Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಂಗಳೂರು: ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್

editor tv by editor tv
June 21, 2025
in ರಾಜ್ಯ
0
ಮಂಗಳೂರು: ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್
1.9k
VIEWS
Share on FacebookShare on TwitterShare on Whatsapp

ಕರ್ನಾಟಕ ಕರಾವಳಿಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ ವಿಧಿಸಿರುವುದು ಭಾರೀ ವಿವಾದ ಸೃಷ್ಟಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಇಷ್ಟಾಗುತ್ತಿದ್ದಂತೆಯೇ ಆದೇಶವನ್ನು ವಾಪಸ್ ಪಡೆಯಲಾಗಿದೆ. ಹಾಗಾದ್ರೆ ಏನಿದು ವಿವಾದ? ಇಲ್ಲಿದೆ ವಿವರ.

ಮಂಗಳೂರು, ಜೂನ್ 21: ತಮಿಳು, ಕನ್ನಡ ಭಾಷೆಗಳಷ್ಟೇ ಪ್ರಾಚೀನವಾದ ಭಾಷೆ ತುಳು (Tulu Language). ಅವಿಭಜಿತ ದಕ್ಷಿಣ ಕನ್ನಡ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಚಾಲ್ತಿಯಲ್ಲಿರುವ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ, ಹೋರಾಟ ದಶಕಗಳದ್ದು. ಆದರೆ ಇದೀಗ ತುಳು ಭಾಷೆ ಬಳಕೆ ಮಾಡಬಾರದು (Tulu Language Ban) ಎನ್ನುವ ಸರ್ಕಾರಿ ಆದೇಶ ಕರಾವಳಿಯಲ್ಲಿ (Coastal Karnataka) ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಗಳಲ್ಲಿ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವ ಬಗ್ಗೆ ಆದೇಶವೊಂದನ್ನು ಹೊರಡಿಸಲಾಗಿದೆ.

ತುಳು ಭಾಷೆ ನಿರ್ಬಂಧ ಆದೇಶದಲ್ಲೇನಿದೆ?

ಈ ಆದೇಶದಲ್ಲಿ, ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚಿಸುವಾಗ ತುಳು ಭಾಷೆ ಬಳಕ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್‌ ಅಭಿವೃದ್ಧಿ, ಅಧಿಕಾರಿಯವರಿಗೆ ನಿರ್ದೇಶನ ನೀಡಲು ಮುರಳೀಧರ ಎಂಬವರು ಮನವಿ ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್‌ನಿಂದ ಆದೇಶ ಮಾಡಲಾಗಿದೆ. ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ವಿವಾದದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ: ಸುತ್ತೋಲೆ ವಾಪಸ್

ಈ ಬೆಳವಣಿಗೆ ವಿವಾದಕ್ಕೀಡಾದ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್​ರನ್ನು ತುಳು ಸಂಘಟನೆಗಳ ಪ್ರಮುಖರು ಭೇಟಿಯಾಗಿದ್ದಾರೆ. ಈ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕಂದು ಆಗ್ರಹಿಸಿದ್ದಾರೆ. ಭಾರೀ ವಿವಾದದ ಬಳಿಕ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈ ಸುತ್ತೋಲೆಯನ್ನು ವಾಪಾಸ್ ಪಡೆದಿದೆ.

ಆದೇಶ ಹೊರಡಿಸಿದ ಅಧಿಕಾರಿಯ ಅಮಾನತಿಗೆ ಆಗ್ರಹ

ತುಳು ಸಂಘಟನೆಗಳ ಆಗ್ರಹಕ್ಕೆ ಮಣಿದ ಅಧಿಕಾರಿಗಳು ತುಳು ಭಾಷೆ ಬಳಕೆ ನಿಷೇಧದ ಆದೇಶ ನೀಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಹೋರಾಟಗಾರರು, ಆ ಆದೇಶ ಹೊರಡಿಸಿದ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ. ತುಳು ಭಾಷೆಯ ವಿರುದ್ಧ ಅವಹೇಳನ ಮಾಡಿದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

2025ರ ಎಪ್ರಿಲ್ 22ರಂದು ಈ ಆದೇಶ ಹೊರಡಿಸಲಾಗಿತ್ತು. ಅದರ ಪ್ರತಿ ಕೆಲವು ದಿನಗಳ ಹಿಂದೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ ಮಾಜಿ ಮುಖ್ಯಮಂತ್ರಿ ಡಿ‌.ವಿ‌.ಸದಾನಂದ ಗೌಡ, ಬಿಜೆಪಿ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿ ಹಲವು ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಭಾರೀ ಆಕ್ರೋಶದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು ಭಾಷಾ ವಿವಾದವೊಂದು ಬಗೆಹರಿದಂತಾಗಿದೆ.

Previous Post

ಘನತೆಯ ರಾಜಕೀಯ ಚಳುವಳಿಗೆ ಹದಿನೇಳರ ಸಂಭ್ರಮ; ರಾಜಿಯಿಲ್ಲದ ಹೋರಾಟ ರಾಜಕೀಯಕ್ಕಾಗಿ ಎಸ್‌ಡಿಪಿಐ ಜೊತೆ ಕೈ ಜೋಡಿಸಿ : ಅನ್ವರ್ ಸಾದಾತ್ ಎಸ್

Next Post

BREAKING: ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಅಧಿಕೃತ ಎಂಟ್ರಿ; ಇರಾನ್​​ನ 3 ಕಡೆ ಟ್ರಂಪ್ ಸೇನೆ ಏರ್​​ಸ್ಟ್ರೈಕ್..!

Next Post

BREAKING: ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಅಧಿಕೃತ ಎಂಟ್ರಿ; ಇರಾನ್​​ನ 3 ಕಡೆ ಟ್ರಂಪ್ ಸೇನೆ ಏರ್​​ಸ್ಟ್ರೈಕ್..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.