Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಂಟ್ವಾಳ ರಹಿಮಾನ್ ಹತ್ಯೆ..ಮತ್ತೆ ಪ್ರತೀಕಾರದ ಪೋಸ್ಟರ್: ಮಂಗಳೂರಿನಲ್ಲಿ ಏನೇನಾಯ್ತು? ಇಲ್ಲಿದೆ ವಿವರ

editor tv by editor tv
May 29, 2025
in ರಾಜ್ಯ
0
ಬಂಟ್ವಾಳ ರಹಿಮಾನ್ ಹತ್ಯೆ..ಮತ್ತೆ ಪ್ರತೀಕಾರದ ಪೋಸ್ಟರ್: ಮಂಗಳೂರಿನಲ್ಲಿ ಏನೇನಾಯ್ತು? ಇಲ್ಲಿದೆ ವಿವರ
1.9k
VIEWS
Share on FacebookShare on TwitterShare on Whatsapp

Bantwal Abdul Rehman Murder: ರೌಡಿಶೀಟರ್​ ಸುಹಾಸ್ ಶೆಟ್ಟಿ ಕೊಲೆ ಬಳಿಕ ಉದ್ವಿಗ್ನಗೊಂಡು ಶಾಂತವಾಗಿದ್ದ ಕರಾವಳಿ ಮತ್ತೆ ಕೊತ ಕೊತ ಅಂತಿದೆ. ಯುವಕನ ಬರ್ಬರ ಕೊಲೆಯಿಂದಾಗಿ ಶಾಂತಿ ಕದಡಿದೆ. ನಿನ್ನೆ ಬಂಟ್ವಾಳದಲ್ಲಿ ನಡೆದಿದ್ದ ಕೊಲೆ ಇಡೀ ಕರಾವಳಿ ಕೊತ ಕೊತ ಎಂದಿದೆ. ಹೀಗಾಗಿ ಮುಂಜಾಗ್ರತವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಾಗಿದ್ರೆ ಆಗಿದ್ದೇನು? ಸದ್ಯ ಮಂಗಳೂರು ಸ್ಥಿತಿ ಹೇಗಿದೆ? ಪೊಲೀಸರು ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ

ಮಂಗಳೂರು, (ಮೇ 29):  ಸುಹಾಸ್ ಶೆಟ್ಟಿ (Suhas Shetty) ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ನಿನ್(ಮೇ 27) ಮಧ್ಯಾಹ್ನ ಮುಸ್ಲಿಂ ಯುವಕನೊಬ್ಬನನ್ನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಅಬ್ದುಲ್ ರಹಿಮಾನ್ (32) (Bantwal Abdul Rehman) ಎಂಬಾತ ದಕ್ಷಿಣ ಕನ್ನಡ  (Dakshina Kannada) ಜಿಲ್ಲೆ ಬಂಟ್ವಾಳ ತಾಲೂಕಿನ ಕೂರಿಯಾಳ ಸಮೀಪದ ಈರಕೋಡಿಯ ಕೊಳತ್ತಮಜಲ್ ನಿವಾಸಿ. ಪಿಕಪ್ ವಾಹನ ಓಡಿಸಿ ಜೀವನ ಸಾಗಿಸುತ್ತಿದ್ದ. ನಿನ್ನೆ (ಮೇ 27) ಒಂದು ಲೋಡ್ ಮರಳು ಬೇಕು ಎಂದು ದುಷ್ಕರ್ಮಿಗಳು ಕರೆಸಿಕೊಂಡಿದ್ದು, ಅನ್ಲೋಡ್ ಆಗುತ್ತಿದ್ದಂತೆಯೇ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದಿದ್ದಾರೆ. ಇದರಿಂದ ಎಲ್ಲೆಲ್ಲೂ ಆಕ್ರೋಶ ಭುಗಿಲೆದ್ದಿದೆ. ಶಾಂತವಾಗಿದ್ದ ಕರಾವಳಿ ಮತ್ತೆ ಕೊತ ಕೊತ ಅಂತಿದೆ.ಯುವಕನ ಬರ್ಬರ ಕೊಲೆಯಿಂದ ಇಡೀ ಮಂಗಳೂರಿಗೆ ಮಂಗಳೂರೇ ಪ್ರಕ್ಷುಬ್ಧಗೊಂಡಿದೆ.

