Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

25,000 ರೂ.ಗೆ ಜೀತಕ್ಕಿರಿಸಿದ್ದ ಮಗ ಸಾವು – ರಹಸ್ಯವಾಗಿ ಸಮಾಧಿಯಲ್ಲಿ ಹೂತಿಟ್ಟಿದ್ದ ಮಾಲೀಕ ಅರೆಸ್ಟ್‌

editor tv by editor tv
May 24, 2025
in ರಾಷ್ಟ್ರೀಯ
0
25,000 ರೂ.ಗೆ ಜೀತಕ್ಕಿರಿಸಿದ್ದ ಮಗ ಸಾವು – ರಹಸ್ಯವಾಗಿ ಸಮಾಧಿಯಲ್ಲಿ ಹೂತಿಟ್ಟಿದ್ದ ಮಾಲೀಕ ಅರೆಸ್ಟ್‌
1.9k
VIEWS
Share on FacebookShare on TwitterShare on Whatsapp

ಕರುಳು ಹಿಂಡುವ ಕಥೆ – ಪೊಲೀಸರು ಪ್ರಕರಣ ಭೇದಿಸಿದ್ದೇ ರೋಚಕ

ಚೆನ್ನೈ/ಹೈದರಾಬಾದ್‌: 25,000 ರೂ. ಸಾಲಕ್ಕಾಗಿ (Loan) ಜೀತಕ್ಕಿರಿಸಿಕೊಂಡಿದ್ದ ಹುಡುಗನೊಬ್ಬನ ಶವ ತಮಿಳುನಾಡಿನಲ್ಲಿ (TamilNadu) ಸಮಾಧಿಯಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೌದು. ಆಂಧ್ರ ಪ್ರದೇಶದ ಬಾತುಕೋಳಿ ಸಾಕಣೆದಾರ (Duck Rearer) ಯಾನಾಡಿ ಬುಡಕಟ್ಟು ಸಮುದಾಯದ ಮಹಿಳೆ ಮತ್ತು ಆಕೆಯ ಮೂವರು ಮಕ್ಕಳನ್ನು 25,000 ರೂ. ಸಾಲಕ್ಕೆ ಜೀತದಾಳುಗಳಾಗಿ ಇರಿಸಿಕೊಂಡಿದ್ದ. ಬಳಿಕ ತಾಯಿ ಇಬ್ಬರು ಮಕ್ಕಳನ್ನ ಬಿಟ್ಟು ಒಬ್ಬ ಮಗನನ್ನ ಮೇಲಾಧಾರವಾಗಿ (collateral) ಇರಿಸಿಕೊಂಡಿದ್ದ. ಮಹಿಳೆ ಬಡ್ಡಿ ಸಮೇತ ಸಾಲದ ಹಣ ಹೊಂದಿಸಿ ಮಗನನ್ನ ಬಿಡುವಂತೆ ಮಹಿಳೆ ಕೇಳಿದಾಗ ಹುಡುಗ ಓಡಿಹೋಗಿದ್ದಾನೆಂದು ಕಥೆ ಕಟ್ಟಿದ್ದ. 

