Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ರಿಕ್ಕಿ ರೈ ಪ್ರಕರಣ, ಮುತ್ತಪ್ಪರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!

editor tv by editor tv
April 19, 2025
in ಸುದ್ದಿ
0
ರಿಕ್ಕಿ ರೈ ಪ್ರಕರಣ, ಮುತ್ತಪ್ಪರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!
1.9k
VIEWS
Share on FacebookShare on TwitterShare on Whatsapp

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಮಾಜಿ ಭೂಗತ ದೊರೆ, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಮಗ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಾಲ್ಕು ಮಂದಿ ವಿರುದ್ಧ ಈಗ ಎಫ್‌ಐಆರ್ ದಾಖಲಾಗಿದೆ. ರಿಕ್ಕಿ ರೈ ಕಾರು ಚಾಲಕ ಬಸವರಾಜ್ ನೀಡಿದ ದೂರಿನ ಮೇಲೆ ಬಿಡಿದಿ ಪೊಲೀಸ್ ಠಾಣೆಯಲ್ಲಿ  ಎಫ್ ಐ ಆರ್ ದಾಖಲಾಗಿದೆ. ರಾಕೇಶ್ ಮಲ್ಲಿ, ಮುತ್ತಪ್ಪ ರೈ ಎರಡನೆ ಪತ್ನಿ ಅನುರಾಧ, ನಿತೀಶ್ ಎಸ್ಟೇಟ್ ಮಾಲೀಕ ನಿತೀಶ್ ಶೆಟ್ಟಿ ಮತ್ತು ವೈದ್ಯನಾಥ ಎಂಬುವರ ಮೇಲೆ ದೂರು ದಾಖಲಾಗಿದೆ. ಎ1 ಆರೋಪಿ ರಾಕೇಶ್ ಮಲ್ಲಿ, ಎ2 ಆರೋಪಿ ಅನುರಾಧ, ಎ3 ಆರೋಪಿ ನಿತೇಶ್ ಶೆಟ್ಟಿ, ಎ 4 ಆರೋಪಿ ವೈದ್ಯನಾಥ  ಮತ್ತು ಇತರರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಕೌಟುಂಬಿಕ ಕಲಹದ ಹಿನ್ನೆಲೆ ಬೆದರಿಕೆ ಇತ್ತು ಎಂದು ಹೇಳಲಾಗುತ್ತಿದೆ.

ನಾಲ್ಕೈದು ವರ್ಷಗಳಿಂದ ರಿಕ್ಕಿ ರೈ ಬಳಿ ಕಾರು ಚಾಲಕನಾಗಿ  ಬಸವರಾಜು ಕೆಲಸ ಮಾಡ್ತಿದ್ದಾರೆ. ಹಲವು ಭಾರಿ ನನಗೆ ಜೀವ ಬೆದರಿಕೆ ಇದೆ ಅಂತ ರಿಕ್ಕಿ ರೈ‌ ತಿಳಿಸಿದ್ದರು. ಸದಾಶಿವನಗರ ಹಾಗೂ ಬಿಡದಿಯ ಫಾರಂ ಹೌಸ್ ನಲ್ಲಿ ರಿಕ್ಕಿ ವಾಸವಿದ್ದರು. ತಮ್ಮ ಬೆಂಗಳೂರು ನಿವಾಸದಿಂದ 6 ಗಂಟೆಗೆ ಬಿಟ್ಟು 7.30ಕ್ಕೆ ಬಿಡದಿಯ ಮನೆಗೆ ಬಂದಿದ್ದ ರಿಕ್ಕಿ ರೈ ಮನೆಯಲ್ಲಿ ವಿಶ್ರಾಂತಿ ಪಡೆದು ರಾತ್ರಿ 11 ಗಂಟೆಗೆ ಬೆಂಗಳೂರಿನ ನಿವಾಸಕ್ಕೆ ಹೊರಟಿದ್ದರು. ಕಪ್ಪು ಬಣ್ಣದ ಕೆಎ 53 ಎಂಸಿ 7128 ನಂಬರ್ ನ ಫಾರ್ಚೂನರ್ ಕಾರಿನಲ್ಲಿ ರಿಕ್ಕಿ ರೈ, ಡ್ರೈವರ್ ಬಸವರಾಜ್ ಹಾಗೂ ಅಂಗರಕ್ಷಕ ರಾಜ್ ಪಾಲ್  ಹೊರಟಿದ್ದರು.

ಮನೆಯಿಂದ ಸ್ವಲ್ಪ ದೂರ ಹೋದಾಗ ಟಫ್ ಅಂತ ಶಬ್ಧ ಕೇಳಿ ಬಂದಿತ್ತು. ಸ್ವಲ್ಪ ಮುಂದೆ ಹೋಗಿ ಟಯರ್ ಬ್ಲಾಸ್ಟ್ ಆಗಿರಬಹುದು ಅಂತಾ  ಪರಿಶೀಲನೆ ನಡೆಸಿದ್ರು, ಆದರೆ ಎಲ್ಲವೂ ಸರಿಯಾಗಿದೆ ಅಂತಾ ಮುಂದೆ ಹೋದಾಗ ರೈಲ್ವೆ ಕ್ರಾಸ್ ವರೆಗೂ ಹೋಗಿ ಪರ್ಸ್ ಮರೆತಿರೋದಾಗಿ ರಿಕ್ಕಿ ರೈ ಹೇಳಿದ್ದಕ್ಕೆ. ಮತ್ತೆ ಬಿಡದಿಯ ಮನೆಗೆ ವಾಪಾಸ್ ಬಂದರು. ಆ ಬಳಿಕ ಮತ್ತೆ 12.50ಕ್ಕೆ ಬಿಡದಿಯಿಂದ ಬೆಂಗಳೂರಿಗೆ ರಿಕ್ಕಿ ರೈ ಸಹಿತ ಮೂವರು ಹೊರಟಿದ್ದರು.