ರಹಿಮಾನ್ ಹತ್ಯೆ ಸುದ್ದಿ ಕಾಡ್ಗಿಚ್ಚನಂತೆ ಹಬ್ಬುತ್ತಿದ್ದಂತೆಯೇ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಬಳಿ ರಾತ್ರಿ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ರು. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದಲೇ ಅಮಾಯಕ ಮುಸ್ಲಿಂ ಯುವಕನ ಹತ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೇ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿ ಪೊಲೀಸರ ವಿರುದ್ಧವೇ ಕಿಡಿಕಾರಿದರು.

ರಹಿಮಾನ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ರು. ಬಳಿಕ ಆಸ್ಪತ್ರೆಯಿಂದಲೇ ಅಂತಿಮಯಾತ್ರೆಯನ್ನ ನಡೆಸಲಾಯ್ತು. ಸುರಿಯುವ ಮಳೆಯ ನಡುವೆಯೇ ಆ್ಯಂಬುಲೆನ್ಸ್​ ನಲ್ಲಿ ಅಂತಿಮ ಯಾತ್ರೆ ನಡೆಸಲಾಯ್ತು. ಹೀಗಾಗಿ ಫರಂಗಿಪೇಟೆ ಹಾಗೂ ಬಿ.ಸಿ.ರೋಡ್​ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು.

ಇನ್ನು ರಹಿಮಾನ್ ಹತ್ಯೆ ಖಂಡಿಸಿ ದೇರಳಕಟ್ಟೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯ್ತು.

ಸಂಚಾರ ಮಾಡುತ್ತಿದ್ದನ್ನು ವಿರೋಧಿಸಿ ಆಟೋದಲ್ಲಿ ಖಾಸಗಿ ಬಸ್​ ಗಳನ್ನ ಅಟ್ಟಾಡಿಸಿಕೊಂಡು ಹೋಗಿರುವ ದೃಶ್ಯ ವೈರಲ್ ಆಗಿತ್ತು. ಅಲ್ಲದೇ ಕೆಲ ಅಂಗಡಿಗಳನ್ನು ಬಂದ್ ಮಾಡಿಸಿದ್ದು, ಬಳಿಕ ದೇರಳಕಟ್ಟೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯ್ತು.

ರಹಿಮಾನ್ ಮೃತದೇಹ ಇದ್ದ ಆ್ಯಂಬುಲೆನ್ಸ್ ಫರಂಗಿಪೇಟೆಗೆ ಬರುತ್ತಿದ್ದಂತೆಯೇ ವಾಹನವನ್ನ ಅಡ್ಡಹಾಕಿದ ನೂರಾರು ಜನರು ಅಂತಿಮ ದರ್ಶನ ಪಡೆದರು. ಬಳಿಕ ಕುತ್ತಾರು ಮದನಿನಗರದ ಮಸೀದಿಯಲ್ಲಿ ರಹಿಮಾನ್ ಮೃತದೇಹ ಅಂತಿಮದರ್ಶನ ನಡೀತು. ಮಸೀದಿಯಲ್ಲಿ ಅಂತಿಮ ದರ್ಶನದ ಬಳಿಕ ಕೊಲ್ತಮಜಲು ಗ್ರಾಮಕ್ಕೆ ಮೃತದೇಹವನ್ನ ತರಲಾಯ್ತು. ಇದೇ ಮಸೀದಿಯ ಬಳಿ ಖಬರಸ್ತಾನದಲ್ಲಿ ರಹಿಮಾನ್ ಕ್ರಿಯೆ ನಡೆಯಿತು.