ಈ ಸಂಬಂಧ ಮಹಿಳೆ ನೀಡಿನ ದೂರಿನ ಮೇರೆಗೆ ಕೇಸ್‌ ದಾಖಲಿಸಿಕೊಂಡ ಪೊಲೀಸರು (Andhra Police) ಬಾತುಕೋಳಿ ಸಾಕಣೆದಾರನನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಹುಡುಗ ಮೃತಪಟ್ಟಿರುವುದು ಗೊತ್ತಾಗಿದೆ. ವಿಚಾರಣೆ ವೇಳೆ ಮಾಲೀಕನೇ ತಮಿಳುನಾಡಿನ ಕಾಂಚಿಪುರಂನಲ್ಲಿರುವ ತನ್ನ ಅತ್ತೆಯ ಮನೆಯ ಬಳಿ ಶವವನ್ನು ಹೂತಿದ್ದಾನೆಂದು ಬಾಯ್ಬಿಟ್ಟಿದ್ದಾನೆ. ಬಳಿಕ ಮಂಗಳವಾರ (ಮೇ 20) ಪೊಲೀಸರು ಹುಡುಗನ ಶವವನ್ನ ಹೊರತೆಗೆದಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಕರುಳು ಹಿಂಡುವ ಕಥೆ
ಆಂಧ್ರ ಪ್ರದೇಶದ ನಿವಾಸಿ ಅನಕಮ್ಮ ಮತ್ತು ಆಕೆಯ ದಿ. ಪತಿ ಚೆಂಚಯ್ಯ ಮತ್ತವರ ಮೂವರು ಮಕ್ಕಳು ಬಾತುಕೋಳಿ ಸಾಕಣೆದಾರನ ಬಳಿ ಒಂದು ವರ್ಷದಿಂದ ಜೀತದಾಳುಗಳಾಗಿ ಕೆಲಸ ಮಾಡಿಕೊಂಡಿದ್ದರು. ಚೆಂಚಯ್ಯ ಮರಣದ ನಂತರ ಮಾಲೀಕ ಅನಕಮ್ಮ ಮತ್ತು ಆಕೆಯ ಮಕ್ಕಳನ್ನ ವಿರೀತವಾಗಿ ಶೋಷಣೆ ಮಾಡುತ್ತಿದ್ದ. ಆದ್ರೆ ಚೆಂಚಯ್ಯ ಮರಣಕ್ಕೂ ಮುನ್ನ 25,000 ರೂ. ಸಾಲ ಪಡೆದುಕೊಂಡಿದ್ದ ಕಾರಣ ಅವರು ಹೊರಗೆ ಹೋಗಲು ಸಾಧ್ಯವಿರಲಿಲ್ಲ. ಸಂಬಳ ಹೆಚ್ಚು ಮಾಡುವಂತೆ ಕೇಳಿಕೊಂಡಿದ್ದರೂ ಮಾಲೀಕನ ಮನಸ್ಸು ಕರಗಲಿಲ್ಲ. 

ಕೊನೆಗೆ ಆಕೆ ಮನೆಯಿಂದ ಹೊರಹೋಗಲು ನಿರ್ಧರಿಸಿದಾಗ 25,000 ರೂ. ಸಾಲಕ್ಕೆ 20 ಸಾವಿರ ರೂ. ಬಡ್ಡಿ ಹಣ ಸೇರಿ 45,000 ರೂ. ಕೊಡುವಂತೆ ಪಟ್ಟು ಹಿಡಿದಿದ್ದ. ಇದರಿಂದ ವಿಧಿಯಿಲ್ಲದೇ ಅನಕಮ್ಮ ತಮ್ಮ ಮೂವರು ಮಕ್ಕಳಲ್ಲಿ ಒಬ್ಬ ಮಗನನ್ನ ಜೀತದಾಳಾಗಿ ಬಿಟ್ಟು ಹೋಗಲು ಒಪ್ಪಿಕೊಂಡಳು. ಆಗಾಗ್ಗೆ ತನ್ನ ಮಗನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಅಮ್ಮ ಫೋನ್‌ ಮಾಡಿದಾಗೆಲ್ಲ ಮಾಲೀಕ ತೊಂದ್ರೆ ಕೊಡ್ತಿದ್ದಾನೆ, ನನ್ನನ್ನು ಇಲ್ಲಿಂದು ಕರೆದುಕೊಂಡು ಹೋಗು ಅಂತ ಮಗ ಬೇಡಿಕೊಳ್ಳುತ್ತಿದ್ದ. ಅನಕಮ್ಮ ಏಪ್ರಿಲ್‌ನಲ್ಲಿ ಮಗನೊಂದಿಗೆ ಕೊನೆಯ ಬಾರಿ ಮಾತನಾಡಿದ್ದಳು.

