Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅಬ್ದುಲ್ ರಹಿಮಾನ್ ಹತ್ಯೆಯನ್ನು ಹಾಗೂ ಗೃಹ ಇಲಾಖೆಯ ವೈಫಲ್ಯವನ್ನು ಖಂಡಿಸಿ ಎಸ್ ಡಿ ಪಿ ಐ ವತಿಯಿಂದ ಬೃಹತ್ ಪ್ರತಿಭಟನೆ

editor tv by editor tv
June 2, 2025
in ರಾಜ್ಯ
0
ಅಬ್ದುಲ್ ರಹಿಮಾನ್ ಹತ್ಯೆಯನ್ನು ಹಾಗೂ ಗೃಹ ಇಲಾಖೆಯ ವೈಫಲ್ಯವನ್ನು ಖಂಡಿಸಿ ಎಸ್ ಡಿ ಪಿ ಐ ವತಿಯಿಂದ ಬೃಹತ್ ಪ್ರತಿಭಟನೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು, ಜೂ. 1: ಇತ್ತೀಚೆಗೆ ಕೊಳತ್ತಮಜಲ್ ನಲ್ಲಿ ವ್ಯವಸ್ಥಿತವಾಗಿ ಸಂಘ ಪರಿವಾರದ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹಿಮಾನ್ ಕೊಲೆಯನ್ನು ಖಂಡಿಸಿ ಮತ್ತು ಕುಡುಪು ಎಂಬಲ್ಲಿ ಗುಂಪು ಹಿಂಸೆಗೆ ಬಲಿಯಾದ ಅಶ್ರಫ್ ಎಂಬವರ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಅಬ್ದುಲ್ ರಹಿಮಾನ್ ಕೊಲೆಯ ಸಂದರ್ಭದಲ್ಲಿ ಸಂಘಪರಿವಾರದಿಂದ ಕೊಲೆಯತ್ನಕ್ಕೊಳಗಾದ ಕಲಂದರ್ ಶಾಫಿಗೆ ನ್ಯಾಯ ದೊರಕಿಸುವಂತೆ ಹಾಗೂ ಜಿಲ್ಲೆಯ ಸೌಹಾರ್ದಕ್ಕೆ ಮಾರಕವಾದ ಇಂತಹ ದುರ್ಘಟನೆಗಳಿಗೆ ಕಡಿವಾಣ ಹಾಕದೆ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವ ರಾಜ್ಯ ಗೃಹ ಇಲಾಖೆಯ ವೈಫಲ್ಯದ ವಿರುದ್ಧವೂ ಈ ಪ್ರತಿಭಟನೆಯಲ್ಲಿ ಸಹಸ್ರಾರು ಜನರು ಸೇರಿ ಆಕ್ರೋಶ ಹೊರಹಾಕಿದರು.

ಈ ಪ್ರತಿಭಟನೆಯಲ್ಲಿ ಇತ್ತೀಚೆಗೆ ಕುಡುಪುವಿನಲ್ಲಿ ಗುಂಪು ಹತ್ಯೆಗೊಳಗಾದ ಅಶ್ರಫ್ ವಯನಾಡು, ಕೊಳತ್ತಮಜಲಿನಲ್ಲಿ ಹತ್ಯೆಗೊಳಗಾದ ಅಬ್ದುಲ್ ರಹಿಮಾನ್ ಹಾಗೂ ಗಾಯಗೊಂಡ ಕಲಂದರ್ ಶಾಫಿ ಕುಟುಂಬಸ್ಥರು ಭಾಗಿಯಾಗಿದ್ದರು.

ವೇದಿಕೆಯಲ್ಲಿ ಶಹೀದ್ ಅಬ್ದುಲ್ ರಹಿಮಾನ್ ಕೊಳತ್ತಮಜಲು ಸಹೋದರ ಹನೀಫ್ ಮತ್ತು ಗಾಯಗೊಂಡ ಶಾಫಿಯ ತಂದೆ ಅಬ್ದುಲ್ ಖಾದರ್ ಹಾಗೂ ಶಹೀದ್ ವಯನಾಡು ಅಶ್ರಫ್ ರ ಸಹೋದರ ಅಬ್ದುಲ್ ಜಬ್ಬಾರ್ ಉಪಸ್ಥಿತರಿದ್ದರು.*

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್ ರವರು ಮಾತನಾಡಿ ‘ಜಿಲ್ಲೆಯು ಬಹಳ ಶಾಂತಿ ಸೌಹಾರ್ದತೆಗೆ ಹೆಸರಾಗಿತ್ತು. ಶ್ರೀ ಕೃಷ್ಣ ಮಠದಲ್ಲಿ ದೀಪ ಬೆಳಗಿಸಲು ಎಣ್ಣೆ ದಾನ ಮಾಡಿರುವುದು ಇಲ್ಲಿನ ಮುಸ್ಲಿಂ ಆಗಿದ್ದರು. ಆದರೆ ಸಂಘಪರಿವಾರದವರು ಇಲ್ಲಿನ ಶಾಂತಿ ಸುವ್ಯವಸ್ಥೆ ಹಾಳುಗೆಡವಿದರು. ಮುಸ್ಲಿಮರ ವ್ಯಾಪಾರ ಬಹಿಷ್ಕಾರ, ಪ್ರತಿಕಾರದ ಭಾಷಣಗಳು ಸಮಾಜವನ್ನು ಒಡೆದಿವೆ. ತನ್ನೊಂದಿಗೆ ಇದ್ದ ನೆರೆಮನೆಯ ದೀಪಕ್ ಎಂಬಾತ ಸಂಘದ ಶಾಖೆಯಿಂದ ಕಲಿತ ಹಿಂದುತ್ವದ ವಿಷದಿಂದ ತನ್ನ ತಂದೆಗೆ ರಕ್ತದಾನ ಮಾಡಿದ ಅಬ್ದುಲ್ ರಹಿಮಾನ್ ಎಂಬವರನ್ನು ಕೊಂದಿದ್ದಾನೆ. ಸಂಘಪರಿವಾರದೊಂದಿಗೆ ಯಾವುದೇ ವ್ಯವಹಾರ ಮಾಡಬಾರದು’ ಎಂದು ಕರೆ ನೀಡಿದರು.