ದುಷ್ಕರ್ಮಿಗಳ ಸೆರೆಗೆ 5 ಪೊಲೀಸ್ ತಂಡ ರಚನೆ

ರಹಿಮಾನ್ ಹತ್ಯೆ ಪ್ರಕರಣ ಸಂಬಂಧ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 15 ಜನರ ವಿರುದ್ಧ FIR ದಾಖಲಾಗಿದೆ. ನಿಸಾರ್ ಎಂಬುವವರು ನೀಡಿದ ದೂರಿನ ಅನ್ವಯ, ದೀಪಕ್, ಸುಮಿತ್ ಸೇರಿ ರಹಿಮಾನ್ ಪರಿಚಯಸ್ಥರೇ ಆಗಿರುವ ಆಗಿರುವ 15 ಜನರ ವಿರುದ್ಧ FIR ದಾಖಲಾಗಿದೆ. ದುಷ್ಕರ್ಮಿಗಳ ಸೆರೆಗೆ 5 ಪೊಲೀಸ್​ ತಂಡ ರಚನೆ ಮಾಡಲಾಗಿದ್ದು, ಡಿವೈಎಸ್​ಪಿ ವಿಜಯ್ ಪ್ರಕಾಶ್​ ನೇತ್ವದಲ್ಲಿ ತನಿಖೆ ನಡೆಯುತ್ತಿದೆ.

ಸದ್ಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 30ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಇರಲಿದೆ. ಈ ಮಧ್ಯೆ ಇಂದು ಮಂಗಳೂರಿಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಭೇಟಿ ನೀಡಿ ಪರಿಶೀಲಿಸಿದರು.

ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಇನ್ನು ಈ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆರ್.ಹಿತೇಂದ್ರ , ನಿನ್ನೆ ಮಧ್ಯಾಹ್ನ 3 ಗಂಟೆಗೆ ಅಬ್ದುಲ್ ರಹಿಮಾನ್ ಮೇಲೆ ದಾಳಿ ಆಗಿದ್ದು, ಅಬ್ದುಲ್​ ರಹಿಮಾನ್ ಅಂತ್ಯಕ್ರಿಯೆ ಶಾಂತಿಯುತವಾಗಿ ಮುಗಿದಿದೆ. ಇನ್ನು ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಿಷೇಧಾಜ್ಞೆ ಇದ್ದು, ಕೊಲೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. FIR​​​​ನಲ್ಲಿ ಇಬ್ಬರ ಹೆಸರಿದೆ, ಬಂಧಿಸಿದ ಬಳಿಕ ಮಾಹಿತಿ ನೀಡುತ್ತೇವೆ. ಸದ್ಯ ತನಿಖೆ ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು.

ರಿವೇಂಜ್​ ಪೋಸ್ಟ್​ ವಿರುದ್ಧ ಕ್ರಮ

ಉತ್ತರ ಕನ್ನಡ , ಉಡುಪಿ, ಚಿಕ್ಕಮಗಳೂರು, ಮೈಸೂರಿನಿಂದ ಪೊಲೀಸರನ್ನ ಕರೆಸಿದ್ದೇವೆ. ಜನ ಶಾಂತಿ ಕಾಪಾಡಬೇಕು, ಯಾವುದೇ ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಸಾಮಾಜಿಕ ಜಾಲತಾಣಗಳ ರಿವೇಂಜ್​ ಪೋಸ್ಟ್​ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ಅಪರಿಚಿತ ಅಕೌಂಟ್ ಇದೆ, ವಿದೇಶದಲ್ಲೂ ಕೂತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾರೆ. ಅದೆಲ್ಲಾ ನಿಜ ಎಂದು ನಂಬಬೇಡಿ, ಪೊಲೀಸ್ ಇಲಾಖೆಯನ್ನು ನಂಬಿ. ಇತ್ತೀಚಿನ ದಿನಗಳಲ್ಲಿ ಪ್ರಚೋದನಾಕಾರಿ ಹೇಳಿಕೆಗಳು ಹೆಚ್ಚಾಗುತ್ತಿವೆ. ಅಂಥವರ ವಿರುದ್ಧವೂ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಸಹಜ ಸ್ಥಿತಿಯತ್ತ ಮಂಗಳೂರು

