Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

editor tv by editor tv
July 3, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಜುಲೈ 1, 2025ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ (no fuel for end-of-life vehicles) ನಿಯಮ ಜಾರಿಯಾಗಿದೆ.

ಹೊಸ ನಿಯಮದ ಪ್ರಕಾರ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಸಿಗುವುದಿಲ್ಲ. ಪರಿಸರ ಮಾಲಿನ್ಯ (ವಾಯು, ಶಬ್ದ ಇತ್ಯಾದಿ) ತಡೆಯಲು ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) 2014 ಆದೇಶ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಿಸುವುದನ್ನು ಮತ್ತು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ

ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನೀತಿಯನ್ನು ಮಾರ್ಚ್ 2025ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಜುಲೈ 1ರಿಂದ ಜಾರಿಗೆ ಬಂದಿದೆ.

.

ಮಾರ್ಚ್ 2025ರ ಆರಂಭದಲ್ಲಿ, ದೆಹಲಿಯ ಪರಿಸರ ಖಾತೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು, 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಏಪ್ರಿಲ್ 1ರಿಂದ ಇಂಧನ ಕೇಂದ್ರಗಳು ಇಂಧನ ಒದಗಿಸುವುದಿಲ್ಲ ಎಂದು ಹೇಳಿದ್ದರು

ಕೊನೆಗೆ ಜುಲೈ 1ರಂದು ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನಿಯಮವನ್ನು ಜಾರಿಗೆ ತರಲಾಗಿದೆ. ಈ ವೇಳೆ ದೆಹಲಿಯ 520 ಇಂಧನ ಕೇಂದ್ರಗಳ ಪೈಕಿ ಸುಮಾರು 500 ಕೇಂದ್ರಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಸಂಚಾರ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಒಳಗೊಂಡ ವಿವರವಾದ ನಿಯಮ ಜಾರಿ ಕಾರ್ಯತಂತ್ರವು ಸಿದ್ದವಾಗಿದೆ ಎಂದು ಸರ್ಕಾರ ಹೇಳಿತ್ತು.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ನಿಯಮ ಜಾರಿಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿತ್ತು. ಅದರಂತೆ, ಜುಲೈ 1, 2025 ರಂದು ಬೆಳಿಗ್ಗೆ 6 ಗಂಟೆಗೆ ಅಧಿಕೃತವಾಗಿ ಅವಧಿ ಮುಗಿದ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ.

ಅವಧಿ ಮುಗಿದ ವಾಹನಗಳನ್ನು ಪತ್ತೆ ಹಚ್ಚುವುದು ಹೇಗೆ?

ಇಂಧನ ಕೇಂದ್ರಗಳಲ್ಲಿ ಅಥವಾ ಪೆಟ್ರೋಲ್ ಬಂಕ್‌ಗಳಲ್ಲಿ ಎಐ ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ವಾಹನ ಬಂಕ್‌ಗೆ ಬಂದ ತಕ್ಷಣ ಅದರ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ‘ವಾಹನ್’ ವ್ಯವಸ್ಥೆಯ ಡೇಟಾಬೇಸ್ ಮೂಲಕ ವಾಹನದ ಅವಧಿಯನ್ನು ಪತ್ತೆ ಹಚ್ಚುತ್ತದೆ.

ವಾಹನ ಮಾಲಕರ ಗತಿಯೇನು?

ಅವಧಿ ಮೀರಿದ ವಾಹನಗಳಿಗೆ ಇಂಧನ ಪೂರೈಕೆ ಮಾಡದಿದ್ದರೆ ವಾಹನ ಮಾಲಕರು ಅವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಸದ್ಯಕ್ಕೆ ದೆಹಲಿಯಲ್ಲಿ ಮಾತ್ರ ಇಂಧನ ಪೂರೈಕೆ ಮಾಡುತ್ತಿಲ್ಲ. ಹಾಗಾಗಿ, ವಾಹನ ಮಾಲಕರು ದೆಹಲಿ-ಎನ್‌ಸಿಆರ್ ಹೊರಗೆ ವಾಹನವನ್ನು ಮರು ನೋಂದಾಯಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬಹುದು.

ಖಾಸಗಿ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬಹುದು (ಸಾರ್ವಜನಿಕ ಪಾರ್ಕಿಂಗ್ ನಿಷೇಧಿಸಲಾಗಿದೆ).

