Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

UAE ಅಲ್ಲಿ ಶಾಶ್ವತವಾಗಿ ನೆಲೆಸಬೇಕಾ..? ಗೋಲ್ಡನ್​ ವೀಸಾ ಪಡೆಯಲು ಈಗ ಸುವರ್ಣ ಅವಕಾಶ..!

editor tv by editor tv
July 9, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/07/UAE_New.jpg

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಹೊಸ ನಾಮನಿರ್ದೇಶನ ಆಧಾರಿತ ಗೋಲ್ಡನ್ ವೀಸಾ ಪರಿಚಯಿಸಿದೆ. ಇದು ಭಾರತೀಯರಿಗೆ ಯುಎಇ ದೇಶದಲ್ಲಿ ಜೀವನ ಪೂರ್ತಿ ವಾಸಿಸುವ ಹಕ್ಕು ಅನ್ನು ನೀಡುತ್ತದೆ. ಸಂಪ್ರದಾಯಿಕ ಮಾರ್ಗದ ಮೂಲಕ ಗೋಲ್ಡನ್ ವೀಸಾ ಪಡೆಯಬೇಕಾದರೇ, ಯುಎಇನಲ್ಲಿ ಆಸ್ತಿಗಳ ಮೇಲೆ 4.66 ಕೋಟಿ ರೂಪಾಯಿ ಹಣವನ್ನ ಹೂಡಿಕೆ ಮಾಡಬೇಕಾಗಿತ್ತು. ಇಲ್ಲವೇ ದೊಡ್ಡ ಪ್ರಮಾಣದಲ್ಲಿ ಬ್ಯುಸಿನೆಸ್ ಅನ್ನು ಯುಎಇನಲ್ಲಿ ನಡೆಸಬೇಕಾಗಿತ್ತು. ಆದರೇ ಈ ಹೊಸ ಸ್ಕೀಮ್ ನಡಿ ಕಡಿಮೆ ವೆಚ್ಚದಲ್ಲಿ ಯುಎಇ ದೇಶದ ಗೋಲ್ಡನ್ ವೀಸಾ ಸಿಗಲಿದೆ.

ಹೊಸ ಸ್ಕೀಮ್ ನಡಿ ಗೋಲ್ಡನ್ ವೀಸಾ ಪಡೆಯಲು ಕನಿಷ್ಠ 23 ಲಕ್ಷ ರೂಪಾಯಿ ಇದ್ದರೇ ಸಾಕು. ಇದರಿಂದಾಗಿ ಕಡಿಮೆ ವೆಚ್ಚದಲ್ಲಿ ಯುಎಇ ದೇಶದ ಗೋಲ್ಡನ್ ವೀಸಾ ಪಡೆದು ಯುಎಇಗೆ ಹೋಗಿ ಅಲ್ಲೇ ಸೆಟಲ್ ಆಗಬಹುದು. ಭಾರತದಲ್ಲಿ ಶ್ರೀಮಂತರು, ಮಧ್ಯಮ ಮೇಲ್ವರ್ಗದ ಜನರಲ್ಲಿ ವಿದೇಶಗಳ ಆಕರ್ಷಣೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲ. ವೈದ್ಯಕೀಯ, ಶಿಕ್ಷಣ ಸೌಲಭ್ಯಗಳಿಲ್ಲ. ಹೀಗಾಗಿ ವಿದೇಶಗಳಿಗೆ ಹೋಗಿ ಸೆಟ್ಲ್ ಆಗಬೇಕೆಂದು ಅನೇಕರು ಕನಸು ಕಾಣುತ್ತಿದ್ದಾರೆ. ಅಂಥವರಿಗಾಗಿ ಯುಎಇ ಗೋಲ್ಡನ್ ವೀಸಾ ಸ್ಕೀಮ್ ಜಾರಿಗೆ ತಂದಿದೆ.

