ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಂಟ್ವಾಳ ಕೊಳತ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಅವರ ನಿವಾಸಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ, ದ.ಕ.ಜಿಲ್ಲಾ ಸಮಿತಿಯ ನಿಯೋಗವು ಇಂದು ಭೇಟಿ ನೀಡಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿತು.
ಈ ವೇಳೆ ಹತ್ಯೆ ನಡೆದ ಬಗ್ಗೆ ಹಾಗೂ ನಂತರದ ಪರಿಸ್ಥಿತಿಗಳ ಬಗ್ಗೆ ಮನೆಯವರೊಂದಿಗೆ ಸಮಾಲೋಚನೆ ನಡೆಸಿ, ತಮ್ಮ ನೋವಿನಲ್ಲಿ ಭಾಗಿಯಾಗುವುದರ ಜೊತೆಗೆ ಅಮಾಯಕ ಅಬ್ದುಲ್ ರಹ್ಮಾನ್ ಕೊಲೆ ಆರೋಪದಲ್ಲಿ ನೇರವಾಗಿ ಭಾಗಿಯಾದ ಹಾಗೂ ಸೂತ್ರಧಾರರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಅಬ್ದುಲ್ ರಹ್ಮಾನ್ ಮನೆಯವರಿಗೆ ಗರಿಷ್ಠ ಪ್ರಮಾಣದಲ್ಲಿ ಆರ್ಥಿಕ ಪರಿಹಾರ ನೀಡುವಂತೆ ಸರಕಾರ ಹಾಗೂ ಪೊಲೀಸು ಇಲಾಖೆಗೆ ಒತ್ತಾಯಿಸುವುದಾಗಿ ತಿಳಿಸಲಾಯಿತು.