ಪಕ್ಷದ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಮಾತನಾಡಿ ‘ಜಿಲ್ಲೆಯಲ್ಲಿ ನಾವು ಕೊಂದಿದ್ದೇವೆ, ಬೀದಿಯಲ್ಲಿ ಕೊಚ್ಚಿ ಹಾಕಿದ್ದೇವೆ ಎಂದು ಭಾಷಣ ಬಿಗಿದು ಅಬ್ದುಲ್ ರಹಿಮಾನ್ ಹತ್ಯೆಗೆ ಸ್ಕೆಚ್ ಹಾಕಿಕೊಟ್ಟ ಭರತ್ ಕುಮ್ಡೇಲ್ ಇವಾಗ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ. ಮಾನ್ಯ ಪೋಲಿಸ್ ವರಿಷ್ಠಾಧಿಕಾರಿಯವರೇ ನಿಮ್ಮ ಕಾರ್ಯ ದಕ್ಷತೆ ಈ ಹತ್ಯೆಯ ಸೂತ್ರಧಾರಿಗಳ ಬಂಧನದಲ್ಲಿ ತೋರಿಸಿ. ನಮಗೆ ಇಲ್ಲಿ ಸಂವಿಧಾನವಿದೆ ನಾವು ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ಹೋರಾಟದ ಪ್ರತೀಕಾರ ತೀರಿಸುತ್ತೇವೆ’ ಎಂದು ಗುಡುಗಿದರು.

ಇನ್ನೋರ್ವ ಅತಿಥಿಯಾದ ಬಂಟ್ವಾಳ ಪುರಸಭಾ ಉಪಾಧ್ಯಕ್ಷರೂ, ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರೂ ಆದ ಮೂನಿಶ್ ಆಲಿ ಮಾತನಾಡಿ ‘ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಹಂತಕರನ್ನು ಬಂಧಿಸುವಲ್ಲಿ ಪೋಲಿಸರು ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದಾರೆ. ಆರೋಪಿಗಳು ಮುಸ್ಲಿಮರಾದರೆ ಪೋಲಿಸರಲ್ಲಿರುವ ತನಿಖಾ ಕಾರ್ಯದಕ್ಷತೆ ಹಿಂದುತ್ವವಾದಿ ಬಂಧನದಲ್ಲಿ ಇಲ್ಲ’ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಜಲೀಲ್ ಕೃಷ್ಣಾಪುರ, ಉಪಾಧ್ಯಕ್ಷರಾದ ಅಶ್ರಫ್ ಅಡ್ಡೂರು, ಮಂಗಳೂರು ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು
ಮತ್ತಿತರರು ಉಪಸ್ಥಿತರಿದ್ದರು
ಈ ಬೃಹತ್ ಪ್ರತಿಭಟನೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು, ಸಾರ್ವಜನಿಕ ಬಂಧುಗಳು ಸೇರಿ ಅನೇಕರು ಭಾಗಿಯಾಗಿದ್ದರು. ಎಸ್ ಡಿ ಪಿ ಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಸ್ವಾಗತಿಸಿ, ಮಂಗಳೂರು ಗ್ರಾಮಾಂತರ ಕಾರ್ಯದರ್ಶಿ ಅಶ್ರಫ್ ತಲಪಾಡಿ ನಿರೂಪಿಸಿ, ಧನ್ಯವಾದಗೈದರು.

Previous Post

ಸಮುದಾಯಕ್ಕೆ ನೋವಾದಾಗ ಆಕ್ರೋಶ ವ್ಯಕ್ತ ಪಡಿಸುವುದು ತಪ್ಪಲ್ಲ: ಕಾಂಗ್ರೆಸ್ ನೋಟಿಸ್‌ಗೆ ರಮಾನಾಥ ರೈ ಅಸಮಾಧಾನ

Next Post

ಕೊಳತ್ತಮಜಲು ಮುಸ್ಲಿಂ ಯುವಕನ ಹತ್ಯೆ ಪ್ರಕರಣ :ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಶಾಸಕ ರಿಝ್ವಾನ್ ಅರ್ಶದ್ ಉಪಸ್ಥಿತಿಯಲ್ಲಿ SKSSF ದ.ಕ ಜಿಲ್ಲಾ ನಾಯಕರ ಸಭೆ

Next Post
ಕೊಳತ್ತಮಜಲು ಮುಸ್ಲಿಂ ಯುವಕನ ಹತ್ಯೆ ಪ್ರಕರಣ :ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಶಾಸಕ ರಿಝ್ವಾನ್ ಅರ್ಶದ್ ಉಪಸ್ಥಿತಿಯಲ್ಲಿ SKSSF ದ.ಕ ಜಿಲ್ಲಾ ನಾಯಕರ ಸಭೆ

ಕೊಳತ್ತಮಜಲು ಮುಸ್ಲಿಂ ಯುವಕನ ಹತ್ಯೆ ಪ್ರಕರಣ :ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಶಾಸಕ ರಿಝ್ವಾನ್ ಅರ್ಶದ್ ಉಪಸ್ಥಿತಿಯಲ್ಲಿ SKSSF ದ.ಕ ಜಿಲ್ಲಾ ನಾಯಕರ ಸಭೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.