ಯುಎಇ ಎಲ್ಲ ಭಾರತೀಯರಿಗೂ ಈ ವೀಸಾವನ್ನು ನೀಡುತ್ತಿಲ್ಲ. ಬದಲಾಗಿ ಶಿಕ್ಷಕರು, ಇಂಜಿನಿಯರ್​ಗಳು, ಎಐ ಎಕ್ಸ್​ಪರ್ಟ್​ಗಳು, ತಂತ್ರಜ್ಞರು, ವೈದ್ಯರು, ಆಳವಾದ ಕಂಪ್ಯೂಟರ್​ ಜ್ಞಾನ ಹೊಂದಿರುವವರು, ಕೌಶಲ್ಯಯುತವಾದ ವ್ಯಕ್ತಿಗಳು ಹಾಗೂ ಉದ್ಯಮದಲ್ಲಿ ಹೆಚ್ಚು ಸಾಧನೆ ಮಾಡಿದವರಿಗೆ ಈ ವೀಸಾ ನೀಡಲಾಗುತ್ತಿದೆ. ಏಕೆಂದರೆ ಯುಎಇನಲ್ಲಿ ಇಂಜಿನಿಯರ್​ಗಳಂತ ಹುದ್ದೆಗಳ ನಿರ್ವಹಿಸುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಅವರ ದೇಶದ ಅಭಿವೃದ್ಧಿಯೂ ಒಂದು ಕಾರಣದಿಂದ ಈ ಗೋಲ್ಡನ್​ ವೀಸಾ ಭಾರತೀಯರಿಗೆ ನೀಡಲಾಗುತ್ತಿದೆ.

ಶಾಶ್ವತವಾಗಿ ನೆಲೆಸುವವರಿಗೆ ಹೆಚ್ಚಿನ ಸಹಾಯ

ಭಾರತ ಮತ್ತು ಬಾಂಗ್ಲಾದೇಶಿಯರಿಗೆ ಪೈಲಟ್ ಯೋಜನೆಯಾಗಿ ಈ ಗೋಲ್ಡನ್ ವೀಸಾ ಸ್ಕೀಮ್ ಅನ್ನು ಆರಂಭಿಸಲಾಗಿದೆ. ಸದ್ಯದಲ್ಲೇ ಈ ಪೈಲಟ್ ಯೋಜನೆಯು ಚೀನಾ ಮತ್ತು ಇತರ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದೇಶಗಳಿಗೆ ವಿಸ್ತರಿಸಲಾಗುತ್ತೆ. ಈ ವೀಸಾವನ್ನು ಆಯ್ಕೆ ಮಾಡಿಕೊಳ್ಳುವವರು ಯುಎಇಯಲ್ಲಿ ಯಾವುದೇ ವ್ಯವಹಾರ ಅಥವಾ ವೃತ್ತಿಪರ ಕೆಲಸವನ್ನು ಮಾಡಬಹುದು.

1 ಕೋಟಿಗೂ ಹೆಚ್ಚು ಭಾರತೀಯರು ಈಗಾಗಲೇ ಯುಎಇಯನ್ನು ತಮ್ಮ ತವರು ಎಂದು ಕರೆದುಕೊಳ್ಳುತ್ತಿದ್ದು, ಬಲವಾದ ಸಂಬಂಧಗಳನ್ನು ಹೊಂದಿರುವುದರಿಂದ, ಗೋಲ್ಡನ್ ವೀಸಾ ಅರೇಬಿಯನ್ ರಾಷ್ಟ್ರದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವವರಿಗೆ ಹೆಚ್ಚಿನ ಸಹಾಯ ಮಾಡುತ್ತದೆ. ಈ ಪ್ರಕ್ರಿಯೆಯನ್ನು ನಡೆಸಲು ಸೂಚಿಸಿರುವ ರಾಯಾದ್ ಗ್ರೂಪ್‌ನ ರಾಯಾದ್ ಕಮಲ್ ಅಯೂಬ್, ಭಾರತೀಯರಿಗೆ ಇದು ಒಂದು ಸುವರ್ಣ ಅವಕಾಶ ಎಂದು ಬಣ್ಣಿಸಿದ್ದಾರೆ. ಆದರೇ, ಮುಂದಿನ ಮೂರು ತಿಂಗಳಲ್ಲಿ ಸುಮಾರು 5,000 ಭಾರತೀಯರು ಮಾತ್ರ ಈ ನಾಮನಿರ್ದೇಶನ ಆಧಾರಿತ ವೀಸಾಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಭಾರತೀಯರು, ಬಾಂಗ್ಲಾದೇಶಿಗಳು ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಬಹುದು.

