Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

editor tv by editor tv
May 5, 2025
in ವಿದೇಶ
0
ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ
1.9k
VIEWS
Share on FacebookShare on TwitterShare on Whatsapp

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ 19 ತಿಂಗಳ ಯುದ್ಧವನ್ನು ವಿಸ್ತರಿಸಲು “ಹತ್ತಾರು ಸಾವಿರ” ಮೀಸಲು ಪಡೆಗಳ ಕರೆಯನ್ನು ಇಸ್ರೇಲ್ ಸೈನ್ಯವು ದೃಢಪಡಿಸುವ ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ಅಕ್ರಮ ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಈ ದಾಳಿಯನ್ನು ಹೂತಿಗಳು ನಡೆಸಿದ್ದಾರೆ. ಕ್ಷಿಪಣಿಯನ್ನು ಪ್ರತಿಬಂಧಿಸಲು ಹಲವಾರು ಪ್ರಯತ್ನಗಳು ನಡೆಸಿದ ಹೊರತಾಗಿಯೂ ದಾಳಿ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಇಸ್ರೇಲ್ ಈ ಹಿಂದೆ ಕೂಡಾ ಇರಾನ್ ಬೆಂಬಲಿತ ಹೂತಿ ಬಂಡುಕೋರರ ವಿರುದ್ಧ “ಕ್ರಮ ಕೈಗೊಂಡಿದೆ” ಮತ್ತು “ಭವಿಷ್ಯದಲ್ಲಿ ಕೂಡಾ ಅವರ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಟೆಲಿಗ್ರಾಮ್‌ನಲ್ಲಿ ಪ್ರಸಾರ ಮಾಡಲಾದ ವೀಡಿಯೊದಲ್ಲಿ ನೆತನ್ಯಾಹು ಹೇಳಿದ್ದಾರೆ. “ಇದು ಒಂದೇ ಸ್ಫೋಟದಲ್ಲಿ ನಿಲ್ಲುವುದಿಲ್ಲ, ಬದಲಾಗಿ ಅನೇಕ ಸ್ಫೋಟಗಳು ಇರುತ್ತವೆ” ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ.

ನಂತರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ನೆತನ್ಯಾಹು, ಇಸ್ರೇಲ್ ನಾವು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇರಾನ್‌ಗೆ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ.

ದಾಳಿಯಿಂದಾಗಿ ವಿಮಾನ ನಿಲ್ದಾಣದ ಪ್ರದೇಶದಲ್ಲಿ ದೊಡ್ಡದಾದ ಆಳವಾದ ಹೊಂಡ ಸೃಷ್ಟಿಯಾಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದು ನಿಲ್ದಾಣದ ನಿಯಂತ್ರಣ ಗೋಪುರದ ಬಳಿಯೆ ಇದ್ದರೂ, ಅದರ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನ ಮುಖ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಕ್ಷಿಪಣಿ ದಾಳಿ” ಸಂಭವಿಸಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅತಿದೊಡ್ಡ ಟರ್ಮಿನಲ್ 3 ರ ಪಾರ್ಕಿಂಗ್ ಸ್ಥಳಗಳ ಬಳಿ ಕ್ಷಿಪಣಿ ಬಡಿದಿದೆ ಎಂದು AFP ಛಾಯಾಗ್ರಾಹಕರೊಬ್ಬರು ಹೇಳಿದ್ದಾರೆ.

“ನಮ್ಮ ಹಿಂದೆ ಇರುವ ಪ್ರದೇಶವನ್ನು ನೀವು ನೋಡಬಹುದು: ಇಲ್ಲಿ ಒಂದು ಹೊಂಡ ರೂಪುಗೊಂಡಿದ್ದು, ಇದು ಹಲವಾರು ಡಜನ್ ಮೀಟರ್ ಅಗಲ ಮತ್ತು ಹಲವಾರು ಡಜನ್ ಮೀಟರ್ ಆಳವಿದೆ” ಎಂದು ಮಧ್ಯ ಇಸ್ರೇಲ್‌ನ ಪೊಲೀಸ್ ಮುಖ್ಯಸ್ಥ ಯೈರ್ ಹೆಜ್ರೋನಿ ವೀಡಿಯೊದಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ವ್ಯಾಪ್ತಿಯೊಳಗೆ ಕ್ಷಿಪಣಿ ನೇರವಾಗಿ ಬಿದ್ದಿರುವುದು “ಇದು ಮೊದಲ ಬಾರಿಗೆ” ಎಂದು ಇಸ್ರೇಲಿ ಮಿಲಿಟರಿ ವಕ್ತಾರರು AFP ಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು ದಾಳಿಯ ಜವಾಬ್ದಾರಿಯನ್ನು ಹೂತಿ ಬಂಡುಕೋರರು ವಹಿಸಿಕೊಂಡಿದ್ದಾರೆ. ಅವರು ಯುದ್ಧದಿಂದ ಹಾನಿಗೊಳಗಾದ ಗಾಜಾದಲ್ಲಿ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸಲು ಕಾರ್ಯನಿರ್ವಹಿಸುವುದಾಗಿ ನಿರಂತರವಾಗಿ ಹೇಳುತ್ತಲೆ ಬಂದಿದ್ದಾರೆ. “ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ”ಯೊಂದಿಗೆ ತಮ್ಮ ಪಡೆಗಳು “ಬೆನ್ ಗುರಿಯನ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು” ಮಿಲಿಟರಿ ಕಾರ್ಯಾಚರಣೆ ನಡೆಸಿವೆ ಎಂದು ಬಂಡುಕೋರರು ಹೇಳಿದ್ದಾರೆ. ಪ್ಯಾಲೆಸ್ತೀನಿ ಪ್ರತಿರೋಧ ಸೇನೆ ಹಮಾಸ್ ಮತ್ತು ಇತರ ಬಂಡುಕೋರ ಗುಂಪುಗಳು ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾರೆ.

Previous Post

ರಿಯಾಜ್ ಕಡಂಬು ವಿರುದ್ಧ ಬೆದರಿಕೆ: ಪ್ರಕರಣ ದಾಖಲು

Next Post

ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಪಾತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

Next Post
ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಪಾತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಪಾತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.