ಇದಾದ ನಂತರ ಮೊದಲು ಸೌಂಡ್ ಕೇಳಿದ್ದ ಜಾಗದಲ್ಲೆ ಮತ್ತೆ ಫೈರಿಂಗ್ ನಡೆದಿದೆ. ಏಕಾಏಕಿ ಗುಂಡು ಹಾರಿಸಿದ ಪರಿಣಾಮ ಡ್ರೈವರ್ ಬಚಾವ್ ಆಗಿದ್ದು, ರಿಕ್ಕಿ ರೈ ಅವರ ಮೂಗು ಹಾಗೂ ಬಲತೋಳಿಗೆ  ಗುಂಡು ತಾಗಿದೆ. ಒಂದೇ ರಾತ್ರಿ ಎರಡು ಬಾರಿ ಫೈರಿಂಗ್ ಆಗಿದ್ದು, ಮೊದಲನೇ ಬಾರಿ ಪಾರಾಗಿ ಹೋಗಿದ್ದ ರಿಕ್ಕಿ ಎರಡನೇ ಬಾರಿ ಗುಂಡೇಟಿಗೆ ಸಿಕ್ಕಿದ್ದಾರೆ. ಕೂಡಲೇ ಗಾಡಿ ನಿಲ್ಲಿಸಿ ರಿಕ್ಕಿ ರೈ ಅವರನ್ನ  ಚಾಲಕ ಬಸವರಾಜ್ ನೋಡಿದಾಗ ತೀವ್ರ ರಕ್ತ ಸ್ರಾವ ಆಗಿತ್ತು, ತನ್ನದೇ ಶರ್ಟ್ ಬಿಚ್ಚಿ ಮುಖದ ಮೇಲೆ ಒತ್ತಿ ಹಿಡಿದರು. ಅದ್ರೂ ರಕ್ತಸ್ರಾವ ಕಡಿಮೆ ಆಗಿರಲಿಲ್ಲ. ಬಳಿಕ ಬಿಡದಿಯ ಭರತ್ ಕೆಂಪಣ್ಣ ಆಸ್ಪತ್ರೆಗೆ ಅದೇ ಕಾರಿನಲ್ಲಿ ತೆರಳಿದರು. ಕೂಡಲೇ ವೈದ್ಯರು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚನೆ ನೀಡಿದರು.

ಘಟನೆ ಬಳಿಕ ರಿಕ್ಕಿ ರೈ ಅವರನ್ನ ಡ್ರೈವರ್ ಬಸವರಾಜ್ ಮಾತನಾಡಿಸಿದ್ದು, ಈ ವೇಳೆ ರಾಕೇಶ್ ಮಲ್ಲಿ, ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥ್ ಮೇಲೆ ಅನುಮಾನ ಇರೋದಾಗಿ ತಿಳಿಸಿದ್ರು. ಮುತ್ತಪ್ಪ ರೈ ಗೂ ಹಲವಾರು ವಿರೋಧಿಗಳಿದ್ರು, ಅವರಿದ್ದಾಗಲೂ ಅಟ್ಯಾಕ್ ನಡೆದಿತ್ತು. ಬಳಿಕ ಅವರು ಕ್ಯಾನ್ಸರ್ ನಿಂದ ಮೃತಪಟ್ಟಿದ್ದರು. ಅವರ ಕೊನೆಯ ದಿನಗಳಲ್ಲೂ ಅನುರಾಧ, ರಾಕೇಶ್ ಮಲ್ಲಿಯಿಂದ ಬೆದರಿಕೆ ಕರೆ ಬಂದಿತ್ತು. ಮಾನಸಿಕ ಕಿರುಕುಳ ಕೊಡ್ತಿದ್ದರು. ಹಾಗಾಗಿ ಮಕ್ಕಳಿಗೆ ಸದಾ ಎಚ್ಚರಿಕೆಯಿಂದ ಇರುವಂತೆ ಮುತ್ತಪ್ಪ ರೈ ತಿಳಿಸಿದ್ದರಂತೆ. ರಿಕ್ಕಿ ರೈಗೆ ವಿವಾಹವಾಗಿದ್ದು, ಹೆಂಡತಿ, ಮಗು ವಿದೇಶದಲ್ಲಿದ್ದಾರೆ. ಆಗಾಗ ಅಲ್ಲಿಗೆ ಹೋಗಿ ಬಂದಿರೋದು ಮಾಡುತ್ತಿರುತ್ತಾರಂತೆ. ಸದ್ಯ ದೂರಿನಲ್ಲಿ ಉಲ್ಲೇಖ ಮಾಡಿರೋ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ  ಚಾಲಕ ತನ್ನ ದೂರಿನಲ್ಲಿ ತಿಳಿಸಿದ್ದಾನೆ

Previous Post

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಆರೋಪ ಸಾಬೀತಾದರೆ ಕಠಿಣ ಕ್ರಮ; ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

Next Post

ಏಪ್ರಿಲ್ 22ರಂದು ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಭೇಟಿ

Next Post
ಏಪ್ರಿಲ್ 22ರಂದು ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಭೇಟಿ

ಏಪ್ರಿಲ್ 22ರಂದು ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಭೇಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.