Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

editor tv by editor tv
June 28, 2025
in ರಾಷ್ಟ್ರೀಯ
0
ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ
1.9k
VIEWS
Share on FacebookShare on TwitterShare on Whatsapp

ಕೇರಳದ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಿಡಿದ ಭಾರತ ಮಾತೆಯ ಫೋಟೋ ಇರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕಿಡಿಕಾರಿದ್ದು, “ಈ ನಡೆಯು ಸಾಂವಿಧಾನಿಕ ಮಾನದಂಡಗಳ ಸ್ಪಷ್ಟ ಉಲ್ಲಂಘನೆ” ಎಂದಿದ್ದಾರೆ.

ಭಾರತಮಾತೆ ಎನ್ನಲಾಗುವ ಕೇಸರಿ ಧ್ವಜ ಹಿಡಿದ ಮಹಿಳೆಯ ಭಾವಚಿತ್ರ ‘ಧಾರ್ಮಿಕ ಚಿತ್ರ’ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಧಿಕೃತ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಂತಹ ಚಿತ್ರವನ್ನು ಪೂಜಿಸುವುದು ‘ಸಂವಿಧಾನದ ಮೂಲ ತತ್ವಗಳನ್ನು ಬುಡಮೇಲು ಮಾಡಿದಂತೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವನ್‌ಕುಟ್ಟಿ ಹೇಳಿದ್ದಾರೆ.

ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಪೋಟೋ ಇರಿಸಿದ್ದಕ್ಕಾಗಿ ಎರಡು ಬಾರಿ ಸರ್ಕಾರ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು. ಆರಂಭದಲ್ಲಿ ಸಿಎಂ ಪಿಣರಾಯಿ ವಿಜಯನ್‌ ಕಾರ್ಯಕ್ರಮವೊಂದಕ್ಕೆ ಗೈರಾಗದರೆ, ಎರಡನೇ ಬಾರಿ ಸಚಿವ ಶಿವನ್‌ಕುಟ್ಟಿ ಕಾರ್ಯಕ್ರಮದಿಂದ ಅರ್ಧದಲ್ಲಿ ನಿರ್ಗಮಿಸಿದ್ದರು.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ನಡೆ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ರಾಜಕಾರಣಿಗಳ ನಡುವೆ ವಾಗ್ಯುದ್ಧ ಏರ್ಪಟ್ಟಿದೆ. ಬೀದಿಗಳಲ್ಲಿ ಪ್ರತಿಭಟನೆಗಳು ಆಯೋಜಿಸಲಾಗುತ್ತಿದೆ. ಈ ನಡುವೆ ಸಚಿವ ಶಿವನ್‌ಕುಟ್ಟಿ ರಾಜ್ಯಪಾಲರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ವಿವಿಧ ವಿಧಿಗಳನ್ನು ಉಲ್ಲೇಖಿಸಿದ ಶಿವನ್‌ಕುಟ್ಟಿ, “ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಯನ್ನು ಉತ್ತೇಜಿಸುವುದನ್ನು ನಿಷೇಧಿಸಲಾಗಿದೆ. ಈ ವಿಧಿಗಳು ಧಾರ್ಮಿಕ ವಿಷಯಗಳಲ್ಲಿ ರಾಜ್ಯದ ತಟಸ್ಥತೆಯನ್ನು ಆದೇಶಿಸುತ್ತವೆ” ಎಂದಿದ್ದಾರೆ.

“ಆದ್ದರಿಂದ, ರಾಜ್ಯಪಾಲರ ನಡೆಯು ಭಾರತೀಯ ಸಂವಿಧಾನದ ಜಾತ್ಯತೀತ ಸ್ವರೂಪದ ಮೇಲಿನ ಸ್ಪಷ್ಟ ದಾಳಿಯಾಗಿದೆ. ಇದು ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲದೆ, ಸಂವಿಧಾನವು ಖಾತರಿಪಡಿಸಿದ ಜಾತ್ಯತೀತ ಮೌಲ್ಯಗಳನ್ನು ದುರ್ಬಲಗೊಳಿಸುವ ಕೃತ್ಯವಾಗಿದೆ” ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಭಾವಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮವನ್ನು ಬಹಿಷ್ಕರಿಸಿದ ತಮ್ಮ ಇತ್ತೀಚಿನ ನಿರ್ಧಾರವನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

“ಇಂತಹ ಸಾಂವಿಧಾನಿಕ ಉಲ್ಲಂಘನೆಗಳಿಗೆ ಸಾಕ್ಷಿಯಾಗಲು ಸಾಧ್ಯವಾಗದ ಕಾರಣ ನಾನು ಹೊರನಡೆದೆ. ಸಂವಿಧಾನವನ್ನು ಎತ್ತಿಹಿಡಿಯುವ ನನ್ನ ಜವಾಬ್ದಾರಿಯನ್ನು ನಾನು ಪೂರೈಸಿದ್ದೇನೆ. ಸಂವಿಧಾನದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ನಾನು ಯಾವುದೇ ಹಂತಕ್ಕೆ ಹೋಗಲು ಬದ್ಧನಾಗಿದ್ದೇನೆ” ಎಂದಿದ್ದಾರೆ.

ವಿವಾದಿತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವನ್‌ಕುಟ್ಟಿ, “ರಾಜ್ಯಪಾಲರು ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಅಧಿಕೃತ ಸಮಾರಂಭದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಚಿತ್ರವನ್ನು ಪ್ರದರ್ಶಿಸುವುದು ಮತ್ತು ಪೂಜಿಸುವುದು ದೇಶದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗಿ ನಿರ್ದಿಷ್ಟ ಧಾರ್ಮಿಕ ಚಿಹ್ನೆಯನ್ನು ‘ಅಧಿಕೃತವಾಗಿ ಅನುಮೋದಿಸಿದಂತೆ’ ಎಂದಿದ್ದಾರೆ.

ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಚಿಹ್ನೆಗಳನ್ನು ಹೊರತುಪಡಿಸಿ ಬೇರೆ ಯಾವುದನ್ನಾದರೂ ಬಳಸುವ ಬಗ್ಗೆ ಸರ್ಕಾರದ ಭಿನ್ನಾಭಿಪ್ರಾಯದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

Previous Post

ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಯತ್ನಾಳ್

Next Post

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

Next Post
ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.