ನೋಂದಾಯಿತ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ ವಾಹನವನ್ನು ಸ್ಕ್ರ್ಯಾಪ್ ಮಾಡಬಹುದು ಅಥವಾ ವಾಹವನ್ನು ಗುಜರಿಗೆ ಹಾಕಬಹುದು.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?

ನಿಯಮ ಉಲ್ಲಂಘಿಸಿದರೆ ಕಾರುಗಳಿಗೆ 10,000 ರೂಪಾಯಿ ಮತ್ತು ದ್ವಿಚಕ್ರ ವಾಹನಗಳಿಗೆ 5,000 ರೂಪಾಯಿ ಜೊತೆಗೆ ಟೋವಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಗಳೇ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್ ಮಾಡುತ್ತಾರೆ.

ಹೊಸ ನಿಯಮದಲ್ಲಿ ಅಂಗವಿಕಲರು ಅಥವಾ ಇತರ ಗುಂಪುಗಳಿಗೆ ಯಾವುದೇ ನಿರ್ದಿಷ್ಟ ವಿನಾಯಿತಿಗಳನ್ನು ನೀಡಲಾಗಿಲ್ಲ. ಅಂದರೆ, ಎಲ್ಲಾ ವಾಹನಗಳು, ಮಾಲೀಕತ್ವವನ್ನು ಲೆಕ್ಕಿಸದೆ, ನಿಯಮಗಳನ್ನು ಪಾಲಿಸಬೇಕಿದೆ.

ದಂಡವನ್ನು ತಪ್ಪಿಸಲು ಜೀವಿತಾವಧಿ ಮುಗಿದ ವಾಹನಗಳ ಮಾಲೀಕರು ಹೊಸ, ತಂತ್ರಜ್ಞಾನಗಳು ಹೊಂದಿರುವ ವಾಹನಗಳು ಅಥವಾ ವಿದ್ಯುತ್ ವಾಹನಗಳಿಗೆ (ಇವಿ) ಬದಲಾಯಿಸಲು ಪ್ರೋತ್ಸಾಹಿಸಲಾಗುತ್ತದೆ.

ದೆಹಲಿ ಇವಿ ನೀತಿ 2.0 (ಭವಿಷ್ಯದ ಪರಿಣಾಮ)

ಆಗಸ್ಟ್ 15,2026 ರಿಂದ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ನಿಷೇಧಿಸಲು ಯೋಜಿಸಲಾಗಿದೆ. ಇದರಿಂದಾಗಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಬೇಡಿಕೆ ಹೆಚ್ಚಾಗಲಿದೆ. ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳು ಸಹ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.

Previous Post

ಅಬ್ದುಲ್ ರಹಿಮಾನ್ ಕೊಳತಮಜಲ್ ಕುಟುಂಬಕ್ಕೆ ವೈಯಕ್ತಿಕ ಸಹಾಯಧನ ನೀಡಿದ ಸಚಿವ ಝಮಿರ್ ಅಹ್ಮದ್

Next Post

ಅನುಮತಿ ಪಡೆದು ಪ್ರತಿಭಟನೆ ನಡೆಸಿದ ನಮ್ಮ ಕಾರ್ಯಕರ್ತರ ಮೇಲೆ ಯಾರ ಒತ್ತಡದಿಂದ ಕೇಸ್ ದಾಖಲು ಮಾಡಿದ್ದೀರಿ: SDPI ಆಕ್ರೋಶ

Next Post
ಅನುಮತಿ ಪಡೆದು ಪ್ರತಿಭಟನೆ ನಡೆಸಿದ ನಮ್ಮ ಕಾರ್ಯಕರ್ತರ ಮೇಲೆ ಯಾರ ಒತ್ತಡದಿಂದ ಕೇಸ್ ದಾಖಲು ಮಾಡಿದ್ದೀರಿ: SDPI ಆಕ್ರೋಶ

ಅನುಮತಿ ಪಡೆದು ಪ್ರತಿಭಟನೆ ನಡೆಸಿದ ನಮ್ಮ ಕಾರ್ಯಕರ್ತರ ಮೇಲೆ ಯಾರ ಒತ್ತಡದಿಂದ ಕೇಸ್ ದಾಖಲು ಮಾಡಿದ್ದೀರಿ: SDPI ಆಕ್ರೋಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.