ಮೊದಲ ಹಂತದಲ್ಲಿ ಭಾರತ, ಬಾಂಗ್ಲಾ ಆಯ್ಕೆ

ಈ ವೀಸಾವನ್ನು ಪರೀಕ್ಷಿಸುವ ಮೊದಲ ಹಂತಕ್ಕೆ ಭಾರತ ಮತ್ತು ಬಾಂಗ್ಲಾದೇಶವನ್ನು ಆಯ್ಕೆ ಮಾಡಲಾಗಿದೆ. ಗೋಲ್ಡನ್ ವೀಸಾದ ಆರಂಭಿಕ ಅನುಷ್ಠಾನವನ್ನು ಪರೀಕ್ಷಿಸಲು ಸಲಹಾ ಸಂಸ್ಥೆಗಳಾದ ರಾಯಾದ್ ಗ್ರೂಪ್ ಮತ್ತು ವಿಎಫ್‌ಎಸ್ ಅನ್ನು ಆಯ್ಕೆ ಮಾಡಲಾಗಿದೆ. ನಂತರ ಈ ಸಂಸ್ಥೆಗಳು ಅರ್ಜಿಗಳನ್ನು ಯುಎಇ ಅಧಿಕಾರಿಗಳಿಗೆ ರವಾನಿಸುತ್ತವೆ. ಯುಎಇಗೆ ಭೇಟಿ ನೀಡದೇ, ಭಾರತೀಯರು ಗೋಲ್ಡನ್ ವೀಸಾದ ಅಪ್ರೂವಲ್ ಪಡೆಯಬಹುದು.

ಗೋಲ್ಡನ್ ವೀಸಾ ಪಡೆದವರು, ತಮ್ಮ ಕುಟುಂಬದ ಸದಸ್ಯರನ್ನು ದುಬೈಗೆ ಕರೆದೊಯ್ಯಬಹುದು. ಈ ಗೋಲ್ಡನ್ ವೀಸಾದಡಿಯಲ್ಲಿ ಮನೆ ಕೆಲಸದವರು, ಡ್ರೈವರ್​ಗಳನ್ನು ಕರೆದೊಯ್ಯಬಹುದು. ಇನ್ನೂ ಪ್ರಾಪರ್ಟಿ ಖರೀದಿಸಿ, ಗೋಲ್ಡನ್ ವೀಸಾ ಪಡೆದಿದ್ದರೇ, ಆಸ್ತಿ ಮಾರಾಟದಿಂದ ಅಥವಾ ಆಸ್ತಿ ಇಬ್ಬಾಗದಿಂದ ಗೋಲ್ಡನ್ ವೀಸಾ ಅಂತ್ಯವಾಗುತ್ತೆ. ನಾಮನಿರ್ದೇಶನ ಆಧಾರಿತ ವೀಸಾವು ಜೀವನ ಪೂರ್ತಿ ಇದ್ದೇ ಇರುತ್ತೆ. ಗೋಲ್ಡನ್ ವೀಸಾ ಜಾರಿಗೆ ಯುಎಇ, ಭಾರತವನ್ನೇ ಮೊದಲಿಗೆ ಆಯ್ಕೆ ಮಾಡಿಕೊಂಡಿರುವುದು ವಿಶೇಷ.

Previous Post

ರೌಡಿಶೀಟರ್ ಹತ್ಯೆಯನ್ನು NIAಗೆ ಕೊಡುವಾಗ, ಅಮಾಯಕರ ಹತ್ಯಾ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆಗೆ ತಡೆಯಾದವರು ಯಾರು?: ಅಥಾವುಲ್ಲಾ ಜೋಕಟ್ಟೆ

Next Post

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ : Master Heart Health Checkಹೃದಯದ ಆರೋಗ್ಯ ತಪಾಸಣೆ

Next Post
ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ  : Master Heart Health Checkಹೃದಯದ ಆರೋಗ್ಯ ತಪಾಸಣೆ

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ : Master Heart Health Checkಹೃದಯದ ಆರೋಗ್ಯ ತಪಾಸಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.