Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

editor tv by editor tv
April 1, 2025
in ರಾಷ್ಟ್ರೀಯ
0
ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ
1.9k
VIEWS
Share on FacebookShare on TwitterShare on Whatsapp

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮಲಯಾಳಂ ಚಿತ್ರ ‘ಎಲ್2 : ಎಂಪುರಾನ್’ ಅನ್ನು ತಕ್ಷಣ ನಿಷೇಧಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ವಿವಿ ವಿಜೀಶ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ನೀಡಲು ಕೇರಳ ಹೈಕೋರ್ಟ್ ಮಂಗಳವಾರ (ಏ.1) ನಿರಾಕರಿಸಿದೆ ಎಂದು barandbench.com ವರದಿ ಮಾಡಿದೆ.

ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು ಅರ್ಜಿದಾರರ ಪ್ರಾಮಾಣಿಕತೆಯನ್ನು ಅನುಮಾನಿಸಿದ್ದು, ಈ ಅರ್ಜಿ ಪ್ರಚಾರಕ್ಕಾಗಿ ಸಲ್ಲಿಸಿದಂತೆ ತೋರುತ್ತಿದೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

ನೀವು ಈ ಎಂಪುರಾನ್ ಚಿತ್ರವನ್ನು ನೋಡಿದ್ದೀರಾ? ನಿಮ್ಮ ಆಕ್ಷೇಪಣೆ ಏನು? ಇದನ್ನು ಸೆನ್ಸಾರ್ ಮಂಡಳಿ ಪ್ರಮಾಣೀಕರಿಸಿದೆಯಲ್ವಾ? ನಿಮ್ಮ ಪ್ರಾಮಾಣಿಕತೆಯ ಬಗ್ಗೆ ನನಗೆ ಅನುಮಾನವಿದೆ. ಈ ಚಲನಚಿತ್ರದಿಂದಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗಿದೆ ಎಂಬ ಒಂದು ದೂರನ್ನು ನನಗೆ ತೋರಿಸಿ. ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ನನಗೆ ತೋರಿಸಿ. ಇವೆಲ್ಲವೂ ಪ್ರಚಾರ ಆಧಾರಿತ ಅರ್ಜಿಗಳು, ಅಲ್ಲದೆ ಬೇರೇನೂ ಅಲ್ಲ” ಎಂದು ನ್ಯಾಯಾಲಯ ಹೇಳಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಈಗಾಗಲೇ ಚಿತ್ರವನ್ನು ಪ್ರದರ್ಶನಕ್ಕೆ ಅನುಮತಿಸಿದೆ ಎಂಬ ರಾಜ್ಯ ಸರ್ಕಾರದ ಪರ ವಕೀಲರ ವಾದವನ್ನು ನ್ಯಾಯಾಲಯ ಗಮನಿಸಿದೆ.

ಮೇಲಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯ ಈ ವಿಷಯವನ್ನು ಆದ್ಯತೆಯ ಮೇರೆಗೆ ವಿಚಾರಣೆಗೆ ಪಟ್ಟಿ ಮಾಡಲು ಮತ್ತು ಯಾವುದೇ ಮಧ್ಯಂತರ ಪರಿಹಾರ ಅಥವಾ ಆದೇಶ ನೀಡಲು ನಿರಾಕರಿಸಿದೆ. ನ್ಯಾಯಾಲಯದ ಬೇಸಿಗೆ ರಜೆಯ ನಂತರ ಈ ಪ್ರಕರಣದ ವಿಚಾರಣೆ ಮುಂದುವರೆಸಲಿದೆ.

ಭಾರತದ ಉಪ ಸಾಲಿಸಿಟರ್ ಜನರಲ್ (ಡಿಎಸ್‌ಜಿಐ) ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಪೊಲೀಸ್ ಮಹಾನಿರ್ದೇಶಕರ ರಾಜ್ಯ ಅಟಾರ್ನಿ ಪರವಾಗಿ ವಿಚಾರಣೆಗೆ ಹಾಜರಾಗಿದ್ದರು.

ನ್ಯಾಯಾಲಯ ನಟ ಮೋಹನ್ ಲಾಲ್, ಪೃಥ್ವಿರಾಜ್ ಮತ್ತು ಚಿತ್ರದ ನಿರ್ಮಾಪಕರು ಸೇರಿದಂತೆ ಪ್ರಕರಣದ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಎಂಪುರಾನ್ ಚಿತ್ರದಲ್ಲಿ 2002ರ ಗೋಧ್ರಾ ಗಲಭೆಯನ್ನು ಉಲ್ಲೇಖಿಸುವ ದೃಶ್ಯಗಳು ಇವೆ. ಭಾರತದ ರಕ್ಷಣಾ ಸಚಿವಾಲಯದ ಬಗ್ಗೆ ಅನಗತ್ಯ ಹೇಳಿಕೆಗಳು ನೀಡಲಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುವ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಅರ್ಜಿದಾರ ವಿಜೀಶ್ ಆರೋಪಿಸಿದ್ದರು.

ಈ ಚಿತ್ರ ಕೋಮು ಅಶಾಂತಿಗೆ ಕಾರಣವಾಗಬಹುದು. ಮತ್ತಷ್ಟು ವಿವಾದಗಳನ್ನು ತಡೆಗಟ್ಟಲು ಮತ್ತು ಯಾವುದೇ ಸಂಭಾವ್ಯ ಕೋಮು ಅಶಾಂತಿಯನ್ನು ತಪ್ಪಿಸಲು ಚಿತ್ರದ ಮುಂದಿನ ಪ್ರದರ್ಶನವನ್ನು ತಕ್ಷಣವೇ ಸ್ಥಗಿತಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿದ್ದರು

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಚಿತ್ರದಲ್ಲಿ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬದಲಾವಣೆಗಳೊಂದಿಗೆ ಈ ವಾರ ಚಿತ್ರ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದಾರೆ.

Previous Post

ಗಾಜಾದಲ್ಲಿ ಇಸ್ರೇಲ್‌ ಮತ್ತೆ ದಾಳಿ – 10 ದಿನಗಳಲ್ಲಿ 300 ಮಕ್ಕಳು ಮೃತ್ಯು

Next Post

Waqf Amendment Bill: ವಕ್ಫ್ ತಿದ್ದುಪಡಿ ಮಸೂದೆ ಚರ್ಚೆಗೆ ವೇದಿಕೆ ಸಜ್ಜು; ಯಾವ ಪಕ್ಷಗಳಿಂದ ಬೆಂಬಲ? ಯಾರಿಂದ ವಿರೋಧ?

Next Post
ಲೋಕಸಭೆಯಲ್ಲಿ ವಲಸೆ ಮಸೂದೆ ಅಂಗೀಕಾರ

Waqf Amendment Bill: ವಕ್ಫ್ ತಿದ್ದುಪಡಿ ಮಸೂದೆ ಚರ್ಚೆಗೆ ವೇದಿಕೆ ಸಜ್ಜು; ಯಾವ ಪಕ್ಷಗಳಿಂದ ಬೆಂಬಲ? ಯಾರಿಂದ ವಿರೋಧ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.