ನಿನ್ನೆ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣಾಗಿತ್ತು. ಹೀಗಾಗಿ ಪೊಲೀಸರು ಮುಂಜಾಗ್ರಾ ಕ್ರಮವಾಗಿ ಎಲ್ಲೆಡೆ ಬಿಗಿಬಂದೋಬಸ್ತ್ ಕೈಗೊಂಡಿದ್ದರಿಂದ ಯಾವುದೇ ಅಹಿತಕ ಘಟನೆಗಳು ನಡೆದಿಲ್ಲ. ಸದ್ಯ ಮಂಗಳೂರು ನಗರದಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟು ಓಪನ್ ಆಗಿವೆ. ಮಂಗಳೂರಿನ ಕಂಕನಾಡಿ ಸರ್ಕಲ್​ ನಲ್ಲಿ ಎಲ್ಲ ಅಂಗಡಿ ತೆರೆದಿದ್ದು, ಮತ್ತೊಂದೆಡೆ ಎಂದಿನಂತೆ KSRTC ಬಸ್ ಸಂಚರಿಸುತ್ತಿವೆ.

ಸಾಮೂಹಿಕ ರಾಜೀನಾಮೆಗೆ ಮುಸ್ಲಿಂ ಮುಖಂಡರು ತೀರ್ಮಾನ

ಇನ್ನು ಅಬ್ದುಲ್ ರಹಿಮಾ ಹತ್ಯೆ ಖಂಡಿಸಿ ಕಾಂಗ್ರೆಸ್​ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.ಈ ರಾಜೀನಾಮೆ ನಿರ್ಧಾರದ ಆಡಿಯೋ ವೈರಲ್ ಆಗಿದ್ದು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ನಾಳೆ (ಮೇ 29) ಸಾಮೂಹಿಕ ರಾಜೀನಾಮೆ ನೀಡಲು ಮುಸ್ಲಿಂ ಮುಖಂಡರ ತೀರ್ಮಾನಿಸಿದ್ದಾರೆ.

ಅಬ್ದುಲ್ ಹತ್ಯೆ ಬೆನ್ನಲ್ಲೇ ಮತ್ತೆ ಪ್ರತೀಕಾರದ ಪೋಸ್ಟರ್

ಅಬ್ದುಲ್​ ಹತ್ಯೆ ಬೆನ್ನಲ್ಲೇ ಇದೀಗ ಮತ್ತೆ ಕರಾವಳಿ ಭಯ ಬೀಳುವಂತೆ ಮಾಡಿದೆ. ಟಾರ್ಗೆಟ್​ ಬಾಯ್​ ಪೇಜ್​ ನಿಂದ ಮತ್ತೆ ಪ್ರತೀಕಾರದ ಪೋಸ್ಟರ್ ಹಾಕಲಾಗಿದೆ. ಇನ್​​ಸ್ಟಾಗ್ರಾಮ್​ ನಲ್ಲಿ ಪ್ರತೀಕಾರ ಪೋಸ್ಟರ್ ನಲ್ಲಿ ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಫೋಟೋ ಹಾಕಲಾಗಿದೆ. ಭರತ್​ ಎಸ್​​ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿ ಆಗಿದ್ದಾನೆ. ಏನೇ ಹೇಳಿ ರಹಿಮಾನ್ ಹತ್ಯೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಏನಾಗುತ್ತೆ ಎನ್ನುವ ಆತಂಕ ಎಲ್ಲರನ್ನ ಕಾಡುತ್ತಿದೆ

Previous Post

ಲಂಚಕ್ಕೆ ಬೇಡಿಕೆ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ, ಇಬ್ಬರು ಸಿಬಂದಿ ಲೋಕಾಯುಕ್ತ ಬಲೆಗೆ

Next Post

ಜಿಲ್ಲಾ ಪಂಚಾಯತ್ ಸದಸ್ಯ ಯುಪಿ ಇಬ್ರಾಹಿಂ ಸಹಿತ ಹಲವು ಮುಖಂಡರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಾಧ್ಯತೆ

Next Post
ಜಿಲ್ಲಾ ಪಂಚಾಯತ್ ಸದಸ್ಯ ಯುಪಿ ಇಬ್ರಾಹಿಂ ಸಹಿತ ಹಲವು ಮುಖಂಡರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಾಧ್ಯತೆ

ಜಿಲ್ಲಾ ಪಂಚಾಯತ್ ಸದಸ್ಯ ಯುಪಿ ಇಬ್ರಾಹಿಂ ಸಹಿತ ಹಲವು ಮುಖಂಡರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಾಧ್ಯತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.