Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ.. ತುಂಬಿದ ನದಿಗಳು, ಗುಡ್ಡ ಕುಸಿಯುವ ಆತಂಕ

editor tv by editor tv
June 15, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/MNG_RAINS.jpg

ಧಾರಾಕಾರ ಮಳೆಗೆ ಕರಾವಳಿ ತೊಯ್ದು ತೊಪ್ಪೆಯಾಗಿದೆ. ಮನೆಗಳಿಗೆ ನೀರು ನುಗ್ಗಿದ್ದಲ್ಲದೇ ರಸ್ತೆಗಳೆಲ್ಲ ಹಳ್ಳದಂತಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಎಲ್ಲೆಂದರಲ್ಲಿ ಗೋಡೆ, ಗುಡ್ಡ ಕುಸಿಯುತ್ತಿದ್ದು ಜನರು ಆತಂಕದಲ್ಲಿದ್ದಾರೆ. ನದಿ ಪಾತ್ರಗಳು ತುಂಬಿ ಹರಿಯುತ್ತಿದ್ದು ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ.

ವರುಣನ ಆರ್ಭಟಕ್ಕೆ ಕಂಪೌಂಡ್ ಕುಸಿದು ಬೀಳುತ್ತಿವೆ. ಮಣ್ಣು ಗುಡ್ಡಗಳು ಕುಸಿದು ರಸ್ತೆಗೆ ಬೀಳುತ್ತಿವೆ. ನದಿಗಳು ಅಪಾಯ ಸೂಚಿಸುಚಂತೆ ತುಂಬಿ ಹರಿಯುತ್ತಿವೆ. ಮಂಗಳೂರಿನಲ್ಲಿ ಮನೆಗಳಿಗೆ, ರಸ್ತೆಗಳಿಗೆ ನೀರು ನುಗ್ಗಿ ಅಕ್ಷರಶಃ ಜಲಾವೃತವಾಗಿವೆ. ಪಂಪ್ ವೆಲ್ ರಸ್ತೆ ನೀರಿನಿಂದ ತುಂಬಿದ್ದು ಬಸ್​​ ಸಿಲುಕಿ ಪರದಾಡಿದೆ.

ರಸ್ತೆ, ಮನೆಗಳಿಗೆ ನೀರು ನುಗ್ಗಿ ಮಂಗಳೂರು ಜಲಾವೃತ

ಮಂಗಳೂರಿನಲ್ಲಿ ಭಾರೀ ಮಳೆಯಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿ ಜನ ಕಂಗಾಲಾಗಿದ್ದಾರೆ. ಅದರಲ್ಲೂ ಪಂಪ್‌ ವೆಲ್‌ ಜಂಕ್ಷನ್, ಕೊಟ್ಟಾರ ಚೌಕಿ ಸೇರಿ ಹಲವು ಪ್ರದೇಶಗಳು ಜಲಾವೃತವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ NDRF ಹಾಗೂ SDRF ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ರಾತ್ರಿಯೇ 12 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

ಭಾರೀ ಮಳೆಗೆ ಮಂಗಳೂರಿನ ಪಂಪ್​ವೆಲ್​ ರಸ್ತೆ ಮುಳುಗಡೆಯಾಗಿದ್ದು ನದಿಯಂತೆ ರಸ್ತೆ ಮೇಲೆ ನೀರು ಹರಿಯುತ್ತಿದೆ. ನೀರಲ್ಲಿ ರಸ್ತೆ ದಾಟಲು ಜನ ಹರಸಾಹಸಪಡ್ತಿದ್ದಾರೆ. ಇದರ ಮಧ್ಯೆ ಮುಳುಗಿದ ಪಂಪ್ ವೆಲ್​ನಲ್ಲಿ ಸಿಲುಕಿ ಬಸ್​​ ಕೂಡ ಪರದಾಡಿದೆ.

ಕಂಪೌಂಡ್ ಕುಸಿತಕ್ಕೆ ಹಾರಿ ಹೋದ ಮನೆಯ ಗೇಟ್​

ಧಾರಾಕಾರವಾಗಿ ಸುರಿಯುತ್ತಿರುವ ಮಹಾ ಮಳೆಗೆ ಕಡಲನಗರಿ ಮಂಗಳೂರು ಅಕ್ಷರಶಃ ಕಡಲಿನಂತೆ ಭಾಸವಾಗ್ತಿದೆ. ಭಾರೀ ಮಳೆಗೆ ಕಂಕನಾಡಿಯ ಸುವರ್ಣ ಲೇನ್ ಬಳಿ ಕಾಂಪೌಂಡ್ ಗೋಡೆ ಕುಸಿದು ರಸ್ತೆಯ ಮೇಲೆ ಬಿದ್ದಿದೆ. ಜಲಸ್ಫೋಟದ ರೀತಿ ಕಂಪೌಂಡ್ ಕುಸಿದಿದ್ದು ಎದುರು ಬದಿಯ ಕಾಂಪೌಂಡ್​ಗೂ ಹಾನಿಯಾಗಿದೆ. ಇದ್ರಿಂದ ಕಾಂಪೌಂಡ್​ಗೆ ಅಳವಡಿಸಿದ್ದ ಗೇಟ್ ಕಿತ್ತು ಹೋಗಿದೆ. ವಿದ್ಯುತ್ ಕಂಬ 2 ತುಂಡಾಗಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಅದೃಷ್ಟವಶಾತ್ ರಸ್ತೆಯಲ್ಲಿ ಜನ, ವಾಹನ ಸಂಚಾರ ಇಲ್ಲದ ಕಾರಣ ಭಾರೀ‌ ಅನಾಹುತ ತಪ್ಪಿದಂತೆ ಆಗಿದೆ.

