆ ಎಂದು ಪತ್ತೆಯಾಗಿತ್ತು. ಈಗ ಎರಡನೇ ಹಂತದ ಸರ್ವೆ ಮಾಡುವ ಮೂಲಕ ಬಿಟ್ಟು ಹೋದವರ ಪತ್ತೆ ಕಾರ್ಯ ಮಾಡಲಾಗುತ್ತಿದೆ. ಎರಡನೇ ಪೀಳಿಗೆ ಎಂಡೋಸಲ್ಫಾನ್ ಬಂದಿರುವ ಸಾಧ್ಯತೆ ಇದ್ದು ಈ ಬಗ್ಗೆ ಸಂಶೊಧನೆ ನಡೆಸಬೇಕಾಗಿದೆ. 10 ವರ್ಷದ ಒಳಗಿನ ಮಕ್ಕಳ ಪತ್ತೆ ಈ ಪ್ರಕರಣದಲ್ಲಿ ಆಗಿಲ್ಲ ಎಂದು ಡಾ. ನೀರಜ್ ತಿಳಿಸಿದ್ದಾ

ಸುಮಾರು 40 ವರ್ಷದ ಹಿಂದಿನ ಘಟನೆಯಿಂದ ಸಾವಿರಾರು ಜನರು ಅಂಗವೈಕಲ್ಯಕೊಳಗಾಗಿ ಜೀವನವನ್ನೇ ಹಾಸಿಗೆಯಲ್ಲಿ ಕಳೆಯುವಂತಾಗಿತ್ತು. ಸದ್ಯ ಎಂಡೋಸಲ್ಫಾನ್ ಪ್ರಕರಣ ಮತ್ತೆ ಪತ್ತೆಯಾಗಿದ್ದು, ಒಂದೊಮ್ಮೆ ಎರಡನೇ ಪೀಳಿಗೆಗೆ ಮುಂದುವರೆದರೆ ಸಾಕಷ್ಟು ಜನರಿಗೆ ಸಮಸ್ಯೆ ಆಗಲಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಮುಂಜಾಗೃತೆ ವಹಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

Previous Post

ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ

Next Post

ಹನಿಟ್ರ್ಯಾಪ್‌ ರಹಸ್ಯ ಸ್ಫೋಟ.. ಕೊನೆಗೂ ತನಿಖೆಗೆ ಮುಂದಾದ ರಾಜ್ಯ ಸರ್ಕಾರ; ಗೃಹ ಸಚಿವರು ಏನಂದ್ರು?

Next Post
ಹನಿಟ್ರ್ಯಾಪ್‌ ರಹಸ್ಯ ಸ್ಫೋಟ.. ಕೊನೆಗೂ ತನಿಖೆಗೆ ಮುಂದಾದ ರಾಜ್ಯ ಸರ್ಕಾರ; ಗೃಹ ಸಚಿವರು ಏನಂದ್ರು?

ಹನಿಟ್ರ್ಯಾಪ್‌ ರಹಸ್ಯ ಸ್ಫೋಟ.. ಕೊನೆಗೂ ತನಿಖೆಗೆ ಮುಂದಾದ ರಾಜ್ಯ ಸರ್ಕಾರ; ಗೃಹ ಸಚಿವರು ಏನಂದ್ರು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.