Money

ಹೇಗೋ ಏಪ್ರಿಲ್‌ ಅಂತ್ಯದ ವೇಳೆಗೆ ಅನಕಮ್ಮ ಕಟ್ಟಪಟ್ಟು ದುಡಿದು ಹಣ ಹೊಂದಿಸಿದಳು. ಸಾಲ ಪಾವತಿಸಿ ಮಗನನ್ನ ಬಿಡಿಸಿಕೊಂಡು ಬರಲೆಂದು ಆ ಬಾತುಕೋಳಿ ಸಾಕಣೆದಾರನ ಬಳಿ ಹೋದಾಗ ಆತ ತಕ್ಷಣಕ್ಕೆ ಆಟವಾಡಿಸಿದ. ಮೊದಮೊದಲು ಹುಡುಗನನ್ನ ಬೇರೆಡೆಗೆ ಕೆಲಸಕ್ಕೆ ಕಳುಹಿಸಿರುವುದಾಗಿ ಹೇಳುತ್ತಿದ್ದ ಮಾಲೀಕ ಬಳಿಕ ಓಡಿ ಹೋಗಿದ್ದಾನೆಂದು ಕಥೆ ಕಟ್ಟಿದ್ದ. ಇದರಿಂದ ಅನುಮಾನಗೊಂಡ ಅನಕಮ್ಮ ಬುಡಕಟ್ಟು ಸಮುದಾಯ ಮುಖಂಡದ ಸಹಾಯ ಪಡೆದು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆ ಬಾತುಕೋಳಿ ಸಾಕಣೆದಾರನನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ವಿಚಾರಣೆ ವೇಳೆ ಬಾತುಕೋಳಿ ಸಾಕಣೆದಾರ ಹುಡುಗ ಸಾವನ್ನಪ್ಪಿದ್ದಾನೆ ಮತ್ತು ಆತನನ್ನ ಕಾಂಚಿಪುರಂನಲ್ಲಿರುವ ತನ್ನ ಅತ್ತೆಯ ಮನೆಯ ಬಳಿ ರಹಸ್ಯವಾಗಿ ಸಮಾಧಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಈ ಪ್ರಕರಣದಲ್ಲಿ ಆರೋಪಿಗೆ ಸಹಕರಿಸಿದ್ದ ಬಾತುಕೋಳಿ ಸಾಗಣೆದಾರನ ಪತ್ನಿ, ಮಗನನ್ನೂ ಬಂಧಿಸಿ, ಜೀತ ಪದ್ಧತಿ (ನಿರ್ಮೂಲನೆ) ಕಾಯ್ದೆ, ಬಾಲ ಕಾರ್ಮಿಕ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ. ಮಂಗಳವಾರ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಯಾನಾಡಿ ಬುಡಕಟ್ಟು ಜನಾಂಗದವರು ಜೀತಪದ್ದತಿಗೆ ಹೆಚ್ಚು ಗುರಿಯಾಗುತ್ತಿದ್ದಾರೆ. ಇತ್ತೀಚೆಗೆ ಈ ಸಮುದಾಯದ 50 ಜನರನ್ನ ರಕ್ಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ

Previous Post

ಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೆ – ಗುಜರಾತ್‌ನ ಸಹದೇವ್ ಸಿಂಗ್ ಬಂಧನ

Next Post

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: ನಾಲ್ಕು ಇನ್‌ಸ್ಟಾಗ್ರಾಂ ಮತ್ತು ಒಂದು ಫೇಸ್‌ಬುಕ್‌ ಪೇಜ್‌ ರದ್ದು

Next Post
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: ನಾಲ್ಕು ಇನ್‌ಸ್ಟಾಗ್ರಾಂ ಮತ್ತು ಒಂದು ಫೇಸ್‌ಬುಕ್‌ ಪೇಜ್‌ ರದ್ದು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: ನಾಲ್ಕು ಇನ್‌ಸ್ಟಾಗ್ರಾಂ ಮತ್ತು ಒಂದು ಫೇಸ್‌ಬುಕ್‌ ಪೇಜ್‌ ರದ್ದು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.