ಭಾರಿ ಮಳೆಗೆ ಕದ್ರಿ ಶಿವಭಾಗ್ ಬಳಿಯ ಸುಂದರಿ ಅಪಾರ್ಟ್ಮೆಂಟ್​ನ ಹಿಂಭಾಗದ ತಡೆಗೋಡೆ ಕುಸಿದಿದೆ. ಮರ ಸಮೇತ ತಡೆಗೋಡೆ ಬಿದ್ದ ಪರಿಣಾಮ ಗೋಡೆಗೆ ಹಾನಿಯಾಗಿದ್ದು, ನಿವಾಸಿಗಳು ಆತಂಕದಲ್ಲಿದ್ದಾರೆ. ಸದ್ಯ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆಸಲಾಗಿದೆ.

ಇನ್ನು ವಾಮಂಜೂರಿನ ಕೆತ್ತಿಕಲ್ ಪ್ರದೇಶದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತವಾಗಿದೆ. ರಾತ್ರಿ ಗುಡ್ಡ ಕುಸಿದು, ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಮಣ್ಣು ಹಾಗೂ ಕಲ್ಲು ಬಂಡೆಗಳು ಬಿದ್ದಿವೆ. ಈಗಾಗಲೇ ಮಣ್ಣು, ಕಲ್ಲು ತೆರವು ಮಾಡಿದ್ದು ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಇರೋದ್ರಿಂದ ಏಕಮುಖ ಸಂಚಾರಲ್ಲೆ ಅನುವು ಮಾಡಲಾಗಿದೆ.

ಭಾರೀ ಪ್ರಮಾಣದಲ್ಲಿ ಹಳ್ಳದಲ್ಲಿ ಹರಿಯುತ್ತಿರುವ ನೀರಿನಿಂದ ಆತಂಕ

ದಕ್ಷಿಣ ಕನ್ನಡ ಜಿಲ್ಲೆಯ 163 ಪ್ರದೇಶಗಳಲ್ಲಿ ನೆರೆ ಭೀತಿ ಸೃಷ್ಟಿಯಾಗಿದ್ದು ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗ್ತಿದೆ. ಮಳವೂರು ಕಿಂಡಿ ಆಣೆಕಟ್ಟು ಪ್ರದೇಶದಲ್ಲಿ ನೀರು ಹೆಚ್ಚಾಗಿದೆ. ಫಲ್ಗುಣಿ ನದಿ ನೀರು ಉಕ್ಕಿ ಹರಿಯುತ್ತಿದ್ದು ರೈತರ ಕೃಷಿ ಭೂಮಿ, ತೋಟಗಳಿಗೆ ನುಗ್ಗುತ್ತಿದೆ. ಇತ್ತ ಹೊರವಲಯದ ಪಚ್ಚನಾಡಿಯಲ್ಲಿ ನೆರೆಯ ಆತಂಕವಿದ್ದು ಜನರಿಗೆ ಸುರಕ್ಷಿತ ಜಾಗಗಳಿಗೆ ಶಿಫ್ಟ್ ಆಗಲು ಸೂಚಿಸಲಾಗಿದೆ.

ಕೇವಲ ಮಂಗಳೂರು ಮಾತ್ರವಲ್ಲದೇ ಉಡುಪಿ ಜಿಲ್ಲೆಯಾದ್ಯಂತ ಕೂಡ ಮಳೆಯಬ್ಬರ ಜೋರಾಗಿದೆ. ಇಂದು ಮತ್ತು ನಾಳೆ ರೆಡ್ ಅಲರ್ಟ್ ‌ಎಚ್ಚರಿಕೆ ನೀಡಲಾಗಿದೆ. ನದಿ‌ ಹಾಗೂ ಸಮುದ್ರ ತೀರಕ್ಕೆ ಹೋಗದಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ. ಒಟ್ಟಾರೆ ಭಾರೀ ಮಳೆಗೆ ಕರಾವಳಿ ತತ್ತರಿಸಿದೆ.

Previous Post

ಇರಾನ್-ಇಸ್ರೇಲ್ ಸಂಘರ್ಷ, ಕಚ್ಚಾ ತೈಲ ಬೆಲೆ ಏರಿಕೆ, ಭಾರತಕ್ಕೆ ಹಣದುಬ್ಬರದ ಭೀತಿ!

Next Post

ರೆಡ್ ಅಲರ್ಟ್ ಹಿನ್ನಲೆ: ನಾಳೆ (ಜೂನ್ 16) ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

Next Post

ರೆಡ್ ಅಲರ್ಟ್ ಹಿನ್ನಲೆ: ನಾಳೆ (ಜೂನ್ 16) ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.